Homeಅಂತರಾಷ್ಟ್ರೀಯಶ್ರೀಲಂಕಾ: ಹೊತ್ತಿ ಉರಿದ ದೈತ್ಯ ಹಡಗು - ಸಮುದ್ರ ದಡಕ್ಕೆ ತೇಲಿಬರುತ್ತಿವೆ ಜಲಚರಗಳ ಮೃತದೇಹ

ಶ್ರೀಲಂಕಾ: ಹೊತ್ತಿ ಉರಿದ ದೈತ್ಯ ಹಡಗು – ಸಮುದ್ರ ದಡಕ್ಕೆ ತೇಲಿಬರುತ್ತಿವೆ ಜಲಚರಗಳ ಮೃತದೇಹ

- Advertisement -
- Advertisement -

ಕೆಲ ದಿನಗಳ ಹಿಂದೆ ಕೊಲೊಂಬೊ ಬಂದರಿನಲ್ಲಿ ಸಿಂಗಾಪುರ ಮೂಲದ ಎಕ್ಸ್‌ಪ್ರೆಸ್‌ ಪರ್ಲ್ ಎಂಬ ಹಡಗು ಮುಳುಗಡೆಯಾಗಿದೆ. ನೂರಾರು ಟನ್ ರಾಸಾಯನಿಕಗಳನ್ನು ಮತ್ತು ತೈಲವನ್ನು ಸಾಗಿಸುತ್ತಿದ್ದ ಹಡಗು ಸಮುದ್ರದಲ್ಲಿ ಸ್ಫೋಟಗೊಂಡ ಪರಿಣಾಮ ಕೊಲೊಂಬೊ ಸುತ್ತಲಿನ ಸಮುದ್ರ ವಾತಾವರಣದಲ್ಲಿ ತೀವ್ರ ಬದಲಾವಣೆಯಾಗಿದ್ದು ನೂರಾರು ಜಲಚರಗಳ ಮೃತದೇಹಗಳು ಸಮುದ್ರ ದಂಡೆಗೆ ತೇಲಿ ಬರುತ್ತಿವೆ. ಕಳೆದ ಒಂದು ವಾರದ ಅವಧಿಯಲ್ಲಿ ಸುಮಾರು 176 ಕಡಲಾಮೆಗಳ ಮೃತದೇಹ ಕೊಲಂಬೊ ತೀರದಲ್ಲಿ ಕಾಣಿಸಿಕೊಂಡಿದ್ದರೆ 20ಕ್ಕೂ ಹೆಚ್ಚು ಡಾಲ್ಫಿನ್‌ಗಳು, 4 ಬೃಹತ್ ತಿಮಿಂಗಲಗಳು ಮತ್ತು ಸಾವಿರಾರು ಸಂಖ್ಯೆಯ ವಿವಿಧ ಜಾತಿಯ ಮತ್ಸ್ಯ ತಳಿಗಳ  ಮೃತದೇಹಗಳು ಸಮುದ್ರ ತೀರದಲ್ಲಿ ರಾಶಿ ರಾಶಿಯಾಗಿ ಬಂದು ಬೀಳತೊಡಗಿದೆ.

ಎಕ್ಸ್‌ಪ್ರೆಸ್‌ ಪರ್ಲ್‌ ಹಡಗು 238 ಟನ್‌ಗಳಷ್ಟು ದ್ರವ ಇಂದನ ಮತ್ತು 50 ಟನ್‌ಗಳಷ್ಟು ಗ್ಯಾಸ್‌ ಅನ್ನು ತುಂಬಿ ಕೊಲಂಬೊ ತೀರದಲ್ಲಿ ಮುಳುಗಿದೆ. ದಶಕಗಳ ಕಾಲ ಪರಿಸರದ ಮೇಲೆ ಇದರ ಪರಿಣಾಮ ಉಳಿಯಲಿದೆ ಎಂದು ಪರಿಸರ ತಜ್ಞರು ಹೇಳಿದ್ದಾರೆ. ಶ್ರೀಲಂಕಾದ ಇತಿಹಾಸದಲ್ಲಿ ಇಷ್ಟು ದೊಡ್ಡ ಪ್ರಮಾಣದ ಹಡಗು ದುರಂತ ನಡೆದಿರಲಿಲ್ಲ ಎಂದು ಅಲ್ಲಿನ ಸರ್ಕಾರ ತಿಳಿಸಿದೆ.

ಶ್ರೀಲಂಕದ ಕೊಲಂಬೊ ತೀರಕ್ಕೆ ತೇಲಿ ಬರುತ್ತಿರುವ ಆಮೆಗಳ ಮೃತ ದೇಹ (PC : BBC)

ಇದನ್ನೂ ಓದಿ: ಈಜಿಪ್ಟ್‌ನ ಸುಯೆಜ್ ಕಾಲುವೆಯ ಮಧ್ಯೆ ಸಿಲುಕಿದ ಬೃಹತ್ ಹಡಗು – ಕೋಟ್ಯಂತರ ಡಾಲರ್ ನಷ್ಟ!

ಹಡಗಿನಲ್ಲಿದ್ದ ವಿಷಕಾರಿ ಅನಿಲಗಳು ಮತ್ತು ರಾಸಾಯನಿಕಗಳು ಸಮುದ್ರದಲ್ಲಿ ಬೆರೆತು ಹಿಂದು ಮಹಾಸಾಗರದ ನೂರಾರು ಕಿಲೋಮೀಟರ್‌ ವರೆಗಿನ ಜೀವ ಸಂಕಲ ವಿಷಕಾರಿಯಾಗಲಿದೆ. ಈ ಪ್ರದೆಶದಲ್ಲಿನ ಮೀನು ಸೇರಿದಂತೆ ಸಮುದ್ರ ಮೂಲದ ಆಹಾರ ತಿನ್ನುವ ಲಕ್ಷಾಂತರ ಜನರ ಆರೋಗ್ಯದ ಮೇಲೆ ಇದು ದೀರ್ಘಕಾಲದಲ್ಲಿ ಪರಿಣಾಮ ಬೀರಲಿದೆ ಎಂದು ಕೊಲಂಬೊ ಮೂಲದ ಪರಿಸರ ಸಂಘಟನೆಯೊಂದು ಎಚ್ಚರಿಕೆ ನೀಡಿದೆ.

ನೈರುತ್ಯ ಮಾನ್ಸೂನ್‌ ಸಂದರ್ಭದಲ್ಲಿ ಜಲಚರಗಳು ಇಷ್ಟು ಪ್ರಮಾಣದಲ್ಲಿ ಮೃತಪಟ್ಟ ದಾಖಲೆಯಿಲ್ಲ. ಸಾವಿರಾರು ಸಂಖ್ಯೆಯ ಜೀವ ಸಂಕುಲ ಒಮ್ಮೆಗೆ ಇಷ್ಟು ದೊಡ್ಡ ಪ್ರಮಾಣದಲ್ಲಿ ಅಪಾಯಕ್ಕೆ ತುತ್ತಾಗಿರುವುದು ಸಾಮಾನ್ಯ ಘಟನೆಯಲ್ಲ ಎಂದು ಶ್ರೀಲಂಕಾದ ಪರಿಸರ ಸಚಿವ ಮಹಿಂದ ಅಮರವೀರ ಅಭಿಪ್ರಾಯ ಪಟ್ಟಿದ್ದಾರೆ.

ವಿಷಕಾರಿ ಅನಿಲ ಮತ್ತು ರಾಸಾಯಿನಿಕದ ಸೋರಿಕೆಯಿಂದ ಮೃತಪಟ್ಟ ದೈತ್ಯ ಕಡಲಾಮೆ

186 ಮೀಟರ್ ಉದ್ದದ ಎಕ್ಸ್‌ಪ್ರೆಸ್‌ ಪರ್ಲ್ ಹಡಗು ಮೇ 15 ರಂದು ಭಾರತದ ಹಜೀರಾ ಬಂದರಿನಿಂದ ಕೊಲಂಬೊ ಕಡೆಗೆ ಪ್ರಯಾಣ ಬೆಳೆಸಿತ್ತು. ಈ ಹಿಂದೆ ಕತಾರ್ ಮತ್ತು ಭಾರತದ ಅಧಿಕಾರಿಗಳು ತಮ್ಮ ಬಂದರಿನಲ್ಲಿ ಹಡಗನ್ನು ನಿಲ್ಲಿಸಲು ಅವಕಾಶವನ್ನು ನೀಡಿರಲಿಲ್ಲ.

ಹಡಗು ದುರಂತ ಸಂಭವಿಸಿರುವ ಸುತ್ತಮುತ್ತದ ಸಮುದ್ರ ಪ್ರದೇಶದಲ್ಲಿ ಶ್ರೀಲಂಕಾ ಸರ್ಕಾರ ಮೀನುಗಾರಿಕೆಯನ್ನು ನಿಷೇಧಿಸಿದ್ದು ಸುಮಾರು 50,000 ಜನ ಮೀನುಗಾರಿಕೆಯನ್ನೇ ಅವಲಂಬಿಸಿರುವ ಜನರು ಆರ್ಥಿಕವಾಗಿ ಸಂಕಷ್ಟಕ್ಕೆ ಒಳಗಾಗಿದ್ದಾರೆ.

ನೈಟ್ರಿಕ್ ಆಸಿಡ್ ಸೋರಿಕೆಯಿಂದ ಹಡಗಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ಕಂಡು ಬಂದಿದ್ದು ಮೇ 11 ರಿಂದಲೇ ಹಡಗಿನಲ್ಲಿ ಅನಿಲ ಸೋರಿಕೆಯಾಗುತ್ತಿತ್ತು ಎಂಬ ಅಂಶ ಕೂಡ ತನಿಖೆಯಲ್ಲಿ ಪತ್ತೆಯಾಗಿದೆ.

ಅನಿಲ ಸೋರಿಕೆಯ ವಿಷಯವನ್ನು ಮೊದಲೇ ತಿಳಿದಿದ್ದರೂ ಹಡಗಿನ ಸಿಬ್ಬಂದಿ ಯಾವುದೇ ಕ್ರಮವನ್ನು ಕೈಗೊಳ್ಳದಿರುವುದೇ ಈ ಮಹಾ ದುರಂತಕ್ಕೆ ಕಾರಣ ಎಂದು ಶ್ರೀಲಂಕಾ ಸರ್ಕಾರ ಹಡಗು ಕಂಪನಿಯ ಮೇಲೆ ಆರೋಪಿಸಿದೆ. ಹಡಗಿನಲ್ಲಿ ಅನಿಲ ಸೋರಿಕೆಯಾಗುತ್ತಿರುವ ವಿಷಯ ಮೇ 11 ರ ವೇಳೆಯಲ್ಲಿಯೇ ಗಮನಕ್ಕೆ ಬಂದಿತ್ತು ಎಂದು ಹಡಗಿನ ಮಾಲೀಕರು ತಿಳಿಸಿದ್ದಾರೆ.

ಶ್ರೀಲಂಕಾ ನ್ಯಾಯಾಲಯದಲ್ಲಿ ಜುಲೈ 15 ರಿಂದ ಪ್ರಕರಣದ ವಿಚಾರಣೆ ಆರಂಭವಾಗಲಿದ್ದು ಪರಿಸರಹಾನಿ, ಜೀವಹಾನಿ, ಮೀನುಗಾರರ ಆರ್ಥಿಕ ಸಂಕಷ್ಟಕ್ಕೆ ಕಾರಣವಾದ ಹಡಗು ಮಾಲೀಕರು ಮತ್ತು ಶ್ರೀಲಂಕಾ ಸರ್ಕಾರದ ಮೇಲೆ ಜನರ ಆಕ್ರೋಶ ಭುಗಿಲೆದ್ದಿದೆ.


ದನ್ನೂ ಓದಿ: ಈಜಿಪ್ಟ್‌ನ ಸುಯೆಜ್ ಕಾಲುವೆಯ ಮಧ್ಯೆ ಸಿಲುಕಿದ ಬೃಹತ್ ಹಡಗು – ಕೋಟ್ಯಂತರ ಡಾಲರ್ ನಷ್ಟ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎನ್‌ಡಿಎ ಸೇರಿದರೆ ಪ್ರಧಾನಿ ಮೋದಿಯಿಂದ ಕೇರಳಕ್ಕೆ ದೊಡ್ಡ ಪ್ಯಾಕೇಜ್: ಪಿಣರಾಯಿ ವಿಜಯನ್‌ಗೆ ಆಫರ್ ಕೊಟ್ಟ ಅಠಾವಳೆ

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಬಿಜೆಪಿ ನೇತೃತ್ವದ ಎನ್‌ಡಿಎ ಸೇರಬೇಕೆಂದು ಕೇಂದ್ರ ರಾಜ್ಯ ಸಚಿವ ರಾಮದಾಸ್ ಬಂಡು ಅಠಾವಳೆ ಬುಧವಾರ ಸಲಹೆ ನೀಡಿದ್ದಾರೆ. ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ...

ಸದನದಲ್ಲೇ ನೀಲಿ ಚಿತ್ರ ನೋಡಿ ರಾಜ್ಯದ ಮಾನ ಕಳೆದವರು ಯಾವ ಪಕ್ಷದವರು? ಬಿಜೆಪಿಗೆ ಹರಿಪ್ರಸಾದ್ ತಿರುಗೇಟು

ಸದನದ ಶಿಸ್ತು, ಘನತೆ, ಗೌರವದ ಬಗ್ಗೆ ಮಾತನಾಡಲು ಬಿಜೆಪಿಯವರಿಗೆ ಕಿಂಚಿತ್ತಾದರೂ ನೈತಿಕತೆ ಇದೆಯೇ? ಎಂದು ವಿಧಾನಪರಿಷತ್ ಸದಸ್ಯ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ ಹರಿಪ್ರಸಾದ್ ಪ್ರಶ್ನಿಸಿದ್ದಾರೆ. ಗುರುವಾರ (ಜ.22) ವಿಶೇಷ ಅಧಿವೇಶನದ ವೇಳೆ...

ಆಂಧ್ರದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆ ನಿಷೇಧ?

ಕಳೆದ ತಿಂಗಳು ಆಸ್ಟ್ರೇಲಿಯಾ ಜಾರಿಗೆ ತಂದಂತೆಯೇ, 16 ವರ್ಷದೊಳಗಿನ ಮಕ್ಕಳಿಗಾಗಿ ಸರ್ಕಾರವು ಸಾಮಾಜಿಕ ಮಾಧ್ಯಮವನ್ನು ನಿಷೇಧಿಸಲು ಯೋಜಿಸುತ್ತಿದೆ ಎಂದು ಆಂಧ್ರಪ್ರದೇಶ ಸಚಿವ ನಾರಾ ಲೋಕೇಶ್ ಬಹಿರಂಗಪಡಿಸಿದ್ದಾರೆ. ದಾವೋಸ್‌ನಲ್ಲಿ ನಡೆದ ವಿಶ್ವ ಆರ್ಥಿಕ ವೇದಿಕೆ...

ಜಾರ್ಖಂಡ್| ಚೈಬಾಸಾ ಎನ್‌ಕೌಂಟರ್‌; ಕುಖ್ಯಾತ ಮಾವೋವಾದಿ ನಾಯಕ ‘ಅನಲ್ ದಾ’ ಸೇರಿ 8 ನಕ್ಸಲರ ಹತ್ಯೆ

ಜಾರ್ಖಂಡ್ ಪೊಲೀಸರು ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್‌) ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಪ್ರಮುಖ ಯಶಸ್ಸನ್ನು ಸಾಧಿಸಿದೆ. ಚೈಬಾಸಾ ಜಿಲ್ಲೆಯಲ್ಲಿ ನಡೆದ ಭೀಕರ ಎನ್‌ಕೌಂಟರ್‌ನಲ್ಲಿ, ಭದ್ರತಾ ಪಡೆಗಳು 8 ನಕ್ಸಲರನ್ನು ಕೊಂದಿವೆ....

‘ಕರ್ನಾಟಕವನ್ನು ಎಲ್ಲಾ ರೀತಿಯಲ್ಲಿ ಕಡೆಗಣಿಸುತ್ತಿದ್ದ ಬಿಜೆಪಿ ಈಗ ರಾಜ್ಯಪಾಲರ ಮೂಲಕವೇ ಕನ್ನಡಿಗರನ್ನು ಅವಮಾನಿಸಿದೆ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಬಿಜೆಪಿ ಕನ್ನಡಿಗರನ್ನು ಅವಮಾನಿಸುವ ಪ್ರಕ್ರಿಯೆ ಮುಂದುವರೆದಿದೆ ಎಂದು ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ.  2026 ಜನವರಿ 22ರ, ಗುರುವಾರ ಸದನದಲ್ಲಿ ನಡೆದ ಬೆಳವಣಿಗೆಗಳ ಕುರಿತು ತಮ್ಮ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಖರ್ಗೆ, ‘ಸರ್ಕಾರದ ಭಾಷಣವನ್ನು...

ಭೋಜಶಾಲಾ-ಕಮಾಲ್ ಮೌಲಾ ಮಸೀದಿ ವಿವಾದ : ವಸಂತ ಪಂಚಮಿ ಪೂಜೆ, ಜುಮಾ ನಮಾಜ್ ಶಾಂತಿಯುತವಾಗಿ ನಡೆಸಲು ಸುಪ್ರೀಂ ಆದೇಶ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಭೋಜ ಶಾಲಾ-ಕಮಾಲ್ ಮೌಲಾ ಸಂಕೀರ್ಣದಲ್ಲಿ ವಸಂತ ಪಂಚಮಿ ಪೂಜೆ ಮತ್ತು ಶುಕ್ರವಾರದ ಜುಮಾ ನಮಾಝ್ ಎರಡನ್ನೂ ಶಾಂತಿಯುತವಾಗಿ ನಡೆಸುವಂತೆ ನೋಡಿಕೊಳ್ಳಲು ಸುಪ್ರೀಂ ಕೋರ್ಟ್ ಗುರುವಾರ (ಜ.22) ನಿರ್ದೇಶನಗಳನ್ನು ನೀಡಿದೆ. ಭೋಜ...

ಜಮ್ಮು-ಕಾಶ್ಮೀರ| 200 ಅಡಿ ಆಳದ ಕಂದಕಕ್ಕೆ ಉರುಳಿದ ವಾಹನ; 10 ಜನ ಸೇನಾ ಸಿಬ್ಬಂದಿ ಸಾವು

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾ ಪ್ರದೇಶದಲ್ಲಿ 200 ಅಡಿ ಆಳದ ಕಂದಕಕ್ಕೆ ವಾಹನ ಉರುಳಿ 10 ಸೇನಾ ಸಿಬ್ಬಂದಿ ಸಾವನ್ನಪ್ಪಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ. ಒಟ್ಟು 17 ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಸೇನಾ...

ಉತ್ತರ ಪ್ರದೇಶ ಮರ್ಯಾದೆಗೇಡು ಹತ್ಯೆ; ಅಂತರ್ಧರ್ಮೀಯ ಜೋಡಿಯನ್ನು ಕೊಂದ ಯುವತಿ ಸಹೋದರರು

ಉತ್ತರ ಪ್ರದೇಶದ ಮೊರಾದಾಬಾದ್‌ನ ಕಾಡಿನಲ್ಲಿ ಅಂತರ್ಧರ್ಮೀಯ ಜೋಡಿಯ ಶವ ಪತ್ತೆಯಾಗಿದ್ದು, ಪ್ರಾಥಮಿಕ ತನಿಖೆಯಲ್ಲಿ ಆಕೆಯ ಸಹೋದರರು ಮರ್ಯಾದೆಗೇಡು ಹತ್ಯೆ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಯುವತಿಯನ್ನು 19 ವರ್ಷದ ಕಾಜಲ್ ಎಂದು ಗುರುತಿಸಲಾಗಿದ್ದು, ಮೃತ...

ತೀವ್ರ ವಿರೋಧದ ನಂತರ ಇಸ್ಲಾಮೋಫೋಬಿಕ್ ಹೇಳಿಕೆ ಹಿಂಪಡೆದು, ಕ್ಷಮೆಯಾಚಿಸಿದ ಕೇರಳದ ಸಿಪಿಐ(ಎಂ) ಸಚಿವ ಸಾಜಿ ಚೆರಿಯನ್

ಇತ್ತೀಚಿನ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಮುಸ್ಲಿಂ ವಿಜೇತರ ಬಗ್ಗೆ ತಮ್ಮ ಇಸ್ಲಾಮೋಫೋಬಿಕ್ ಹೇಳಿಕೆಗಳನ್ನು ನೀಡಿದ್ದ ಸಿಪಿಐ(ಎಂ) ಹಿರಿಯ ನಾಯಕ ಮತ್ತು ಕೇರಳ ಸಚಿವ ಸಾಜಿ ಚೆರಿಯನ್ ಬುಧವಾರ ತಮ್ಮ ಹೇಳಿಕೆಯನ್ನು  ಹಿಂತೆಗೆದುಕೊಂಡಿದ್ದಾರೆ. ಪಕ್ಷ,...

ರಾಜ್ಯಪಾಲರಿಂದ ಸಂವಿಧಾನದ ವಿಧಿಗಳ ಉಲ್ಲಂಘನೆ; ಜನಪ್ರತಿನಿಧಿಗಳ ಸಭೆಯನ್ನು ಅವಮಾನಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

"ವರ್ಷದ ಮೊದಲ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಸಚಿವ ಸಂಪುಟ ಸಿದ್ಧಪಡಿಸಿದ ಭಾಷಣವನ್ನು ಓದದೇ, ಸಂವಿಧಾನದ ವಿಧಿಗಳನ್ನು ಉಲ್ಲಂಘಿಸಿದ್ದಾರೆ. ಅವರ ಈ ನಡೆ ಜನಪ್ರತಿನಿಧಿಗಳ ಸಭೆಗೆ ಮಾಡಿದ ಅವಮಾನ. ಇದನ್ನು ನಾವು ಖಂಡಿಸುತ್ತೇವೆ. ಈ...