Homeಅಂತರಾಷ್ಟ್ರೀಯಶ್ರೀಲಂಕಾ: ಹೊತ್ತಿ ಉರಿದ ದೈತ್ಯ ಹಡಗು - ಸಮುದ್ರ ದಡಕ್ಕೆ ತೇಲಿಬರುತ್ತಿವೆ ಜಲಚರಗಳ ಮೃತದೇಹ

ಶ್ರೀಲಂಕಾ: ಹೊತ್ತಿ ಉರಿದ ದೈತ್ಯ ಹಡಗು – ಸಮುದ್ರ ದಡಕ್ಕೆ ತೇಲಿಬರುತ್ತಿವೆ ಜಲಚರಗಳ ಮೃತದೇಹ

- Advertisement -
- Advertisement -

ಕೆಲ ದಿನಗಳ ಹಿಂದೆ ಕೊಲೊಂಬೊ ಬಂದರಿನಲ್ಲಿ ಸಿಂಗಾಪುರ ಮೂಲದ ಎಕ್ಸ್‌ಪ್ರೆಸ್‌ ಪರ್ಲ್ ಎಂಬ ಹಡಗು ಮುಳುಗಡೆಯಾಗಿದೆ. ನೂರಾರು ಟನ್ ರಾಸಾಯನಿಕಗಳನ್ನು ಮತ್ತು ತೈಲವನ್ನು ಸಾಗಿಸುತ್ತಿದ್ದ ಹಡಗು ಸಮುದ್ರದಲ್ಲಿ ಸ್ಫೋಟಗೊಂಡ ಪರಿಣಾಮ ಕೊಲೊಂಬೊ ಸುತ್ತಲಿನ ಸಮುದ್ರ ವಾತಾವರಣದಲ್ಲಿ ತೀವ್ರ ಬದಲಾವಣೆಯಾಗಿದ್ದು ನೂರಾರು ಜಲಚರಗಳ ಮೃತದೇಹಗಳು ಸಮುದ್ರ ದಂಡೆಗೆ ತೇಲಿ ಬರುತ್ತಿವೆ. ಕಳೆದ ಒಂದು ವಾರದ ಅವಧಿಯಲ್ಲಿ ಸುಮಾರು 176 ಕಡಲಾಮೆಗಳ ಮೃತದೇಹ ಕೊಲಂಬೊ ತೀರದಲ್ಲಿ ಕಾಣಿಸಿಕೊಂಡಿದ್ದರೆ 20ಕ್ಕೂ ಹೆಚ್ಚು ಡಾಲ್ಫಿನ್‌ಗಳು, 4 ಬೃಹತ್ ತಿಮಿಂಗಲಗಳು ಮತ್ತು ಸಾವಿರಾರು ಸಂಖ್ಯೆಯ ವಿವಿಧ ಜಾತಿಯ ಮತ್ಸ್ಯ ತಳಿಗಳ  ಮೃತದೇಹಗಳು ಸಮುದ್ರ ತೀರದಲ್ಲಿ ರಾಶಿ ರಾಶಿಯಾಗಿ ಬಂದು ಬೀಳತೊಡಗಿದೆ.

ಎಕ್ಸ್‌ಪ್ರೆಸ್‌ ಪರ್ಲ್‌ ಹಡಗು 238 ಟನ್‌ಗಳಷ್ಟು ದ್ರವ ಇಂದನ ಮತ್ತು 50 ಟನ್‌ಗಳಷ್ಟು ಗ್ಯಾಸ್‌ ಅನ್ನು ತುಂಬಿ ಕೊಲಂಬೊ ತೀರದಲ್ಲಿ ಮುಳುಗಿದೆ. ದಶಕಗಳ ಕಾಲ ಪರಿಸರದ ಮೇಲೆ ಇದರ ಪರಿಣಾಮ ಉಳಿಯಲಿದೆ ಎಂದು ಪರಿಸರ ತಜ್ಞರು ಹೇಳಿದ್ದಾರೆ. ಶ್ರೀಲಂಕಾದ ಇತಿಹಾಸದಲ್ಲಿ ಇಷ್ಟು ದೊಡ್ಡ ಪ್ರಮಾಣದ ಹಡಗು ದುರಂತ ನಡೆದಿರಲಿಲ್ಲ ಎಂದು ಅಲ್ಲಿನ ಸರ್ಕಾರ ತಿಳಿಸಿದೆ.

ಶ್ರೀಲಂಕದ ಕೊಲಂಬೊ ತೀರಕ್ಕೆ ತೇಲಿ ಬರುತ್ತಿರುವ ಆಮೆಗಳ ಮೃತ ದೇಹ (PC : BBC)

ಇದನ್ನೂ ಓದಿ: ಈಜಿಪ್ಟ್‌ನ ಸುಯೆಜ್ ಕಾಲುವೆಯ ಮಧ್ಯೆ ಸಿಲುಕಿದ ಬೃಹತ್ ಹಡಗು – ಕೋಟ್ಯಂತರ ಡಾಲರ್ ನಷ್ಟ!

ಹಡಗಿನಲ್ಲಿದ್ದ ವಿಷಕಾರಿ ಅನಿಲಗಳು ಮತ್ತು ರಾಸಾಯನಿಕಗಳು ಸಮುದ್ರದಲ್ಲಿ ಬೆರೆತು ಹಿಂದು ಮಹಾಸಾಗರದ ನೂರಾರು ಕಿಲೋಮೀಟರ್‌ ವರೆಗಿನ ಜೀವ ಸಂಕಲ ವಿಷಕಾರಿಯಾಗಲಿದೆ. ಈ ಪ್ರದೆಶದಲ್ಲಿನ ಮೀನು ಸೇರಿದಂತೆ ಸಮುದ್ರ ಮೂಲದ ಆಹಾರ ತಿನ್ನುವ ಲಕ್ಷಾಂತರ ಜನರ ಆರೋಗ್ಯದ ಮೇಲೆ ಇದು ದೀರ್ಘಕಾಲದಲ್ಲಿ ಪರಿಣಾಮ ಬೀರಲಿದೆ ಎಂದು ಕೊಲಂಬೊ ಮೂಲದ ಪರಿಸರ ಸಂಘಟನೆಯೊಂದು ಎಚ್ಚರಿಕೆ ನೀಡಿದೆ.

ನೈರುತ್ಯ ಮಾನ್ಸೂನ್‌ ಸಂದರ್ಭದಲ್ಲಿ ಜಲಚರಗಳು ಇಷ್ಟು ಪ್ರಮಾಣದಲ್ಲಿ ಮೃತಪಟ್ಟ ದಾಖಲೆಯಿಲ್ಲ. ಸಾವಿರಾರು ಸಂಖ್ಯೆಯ ಜೀವ ಸಂಕುಲ ಒಮ್ಮೆಗೆ ಇಷ್ಟು ದೊಡ್ಡ ಪ್ರಮಾಣದಲ್ಲಿ ಅಪಾಯಕ್ಕೆ ತುತ್ತಾಗಿರುವುದು ಸಾಮಾನ್ಯ ಘಟನೆಯಲ್ಲ ಎಂದು ಶ್ರೀಲಂಕಾದ ಪರಿಸರ ಸಚಿವ ಮಹಿಂದ ಅಮರವೀರ ಅಭಿಪ್ರಾಯ ಪಟ್ಟಿದ್ದಾರೆ.

ವಿಷಕಾರಿ ಅನಿಲ ಮತ್ತು ರಾಸಾಯಿನಿಕದ ಸೋರಿಕೆಯಿಂದ ಮೃತಪಟ್ಟ ದೈತ್ಯ ಕಡಲಾಮೆ

186 ಮೀಟರ್ ಉದ್ದದ ಎಕ್ಸ್‌ಪ್ರೆಸ್‌ ಪರ್ಲ್ ಹಡಗು ಮೇ 15 ರಂದು ಭಾರತದ ಹಜೀರಾ ಬಂದರಿನಿಂದ ಕೊಲಂಬೊ ಕಡೆಗೆ ಪ್ರಯಾಣ ಬೆಳೆಸಿತ್ತು. ಈ ಹಿಂದೆ ಕತಾರ್ ಮತ್ತು ಭಾರತದ ಅಧಿಕಾರಿಗಳು ತಮ್ಮ ಬಂದರಿನಲ್ಲಿ ಹಡಗನ್ನು ನಿಲ್ಲಿಸಲು ಅವಕಾಶವನ್ನು ನೀಡಿರಲಿಲ್ಲ.

ಹಡಗು ದುರಂತ ಸಂಭವಿಸಿರುವ ಸುತ್ತಮುತ್ತದ ಸಮುದ್ರ ಪ್ರದೇಶದಲ್ಲಿ ಶ್ರೀಲಂಕಾ ಸರ್ಕಾರ ಮೀನುಗಾರಿಕೆಯನ್ನು ನಿಷೇಧಿಸಿದ್ದು ಸುಮಾರು 50,000 ಜನ ಮೀನುಗಾರಿಕೆಯನ್ನೇ ಅವಲಂಬಿಸಿರುವ ಜನರು ಆರ್ಥಿಕವಾಗಿ ಸಂಕಷ್ಟಕ್ಕೆ ಒಳಗಾಗಿದ್ದಾರೆ.

ನೈಟ್ರಿಕ್ ಆಸಿಡ್ ಸೋರಿಕೆಯಿಂದ ಹಡಗಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ಕಂಡು ಬಂದಿದ್ದು ಮೇ 11 ರಿಂದಲೇ ಹಡಗಿನಲ್ಲಿ ಅನಿಲ ಸೋರಿಕೆಯಾಗುತ್ತಿತ್ತು ಎಂಬ ಅಂಶ ಕೂಡ ತನಿಖೆಯಲ್ಲಿ ಪತ್ತೆಯಾಗಿದೆ.

ಅನಿಲ ಸೋರಿಕೆಯ ವಿಷಯವನ್ನು ಮೊದಲೇ ತಿಳಿದಿದ್ದರೂ ಹಡಗಿನ ಸಿಬ್ಬಂದಿ ಯಾವುದೇ ಕ್ರಮವನ್ನು ಕೈಗೊಳ್ಳದಿರುವುದೇ ಈ ಮಹಾ ದುರಂತಕ್ಕೆ ಕಾರಣ ಎಂದು ಶ್ರೀಲಂಕಾ ಸರ್ಕಾರ ಹಡಗು ಕಂಪನಿಯ ಮೇಲೆ ಆರೋಪಿಸಿದೆ. ಹಡಗಿನಲ್ಲಿ ಅನಿಲ ಸೋರಿಕೆಯಾಗುತ್ತಿರುವ ವಿಷಯ ಮೇ 11 ರ ವೇಳೆಯಲ್ಲಿಯೇ ಗಮನಕ್ಕೆ ಬಂದಿತ್ತು ಎಂದು ಹಡಗಿನ ಮಾಲೀಕರು ತಿಳಿಸಿದ್ದಾರೆ.

ಶ್ರೀಲಂಕಾ ನ್ಯಾಯಾಲಯದಲ್ಲಿ ಜುಲೈ 15 ರಿಂದ ಪ್ರಕರಣದ ವಿಚಾರಣೆ ಆರಂಭವಾಗಲಿದ್ದು ಪರಿಸರಹಾನಿ, ಜೀವಹಾನಿ, ಮೀನುಗಾರರ ಆರ್ಥಿಕ ಸಂಕಷ್ಟಕ್ಕೆ ಕಾರಣವಾದ ಹಡಗು ಮಾಲೀಕರು ಮತ್ತು ಶ್ರೀಲಂಕಾ ಸರ್ಕಾರದ ಮೇಲೆ ಜನರ ಆಕ್ರೋಶ ಭುಗಿಲೆದ್ದಿದೆ.


ದನ್ನೂ ಓದಿ: ಈಜಿಪ್ಟ್‌ನ ಸುಯೆಜ್ ಕಾಲುವೆಯ ಮಧ್ಯೆ ಸಿಲುಕಿದ ಬೃಹತ್ ಹಡಗು – ಕೋಟ್ಯಂತರ ಡಾಲರ್ ನಷ್ಟ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...