Homeಮುಖಪುಟಲಂಕೇಶ್-86; ದಾರಿದೀಪವಾದ ಲಂಕೇಶ್ ಪತ್ರಿಕೆ; ಲಂಕೇಶ್ ಪತ್ರಿಕೆಯ ಪ್ರೂಫ್‌ರೀಡರ್ ಒಬ್ಬರ ನೆನಪುಗಳು

ಲಂಕೇಶ್-86; ದಾರಿದೀಪವಾದ ಲಂಕೇಶ್ ಪತ್ರಿಕೆ; ಲಂಕೇಶ್ ಪತ್ರಿಕೆಯ ಪ್ರೂಫ್‌ರೀಡರ್ ಒಬ್ಬರ ನೆನಪುಗಳು

ಪತ್ರಿಕೆ ಮೂಲಕ ಹುಟ್ಟಿಬಂದ ಬರಹಗಾರರೂ ಅಸಂಖ್ಯ. ಇವರುಗಳ ಜತೆ ನಾನೂ ಕೆಲಸ ಮಾಡಿರುವುದು ನನ್ನ ಪುಣ್ಯ. ಜೀವನದ ದಿಕ್ಕನ್ನೇ ಬದಲಾಯಿಸಿದ ಸಂದರ್ಭ

- Advertisement -
- Advertisement -

’ಯಾವ ಮನುಷ್ಯನಲ್ಲಿ ಶ್ರದ್ಧೆ, ಆಸಕ್ತಿ ಇರುತ್ತದೋ ಆತ ಜೀವನದಲ್ಲಿ ಮುಂದೆ ಬರಲು ಸಾಧ್ಯ, ಉನ್ನತ ಸ್ಥಾನಕ್ಕೂ ಏರಬಹುದು’.

ಇದನ್ನು ನಮ್ಮ ಮೇಷ್ಟ್ರು ಲಂಕೇಶ್ ಪದೇ ಪದೇ ಹೇಳುತ್ತಿದ್ದರು. ಇವರ ಈ ಧ್ಯೇಯವಾಕ್ಯವನ್ನು ಪಾಲಿಸಿದವರು ನಮ್ಮ ಕಣ್ಣಮುಂದಯೇ ಬೆಳೆದು, ಹೆಸರು ಗೌರವಗಳನ್ನು ಗಳಿಸಿದ್ದಾರೆ. ಟಿ.ಎನ್ ಸೀತಾರಾಂ, ಸಿ.ಎಸ್ ದ್ವಾರಕಾನಾಥ್, ಆರ್ ಶಂಕರ್, ಡಿ.ಆರ್ ನಾಗರಾಜ್, ಶೂದ್ರ ಶ್ರೀನಿವಾಸ್, ಸದಾಶಿವ ಶೆಣೈ – ಹೀಗೆ ಅವರ ನಿಕಟವರ್ತಿಗಳ ಪಟ್ಟಿ ಮಾಡುತ್ತಾ ಹೋದರೆ ಕೊನೆ ಮೊದಲಿಲ್ಲ. ಪತ್ರಿಕೆ ಮೂಲಕ ಹುಟ್ಟಿಬಂದ ಬರಹಗಾರರೂ ಅಸಂಖ್ಯ. ಇವರುಗಳ ಜತೆ ನಾನೂ ಕೆಲಸ ಮಾಡಿರುವುದು ನನ್ನ ಪುಣ್ಯ. ಜೀವನದ ದಿಕ್ಕನ್ನೇ ಬದಲಾಯಿಸಿದ ಸಂದರ್ಭ.

ಮಾಜಿ ಮುಖ್ಯಮಂತ್ರಿ ಗುಂಡೂರಾವ್ ಉರುಫ್ ಗುಂ ಹಾಗೂ ಬಂಗಾರಪ್ಪ ಉರುಫ್ ಬಂ ಹಾಗೂ ದೇವರಾಜ ಅರಸರ ಕಾಲದಲ್ಲಿ ಪತ್ರಿಕೆ ಉಚ್ಛ್ರಾಯ ಸ್ಥಿತಿಯಲ್ಲಿತ್ತು. ರಾಜಕಾರಣಿಗಳಿಗೆ ಒಂದು ತರಹ ಸಿಂಹಸ್ವಪ್ನದಂತಾಗಿತ್ತು. ಪತ್ರಿಕೆ ಪ್ರಕಟವಾಗುವುದನ್ನೇ ಕಾಯುತ್ತಿದ್ದ ಓದುಗರು ಸಂಜೆವಾಣಿ ಪತ್ರಿಕೆ ಕಚೇರಿಯ ಹತ್ತಿರವೇ ಬಂದುಬಿಡುತ್ತಿದ್ದರು. (ಏಕೆಂದರೆ ಲಂಕೇಶ್ ಪತ್ರಿಕೆ ಪ್ರಿಂಟ್ ಆಗುತ್ತಿದ್ದುದು ಅಲ್ಲಿಯೇ). ಪತ್ರಿಕೆಯಲ್ಲಿ ಪ್ರಕಟವಾಗುತ್ತಿದ್ದ ಎಲ್ಲ ಕಾಲಮ್‌ಗಳಿಗೆ ವಿವಿಧ ರೀತಿಯ ಓದುಗರು ಇರುತ್ತಿದ್ದರು. ಅವೆಲ್ಲವೂ ಓದುಗರನ್ನು ಹಿಡಿದಿಟ್ಟುಕೊಳ್ಳುತ್ತಿದ್ದವು.

ಮುಖ್ಯಮಂತ್ರಿಯಾಗಿದ್ದ ಜೆ.ಎಚ್ ಪಟೇಲ್, ಎಂಪಿ ಪ್ರಕಾಶ್, ಅನಂತನಾಗ್, ಜಯಮಾಲ, ಬಿ.ಎಲ್ ಶಂಕರ್ ಇನ್ನೂ ಹಲವು ರಾಜಕಾರಣಿಗಳು ಕೂಡ ಮೇಷ್ಟ್ರು ಅವರ ಒಡನಾಟವನ್ನು ಇಟ್ಟುಕೊಂಡಿದ್ದರು. ತಿಂಗಳಿಗೊಂದು ಸಲ ಅವರ ತೋಟದಲ್ಲಿ ಸಾಹಿತಿಗಳು, ರಾಜಕಾರಣಿಗಳು, ಸ್ನೇಹಿತರು ಎಲ್ಲ ಸೇರಿ ಸಂವಾದ, ಹರಟೆ, ರಾಜಕೀಯ ವಿಶ್ಲೇಷಣೆ, ಚಿಂತನಮಂಥನ ನಡೆಸೋ ಕ್ಷಣ – ಇವೆಲ್ಲ ನೆನಪಿಸಿಕೊಂಡರೆ ಗತಕಾಲದ ವೈಭವ ಮತ್ತೆ ಮರುಕಳಿಸಬಾರದೇ ಎಂದೆನಿಸುತ್ತದೆ.

ನಾನು 83ರಲ್ಲಿ ರಾಷ್ಟ್ರೋತ್ಥಾನ ಪರಿಷತ್‌ನಲ್ಲಿ ಕೆಲಸ ಮಾಡುತ್ತಿದ್ದೆ. ಆಗ ನಾನು ಲಂಕೇಶ್ ಪತ್ರಿಕೆ ಓದುವುದು ಮಾತ್ರವಲ್ಲ ಅದರ ಅಭಿಮಾನಿಯಾಗಿದ್ದೆ. ’ತುಂಟಾಟ’ ಕಾಲಮ್ ಓದುವುದರಲ್ಲಿ ನನಗೆ ಹೆಚ್ಚಿನ ಆಸಕ್ತಿ. ಅವುಗಳ ಕಟಿಂಗ್ಸ್‌ನ್ನೆಲ್ಲ ಒಂದು ಪುಸ್ತಕದಲ್ಲಿ ಸಂಗ್ರಹಿಸಿ ಈಗಲೂ ಇಟ್ಟಿರುವೆ. ಇವೆಲ್ಲ ಇಂದಿಗೂ ನನಗೆ ಅಮೂಲ್ಯ ರತ್ನಗಳು. ಎಷ್ಟೇ ಹಣ ಕೊಟ್ಟರೂ ಸಿಗದಂತಹ ಮುತ್ತುಗಳು.

ರಾಷ್ಟ್ರೋತ್ಥಾನ ಸಂಸ್ಥೆಯವರು ಬೇಡ ಲಂಕೇಶ್ ಪತ್ರಿಕೆ ಇವತ್ತಲ್ಲ ನಾಳೆ ನಿಂತು ಹೋಗುತ್ತದೆ. ರಾಜಕಾರಣಿಗಳು ಇದರ ಮೇಲೆ ಒಂದು ಕಣ್ಣು ಇಟ್ಟಿದ್ದಾರೆ. ಯಾವತ್ತಿದ್ದರೂ ಅಪಾಯವೇ ಇಲ್ಲೇ ಇರಿ ಎಂದು ಎಷ್ಟೇ ಬುದ್ಧಿವಾದ ಹೇಳಿದರೂ ಕೇಳದೆ ಲಂಕೇಶ್‌ಗೆ ಬಂದು ಸೇರಿಕೊಂಡೆ. ಮೇಷ್ಟ್ರು ನನ್ನನ್ನು ಸಂದರ್ಶನ ಮಾಡಿ ತಾನಾಗಿ 600 ಸಂಬಳಕ್ಕೆ ಗೊತ್ತು ಮಾಡಿದರೂ ತಿಂಗಳಾದ ಮೇಲೆ ಕೊಟ್ಟಿದ್ದು 700. 100 ಹೆಚ್ಚಿಗೆ ಕೊಟ್ಟಿದ್ದು ನನಗೆ ಆನೆ ಬಲ ಬಂದಂತೆ ಆಯಿತು.

ಲಂಕೇಶ್ ಪತ್ರಿಕೆಯಲ್ಲಿ ಸೇರಿದ್ದಾನೆ ಎಂಬ ಕಾರಣಕ್ಕಾಗಿಯೇ ಎಷ್ಟೋ ಕಡೆ ಹೆಣ್ಣು ಕೊಡಲು ಮುಂದೆ ಬರುತ್ತಿದ್ದರು. ಆದರೆ ಪಟ್ಟು ಬಿಡದೇ ’ಲಂಕೇಶ್ ಎಂಬ ನಾಮಬಲದಿಂದ ನಮ್ಮ ಸಂಬಂಧಿಕರಲ್ಲೇ ನನಗೆ ಲಗ್ನವಾಯಿತು. ಎಲ್ಲೇ ಹೋಗಲಿ ಎಲ್ಲಿ ಕೆಲಸ ಎಂದರೆ ಹೇಳಿಕೊಳ್ಳಲು ಒಂದು ಹೆಮ್ಮೆ. ಆಗ ವಾರ ಪತ್ರಿಕೆ ಸುಧಾ ಬಿಟ್ಟರೆ ಲಂಕೇಶ್ ಪತ್ರಿಕೆಯ ಸರ್ಕುಲೇಶನ್ ಉನ್ನತ ತಲುಪಿತ್ತು. ಸುಮಾರು ಒಂದೂವರೆ ಲಕ್ಷದಷ್ಟು ಪ್ರಸಾರವಿತ್ತು. ಇದರಿಂದ ನನಗೂ ಒಂದು ಗೌರವ ಸ್ಥಾನಮಾನ ಸಿಗುತ್ತಿತ್ತು. ನನ್ನ ಪಾಲಿಗೆ ಜೀವನದ ದಾರಿದೀಪವಾಗಿ ಮುಂದುವರೆದಿತ್ತು ಪತ್ರಿಕೆ.

ರಾಷ್ಟ್ರೋತ್ಥಾನ ಸಂಸ್ಥೆಯವರು ಹೆದರಿಸಿದ್ದಾಗ ಆಗಿದ್ದ ಭಯ ಪತ್ರಿಕೆಗೆ ಬಂದ ಮೇಲೆ ತನ್ನಿಂದತಾನೇ ದೂರವಾಯಿತು. ಜೆ.ಎಚ್ ಪಟೇಲ್, ಎಂ.ಪಿ ಪ್ರಕಾಶ್, ಅನಂತನಾಗ್, ಚಿತ್ರನಟಿ ತಾರಾ, ಜಯಮಾಲ ಇವರುಗಳನ್ನೆಲ್ಲ ಹತ್ತಿರದಿಂದ ನೋಡುವ ಸೌಭಾಗ್ಯ ದೊರಕಿದಂತಾಗಿತ್ತು.

ಮೇಷ್ಟ್ರರ ಕಾಲಮ್ಮುಗಳಂತೂ ಓದುಗರಿಗೆ ಅಚ್ಚುಮೆಚ್ಚು. ಛೆಛೆ ಕಾಲಮ್, ರಾಜಕಾರಣಿಗಳಿಗೆ ಛಾಟಿ ಏಟಿನಂತಿತ್ತು. ಕಣ್ಣಾಮುಚ್ಚಾಲೆ ಕಾಲಮ್ ಕಚಗುಳಿ ಇಟ್ಟರೆ, ಹಲವರಿಗೆ ಪರಸ್ಪರ ವಿಳಾಸ ತಿಳಿದುಕೊಳ್ಳಲು ಸಹಾಯ ಮಾಡಿ ಸರಳ ಮದುವೆಗಳಿಗೆ ಕಾರಣವಾಗಿದೆ. ಮರೆಯುವ ಮುನ್ನ ಓದುಗರಿಗೆ ಪ್ರಿಯವಾದ ಕಾಲಮ್ಮು. ಯುವ ಪೀಳಿಗೆಗೆ ’ತುಂಟಾಟ’ ಕಾಲಮ್ ನೆನಪಿನಲ್ಲಿ ಉಳಿಯುವ ಹಾಸ್ಯವಾಗಿ ಮತ್ತು ಒಂದು ತರಹ ಕಚಗುಳಿಯಿಡುವ ಚುಟುಕಾಗಿತ್ತು. ಬಿ.ಎ ಶ್ರೀಧರ್ ರವರ ’ಪ್ರಪಂಚ ಪರ್ಯಟನೆ’, ಬಾಲಾಜಿ ಅವರ ಗಾರ್ದಭನಗರಿ, ಪ್ರಸಿದ್ಧ ಕಲಾವಿದ ಪಂಜುಗಂಗೊಳ್ಳಿ ಅವರ ‘ಅರೇಬಿಯನ್ ನೈಟ್ಸ್’ ಓದುಗರನ್ನು ಮಂತ್ರಮುಗ್ಧರನ್ನಾಗಿಸಿ, ಮುಂದಿನ ವಾರಕ್ಕೆ ಕಾದು ಓದಲು ಪ್ರೋತ್ಸಾಹಿಸುತ್ತಿದ್ದವು.

ಚಂದ್ರೇಗೌಡರ ಕಟ್ಟೆಪುರಾಣ, ಸುದ್ದಿಬಿಂಬ, ಟೀಕೆಟಿಪ್ಪಣಿ, ಸಿನಿಮಾ ಕಾಲಂ, ವಿದೇಶ ಸುದ್ದಿ, ಎಚ್‌ಎಲ್‌ಕೆ ಅವರ ರಾಜಕೀಯ ವಿಡಂಬನೆ ಹೀಗೆ ಹಲವು ಕಾಲಮ್‌ಗಳು ಓದುಗರನ್ನು ಹಿಡಿದಿಟ್ಟುಕೊಳ್ಳುತ್ತಿದ್ದವು. ವಿಧಾನಸೌಧದ ಪಡಸಾಲೆಯಲ್ಲಿಯೂ ಲಂಕೇಶ್ ಪತ್ರಿಕೆ ಕಲರವ ಮೂಡಿತ್ತು. ಹೆಗಡೆ ಸರ್ಕಾರವನ್ನು ಬೆಚ್ಚಿ ಬೀಳಿಸಿದಂತೆಯೇ ಲಂಕೇಶ್ ಪತ್ರಿಕೆ ವರದಿಗಳು ರೇವಜೀತು ಹಗರಣದಲ್ಲಿ ಅಂದಿನ ಸರ್ಕಾರದ ಬುಡ ಅಲ್ಲಾಡಿಸಿದ್ದವು.
ಲಂಕೇಶ್ ಮೇಷ್ಟ್ರನ್ನು ಒಂದು ಅರ್ಥದಲ್ಲಿ ಅನ್ನದಾತ ಸುಖೀಭವ ಅನ್ನಬೇಕು! ಏಕೆಂದರೆ ಕಚೇರಿಯ ಮೇಲಿನ ಕೋಣೆಯಲ್ಲಿ 60 ಜನರಿಗೆ ಅಡುಗೆ ಮಾಡಿಸಿಕೊಡುತ್ತಿದ್ದರು. ಅದಕ್ಕಾಗಿ ತಿಂಗಳಿಗೆ ಸಂಬಳದಿಂದ ಹಿಡಿಯುತ್ತಿದ್ದುದು ಕೇವಲ 60ರೂ ಮಾತ್ರ. ದಿನಕ್ಕೊಂದು ತರಹೇವಾರಿ ತರಕಾರಿಯ ಸಾಂಬಾರು, ಅನ್ನ ಮಜ್ಜಿಗೆ, ತುಪ್ಪ, ಹಪ್ಪಳ, ರಾಗಿಮುದ್ದೆ ಹೀಗೆ ರುಚಿಕಟ್ಟಿನ ಮತ್ತು ಪ್ರೀತಿಪಾತ್ರದ ಅಡುಗೆಗೆ ಬೆಲೆ ಕಟ್ಟಲಾದೀತೇ! ನಮ್ಮ ಬಡತನವನ್ನು ಮರೆಸುತ್ತಿದ್ದ ಕ್ಷಣಗಳು ಅವು.

ಈಗ ಅವನ್ನೆಲ್ಲ ನೆನಪಿಸಿಕೊಂಡರೆ, ಆ ದಿನಗಳು ಮತ್ತೆ ಮರುಕಳಿಸಬಾರದೆ ಎನಿಸುತ್ತದೆ. ಲಂಕೇಶ್ ಮರಣಾನಂತರ ಪತ್ರಿಕೆ ಮುಗಿಯಿತು ಎನ್ನುತ್ತಿದ್ದಂತೆ ದೆಹಲಿಯ ಇಂಗ್ಲಿಷ್ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಗೌರಿ ಮೇಡಂ ಹಲವು ಬುದ್ಧಿಜೀವಿಗಳ ಒತ್ತಾಯದ ಮೇರೆಗೆ ಪತ್ರಿಕೆ ಮುಂದುವರೆಸಲು ಕೈ ಹಿಡಿದರು. ಆದರೆ ಕನ್ನಡವೇ ಗೊತ್ತಿಲ್ಲದ ಅವರಿಗೆ ಹೇಗೆ ನಿಭಾಯಿಸಲು ಸಾಧ್ಯ ಎಂಬ ಸಂದೇಹ ಹಲವರಲ್ಲಿ ಮೂಡಿದ್ದೂ ನಿಜ. ಹಲವು ಬುದ್ಧಿಜೀವಿಗಳ ಒಡನಾಟ, ಪ್ರೋತ್ಸಾಹ ಮತ್ತು ಸ್ವಯಂ ಶ್ರದ್ಧೆಯಿಂದ ಗೌರಿ ಲಂಕೇಶ್ ಅವರು ಕನ್ನಡ ಕಲಿತು ಪತ್ರಿಕೆಗೆ ಸಂಪಾದಕಿ ಆದದ್ದು ಎಲ್ಲರಿಗೂ ಆಶ್ಚರ್ಯವೋ ಆಶ್ಚರ್ಯ. ಅವರು ಕೂಡ ಹೊಸ ಕಾಲಮ್ ಶುರುಮಾಡಿ ಅದು ಪ್ರಸಿದ್ದಿಯೂ ಪಡೆಯಿತು. ಕೊನೆಗೆ ಹಂತಕರ ಗುಂಡಿಗೆ ಮೇಡಂ ಬಲಿಯಾದದ್ದು ದುರದೃಷ್ಟಕರ ಮತ್ತು ದುರಂತ.

ಲಂಕೇಶರ 86ನೇ ಜನ್ಮದಿನದ ಮತ್ತು ಲಂಕೇಶ್ ಪತ್ರಿಕೆಗೆ 40 ದಾಟಿರುವ ಈ ಸಂದರ್ಭದಲ್ಲಿ ಆ ಕಾಲದ ಗತ ವೈಭವಗಳನ್ನು ನೆನಪು ಮಾಡಿಕೊಳ್ಳುವುದರಿಂದ ಎಷ್ಟು ಉಪಯೋಗ.ಆದರೆ ನನ್ನ ಜೀವನದ ದಿಕ್ಕನ್ನೇ ಬದಲಾಯಿಸಿದ, ಹೊಸ ತಿರುವನ್ನು ನೀಡಿದ ಲಂಕೇಶ್ ಪತ್ರಿಕೆಗೆ ಎಷ್ಟು ಕೃತಜ್ಞತೆ ಸಲ್ಲಿಸಿದರೂ ಸಾಲದು. ನನಗೆ ದಾರಿದೀಪವಾಗಿ ಲಂಕೇಶ್ ಪತ್ರಿಕೆಗೆ ಮತ್ತು ಈಗ ನಮ್ಮ ಜೊತೆಗೆ ಭೌತಿಕವಾಗಿ ಇರದಿದ್ದರೂ ನೆನಪನಲ್ಲಿ ಅಚ್ಚಳಿಯದೆ ಉಳಿದಿರುವ ಮೇಷ್ಟ್ರಿಗೆ Many Many Thanks.

ಎಚ್. ಎನ್.ದ್ವಾರಕಾನಾಥ್

ಎಚ್ ಎನ್ ದ್ವಾರಕಾನಾಥ್
ಲಂಕೇಶ್ ಪತ್ರಿಕೆಯಲ್ಲಿ ಪ್ರೂಫ್ ರೀಡರ್ ಆಗಿ ಸುಮಾರು ೨೫ ವರ್ಷಗಳ ಕಾಲ ಸೇವೆ ಸಲ್ಲಿಸಿದವರು ದ್ವಾರಕಾನಾಥ್. ಈಗ ಸಂಯುಕ್ತ ಕರ್ನಾಟಕ ಪತ್ರಿಕೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.


ಇದನ್ನೂ ಓದಿ: ಸರ್ಕಾರ ಎಂದರೆ ದೇಶ ಅಲ್ಲ… ದೇಶವೆಂಬುದು ಸರ್ಕಾರಕ್ಕಿಂತ ದೊಡ್ಡದು: ಡಿ ಉಮಾಪತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...

SIR | ಮತದಾರರ ಪಟ್ಟಿಯಲ್ಲಿ ಹೆಸರಿದ್ದರೆ ಮಾತ್ರ ಸರ್ಕಾರಿ ಸೌಲಭ್ಯ: ಸಿಎಂ

ರಾಜ್ಯ ಸರ್ಕಾರದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳು ಹಾಗೂ ಇತರ ಸರ್ಕಾರಿ ಸವಲತ್ತುಗಳನ್ನು ಪಡೆಯುತ್ತಿರುವ ಫಲಾನುಭವಿಗಳಿಗೆ ಮುಖ್ಯಮಂತ್ರಿಗಳು ಗಂಭೀರ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ಪ್ರತಿಯೊಬ್ಬ ಫಲಾನುಭವಿಯೂ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಕಡ್ಡಾಯವಾಗಿ...

SIR, ಚುನಾವಣಾ ಆಯೋಗದ ಕಾರ್ಯನಿರ್ವಹಣೆ ಕುರಿತು 23 ವಿಪಕ್ಷಗಳಿಂದ ಸಿಜೆಐಗೆ ಜಂಟಿ ಪತ್ರ

ಭಾರತೀಯ ಚುನಾವಣಾ ಆಯೋಗವು (ಇಸಿಐ) ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಹಾಗೂ ಇತರ ಚುನಾವಣೆ ಸಂಬಂಧಿತ ವಿಷಯಗಳ ವಿರುದ್ಧ ಇಂಡಿಯಾ ಮೈತ್ರಿಕೂಟದ ಹೊರಗಿರುವ ದ್ರಾವಿಡ ಮುನ್ನೇತ್ರ ಕಳಗಂ...

SIR: ಮತದಾರರ ಅನುಕೂಲಕ್ಕಾಗಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರದ ಆದೇಶ

ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಕಾರ್ಯವು ಜೂನ್ 30ರಿಂದ (ಇಂದಿನಿಂದ) ಅಧಿಕೃತವಾಗಿ ಆರಂಭವಾಗಿದೆ. ಜುಲೈ 29ರವರೆಗೆ ಒಂದು ತಿಂಗಳ ಕಾಲ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ...

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...