Homeಮುಖಪುಟಲಂಕೇಶ್-86; ದಾರಿದೀಪವಾದ ಲಂಕೇಶ್ ಪತ್ರಿಕೆ; ಲಂಕೇಶ್ ಪತ್ರಿಕೆಯ ಪ್ರೂಫ್‌ರೀಡರ್ ಒಬ್ಬರ ನೆನಪುಗಳು

ಲಂಕೇಶ್-86; ದಾರಿದೀಪವಾದ ಲಂಕೇಶ್ ಪತ್ರಿಕೆ; ಲಂಕೇಶ್ ಪತ್ರಿಕೆಯ ಪ್ರೂಫ್‌ರೀಡರ್ ಒಬ್ಬರ ನೆನಪುಗಳು

ಪತ್ರಿಕೆ ಮೂಲಕ ಹುಟ್ಟಿಬಂದ ಬರಹಗಾರರೂ ಅಸಂಖ್ಯ. ಇವರುಗಳ ಜತೆ ನಾನೂ ಕೆಲಸ ಮಾಡಿರುವುದು ನನ್ನ ಪುಣ್ಯ. ಜೀವನದ ದಿಕ್ಕನ್ನೇ ಬದಲಾಯಿಸಿದ ಸಂದರ್ಭ

- Advertisement -
- Advertisement -

’ಯಾವ ಮನುಷ್ಯನಲ್ಲಿ ಶ್ರದ್ಧೆ, ಆಸಕ್ತಿ ಇರುತ್ತದೋ ಆತ ಜೀವನದಲ್ಲಿ ಮುಂದೆ ಬರಲು ಸಾಧ್ಯ, ಉನ್ನತ ಸ್ಥಾನಕ್ಕೂ ಏರಬಹುದು’.

ಇದನ್ನು ನಮ್ಮ ಮೇಷ್ಟ್ರು ಲಂಕೇಶ್ ಪದೇ ಪದೇ ಹೇಳುತ್ತಿದ್ದರು. ಇವರ ಈ ಧ್ಯೇಯವಾಕ್ಯವನ್ನು ಪಾಲಿಸಿದವರು ನಮ್ಮ ಕಣ್ಣಮುಂದಯೇ ಬೆಳೆದು, ಹೆಸರು ಗೌರವಗಳನ್ನು ಗಳಿಸಿದ್ದಾರೆ. ಟಿ.ಎನ್ ಸೀತಾರಾಂ, ಸಿ.ಎಸ್ ದ್ವಾರಕಾನಾಥ್, ಆರ್ ಶಂಕರ್, ಡಿ.ಆರ್ ನಾಗರಾಜ್, ಶೂದ್ರ ಶ್ರೀನಿವಾಸ್, ಸದಾಶಿವ ಶೆಣೈ – ಹೀಗೆ ಅವರ ನಿಕಟವರ್ತಿಗಳ ಪಟ್ಟಿ ಮಾಡುತ್ತಾ ಹೋದರೆ ಕೊನೆ ಮೊದಲಿಲ್ಲ. ಪತ್ರಿಕೆ ಮೂಲಕ ಹುಟ್ಟಿಬಂದ ಬರಹಗಾರರೂ ಅಸಂಖ್ಯ. ಇವರುಗಳ ಜತೆ ನಾನೂ ಕೆಲಸ ಮಾಡಿರುವುದು ನನ್ನ ಪುಣ್ಯ. ಜೀವನದ ದಿಕ್ಕನ್ನೇ ಬದಲಾಯಿಸಿದ ಸಂದರ್ಭ.

ಮಾಜಿ ಮುಖ್ಯಮಂತ್ರಿ ಗುಂಡೂರಾವ್ ಉರುಫ್ ಗುಂ ಹಾಗೂ ಬಂಗಾರಪ್ಪ ಉರುಫ್ ಬಂ ಹಾಗೂ ದೇವರಾಜ ಅರಸರ ಕಾಲದಲ್ಲಿ ಪತ್ರಿಕೆ ಉಚ್ಛ್ರಾಯ ಸ್ಥಿತಿಯಲ್ಲಿತ್ತು. ರಾಜಕಾರಣಿಗಳಿಗೆ ಒಂದು ತರಹ ಸಿಂಹಸ್ವಪ್ನದಂತಾಗಿತ್ತು. ಪತ್ರಿಕೆ ಪ್ರಕಟವಾಗುವುದನ್ನೇ ಕಾಯುತ್ತಿದ್ದ ಓದುಗರು ಸಂಜೆವಾಣಿ ಪತ್ರಿಕೆ ಕಚೇರಿಯ ಹತ್ತಿರವೇ ಬಂದುಬಿಡುತ್ತಿದ್ದರು. (ಏಕೆಂದರೆ ಲಂಕೇಶ್ ಪತ್ರಿಕೆ ಪ್ರಿಂಟ್ ಆಗುತ್ತಿದ್ದುದು ಅಲ್ಲಿಯೇ). ಪತ್ರಿಕೆಯಲ್ಲಿ ಪ್ರಕಟವಾಗುತ್ತಿದ್ದ ಎಲ್ಲ ಕಾಲಮ್‌ಗಳಿಗೆ ವಿವಿಧ ರೀತಿಯ ಓದುಗರು ಇರುತ್ತಿದ್ದರು. ಅವೆಲ್ಲವೂ ಓದುಗರನ್ನು ಹಿಡಿದಿಟ್ಟುಕೊಳ್ಳುತ್ತಿದ್ದವು.

ಮುಖ್ಯಮಂತ್ರಿಯಾಗಿದ್ದ ಜೆ.ಎಚ್ ಪಟೇಲ್, ಎಂಪಿ ಪ್ರಕಾಶ್, ಅನಂತನಾಗ್, ಜಯಮಾಲ, ಬಿ.ಎಲ್ ಶಂಕರ್ ಇನ್ನೂ ಹಲವು ರಾಜಕಾರಣಿಗಳು ಕೂಡ ಮೇಷ್ಟ್ರು ಅವರ ಒಡನಾಟವನ್ನು ಇಟ್ಟುಕೊಂಡಿದ್ದರು. ತಿಂಗಳಿಗೊಂದು ಸಲ ಅವರ ತೋಟದಲ್ಲಿ ಸಾಹಿತಿಗಳು, ರಾಜಕಾರಣಿಗಳು, ಸ್ನೇಹಿತರು ಎಲ್ಲ ಸೇರಿ ಸಂವಾದ, ಹರಟೆ, ರಾಜಕೀಯ ವಿಶ್ಲೇಷಣೆ, ಚಿಂತನಮಂಥನ ನಡೆಸೋ ಕ್ಷಣ – ಇವೆಲ್ಲ ನೆನಪಿಸಿಕೊಂಡರೆ ಗತಕಾಲದ ವೈಭವ ಮತ್ತೆ ಮರುಕಳಿಸಬಾರದೇ ಎಂದೆನಿಸುತ್ತದೆ.

ನಾನು 83ರಲ್ಲಿ ರಾಷ್ಟ್ರೋತ್ಥಾನ ಪರಿಷತ್‌ನಲ್ಲಿ ಕೆಲಸ ಮಾಡುತ್ತಿದ್ದೆ. ಆಗ ನಾನು ಲಂಕೇಶ್ ಪತ್ರಿಕೆ ಓದುವುದು ಮಾತ್ರವಲ್ಲ ಅದರ ಅಭಿಮಾನಿಯಾಗಿದ್ದೆ. ’ತುಂಟಾಟ’ ಕಾಲಮ್ ಓದುವುದರಲ್ಲಿ ನನಗೆ ಹೆಚ್ಚಿನ ಆಸಕ್ತಿ. ಅವುಗಳ ಕಟಿಂಗ್ಸ್‌ನ್ನೆಲ್ಲ ಒಂದು ಪುಸ್ತಕದಲ್ಲಿ ಸಂಗ್ರಹಿಸಿ ಈಗಲೂ ಇಟ್ಟಿರುವೆ. ಇವೆಲ್ಲ ಇಂದಿಗೂ ನನಗೆ ಅಮೂಲ್ಯ ರತ್ನಗಳು. ಎಷ್ಟೇ ಹಣ ಕೊಟ್ಟರೂ ಸಿಗದಂತಹ ಮುತ್ತುಗಳು.

ರಾಷ್ಟ್ರೋತ್ಥಾನ ಸಂಸ್ಥೆಯವರು ಬೇಡ ಲಂಕೇಶ್ ಪತ್ರಿಕೆ ಇವತ್ತಲ್ಲ ನಾಳೆ ನಿಂತು ಹೋಗುತ್ತದೆ. ರಾಜಕಾರಣಿಗಳು ಇದರ ಮೇಲೆ ಒಂದು ಕಣ್ಣು ಇಟ್ಟಿದ್ದಾರೆ. ಯಾವತ್ತಿದ್ದರೂ ಅಪಾಯವೇ ಇಲ್ಲೇ ಇರಿ ಎಂದು ಎಷ್ಟೇ ಬುದ್ಧಿವಾದ ಹೇಳಿದರೂ ಕೇಳದೆ ಲಂಕೇಶ್‌ಗೆ ಬಂದು ಸೇರಿಕೊಂಡೆ. ಮೇಷ್ಟ್ರು ನನ್ನನ್ನು ಸಂದರ್ಶನ ಮಾಡಿ ತಾನಾಗಿ 600 ಸಂಬಳಕ್ಕೆ ಗೊತ್ತು ಮಾಡಿದರೂ ತಿಂಗಳಾದ ಮೇಲೆ ಕೊಟ್ಟಿದ್ದು 700. 100 ಹೆಚ್ಚಿಗೆ ಕೊಟ್ಟಿದ್ದು ನನಗೆ ಆನೆ ಬಲ ಬಂದಂತೆ ಆಯಿತು.

ಲಂಕೇಶ್ ಪತ್ರಿಕೆಯಲ್ಲಿ ಸೇರಿದ್ದಾನೆ ಎಂಬ ಕಾರಣಕ್ಕಾಗಿಯೇ ಎಷ್ಟೋ ಕಡೆ ಹೆಣ್ಣು ಕೊಡಲು ಮುಂದೆ ಬರುತ್ತಿದ್ದರು. ಆದರೆ ಪಟ್ಟು ಬಿಡದೇ ’ಲಂಕೇಶ್ ಎಂಬ ನಾಮಬಲದಿಂದ ನಮ್ಮ ಸಂಬಂಧಿಕರಲ್ಲೇ ನನಗೆ ಲಗ್ನವಾಯಿತು. ಎಲ್ಲೇ ಹೋಗಲಿ ಎಲ್ಲಿ ಕೆಲಸ ಎಂದರೆ ಹೇಳಿಕೊಳ್ಳಲು ಒಂದು ಹೆಮ್ಮೆ. ಆಗ ವಾರ ಪತ್ರಿಕೆ ಸುಧಾ ಬಿಟ್ಟರೆ ಲಂಕೇಶ್ ಪತ್ರಿಕೆಯ ಸರ್ಕುಲೇಶನ್ ಉನ್ನತ ತಲುಪಿತ್ತು. ಸುಮಾರು ಒಂದೂವರೆ ಲಕ್ಷದಷ್ಟು ಪ್ರಸಾರವಿತ್ತು. ಇದರಿಂದ ನನಗೂ ಒಂದು ಗೌರವ ಸ್ಥಾನಮಾನ ಸಿಗುತ್ತಿತ್ತು. ನನ್ನ ಪಾಲಿಗೆ ಜೀವನದ ದಾರಿದೀಪವಾಗಿ ಮುಂದುವರೆದಿತ್ತು ಪತ್ರಿಕೆ.

ರಾಷ್ಟ್ರೋತ್ಥಾನ ಸಂಸ್ಥೆಯವರು ಹೆದರಿಸಿದ್ದಾಗ ಆಗಿದ್ದ ಭಯ ಪತ್ರಿಕೆಗೆ ಬಂದ ಮೇಲೆ ತನ್ನಿಂದತಾನೇ ದೂರವಾಯಿತು. ಜೆ.ಎಚ್ ಪಟೇಲ್, ಎಂ.ಪಿ ಪ್ರಕಾಶ್, ಅನಂತನಾಗ್, ಚಿತ್ರನಟಿ ತಾರಾ, ಜಯಮಾಲ ಇವರುಗಳನ್ನೆಲ್ಲ ಹತ್ತಿರದಿಂದ ನೋಡುವ ಸೌಭಾಗ್ಯ ದೊರಕಿದಂತಾಗಿತ್ತು.

ಮೇಷ್ಟ್ರರ ಕಾಲಮ್ಮುಗಳಂತೂ ಓದುಗರಿಗೆ ಅಚ್ಚುಮೆಚ್ಚು. ಛೆಛೆ ಕಾಲಮ್, ರಾಜಕಾರಣಿಗಳಿಗೆ ಛಾಟಿ ಏಟಿನಂತಿತ್ತು. ಕಣ್ಣಾಮುಚ್ಚಾಲೆ ಕಾಲಮ್ ಕಚಗುಳಿ ಇಟ್ಟರೆ, ಹಲವರಿಗೆ ಪರಸ್ಪರ ವಿಳಾಸ ತಿಳಿದುಕೊಳ್ಳಲು ಸಹಾಯ ಮಾಡಿ ಸರಳ ಮದುವೆಗಳಿಗೆ ಕಾರಣವಾಗಿದೆ. ಮರೆಯುವ ಮುನ್ನ ಓದುಗರಿಗೆ ಪ್ರಿಯವಾದ ಕಾಲಮ್ಮು. ಯುವ ಪೀಳಿಗೆಗೆ ’ತುಂಟಾಟ’ ಕಾಲಮ್ ನೆನಪಿನಲ್ಲಿ ಉಳಿಯುವ ಹಾಸ್ಯವಾಗಿ ಮತ್ತು ಒಂದು ತರಹ ಕಚಗುಳಿಯಿಡುವ ಚುಟುಕಾಗಿತ್ತು. ಬಿ.ಎ ಶ್ರೀಧರ್ ರವರ ’ಪ್ರಪಂಚ ಪರ್ಯಟನೆ’, ಬಾಲಾಜಿ ಅವರ ಗಾರ್ದಭನಗರಿ, ಪ್ರಸಿದ್ಧ ಕಲಾವಿದ ಪಂಜುಗಂಗೊಳ್ಳಿ ಅವರ ‘ಅರೇಬಿಯನ್ ನೈಟ್ಸ್’ ಓದುಗರನ್ನು ಮಂತ್ರಮುಗ್ಧರನ್ನಾಗಿಸಿ, ಮುಂದಿನ ವಾರಕ್ಕೆ ಕಾದು ಓದಲು ಪ್ರೋತ್ಸಾಹಿಸುತ್ತಿದ್ದವು.

ಚಂದ್ರೇಗೌಡರ ಕಟ್ಟೆಪುರಾಣ, ಸುದ್ದಿಬಿಂಬ, ಟೀಕೆಟಿಪ್ಪಣಿ, ಸಿನಿಮಾ ಕಾಲಂ, ವಿದೇಶ ಸುದ್ದಿ, ಎಚ್‌ಎಲ್‌ಕೆ ಅವರ ರಾಜಕೀಯ ವಿಡಂಬನೆ ಹೀಗೆ ಹಲವು ಕಾಲಮ್‌ಗಳು ಓದುಗರನ್ನು ಹಿಡಿದಿಟ್ಟುಕೊಳ್ಳುತ್ತಿದ್ದವು. ವಿಧಾನಸೌಧದ ಪಡಸಾಲೆಯಲ್ಲಿಯೂ ಲಂಕೇಶ್ ಪತ್ರಿಕೆ ಕಲರವ ಮೂಡಿತ್ತು. ಹೆಗಡೆ ಸರ್ಕಾರವನ್ನು ಬೆಚ್ಚಿ ಬೀಳಿಸಿದಂತೆಯೇ ಲಂಕೇಶ್ ಪತ್ರಿಕೆ ವರದಿಗಳು ರೇವಜೀತು ಹಗರಣದಲ್ಲಿ ಅಂದಿನ ಸರ್ಕಾರದ ಬುಡ ಅಲ್ಲಾಡಿಸಿದ್ದವು.
ಲಂಕೇಶ್ ಮೇಷ್ಟ್ರನ್ನು ಒಂದು ಅರ್ಥದಲ್ಲಿ ಅನ್ನದಾತ ಸುಖೀಭವ ಅನ್ನಬೇಕು! ಏಕೆಂದರೆ ಕಚೇರಿಯ ಮೇಲಿನ ಕೋಣೆಯಲ್ಲಿ 60 ಜನರಿಗೆ ಅಡುಗೆ ಮಾಡಿಸಿಕೊಡುತ್ತಿದ್ದರು. ಅದಕ್ಕಾಗಿ ತಿಂಗಳಿಗೆ ಸಂಬಳದಿಂದ ಹಿಡಿಯುತ್ತಿದ್ದುದು ಕೇವಲ 60ರೂ ಮಾತ್ರ. ದಿನಕ್ಕೊಂದು ತರಹೇವಾರಿ ತರಕಾರಿಯ ಸಾಂಬಾರು, ಅನ್ನ ಮಜ್ಜಿಗೆ, ತುಪ್ಪ, ಹಪ್ಪಳ, ರಾಗಿಮುದ್ದೆ ಹೀಗೆ ರುಚಿಕಟ್ಟಿನ ಮತ್ತು ಪ್ರೀತಿಪಾತ್ರದ ಅಡುಗೆಗೆ ಬೆಲೆ ಕಟ್ಟಲಾದೀತೇ! ನಮ್ಮ ಬಡತನವನ್ನು ಮರೆಸುತ್ತಿದ್ದ ಕ್ಷಣಗಳು ಅವು.

ಈಗ ಅವನ್ನೆಲ್ಲ ನೆನಪಿಸಿಕೊಂಡರೆ, ಆ ದಿನಗಳು ಮತ್ತೆ ಮರುಕಳಿಸಬಾರದೆ ಎನಿಸುತ್ತದೆ. ಲಂಕೇಶ್ ಮರಣಾನಂತರ ಪತ್ರಿಕೆ ಮುಗಿಯಿತು ಎನ್ನುತ್ತಿದ್ದಂತೆ ದೆಹಲಿಯ ಇಂಗ್ಲಿಷ್ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಗೌರಿ ಮೇಡಂ ಹಲವು ಬುದ್ಧಿಜೀವಿಗಳ ಒತ್ತಾಯದ ಮೇರೆಗೆ ಪತ್ರಿಕೆ ಮುಂದುವರೆಸಲು ಕೈ ಹಿಡಿದರು. ಆದರೆ ಕನ್ನಡವೇ ಗೊತ್ತಿಲ್ಲದ ಅವರಿಗೆ ಹೇಗೆ ನಿಭಾಯಿಸಲು ಸಾಧ್ಯ ಎಂಬ ಸಂದೇಹ ಹಲವರಲ್ಲಿ ಮೂಡಿದ್ದೂ ನಿಜ. ಹಲವು ಬುದ್ಧಿಜೀವಿಗಳ ಒಡನಾಟ, ಪ್ರೋತ್ಸಾಹ ಮತ್ತು ಸ್ವಯಂ ಶ್ರದ್ಧೆಯಿಂದ ಗೌರಿ ಲಂಕೇಶ್ ಅವರು ಕನ್ನಡ ಕಲಿತು ಪತ್ರಿಕೆಗೆ ಸಂಪಾದಕಿ ಆದದ್ದು ಎಲ್ಲರಿಗೂ ಆಶ್ಚರ್ಯವೋ ಆಶ್ಚರ್ಯ. ಅವರು ಕೂಡ ಹೊಸ ಕಾಲಮ್ ಶುರುಮಾಡಿ ಅದು ಪ್ರಸಿದ್ದಿಯೂ ಪಡೆಯಿತು. ಕೊನೆಗೆ ಹಂತಕರ ಗುಂಡಿಗೆ ಮೇಡಂ ಬಲಿಯಾದದ್ದು ದುರದೃಷ್ಟಕರ ಮತ್ತು ದುರಂತ.

ಲಂಕೇಶರ 86ನೇ ಜನ್ಮದಿನದ ಮತ್ತು ಲಂಕೇಶ್ ಪತ್ರಿಕೆಗೆ 40 ದಾಟಿರುವ ಈ ಸಂದರ್ಭದಲ್ಲಿ ಆ ಕಾಲದ ಗತ ವೈಭವಗಳನ್ನು ನೆನಪು ಮಾಡಿಕೊಳ್ಳುವುದರಿಂದ ಎಷ್ಟು ಉಪಯೋಗ.ಆದರೆ ನನ್ನ ಜೀವನದ ದಿಕ್ಕನ್ನೇ ಬದಲಾಯಿಸಿದ, ಹೊಸ ತಿರುವನ್ನು ನೀಡಿದ ಲಂಕೇಶ್ ಪತ್ರಿಕೆಗೆ ಎಷ್ಟು ಕೃತಜ್ಞತೆ ಸಲ್ಲಿಸಿದರೂ ಸಾಲದು. ನನಗೆ ದಾರಿದೀಪವಾಗಿ ಲಂಕೇಶ್ ಪತ್ರಿಕೆಗೆ ಮತ್ತು ಈಗ ನಮ್ಮ ಜೊತೆಗೆ ಭೌತಿಕವಾಗಿ ಇರದಿದ್ದರೂ ನೆನಪನಲ್ಲಿ ಅಚ್ಚಳಿಯದೆ ಉಳಿದಿರುವ ಮೇಷ್ಟ್ರಿಗೆ Many Many Thanks.

ಎಚ್. ಎನ್.ದ್ವಾರಕಾನಾಥ್

ಎಚ್ ಎನ್ ದ್ವಾರಕಾನಾಥ್
ಲಂಕೇಶ್ ಪತ್ರಿಕೆಯಲ್ಲಿ ಪ್ರೂಫ್ ರೀಡರ್ ಆಗಿ ಸುಮಾರು ೨೫ ವರ್ಷಗಳ ಕಾಲ ಸೇವೆ ಸಲ್ಲಿಸಿದವರು ದ್ವಾರಕಾನಾಥ್. ಈಗ ಸಂಯುಕ್ತ ಕರ್ನಾಟಕ ಪತ್ರಿಕೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.


ಇದನ್ನೂ ಓದಿ: ಸರ್ಕಾರ ಎಂದರೆ ದೇಶ ಅಲ್ಲ… ದೇಶವೆಂಬುದು ಸರ್ಕಾರಕ್ಕಿಂತ ದೊಡ್ಡದು: ಡಿ ಉಮಾಪತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...