Homeಅಂತರಾಷ್ಟ್ರೀಯಶ್ರೀಲಂಕಾ: ಹೊತ್ತಿ ಉರಿದ ದೈತ್ಯ ಹಡಗು - ಸಮುದ್ರ ದಡಕ್ಕೆ ತೇಲಿಬರುತ್ತಿವೆ ಜಲಚರಗಳ ಮೃತದೇಹ

ಶ್ರೀಲಂಕಾ: ಹೊತ್ತಿ ಉರಿದ ದೈತ್ಯ ಹಡಗು – ಸಮುದ್ರ ದಡಕ್ಕೆ ತೇಲಿಬರುತ್ತಿವೆ ಜಲಚರಗಳ ಮೃತದೇಹ

- Advertisement -
- Advertisement -

ಕೆಲ ದಿನಗಳ ಹಿಂದೆ ಕೊಲೊಂಬೊ ಬಂದರಿನಲ್ಲಿ ಸಿಂಗಾಪುರ ಮೂಲದ ಎಕ್ಸ್‌ಪ್ರೆಸ್‌ ಪರ್ಲ್ ಎಂಬ ಹಡಗು ಮುಳುಗಡೆಯಾಗಿದೆ. ನೂರಾರು ಟನ್ ರಾಸಾಯನಿಕಗಳನ್ನು ಮತ್ತು ತೈಲವನ್ನು ಸಾಗಿಸುತ್ತಿದ್ದ ಹಡಗು ಸಮುದ್ರದಲ್ಲಿ ಸ್ಫೋಟಗೊಂಡ ಪರಿಣಾಮ ಕೊಲೊಂಬೊ ಸುತ್ತಲಿನ ಸಮುದ್ರ ವಾತಾವರಣದಲ್ಲಿ ತೀವ್ರ ಬದಲಾವಣೆಯಾಗಿದ್ದು ನೂರಾರು ಜಲಚರಗಳ ಮೃತದೇಹಗಳು ಸಮುದ್ರ ದಂಡೆಗೆ ತೇಲಿ ಬರುತ್ತಿವೆ. ಕಳೆದ ಒಂದು ವಾರದ ಅವಧಿಯಲ್ಲಿ ಸುಮಾರು 176 ಕಡಲಾಮೆಗಳ ಮೃತದೇಹ ಕೊಲಂಬೊ ತೀರದಲ್ಲಿ ಕಾಣಿಸಿಕೊಂಡಿದ್ದರೆ 20ಕ್ಕೂ ಹೆಚ್ಚು ಡಾಲ್ಫಿನ್‌ಗಳು, 4 ಬೃಹತ್ ತಿಮಿಂಗಲಗಳು ಮತ್ತು ಸಾವಿರಾರು ಸಂಖ್ಯೆಯ ವಿವಿಧ ಜಾತಿಯ ಮತ್ಸ್ಯ ತಳಿಗಳ  ಮೃತದೇಹಗಳು ಸಮುದ್ರ ತೀರದಲ್ಲಿ ರಾಶಿ ರಾಶಿಯಾಗಿ ಬಂದು ಬೀಳತೊಡಗಿದೆ.

ಎಕ್ಸ್‌ಪ್ರೆಸ್‌ ಪರ್ಲ್‌ ಹಡಗು 238 ಟನ್‌ಗಳಷ್ಟು ದ್ರವ ಇಂದನ ಮತ್ತು 50 ಟನ್‌ಗಳಷ್ಟು ಗ್ಯಾಸ್‌ ಅನ್ನು ತುಂಬಿ ಕೊಲಂಬೊ ತೀರದಲ್ಲಿ ಮುಳುಗಿದೆ. ದಶಕಗಳ ಕಾಲ ಪರಿಸರದ ಮೇಲೆ ಇದರ ಪರಿಣಾಮ ಉಳಿಯಲಿದೆ ಎಂದು ಪರಿಸರ ತಜ್ಞರು ಹೇಳಿದ್ದಾರೆ. ಶ್ರೀಲಂಕಾದ ಇತಿಹಾಸದಲ್ಲಿ ಇಷ್ಟು ದೊಡ್ಡ ಪ್ರಮಾಣದ ಹಡಗು ದುರಂತ ನಡೆದಿರಲಿಲ್ಲ ಎಂದು ಅಲ್ಲಿನ ಸರ್ಕಾರ ತಿಳಿಸಿದೆ.

ಶ್ರೀಲಂಕದ ಕೊಲಂಬೊ ತೀರಕ್ಕೆ ತೇಲಿ ಬರುತ್ತಿರುವ ಆಮೆಗಳ ಮೃತ ದೇಹ (PC : BBC)

ಇದನ್ನೂ ಓದಿ: ಈಜಿಪ್ಟ್‌ನ ಸುಯೆಜ್ ಕಾಲುವೆಯ ಮಧ್ಯೆ ಸಿಲುಕಿದ ಬೃಹತ್ ಹಡಗು – ಕೋಟ್ಯಂತರ ಡಾಲರ್ ನಷ್ಟ!

ಹಡಗಿನಲ್ಲಿದ್ದ ವಿಷಕಾರಿ ಅನಿಲಗಳು ಮತ್ತು ರಾಸಾಯನಿಕಗಳು ಸಮುದ್ರದಲ್ಲಿ ಬೆರೆತು ಹಿಂದು ಮಹಾಸಾಗರದ ನೂರಾರು ಕಿಲೋಮೀಟರ್‌ ವರೆಗಿನ ಜೀವ ಸಂಕಲ ವಿಷಕಾರಿಯಾಗಲಿದೆ. ಈ ಪ್ರದೆಶದಲ್ಲಿನ ಮೀನು ಸೇರಿದಂತೆ ಸಮುದ್ರ ಮೂಲದ ಆಹಾರ ತಿನ್ನುವ ಲಕ್ಷಾಂತರ ಜನರ ಆರೋಗ್ಯದ ಮೇಲೆ ಇದು ದೀರ್ಘಕಾಲದಲ್ಲಿ ಪರಿಣಾಮ ಬೀರಲಿದೆ ಎಂದು ಕೊಲಂಬೊ ಮೂಲದ ಪರಿಸರ ಸಂಘಟನೆಯೊಂದು ಎಚ್ಚರಿಕೆ ನೀಡಿದೆ.

ನೈರುತ್ಯ ಮಾನ್ಸೂನ್‌ ಸಂದರ್ಭದಲ್ಲಿ ಜಲಚರಗಳು ಇಷ್ಟು ಪ್ರಮಾಣದಲ್ಲಿ ಮೃತಪಟ್ಟ ದಾಖಲೆಯಿಲ್ಲ. ಸಾವಿರಾರು ಸಂಖ್ಯೆಯ ಜೀವ ಸಂಕುಲ ಒಮ್ಮೆಗೆ ಇಷ್ಟು ದೊಡ್ಡ ಪ್ರಮಾಣದಲ್ಲಿ ಅಪಾಯಕ್ಕೆ ತುತ್ತಾಗಿರುವುದು ಸಾಮಾನ್ಯ ಘಟನೆಯಲ್ಲ ಎಂದು ಶ್ರೀಲಂಕಾದ ಪರಿಸರ ಸಚಿವ ಮಹಿಂದ ಅಮರವೀರ ಅಭಿಪ್ರಾಯ ಪಟ್ಟಿದ್ದಾರೆ.

ವಿಷಕಾರಿ ಅನಿಲ ಮತ್ತು ರಾಸಾಯಿನಿಕದ ಸೋರಿಕೆಯಿಂದ ಮೃತಪಟ್ಟ ದೈತ್ಯ ಕಡಲಾಮೆ

186 ಮೀಟರ್ ಉದ್ದದ ಎಕ್ಸ್‌ಪ್ರೆಸ್‌ ಪರ್ಲ್ ಹಡಗು ಮೇ 15 ರಂದು ಭಾರತದ ಹಜೀರಾ ಬಂದರಿನಿಂದ ಕೊಲಂಬೊ ಕಡೆಗೆ ಪ್ರಯಾಣ ಬೆಳೆಸಿತ್ತು. ಈ ಹಿಂದೆ ಕತಾರ್ ಮತ್ತು ಭಾರತದ ಅಧಿಕಾರಿಗಳು ತಮ್ಮ ಬಂದರಿನಲ್ಲಿ ಹಡಗನ್ನು ನಿಲ್ಲಿಸಲು ಅವಕಾಶವನ್ನು ನೀಡಿರಲಿಲ್ಲ.

ಹಡಗು ದುರಂತ ಸಂಭವಿಸಿರುವ ಸುತ್ತಮುತ್ತದ ಸಮುದ್ರ ಪ್ರದೇಶದಲ್ಲಿ ಶ್ರೀಲಂಕಾ ಸರ್ಕಾರ ಮೀನುಗಾರಿಕೆಯನ್ನು ನಿಷೇಧಿಸಿದ್ದು ಸುಮಾರು 50,000 ಜನ ಮೀನುಗಾರಿಕೆಯನ್ನೇ ಅವಲಂಬಿಸಿರುವ ಜನರು ಆರ್ಥಿಕವಾಗಿ ಸಂಕಷ್ಟಕ್ಕೆ ಒಳಗಾಗಿದ್ದಾರೆ.

ನೈಟ್ರಿಕ್ ಆಸಿಡ್ ಸೋರಿಕೆಯಿಂದ ಹಡಗಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ಕಂಡು ಬಂದಿದ್ದು ಮೇ 11 ರಿಂದಲೇ ಹಡಗಿನಲ್ಲಿ ಅನಿಲ ಸೋರಿಕೆಯಾಗುತ್ತಿತ್ತು ಎಂಬ ಅಂಶ ಕೂಡ ತನಿಖೆಯಲ್ಲಿ ಪತ್ತೆಯಾಗಿದೆ.

ಅನಿಲ ಸೋರಿಕೆಯ ವಿಷಯವನ್ನು ಮೊದಲೇ ತಿಳಿದಿದ್ದರೂ ಹಡಗಿನ ಸಿಬ್ಬಂದಿ ಯಾವುದೇ ಕ್ರಮವನ್ನು ಕೈಗೊಳ್ಳದಿರುವುದೇ ಈ ಮಹಾ ದುರಂತಕ್ಕೆ ಕಾರಣ ಎಂದು ಶ್ರೀಲಂಕಾ ಸರ್ಕಾರ ಹಡಗು ಕಂಪನಿಯ ಮೇಲೆ ಆರೋಪಿಸಿದೆ. ಹಡಗಿನಲ್ಲಿ ಅನಿಲ ಸೋರಿಕೆಯಾಗುತ್ತಿರುವ ವಿಷಯ ಮೇ 11 ರ ವೇಳೆಯಲ್ಲಿಯೇ ಗಮನಕ್ಕೆ ಬಂದಿತ್ತು ಎಂದು ಹಡಗಿನ ಮಾಲೀಕರು ತಿಳಿಸಿದ್ದಾರೆ.

ಶ್ರೀಲಂಕಾ ನ್ಯಾಯಾಲಯದಲ್ಲಿ ಜುಲೈ 15 ರಿಂದ ಪ್ರಕರಣದ ವಿಚಾರಣೆ ಆರಂಭವಾಗಲಿದ್ದು ಪರಿಸರಹಾನಿ, ಜೀವಹಾನಿ, ಮೀನುಗಾರರ ಆರ್ಥಿಕ ಸಂಕಷ್ಟಕ್ಕೆ ಕಾರಣವಾದ ಹಡಗು ಮಾಲೀಕರು ಮತ್ತು ಶ್ರೀಲಂಕಾ ಸರ್ಕಾರದ ಮೇಲೆ ಜನರ ಆಕ್ರೋಶ ಭುಗಿಲೆದ್ದಿದೆ.


ದನ್ನೂ ಓದಿ: ಈಜಿಪ್ಟ್‌ನ ಸುಯೆಜ್ ಕಾಲುವೆಯ ಮಧ್ಯೆ ಸಿಲುಕಿದ ಬೃಹತ್ ಹಡಗು – ಕೋಟ್ಯಂತರ ಡಾಲರ್ ನಷ್ಟ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...

ಮುಂಬೈ| ಬುರ್ಖಾ ಧರಿಸಿ ಲೋಕಲ್‌ ಟ್ರೈನ್‌ನ ಮಹಿಳಾ ಬೋಗಿಯಲ್ಲಿ ಪ್ರಯಾಣಿಸಿದ ವ್ಯಕ್ತಿ ಬಂಧನ

ಮುಂಬೈನ ಉಪನಗರ ರೈಲಿನ ಮಹಿಳಾ ಬೋಗಿಯಲ್ಲಿ ಬುರ್ಖಾ ಧರಿಸಿ ಪ್ರಯಾಣಿಸುತ್ತಿದ್ದ ಆರೋಪದ ಮೇಲೆ ನಾಸಿಕ್‌ನ 57 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಈ ಘಟನೆ ಫೆಬ್ರವರಿ 6 ರಂದು ಘಾಟ್ಕೋಪರ್...

ಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

ಎಪ್‌ಸ್ಟೀನ್‌ ಫೈಲ್ಸ್‌ ಮುಂದಿಟ್ಟುಕೊಂಡು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ'ಯಿಂದ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ದೂರ ಉಳಿದಿದ್ದಾರೆ. ಈ ಕುರಿತು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ...

ಬೆಂಗಳೂರಿನಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್‌ಗಳಿಗೆ ಎಚ್ಚರಿಕೆ

ಬೆಂಗಳೂರು: ಫ್ರೇಸರ್ ಟೌನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಎಂಎಂ ರಸ್ತೆಯಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್ ಮಾಲೀಕರಿಗೆ ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ರಂಜಾನ್ ಆಹಾರ ಮೇಳದಿಂದ ಸಂಚಾರ ದಟ್ಟಣೆ. ಅವ್ಯವಸ್ಥೆಯ ಜೊತೆಗೆ...

‘ದಿ ಕೇರಳ ಸ್ಟೋರಿ-2’ ಚಲನಚಿತ್ರ ಜಾತ್ಯತೀತತೆಗೆ ಬೆದರಿಕೆ: ಮುಖ್ಯಮಂತ್ರಿ ಪಿಣರಾಯಿ ವಿಜಯನ್

'ದಿ ಕೇರಳ ಸ್ಟೋರಿ' ಚಿತ್ರದ ಎರಡನೇ ಭಾಗ ಬಿಡುಗಡೆಯಾಗುತ್ತಿರುವ ಬಗ್ಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕಳವಳ ವ್ಯಕ್ತಪಡಿಸಿದ್ದು, ಇದರ ಮೊದಲ ಭಾಗವು "ರಾಜ್ಯದ ವಿರುದ್ಧ ದ್ವೇಷವನ್ನು ಹರಡುವ ಮತ್ತು ನಮ್ಮ ಜಾತ್ಯತೀತ...

ಬಿಜೆಪಿ ಸೇರಲು ಸಿದ್ದರಾದ ಭೂಪೇನ್ ಬೋರಾ : ಪ್ರಿಯಾಂಕಾ, ಡಿಕೆಶಿ ಸೇರಿದಂತೆ ‘ಕೈ ಟ್ರಬಲ್ ಶೂಟರ್‌ಗಳು’ ಅಸ್ಸಾಂಗೆ ದೌಡು

ರಾಜ್ಯ ಕಾಂಗ್ರೆಸ್‌ ಘಟಕದ ಮಾಜಿ ಅಧ್ಯಕ್ಷ ಭೂಪೇನ್ ಬೋರಾ ಬಿಜೆಪಿಗೆ ಹಾರಲು ಸಿದ್ದರಾಗಿರುವ ನಡುವೆ ಪ್ರಿಯಾಂಕಾ ಗಾಂಧಿ, ಡಿ.ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ಟ್ರಬಲ್ ಶೂಟರ್‌ಗಳ ತಂಡ ಅಸ್ಸಾಂಗೆ ದೌಡಾಯಿಸಿದೆ. ಅಸ್ಸಾಂ ಕಾಂಗ್ರೆಸ್ ಅಭ್ಯರ್ಥಿಗಳ...

ಸರ್ಕಾರದ ಭರವಸೆಗೆ ಮಣಿಯದ ಸಾರಿಗೆ ಸಿಬ್ಬಂದಿ : ಮುಷ್ಕರ ಮುಂದುವರಿಸಲು ನಿರ್ಧಾರ

ಹಿಂಬಾಕಿ ಪಾವತಿ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯದ ನಾಲ್ಕು ಸಾರಿಗೆ ನಿಗಮಗಳಾದ ಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಹಾಗೂ ಬಿಎಂಟಿಸಿಯ ನೌಕರರು ಇಂದು (ಫೆ.19) ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ. ನೌಕರರ ಪ್ರತಿಭಟನೆ...

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...