Homeಕರ್ನಾಟಕಲಂಕೇಶ್ ಮೋಹಕ ರೂಪಕಗಳು ಕಟ್ಟಿಕೊಡುವ ವ್ಯಕ್ತಿಚಿತ್ರಣಗಳು...

ಲಂಕೇಶ್ ಮೋಹಕ ರೂಪಕಗಳು ಕಟ್ಟಿಕೊಡುವ ವ್ಯಕ್ತಿಚಿತ್ರಣಗಳು…

- Advertisement -
- Advertisement -

| ಕುಮಾರ ರೈತ |

ಪಿ. ಲಂಕೇಶ್ ಅವರು ಕನ್ನಡ ಸಾಹಿತ್ಯ, ಸಂಸ್ಕೃತಿ, ಪತ್ರಿಕಾರಂಗವನ್ನು ಪ್ರಭಾವಿಸಿದವರು. ಇವರ ವರ್ತುಲದಲ್ಲಿದ್ದವರು ತಾವು ಕಂಡ ಲಂಕೇಶ್ ಅವರನ್ನು ಚಿತ್ರಿಸಿದ್ದಾರೆ. ಆದರೆ ಆ ಕೃತಿಗಳಲ್ಲಿ ಲಂಕೇಶರು ಚೆದುರಿದ ಚಿತ್ರಗಳು ಎನ್ನುವ ಹಾಗೆ ಕಾಣಿಸಿಕೊಂಡಿದ್ದಾರೆ. ಇಂಥ ಸಂದರ್ಭದಲ್ಲಿಯೇ ಅವರ ವಿದ್ಯಾರ್ಥಿ, ಅನುಗಾಲದ ಗೆಳೆಯ ಶೂದ್ರ ಶ್ರೀನಿವಾಸ್ ಅವರು “ಲಂಕೇಶ್ ಮೋಹಕ ರೂಪಗಳ ನಡುವೆ” ಕೃತಿ ಬರೆದಿದ್ದಾರೆ.

ಕೃತಿಯ ಆರಂಭದಲ್ಲಿ ಶೂದ್ರ ಶ್ರೀನಿವಾಸ್ ಹೀಗೆ ಹೇಳುತ್ತಾರೆ “ಡಾ. ಜಾನ್ಸನ್ ಮತ್ತು ಬಾಸ್ ವೆಲ್ ಎಂಬ ಎರಡು ದೀಪಸ್ತಂಭಗಳನ್ನು ರೂಪಕವಾಗಿಟ್ಟುಕೊಂಡು ‘ಲಂಕೇಶ್; ಮೋಹಕ ರೂಪಗಳ ನಡುವೆ’ ಕೃತಿಯನ್ನು ನೋಡಲು ಪ್ರಯತ್ನಿಸಿರುವೆ. ಇಲ್ಲಿ ನನಗೆ ಲಂಕೇಶ್ ಅವರ ವ್ಯಕ್ತಿತ್ವವೇ ಪ್ರಧಾನ” ಲೇಖಕರ ಇರಾದೆ ಹೀಗಿದ್ದರೂ ಅದು ಅವರು ಅಂದುಕೊಂಡ ಚೌಕಟ್ಟನ್ನೂ ಮೀರಿ ಬೆಳೆದು, ಚಿತ್ರಪಟಗಳಂತೆ ಸರಿದು ಹೋಗುವ ವ್ಯಕ್ತಿಚಿತ್ರಗಳಾಗಿವೆ.

ಲಂಕೇಶ್ ಅವರ ಒಡನಾಟದಲ್ಲಿ, ಸಾಂಗತ್ಯದಲ್ಲಿ, ಪರಿಧಿಯಲ್ಲಿ ಕರ್ನಾಟಕ ಸಾಂಸ್ಕೃತಿಕ-ರಾಜಕೀಯ ಲೋಕದ ಗಣ್ಯರುಗಳು ಬಂದು ಹೋಗಿದ್ದಾರೆ. ಲಂಕೇಶರ ವ್ಯಕ್ತಿತ್ವವನ್ನು ಇಡಿಯಾಗಿ ಹಿಡಿಯ ಹೊರಟ ಶೂದ್ರ ಶ್ರೀನಿವಾಸರು ಇಂಥ ಬಹುತೇಕರ ವ್ಯಕ್ತಿಚಿತ್ರಣವನ್ನೂ ಕಟ್ಟಿಕೊಡುತ್ತಾರೆ. ಅದೇ ಕಾಲದಲ್ಲಿ ಆ ವ್ಯಕ್ತಿಗಳ ಕಣ್ಣುಗಳಲ್ಲಿ ಲಂಕೇಶ್ ಚಿತ್ರಿತವಾದ ರೀತಿಯೂ ಇಲ್ಲಿ ಅನಾವರಣಗೊಂಡಿದ್ದೆ. ಇದು ‘ಲಂಕೇಶ್; ಮೋಹಕ ರೂಪಗಳ ನಡುವೆ’ ಕೃತಿಯ ಬಹುಮುಖ್ಯ ವೈಶಿಷ್ಟ್ಯ.

ಶೂದ್ರ ಶ್ರೀನಿವಾಸ್ ಈ ಕೃತಿಯನ್ನು ಏಕೆ ಬರೆದರು ಎಂಬುದೂ ಪ್ರಶ್ನೆ. ತಮಗೆ ಪಾಠ ಮಾಡಿದ, ಪ್ರಭಾವಿಸಿದ, ಸಾಮಿಪ್ಯದಿಂದ ರೇಗಿಸಿದ, ನೋಯಿಸಿದ ಲಂಕೇಶರು ಇಲ್ಲವಾದ ನಂತರವೂ ಮನೋಭಿತ್ತಿಯಲ್ಲಿ ಅನುಗಾಲವೂ ಕಾಡುತ್ತಿರುವುದರಿಂದ ಬಿಡುಗಡೆ ಪಡೆದು ನಿರಾಳವಾಗುವ ಹಿನ್ನೆಲೆಯಲ್ಲಿ ಬರೆದಿದ್ದಾರೆ ಎಂಬುದು ಇದನ್ನೋದುವಾಗ ಗಮನಕ್ಕೆ ಬರುತ್ತದೆ. ಆದ್ದರಿಂದಲೇ ತಮ್ಮ ಆರಂಭದ ಮಾತುಗಳಿಗೆ ಅವರಿಟ್ಟ ಹೆಸರು “ನಿರಾಳವಾಗುವುದೆಂದರೆ”.

ಲಂಕೇಶರನ್ನು ಹತ್ತಿರದಿಂದ ಕಾಣದೇ ಅವರ ಕೃತಿಗಳ ಮೂಲಕವೇ ಪರಿಚಯಿಸಿಕೊಂಡವರು ಅನೇಕ. ಅವರ ವ್ಯಕ್ತಿ ಚಿತ್ರಣ ನೀಡುವ ಪುಸ್ತಕಗಳಿಂದ, ಗೊತ್ತಿದ್ದವರು, ಗೊತ್ತಿಲ್ಲದವರು ಹೇಳುವ ವರ್ಣರಂಜಿತ ಹೇಳಿಕೆಗಳಿಂದ ಅಸ್ಪಷ್ಟ ವ್ಯಕ್ತಿಚಿತ್ರಣವನ್ನೂ ಕಟ್ಟಿಕೊಂಡಿರುತ್ತಾರೆ. ಆದರೆ ಈ ಕೃತಿ ಅವರ ಬಗ್ಗೆ ಸ್ಪಷ್ಟ ಚಿತ್ರಣವನ್ನು ಕಟ್ಟಿಕೊಡಲು ಯತ್ನಿಸುತ್ತದೆ. ಇದಿಷ್ಟೇ ಅಲ್ಲ; ಈ ಕೃತಿಯಿಂದ 50 ವರ್ಷಗಳ ಕರ್ನಾಟಕದ ರಾಜಕೀಯ – ಸಾಂಸ್ಕೃತಿಕ – ರಾಜಕೀಯ ದಿನಗಳ ಪರಿಚಯವೂ ಆಗುತ್ತದೆ.

ಸಾಹಿತಿ ರಾಜೇಂದ್ರ ಚೆನ್ನಿ ಅವರ ಮುನ್ನಡಿಯಲ್ಲಿ “ಲಂಕೇಶರ ಬಗ್ಗೆಗಿನ ಕೃತಿಯನ್ನು ಓದುವುದು, ಕೆಲವು ದಶಕಗಳ ಕರ್ನಾಟಕದ ಸಾಂಸ್ಕೃತಿಕ ಚರಿತ್ರೆ ಓದಿದಂತೆ. ಕೊನೇಪಕ್ಷ ಎರಡು ತಲೆಮಾರುಗಳ ಪ್ರಜ್ಞೆಯನ್ನು ರೂಪಿಸಿದ ಎಲ್ಲ ಸಾಂಸ್ಕೃತಿಕ ಘಟನೆಗಳ ಹಿಂದೆ ಲಂಕೇಶ್ ಪ್ರತ್ಯಕ್ಷವಾಗಿಯೋ ಪರೋಕ್ಷವಾಗಿಯೋ ಇದ್ದಾರೆ. ಲಂಕೇಶ್ ಪತ್ರಿಕೆ ಸೆಕ್ಯುಲರ್ ಸಂವೇದನೆ ಕಾಪಾಡಿ ಬೆಳೆಸಿದೆ. ರಾಜಕೀಯ ಹಾಗೂ ಇತರ ಅಧಿಕಾರ ಕೇಂದ್ರಗಳನ್ನು ಆದಷ್ಟು ಮಟ್ಟಿಗೆ ಎಚ್ಚರವಾಗಿಸಿದೆ. ಶೂದ್ರರ ನಿರೂಪಣೆಯಲ್ಲಿ ಆ ಕಾಲದ ಎಲ್ಲ ಮುಖ್ಯಘಟನೆಗಳೂ ಬಂದು ಹೋಗುತ್ತವೆ” ಎಂದಿದ್ದಾರೆ.

ಲಂಕೇಶರ ಯೌವ್ವನ, ಗರ್ವ, ಆರ್ಥಿಕ ಅಸಹಾಯಕತೆ, ಶ್ರೀಮಂತಿಕೆ, ಜನಪ್ರಿಯತೆ ಎಲ್ಲವನ್ನೂ ಕಂಡ ಲೇಖಕರು ಅವರು ಸಾಯುವ ಕೆಲವು ದಿನಗಳ ಮುಂಚೆ ಭೇಟಿ ಮಾಡುತ್ತಾರೆ. ಆಗ ಲಂಕೇಶರು ಹೇಳುವ ಮಾತುಗಳು ಓದುಗರನ್ನು ಆರ್ದ್ರಗೊಳಿಸುತ್ತವೆ. ಮನುಷ್ಯನ ಅಸಹಾಯಕ ಘಳಿಗೆಗಳು ದಿಗಿಲು ಮೂಡಿಸುವಂತೆ, ನಮ್ಮೊಳಗನ್ನು ನಾವೇ ನೋಡಿಕೊಳ್ಳುವಂತೆ ಮಾಡುತ್ತವೆ…

ಕೃತಿ: ಲಂಕೇಶ್ ಮೋಹಕ ರೂಪಗಳ ನಡುವೆ

ಲೇಖಕ: ಶೂದ್ರ ಶ‍್ರೀನಿವಾಸ್

ಪ್ರಕಾಶನ: ಪಲ್ಲವ ಪ್ರಕಾಶನ, ಬಳ್ಳಾರಿ, ಸಂಪರ್ಕ ಸಂಖ್ಯೆ: 94803 53507

ಪುಟಗಳು: 282, ಬೆಲೆ: 250 ರೂ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...