Homeಅಂತರಾಷ್ಟ್ರೀಯಶ್ರೀಲಂಕಾ: ಹೊತ್ತಿ ಉರಿದ ದೈತ್ಯ ಹಡಗು - ಸಮುದ್ರ ದಡಕ್ಕೆ ತೇಲಿಬರುತ್ತಿವೆ ಜಲಚರಗಳ ಮೃತದೇಹ

ಶ್ರೀಲಂಕಾ: ಹೊತ್ತಿ ಉರಿದ ದೈತ್ಯ ಹಡಗು – ಸಮುದ್ರ ದಡಕ್ಕೆ ತೇಲಿಬರುತ್ತಿವೆ ಜಲಚರಗಳ ಮೃತದೇಹ

- Advertisement -
- Advertisement -

ಕೆಲ ದಿನಗಳ ಹಿಂದೆ ಕೊಲೊಂಬೊ ಬಂದರಿನಲ್ಲಿ ಸಿಂಗಾಪುರ ಮೂಲದ ಎಕ್ಸ್‌ಪ್ರೆಸ್‌ ಪರ್ಲ್ ಎಂಬ ಹಡಗು ಮುಳುಗಡೆಯಾಗಿದೆ. ನೂರಾರು ಟನ್ ರಾಸಾಯನಿಕಗಳನ್ನು ಮತ್ತು ತೈಲವನ್ನು ಸಾಗಿಸುತ್ತಿದ್ದ ಹಡಗು ಸಮುದ್ರದಲ್ಲಿ ಸ್ಫೋಟಗೊಂಡ ಪರಿಣಾಮ ಕೊಲೊಂಬೊ ಸುತ್ತಲಿನ ಸಮುದ್ರ ವಾತಾವರಣದಲ್ಲಿ ತೀವ್ರ ಬದಲಾವಣೆಯಾಗಿದ್ದು ನೂರಾರು ಜಲಚರಗಳ ಮೃತದೇಹಗಳು ಸಮುದ್ರ ದಂಡೆಗೆ ತೇಲಿ ಬರುತ್ತಿವೆ. ಕಳೆದ ಒಂದು ವಾರದ ಅವಧಿಯಲ್ಲಿ ಸುಮಾರು 176 ಕಡಲಾಮೆಗಳ ಮೃತದೇಹ ಕೊಲಂಬೊ ತೀರದಲ್ಲಿ ಕಾಣಿಸಿಕೊಂಡಿದ್ದರೆ 20ಕ್ಕೂ ಹೆಚ್ಚು ಡಾಲ್ಫಿನ್‌ಗಳು, 4 ಬೃಹತ್ ತಿಮಿಂಗಲಗಳು ಮತ್ತು ಸಾವಿರಾರು ಸಂಖ್ಯೆಯ ವಿವಿಧ ಜಾತಿಯ ಮತ್ಸ್ಯ ತಳಿಗಳ  ಮೃತದೇಹಗಳು ಸಮುದ್ರ ತೀರದಲ್ಲಿ ರಾಶಿ ರಾಶಿಯಾಗಿ ಬಂದು ಬೀಳತೊಡಗಿದೆ.

ಎಕ್ಸ್‌ಪ್ರೆಸ್‌ ಪರ್ಲ್‌ ಹಡಗು 238 ಟನ್‌ಗಳಷ್ಟು ದ್ರವ ಇಂದನ ಮತ್ತು 50 ಟನ್‌ಗಳಷ್ಟು ಗ್ಯಾಸ್‌ ಅನ್ನು ತುಂಬಿ ಕೊಲಂಬೊ ತೀರದಲ್ಲಿ ಮುಳುಗಿದೆ. ದಶಕಗಳ ಕಾಲ ಪರಿಸರದ ಮೇಲೆ ಇದರ ಪರಿಣಾಮ ಉಳಿಯಲಿದೆ ಎಂದು ಪರಿಸರ ತಜ್ಞರು ಹೇಳಿದ್ದಾರೆ. ಶ್ರೀಲಂಕಾದ ಇತಿಹಾಸದಲ್ಲಿ ಇಷ್ಟು ದೊಡ್ಡ ಪ್ರಮಾಣದ ಹಡಗು ದುರಂತ ನಡೆದಿರಲಿಲ್ಲ ಎಂದು ಅಲ್ಲಿನ ಸರ್ಕಾರ ತಿಳಿಸಿದೆ.

ಶ್ರೀಲಂಕದ ಕೊಲಂಬೊ ತೀರಕ್ಕೆ ತೇಲಿ ಬರುತ್ತಿರುವ ಆಮೆಗಳ ಮೃತ ದೇಹ (PC : BBC)

ಇದನ್ನೂ ಓದಿ: ಈಜಿಪ್ಟ್‌ನ ಸುಯೆಜ್ ಕಾಲುವೆಯ ಮಧ್ಯೆ ಸಿಲುಕಿದ ಬೃಹತ್ ಹಡಗು – ಕೋಟ್ಯಂತರ ಡಾಲರ್ ನಷ್ಟ!

ಹಡಗಿನಲ್ಲಿದ್ದ ವಿಷಕಾರಿ ಅನಿಲಗಳು ಮತ್ತು ರಾಸಾಯನಿಕಗಳು ಸಮುದ್ರದಲ್ಲಿ ಬೆರೆತು ಹಿಂದು ಮಹಾಸಾಗರದ ನೂರಾರು ಕಿಲೋಮೀಟರ್‌ ವರೆಗಿನ ಜೀವ ಸಂಕಲ ವಿಷಕಾರಿಯಾಗಲಿದೆ. ಈ ಪ್ರದೆಶದಲ್ಲಿನ ಮೀನು ಸೇರಿದಂತೆ ಸಮುದ್ರ ಮೂಲದ ಆಹಾರ ತಿನ್ನುವ ಲಕ್ಷಾಂತರ ಜನರ ಆರೋಗ್ಯದ ಮೇಲೆ ಇದು ದೀರ್ಘಕಾಲದಲ್ಲಿ ಪರಿಣಾಮ ಬೀರಲಿದೆ ಎಂದು ಕೊಲಂಬೊ ಮೂಲದ ಪರಿಸರ ಸಂಘಟನೆಯೊಂದು ಎಚ್ಚರಿಕೆ ನೀಡಿದೆ.

ನೈರುತ್ಯ ಮಾನ್ಸೂನ್‌ ಸಂದರ್ಭದಲ್ಲಿ ಜಲಚರಗಳು ಇಷ್ಟು ಪ್ರಮಾಣದಲ್ಲಿ ಮೃತಪಟ್ಟ ದಾಖಲೆಯಿಲ್ಲ. ಸಾವಿರಾರು ಸಂಖ್ಯೆಯ ಜೀವ ಸಂಕುಲ ಒಮ್ಮೆಗೆ ಇಷ್ಟು ದೊಡ್ಡ ಪ್ರಮಾಣದಲ್ಲಿ ಅಪಾಯಕ್ಕೆ ತುತ್ತಾಗಿರುವುದು ಸಾಮಾನ್ಯ ಘಟನೆಯಲ್ಲ ಎಂದು ಶ್ರೀಲಂಕಾದ ಪರಿಸರ ಸಚಿವ ಮಹಿಂದ ಅಮರವೀರ ಅಭಿಪ್ರಾಯ ಪಟ್ಟಿದ್ದಾರೆ.

ವಿಷಕಾರಿ ಅನಿಲ ಮತ್ತು ರಾಸಾಯಿನಿಕದ ಸೋರಿಕೆಯಿಂದ ಮೃತಪಟ್ಟ ದೈತ್ಯ ಕಡಲಾಮೆ

186 ಮೀಟರ್ ಉದ್ದದ ಎಕ್ಸ್‌ಪ್ರೆಸ್‌ ಪರ್ಲ್ ಹಡಗು ಮೇ 15 ರಂದು ಭಾರತದ ಹಜೀರಾ ಬಂದರಿನಿಂದ ಕೊಲಂಬೊ ಕಡೆಗೆ ಪ್ರಯಾಣ ಬೆಳೆಸಿತ್ತು. ಈ ಹಿಂದೆ ಕತಾರ್ ಮತ್ತು ಭಾರತದ ಅಧಿಕಾರಿಗಳು ತಮ್ಮ ಬಂದರಿನಲ್ಲಿ ಹಡಗನ್ನು ನಿಲ್ಲಿಸಲು ಅವಕಾಶವನ್ನು ನೀಡಿರಲಿಲ್ಲ.

ಹಡಗು ದುರಂತ ಸಂಭವಿಸಿರುವ ಸುತ್ತಮುತ್ತದ ಸಮುದ್ರ ಪ್ರದೇಶದಲ್ಲಿ ಶ್ರೀಲಂಕಾ ಸರ್ಕಾರ ಮೀನುಗಾರಿಕೆಯನ್ನು ನಿಷೇಧಿಸಿದ್ದು ಸುಮಾರು 50,000 ಜನ ಮೀನುಗಾರಿಕೆಯನ್ನೇ ಅವಲಂಬಿಸಿರುವ ಜನರು ಆರ್ಥಿಕವಾಗಿ ಸಂಕಷ್ಟಕ್ಕೆ ಒಳಗಾಗಿದ್ದಾರೆ.

ನೈಟ್ರಿಕ್ ಆಸಿಡ್ ಸೋರಿಕೆಯಿಂದ ಹಡಗಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ಕಂಡು ಬಂದಿದ್ದು ಮೇ 11 ರಿಂದಲೇ ಹಡಗಿನಲ್ಲಿ ಅನಿಲ ಸೋರಿಕೆಯಾಗುತ್ತಿತ್ತು ಎಂಬ ಅಂಶ ಕೂಡ ತನಿಖೆಯಲ್ಲಿ ಪತ್ತೆಯಾಗಿದೆ.

ಅನಿಲ ಸೋರಿಕೆಯ ವಿಷಯವನ್ನು ಮೊದಲೇ ತಿಳಿದಿದ್ದರೂ ಹಡಗಿನ ಸಿಬ್ಬಂದಿ ಯಾವುದೇ ಕ್ರಮವನ್ನು ಕೈಗೊಳ್ಳದಿರುವುದೇ ಈ ಮಹಾ ದುರಂತಕ್ಕೆ ಕಾರಣ ಎಂದು ಶ್ರೀಲಂಕಾ ಸರ್ಕಾರ ಹಡಗು ಕಂಪನಿಯ ಮೇಲೆ ಆರೋಪಿಸಿದೆ. ಹಡಗಿನಲ್ಲಿ ಅನಿಲ ಸೋರಿಕೆಯಾಗುತ್ತಿರುವ ವಿಷಯ ಮೇ 11 ರ ವೇಳೆಯಲ್ಲಿಯೇ ಗಮನಕ್ಕೆ ಬಂದಿತ್ತು ಎಂದು ಹಡಗಿನ ಮಾಲೀಕರು ತಿಳಿಸಿದ್ದಾರೆ.

ಶ್ರೀಲಂಕಾ ನ್ಯಾಯಾಲಯದಲ್ಲಿ ಜುಲೈ 15 ರಿಂದ ಪ್ರಕರಣದ ವಿಚಾರಣೆ ಆರಂಭವಾಗಲಿದ್ದು ಪರಿಸರಹಾನಿ, ಜೀವಹಾನಿ, ಮೀನುಗಾರರ ಆರ್ಥಿಕ ಸಂಕಷ್ಟಕ್ಕೆ ಕಾರಣವಾದ ಹಡಗು ಮಾಲೀಕರು ಮತ್ತು ಶ್ರೀಲಂಕಾ ಸರ್ಕಾರದ ಮೇಲೆ ಜನರ ಆಕ್ರೋಶ ಭುಗಿಲೆದ್ದಿದೆ.


ದನ್ನೂ ಓದಿ: ಈಜಿಪ್ಟ್‌ನ ಸುಯೆಜ್ ಕಾಲುವೆಯ ಮಧ್ಯೆ ಸಿಲುಕಿದ ಬೃಹತ್ ಹಡಗು – ಕೋಟ್ಯಂತರ ಡಾಲರ್ ನಷ್ಟ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...