Homeಅಂತರಾಷ್ಟ್ರೀಯಶ್ರೀಲಂಕಾ: ಹೊತ್ತಿ ಉರಿದ ದೈತ್ಯ ಹಡಗು - ಸಮುದ್ರ ದಡಕ್ಕೆ ತೇಲಿಬರುತ್ತಿವೆ ಜಲಚರಗಳ ಮೃತದೇಹ

ಶ್ರೀಲಂಕಾ: ಹೊತ್ತಿ ಉರಿದ ದೈತ್ಯ ಹಡಗು – ಸಮುದ್ರ ದಡಕ್ಕೆ ತೇಲಿಬರುತ್ತಿವೆ ಜಲಚರಗಳ ಮೃತದೇಹ

- Advertisement -
- Advertisement -

ಕೆಲ ದಿನಗಳ ಹಿಂದೆ ಕೊಲೊಂಬೊ ಬಂದರಿನಲ್ಲಿ ಸಿಂಗಾಪುರ ಮೂಲದ ಎಕ್ಸ್‌ಪ್ರೆಸ್‌ ಪರ್ಲ್ ಎಂಬ ಹಡಗು ಮುಳುಗಡೆಯಾಗಿದೆ. ನೂರಾರು ಟನ್ ರಾಸಾಯನಿಕಗಳನ್ನು ಮತ್ತು ತೈಲವನ್ನು ಸಾಗಿಸುತ್ತಿದ್ದ ಹಡಗು ಸಮುದ್ರದಲ್ಲಿ ಸ್ಫೋಟಗೊಂಡ ಪರಿಣಾಮ ಕೊಲೊಂಬೊ ಸುತ್ತಲಿನ ಸಮುದ್ರ ವಾತಾವರಣದಲ್ಲಿ ತೀವ್ರ ಬದಲಾವಣೆಯಾಗಿದ್ದು ನೂರಾರು ಜಲಚರಗಳ ಮೃತದೇಹಗಳು ಸಮುದ್ರ ದಂಡೆಗೆ ತೇಲಿ ಬರುತ್ತಿವೆ. ಕಳೆದ ಒಂದು ವಾರದ ಅವಧಿಯಲ್ಲಿ ಸುಮಾರು 176 ಕಡಲಾಮೆಗಳ ಮೃತದೇಹ ಕೊಲಂಬೊ ತೀರದಲ್ಲಿ ಕಾಣಿಸಿಕೊಂಡಿದ್ದರೆ 20ಕ್ಕೂ ಹೆಚ್ಚು ಡಾಲ್ಫಿನ್‌ಗಳು, 4 ಬೃಹತ್ ತಿಮಿಂಗಲಗಳು ಮತ್ತು ಸಾವಿರಾರು ಸಂಖ್ಯೆಯ ವಿವಿಧ ಜಾತಿಯ ಮತ್ಸ್ಯ ತಳಿಗಳ  ಮೃತದೇಹಗಳು ಸಮುದ್ರ ತೀರದಲ್ಲಿ ರಾಶಿ ರಾಶಿಯಾಗಿ ಬಂದು ಬೀಳತೊಡಗಿದೆ.

ಎಕ್ಸ್‌ಪ್ರೆಸ್‌ ಪರ್ಲ್‌ ಹಡಗು 238 ಟನ್‌ಗಳಷ್ಟು ದ್ರವ ಇಂದನ ಮತ್ತು 50 ಟನ್‌ಗಳಷ್ಟು ಗ್ಯಾಸ್‌ ಅನ್ನು ತುಂಬಿ ಕೊಲಂಬೊ ತೀರದಲ್ಲಿ ಮುಳುಗಿದೆ. ದಶಕಗಳ ಕಾಲ ಪರಿಸರದ ಮೇಲೆ ಇದರ ಪರಿಣಾಮ ಉಳಿಯಲಿದೆ ಎಂದು ಪರಿಸರ ತಜ್ಞರು ಹೇಳಿದ್ದಾರೆ. ಶ್ರೀಲಂಕಾದ ಇತಿಹಾಸದಲ್ಲಿ ಇಷ್ಟು ದೊಡ್ಡ ಪ್ರಮಾಣದ ಹಡಗು ದುರಂತ ನಡೆದಿರಲಿಲ್ಲ ಎಂದು ಅಲ್ಲಿನ ಸರ್ಕಾರ ತಿಳಿಸಿದೆ.

ಶ್ರೀಲಂಕದ ಕೊಲಂಬೊ ತೀರಕ್ಕೆ ತೇಲಿ ಬರುತ್ತಿರುವ ಆಮೆಗಳ ಮೃತ ದೇಹ (PC : BBC)

ಇದನ್ನೂ ಓದಿ: ಈಜಿಪ್ಟ್‌ನ ಸುಯೆಜ್ ಕಾಲುವೆಯ ಮಧ್ಯೆ ಸಿಲುಕಿದ ಬೃಹತ್ ಹಡಗು – ಕೋಟ್ಯಂತರ ಡಾಲರ್ ನಷ್ಟ!

ಹಡಗಿನಲ್ಲಿದ್ದ ವಿಷಕಾರಿ ಅನಿಲಗಳು ಮತ್ತು ರಾಸಾಯನಿಕಗಳು ಸಮುದ್ರದಲ್ಲಿ ಬೆರೆತು ಹಿಂದು ಮಹಾಸಾಗರದ ನೂರಾರು ಕಿಲೋಮೀಟರ್‌ ವರೆಗಿನ ಜೀವ ಸಂಕಲ ವಿಷಕಾರಿಯಾಗಲಿದೆ. ಈ ಪ್ರದೆಶದಲ್ಲಿನ ಮೀನು ಸೇರಿದಂತೆ ಸಮುದ್ರ ಮೂಲದ ಆಹಾರ ತಿನ್ನುವ ಲಕ್ಷಾಂತರ ಜನರ ಆರೋಗ್ಯದ ಮೇಲೆ ಇದು ದೀರ್ಘಕಾಲದಲ್ಲಿ ಪರಿಣಾಮ ಬೀರಲಿದೆ ಎಂದು ಕೊಲಂಬೊ ಮೂಲದ ಪರಿಸರ ಸಂಘಟನೆಯೊಂದು ಎಚ್ಚರಿಕೆ ನೀಡಿದೆ.

ನೈರುತ್ಯ ಮಾನ್ಸೂನ್‌ ಸಂದರ್ಭದಲ್ಲಿ ಜಲಚರಗಳು ಇಷ್ಟು ಪ್ರಮಾಣದಲ್ಲಿ ಮೃತಪಟ್ಟ ದಾಖಲೆಯಿಲ್ಲ. ಸಾವಿರಾರು ಸಂಖ್ಯೆಯ ಜೀವ ಸಂಕುಲ ಒಮ್ಮೆಗೆ ಇಷ್ಟು ದೊಡ್ಡ ಪ್ರಮಾಣದಲ್ಲಿ ಅಪಾಯಕ್ಕೆ ತುತ್ತಾಗಿರುವುದು ಸಾಮಾನ್ಯ ಘಟನೆಯಲ್ಲ ಎಂದು ಶ್ರೀಲಂಕಾದ ಪರಿಸರ ಸಚಿವ ಮಹಿಂದ ಅಮರವೀರ ಅಭಿಪ್ರಾಯ ಪಟ್ಟಿದ್ದಾರೆ.

ವಿಷಕಾರಿ ಅನಿಲ ಮತ್ತು ರಾಸಾಯಿನಿಕದ ಸೋರಿಕೆಯಿಂದ ಮೃತಪಟ್ಟ ದೈತ್ಯ ಕಡಲಾಮೆ

186 ಮೀಟರ್ ಉದ್ದದ ಎಕ್ಸ್‌ಪ್ರೆಸ್‌ ಪರ್ಲ್ ಹಡಗು ಮೇ 15 ರಂದು ಭಾರತದ ಹಜೀರಾ ಬಂದರಿನಿಂದ ಕೊಲಂಬೊ ಕಡೆಗೆ ಪ್ರಯಾಣ ಬೆಳೆಸಿತ್ತು. ಈ ಹಿಂದೆ ಕತಾರ್ ಮತ್ತು ಭಾರತದ ಅಧಿಕಾರಿಗಳು ತಮ್ಮ ಬಂದರಿನಲ್ಲಿ ಹಡಗನ್ನು ನಿಲ್ಲಿಸಲು ಅವಕಾಶವನ್ನು ನೀಡಿರಲಿಲ್ಲ.

ಹಡಗು ದುರಂತ ಸಂಭವಿಸಿರುವ ಸುತ್ತಮುತ್ತದ ಸಮುದ್ರ ಪ್ರದೇಶದಲ್ಲಿ ಶ್ರೀಲಂಕಾ ಸರ್ಕಾರ ಮೀನುಗಾರಿಕೆಯನ್ನು ನಿಷೇಧಿಸಿದ್ದು ಸುಮಾರು 50,000 ಜನ ಮೀನುಗಾರಿಕೆಯನ್ನೇ ಅವಲಂಬಿಸಿರುವ ಜನರು ಆರ್ಥಿಕವಾಗಿ ಸಂಕಷ್ಟಕ್ಕೆ ಒಳಗಾಗಿದ್ದಾರೆ.

ನೈಟ್ರಿಕ್ ಆಸಿಡ್ ಸೋರಿಕೆಯಿಂದ ಹಡಗಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ಕಂಡು ಬಂದಿದ್ದು ಮೇ 11 ರಿಂದಲೇ ಹಡಗಿನಲ್ಲಿ ಅನಿಲ ಸೋರಿಕೆಯಾಗುತ್ತಿತ್ತು ಎಂಬ ಅಂಶ ಕೂಡ ತನಿಖೆಯಲ್ಲಿ ಪತ್ತೆಯಾಗಿದೆ.

ಅನಿಲ ಸೋರಿಕೆಯ ವಿಷಯವನ್ನು ಮೊದಲೇ ತಿಳಿದಿದ್ದರೂ ಹಡಗಿನ ಸಿಬ್ಬಂದಿ ಯಾವುದೇ ಕ್ರಮವನ್ನು ಕೈಗೊಳ್ಳದಿರುವುದೇ ಈ ಮಹಾ ದುರಂತಕ್ಕೆ ಕಾರಣ ಎಂದು ಶ್ರೀಲಂಕಾ ಸರ್ಕಾರ ಹಡಗು ಕಂಪನಿಯ ಮೇಲೆ ಆರೋಪಿಸಿದೆ. ಹಡಗಿನಲ್ಲಿ ಅನಿಲ ಸೋರಿಕೆಯಾಗುತ್ತಿರುವ ವಿಷಯ ಮೇ 11 ರ ವೇಳೆಯಲ್ಲಿಯೇ ಗಮನಕ್ಕೆ ಬಂದಿತ್ತು ಎಂದು ಹಡಗಿನ ಮಾಲೀಕರು ತಿಳಿಸಿದ್ದಾರೆ.

ಶ್ರೀಲಂಕಾ ನ್ಯಾಯಾಲಯದಲ್ಲಿ ಜುಲೈ 15 ರಿಂದ ಪ್ರಕರಣದ ವಿಚಾರಣೆ ಆರಂಭವಾಗಲಿದ್ದು ಪರಿಸರಹಾನಿ, ಜೀವಹಾನಿ, ಮೀನುಗಾರರ ಆರ್ಥಿಕ ಸಂಕಷ್ಟಕ್ಕೆ ಕಾರಣವಾದ ಹಡಗು ಮಾಲೀಕರು ಮತ್ತು ಶ್ರೀಲಂಕಾ ಸರ್ಕಾರದ ಮೇಲೆ ಜನರ ಆಕ್ರೋಶ ಭುಗಿಲೆದ್ದಿದೆ.


ದನ್ನೂ ಓದಿ: ಈಜಿಪ್ಟ್‌ನ ಸುಯೆಜ್ ಕಾಲುವೆಯ ಮಧ್ಯೆ ಸಿಲುಕಿದ ಬೃಹತ್ ಹಡಗು – ಕೋಟ್ಯಂತರ ಡಾಲರ್ ನಷ್ಟ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...