Homeಸಾಹಿತ್ಯ-ಸಂಸ್ಕೃತಿಪುಸ್ತಕ ವಿಮರ್ಶೆ’ಲಂಕೇಶ್ ಮೋಹಕ ರೂಪಕಗಳ ನಡುವೆ’: ಪುಸ್ತಕ ಪರಿಚಯ...

’ಲಂಕೇಶ್ ಮೋಹಕ ರೂಪಕಗಳ ನಡುವೆ’: ಪುಸ್ತಕ ಪರಿಚಯ…

- Advertisement -
- Advertisement -

| ಬಿ.ಚಂದ್ರೇಗೌಡ |

ಲಂಕೇಶ್ ಏನೆಂದು ಇಡಿಯಾಗಿ ಗ್ರಹಿಸಿ ಆಗಾಗ್ಗೆ ಮನಸ್ತಾಪದೊಂದಿಗೆ ಬದುಕಿದವರು ಶೂದ್ರ ಶ್ರೀನಿವಾಸ್. ಆದ್ದರಿಂದಲೇ ಅವರ ಬದುಕಿನ ಬಹುಭಾಗ ಲಂಕೇಶ್ ಮೋಹಕ ರೂಪಕಗಳಲ್ಲಿ ದಾಖಲಾಗಿರುವುದು. ಹಾಗೆ ನೋಡಿದರೆ ಲಂಕೇಶ್ ಎಂಬ ದೈತ್ಯ ಪ್ರತಿಭೆಯ ಒಡನಾಟವಿದ್ದವರೆಲ್ಲಾ, ಒಂದೊಂದು ಕೃತಿಯನ್ನ ಹೊರತಂದರೆ ಮಾತ್ರ ಲಂಕೇಶ್ ಇಡಿಯಾಗಿ ಸಿಕ್ಕಬಲ್ಲರು ಅನ್ನಿಸುತ್ತೆ.

ಶೂದ್ರ ಶ್ರೀನಿವಾಸ್ ಕಳೆದ ಅರ್ಧ ಶತಮಾನದಿಂದ ಕನ್ನಡದ ಸಾಂಸ್ಕೃತಿಕ ಲೋಕದ ಸಂಚಾಲಕರಂತಿದ್ದವರು. ಶೂದ್ರ ಪತ್ರಿಕೆ ನಡೆಸುತ್ತಲೇ ಪತ್ರಿಕೆಯನ್ನು ಬಗಲಚೀಲದಲ್ಲಿ ತುಂಬಿಕೊಂಡು ಚಂದಾದಾರರನ್ನ ಮಾಡುತ್ತ ಪತ್ರಿಕೆಯಲ್ಲಿ ಸಾಹಿತಿಗಳ ಸಂವಾದ ಏರ್ಪಡಿಸುತ್ತಾ, ಎಲ್ಲಾ ಒಳ್ಳೆಯ ಬರಹಗಾರರ ನಡುವೆ ಕೊಂಡಿಯಂತಿದ್ದವರು. ಅವರ ನಿರಂತರವಾದ ಚಟುವಟಿಕೆಯ ಕೇಂದ್ರಬಿಂದು ಲಂಕೇಶರಾಗಿದ್ದರು. ವಿದ್ಯಾರ್ಥಿ ದಿಸೆಯಲ್ಲೇ ಲಂಕೇಶರ ಆಪ್ತ ಶಿಷ್ಯರಾದ ಶೂದ್ರಶ್ರೀ ಲಂಕೇಶರ ಕಡೇ ಗಳಿಗೆಯವರೆಗೂ ಜೊತೆಯಲ್ಲಿದ್ದವರು. ಆ ಕಾರಣವಾಗಿ ಅವರು ಬರೆದಿರುವ “ಲಂಕೇಶ್ ಮೋಹಕ ರೂಪಕಗಳ ನಡುವೆ” ಎಂಬ ಕೃತಿ. ಲಂಕೇಶರ ಬಗೆಗೆ ಪೂರ್ವಾಗ್ರಹ ಪೀಡಿತರಾಗಿ ದೂರ ಇದ್ದವರೆಲ್ಲಾ ಓದಿ ತಮ್ಮ ಅಭಿಪ್ರಾಯಗಳ ತಿದ್ದಿಕೊಂಡು ಚಿಂತಿಸುವ ಕೃತಿಯಾಗಿದೆ. ನಾಲ್ಕೈದು ದಶಕಗಳ ಕರ್ನಾಟಕದ ಸಾಂಸ್ಕೃತಿಕ ಲೋಕದ ಘಟನೆಗಳ ಸರಮಾಲೆಯೇ ಈ ಕೃತಿಯಲ್ಲಿ ದಟೈಸಿದೆ. ಲಂಕೇಶರ ಬಗ್ಗೆ ಈಚೆಗೆ ಒಂದೆರಡು ಕೃತಿ ಮತ್ತು ಕತೆಗಳೂ ಬಂದಿವೆ. ಈ ಬರಹಗಾರರ ಮೂಲವೆಲ್ಲಾ ಒಂದೇ ಎಂಬುದನ್ನ ನೋಡಿದಾಗ ತರಡಿಲ್ಲದ ನರಿಗಳು ಸಿಂಹ ತೀರಿಕೊಂಡ ನಂತರ ಊಳಿಟ್ಟಂತಿದೆ.

ಅವುಗಳೆಲ್ಲಾ ಶೂದ್ರಶ್ರೀಯವರ ಈ ಪುಸ್ತಕವನ್ನ ಓದಿ ತಮ್ಮ ಪೂರ್ವಗ್ರಹಗಳನ್ನ ತಿದ್ದಿಕೊಳ್ಳುವುದು ಅವುಗಳ ಆರೋಗ್ಯಕ್ಕೆ ಒಳ್ಳೆಯದು. ಮುಖ್ಯವಾಗಿ ಲಂಕೇಶರು ಬದುಕಿದ್ದಾಗ ಅವರ ಮೇಲೆ ಸ್ಪೆಷಲ್ ಸಂಚಿಕೆಗಳೇ ಬಂದವು. ಟೀಕೆಗಳು ನಿರಂತರವಾಗಿದ್ದವು ಅವುಗಳನ್ನೆಲ್ಲಾ ತಡೆದುಕೊಳ್ಳುವ ಶಕ್ತಿ ಲಂಕೇಶ್ ಪ್ರತಿಭೆಗಿತ್ತು.

ನನಗನ್ನಿಸಿದಂತೆ ಶೂದ್ರ ಶ್ರೀನಿವಾಸರಷ್ಟು ಲಂಕೇಶ್ ಸಮೀಪ ಹೋದವರ್ಯಾರು ಇಲ್ಲ. ಅವರೆಲ್ಲಾ ಕಷ್ಟಕಾಲದಲ್ಲಿ ಅವರ ಜೊತೆಯಿದ್ದವರು. ಅವರು ರೂಪಿಸುವ ಕಾರ್ಯಕ್ರಮಗಳ ರೂವಾರಿಯಾಗಿದ್ದರು. ಲಂಕೇಶ್ ತೀರಿಕೊಂಡ ನಂತರ ಶೂದ್ರಶ್ರೀ ಕತೆಯೇನು ಎಂದು ನಾವೆಲ್ಲಾ ನಗುತ್ತಿದ್ದೆವು. ಆದರೆ ಲಂಕೇಶ್ ಶೂದ್ರಶ್ರೀಗೆ ಸಂಜೆ ತಲುಪಬಹುದಾದ ನಿಲ್ದಾಣವಾಗಿದ್ದರು. ಉಳಿದಂತೆ ಅವರು ಹಗಲು ಸಂಚಾರಿಯಾಗಿ ತಮ್ಮ ಲೋಕವನ್ನ ವಿಸ್ತರಿಸಿಕೊಂಡಿದ್ದರು. ಆದ್ದರಿಂದ ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಒಂದು ಭಾಗವೇ ಆಗಿದ್ದರು.

ಶೂದ್ರಶ್ರೀ ಲಂಕೇಶ್‍ರಿಗೆ ಎಷ್ಟು ಆಪ್ತರೆಂಬುದು ನಮಗೆ ಗೊತ್ತಿರಲಿಲ್ಲ. ಅವರು ತಮ್ಮ ಕೃತಿಯೊಂದನ್ನ ಶೂದ್ರಶ್ರೀಗೆ ಅರ್ಪಿಸಿದಾಗ “ಏನ್ಸಾರ್ ಒಳ್ಳೆ ಪುಸ್ತಕ ತಗಂಡೋಗಿ ಶೂದ್ರನಿಗೆ ಅರ್ಪಿಸಿದ್ದೀರಲ್ಲಾ” ಎಂದಾಗ “ಆತ ತನ್ನ ಜೀವಕ್ಕೆ ನೆರವಾದವನು” ಎಂದು ನಮ್ಮ ಬಾಯಿ ಮುಚ್ಚಿಸಿದ್ದರು. ಮುಂದೆ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಬಂದಾಗ, ಆ ಹಣವನ್ನ ಯಾರಿಗೆ ಕೊಡುವುದೆಂದು ಅವರು ಯೋಚಿಸುತ್ತಿದ್ದಾಗ ನಾನು “ಶಿವಮೊಗ್ಗದ ಶಾರದಾ ಅಂಧವಿಕಾಸ ಕೇಂದ್ರಕ್ಕೆ ಕೊಡಿ ಸಾರ್” ಎಂದೆ. ಯೋಚಿಸಿದ ಅವರು “ಬೇಡಿ, ಶೂದ್ರನಿಗೆ ಕೊಡ್ತೀನಿ” ಎಂದರು. ಶೂದ್ರಶ್ರೀ ಅರ್ಥಪೂರ್ಣವಾಗಿ ಸಾಹಿತ್ಯದ ಗೋಷ್ಠಿಯನ್ನೇರ್ಪಡಿಸಿ ಆ ದುಡ್ಡನ್ನು ಖರ್ಚು ಮಾಡಬಹುದೆಂದು ಅವರ ತೀರ್ಮಾನ. ನಮಗಂತೂ ಶೂದ್ರಶ್ರೀ ಲಂಕೇಶರಿಗೆ ಎಷ್ಟು ಆಪ್ತನೆಂಬುದರ ಅರಿವಾಯ್ತು. ನಮ್ಮಲ್ಲಿರುವ ಹೊಟ್ಟೆಕಿಚ್ಚನ್ನು ಗ್ರಹಿಸಿ ಲಂಕೇಶ್ ಶಮನ ಮಾಡುತ್ತಿದ್ದರು. ತೀರ ಕಿಡಿಗೇಡಿಗಳಾಗಿದ್ದರೆ ಅವರವರಿಗೇ ಹಚ್ಚಿಬಿಡುತ್ತಿದ್ದರು!

ಶೂದ್ರಶ್ರೀ ಲಂಕೇಶರನ್ನ ಆರಾಧಿಸಿದರೂ ತಮ್ಮ ಸ್ವಾಭಿಮಾನಕ್ಕೆ ಧಕ್ಕೆ ಬಂದಾಗ ತಿರುಗಿ ಬೀಳುವ ವ್ಯಕ್ತಿಯಾಗಿದ್ದರು. ಒಮ್ಮೆ ಬಸವನಗುಡಿಯ ಪತ್ರಿಕಾಲಯದಲ್ಲಿ ಪತ್ರಿಕೆ ಮೀಟಿಂಗ್ ನಡೆಯುವಾಗ ಮಲಯಾಳಿ ಲೇಖಕರಿಗೆ ಜ್ಞಾನಪೀಠ ಪ್ರಶಸ್ತಿ ಬಂದ ಚರ್ಚೆಯಲ್ಲಿ ಲಂಕೇಶ್ ರೇಗಿದ್ದಕ್ಕೆ ಶೂದ್ರಶ್ರೀ ನಿರ್ಗಮಿಸುತ್ತ ಎಲ್ಲರನ್ನ ಬೈದು ಹೋದರು. ನಾನು ಇನ್ನಿವರ ಸಂಬಂಧ ಮುಗಿಯಿತು ಎಂದುಕೊಂಡರೆ, ಅದೇವಾರ ಶೂದ್ರಶ್ರೀ ಲಂಕೇಶರ ಎದುರು ಕೂತು ಹರಟೆ ಹೊಡೆಯುತ್ತಿದ್ದರು.

ಇಂತಹ ನೂರಾರು ಮನಸ್ತಾಪಗಳು ನಡೆದಿವೆ. ಅದಕ್ಕೆ ಕಾರಣಗಳನ್ನ ಪತ್ರ ಮುಖೇನ ತಿಳಿಸುತ್ತಿದ್ದ ಶೂದ್ರಶ್ರೀ. ಇಷ್ಟೊತ್ತಿಗೆ ಮೇಷ್ಟ್ರು ಓದಿಕೊಂಡಿರಬಹುದು ಎಂದು ಆಫೀಸಿಗೋಗಿ ಇಣುಕಿದರೆ, ಬಾ ಎಂದು ಲಂಕೇಶ್ ಹಸುವಿನ ಕರು ಕರೆದಂತೆ ಕರೆಯುತ್ತಿದ್ದರು. ಡಿ.ಆರ್ ನಾಗರಾಜು ಬರೆದ ಕೃತಿಯೊಂದನ್ನು ಲಂಕೇಶ್ ಕಟುವಾಗಿ ವಿಮರ್ಶೆ ಮಾಡಿದಾಗ ಅದಕ್ಕೆ ನಾಗರಾಜ್ ಶೂದ್ರರಲ್ಲಿ ಉತ್ತರ ಕೊಟ್ಟರು. ಆಗ ನಾಗರಾಜ್ ಪರವಿದ್ದ ಶೂದ್ರಶ್ರೀ ಲಂಕೇಶ್‍ರಿಂದ ದೂರವಿದ್ದರು. ಆಗೊಮ್ಮೆ ಡಿ.ಆರ್. ನಾಗರಾಜ್ ಹಠಾತ್ತನೆ ಕಾಣಿಸಿಕೊಂಡು “ಈ ಲಂಕೇಶ್ ಬಿಟ್ಟಿರಕ್ಕಾಗಲ್ಲ ಗೌಡ್ರೆ” ಎಂದುಕೊಂಡು ಒಳ ಬಂದರು. ಆಗ ಲಂಕೇಶ್ “ಎಲ್ಲಿ ಅವುನು” ಎಂದರು. “ಬರಲಿಲ್ಲ ಸಾರ್ ಇಪ್ಪತ್ತೆರಡು ದಿನ ಆಯ್ತು ಮೇಷ್ಟ್ರು ನೋಡಿ ಅಂತ ಡಲ್ಲಾಗಿದ್ದ” ಎಂದು ನಕ್ಕರು. “ನೋಡು ದಿನವೂ ಎಣಿಸ್ಸವುನೇ” ಎಂದು ಲಂಕೇಶ್ ನಕ್ಕರು. ಇಂತೆಲ್ಲಾ ಸನ್ನಿವೇಶಗಳು ಶೂದ್ರಶ್ರೀ ಬರೆದ “ಲಂಕೇಶರ ಮೋಹಕ ರೂಪದಲ್ಲಿ” ದಟೈಸಿವೆ.

ಲಂಕೇಶರಿಂದ ಟೀಕಿಸಿಕೊಂಡವರು ಅವಮಾನಗೊಂಡವರು ಮತ್ತೆ ಅವರ ಬಳಿ ಸುಳಿಯದಂತೆ ಹೊರಟುಹೋಗುತ್ತಿದ್ದರೆ, ಲಂಕೇಶರ ಆ ಕ್ಷಣದ ಸಿಟ್ಟು ಗ್ರಹಿಸಿದವರು ಅವರ ಸಂಬಂಧವನ್ನ ಕಳೆದುಕೊಳ್ಳದೆ ಬಾಳಿಕೆ ಬಂದರು. ಲಂಕೇಶ್ ಏನೆಂದು ಇತಿಯಾಗಿ ಗ್ರಹಿಸಿ ಆಗಾಗ್ಗೆ ಮನಸ್ತಾಪದೊಂದಿಗೆ ಬದುಕಿದವರು ಶೂದ್ರ ಶ್ರೀನಿವಾಸ್. ಆದ್ದರಿಂದಲೇ ಅವರ ಬದುಕಿನ ಬಹುಭಾಗ ಲಂಕೇಶ್ ಮೋಹಕ ರೂಪಕಗಳಲ್ಲಿ ದಾಖಲಾಗಿರುವುದು.

ಹಾಗೆ ನೋಡಿದರೆ ಲಂಕೇಶ್ ಎಂಬ ದೈತ್ಯ ಪ್ರತಿಭೆಯ ಒಡನಾಟವಿದ್ದವರೆಲ್ಲಾ, ಒಂದೊಂದು ಕೃತಿಯನ್ನ ಹೊರತಂದರೆ ಮಾತ್ರ ಲಂಕೇಶ್ ಇಡಿಯಾಗಿ ಸಿಕ್ಕಬಲ್ಲರು ಅನ್ನಿಸುತ್ತೆ. ಈ ಕೃತಿಯನ್ನ ಓದಿ ಮುಗಿಸಿದಾಗ ಗಾಢವಿಷಾದವೊಂದು ನಮ್ಮನ್ನು ಮುತ್ತುತ್ತದೆ. ಏಕೆಂದರೆ ಅವರ ಎದುರು ಕೂತು ಉಗ್ರ ಪ್ರಾಮಾಣಿಕರಂತೆ ಮಾತನಾಡುತ್ತ ಬರೆದವರೆಲ್ಲಾ ನೈತಿಕವಾಗಿ ಹಾಳಾಗಿಹೋದರು, ಮತಾಂಧರಾದರು, ಶಾಸ್ತ್ರ ಹೇಳುವವರಾದರು, ದೇವಿ ಆರಾಧಕರಾದರು. ಲಂಕೇಶರಿಂದ ಏನನ್ನ ಪಡೆಯದ ಪ್ರಾಮಾಣಿಕರು ತೊಂದರೆಯಲ್ಲಿದ್ದಾರೆ. ಬೀದಿಯಲ್ಲಿದ್ದಾರೆ.

ಶೂದ್ರ ಶ್ರೀನಿವಾಸರು, ಲಂಕೇಶರು ಕಟ್ಟಿದ ಸಾಮ್ರಾಜ್ಯದ ಒಂದು ಭಾಗವಾದ ಮನೆ, ತೋಟ, ತೋಟದ ಮನೆ, ಅಲ್ಲಿ ನಡೆದ ಅವರ ಮತ್ತು ಪತ್ರಿಕೆಯ ಹುಟ್ಟುಹಬ್ಬ, ಯಕ್ಷಗಾನ, ತಾಳಮದ್ದಳೆ, ಉತ್ತರ ಕರ್ನಾಟಕದ ಸಂಗ್ಯಾಬಾಳ್ಯಾ ನಾಟಕ, ಸುಭದ್ರಮ್ಮನವರ ಸಂಗೀತ ಇವನ್ನೆಲ್ಲಾ ಕಣ್ತುಂಬಿಕೊಂಡು ಪರಭಾರೆಯಾದ ಆ ಜಾಗದಲ್ಲಿ ಲಂಕೇಶರ ಸಮಾಧಿ ಸ್ಥಿತಿ ನೋಡಿ ಆರ್ದತೆಯಿಂದ ದಾಖಲಿಸಿದ್ದಾರೆ. ಆದರೇನು ಮಾಡುವುದು ಲಂಕೇಶರು ತಮ್ಮ ಜೀವನ ಚರಿತ್ರೆ ಹುಳಿಮಾವಿನ ಮರದಲ್ಲಿ ತಮ್ಮ ಮಗನನ್ನ “ಮುಗ್ಧ” ಎಂದು ದಾಖಲಿಸಿದ್ದಾರೆ. ಈ ಮುಗ್ಧನಿಗೆ ಲಂಕೇಶ್ ಏನು ಎಂಬುದೇ ತಿಳಿದಿರಲಿಲ್ಲ. ಅದಕ್ಕಾಗಿ ಸಿನಿಮಾ ತೆಗೆಯಲು ಹೊರಟಾಗ ಅವನಿಗೆ ಕಾಣಿಸಿದ್ದು ತೋಟ ಮತ್ತು ಮನೆ. ಅವನ್ನು ಕೊಳ್ಳುವವರು ಕೇಳಿದ ರೇಟಿಗೆ ಕೊಟ್ಟ ಮುಗ್ದ ಹುಡುಗ.

ಹಾಗೆಯೇ ಲಂಕೇಶ್, ಲವ್ಲಿ ಲವ್ಲಿ ಎಂದುಕೊಂಡು ತನ್ನ ಅಭಿರುಚಿಗೆ ತಕ್ಕಂತೆ ಮನೆಕಟ್ಟಿಸಿ ಅದಕ್ಕೆ ‘ನವಿಲು’ ಎಂದು ಹೆಸರಿಟ್ಟು, ಆಪ್ತ ಗೆಳೆಯರನ್ನ ಕರೆದು ಔತಣಕೊಟ್ಟ ಮನೆ ಇಂದು ಅವರದ್ದಾಗಿ ಉಳಿದಿಲ್ಲ. ಅಲ್ಲದೆ, ಕರ್ನಾಟಕದ ಜನ ಪತ್ರಿಕೆ ಕೊಂಡು ಓದಿದ ಫಲವಾಗಿ ಮತ್ತು ಕೊಟ್ಟಷ್ಟು ಸಂಭಾವನೆ ಪಡೆದ ಲೇಖಕರ ಉದಾರ ಮನಸ್ಸಿನ ಫಲವಾಗಿ, ರೂಪುಗೊಂಡಿದ್ದ ಮನೆ ಮಠ ತೋಟ ಇದ್ಯಾವುದೂ ಇಂದು ಉಳಿದಿಲ್ಲ. ಇದಕ್ಕಿಂತ ಭೀಕರ ಸಂಗತಿ ಯಾವುದೆಂದರೆ, ಅವರ ಸಮಾಧಿಯ ಸ್ಥಿತಿ. ಎಂದಾದರು ಕಾಣೆಯಾಗಲು ಕಾಯುತ್ತಿರುವ ಈ ಸಮಾಧಿಯನ್ನು ಲಂಕೇಶರ ಊರಾದ ಕೊನವಳ್ಳಿಯ ಜನ, ನಾವೇ ತಂದು ಮರು ಸಮಾಧಿ ಮಾಡುತ್ತೇವೆಂದು ಹೋರಾಡಿದ್ದರು. ಅವರಿಗೆ ಲಂಕೇಶರಿಂದ ಏನೂ ಆಗಿರಲಿಲ್ಲ. ಆದರೂ ಅವರ ಉತ್ಸಾಹ ಕಂಡು ಆಶ್ಚರ್ಯಪಡುವಂತಾಯ್ತು.

ತುಂಬ ಲವಲವಿಕೆಯಿಂದ ಓದಿಸುತ್ತಾ ಹೋದ ಶೂದ್ರಶ್ರೀಯವರ “ಲಂಕೇಶ್ ಮೋಹಕ ರೂಪಕಗಳ ನಡುವೆ” ಕೃತಿ ಗಾಢ ವಿಷಾದದೊಂದಿಗೆ ಮುಗಿಯುತ್ತದೆ. ನಮ್ಮ ನಡುವೆ ಆಗಿಹೋದ ಇತಿಹಾಸವೊಂದನ್ನ ಶೂದ್ರಶ್ರೀ ಪ್ರಾಮಾಣಿಕವಾಗಿ ಒಂಥರದ ಭಾವುಕತೆಯಲ್ಲಿ ನಿರೂಪಿಸಿದ್ದಾರೆ. ತುಂಬ ವಸ್ತುನಿಷ್ಠವಾದ ರಾಜೇಂದ್ರ ಚೆನ್ನಿಯವರ ಮುನ್ನುಡಿ ಕೃತಿ ವಜೆಯನ್ನ ಹೆಚ್ಚಿಸಿದೆ. ಶೂದ್ರ ಶ್ರೀನಿವಾಸರ ಈವರೆಗಿನ ಬರವಣಿಗೆಗೆ ಈ ರೂಪಕ ಮೆರಗು ಕೊಟ್ಟಂತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...