Homeಅಂತರಾಷ್ಟ್ರೀಯಶ್ರೀಲಂಕಾ: ಹೊತ್ತಿ ಉರಿದ ದೈತ್ಯ ಹಡಗು - ಸಮುದ್ರ ದಡಕ್ಕೆ ತೇಲಿಬರುತ್ತಿವೆ ಜಲಚರಗಳ ಮೃತದೇಹ

ಶ್ರೀಲಂಕಾ: ಹೊತ್ತಿ ಉರಿದ ದೈತ್ಯ ಹಡಗು – ಸಮುದ್ರ ದಡಕ್ಕೆ ತೇಲಿಬರುತ್ತಿವೆ ಜಲಚರಗಳ ಮೃತದೇಹ

- Advertisement -
- Advertisement -

ಕೆಲ ದಿನಗಳ ಹಿಂದೆ ಕೊಲೊಂಬೊ ಬಂದರಿನಲ್ಲಿ ಸಿಂಗಾಪುರ ಮೂಲದ ಎಕ್ಸ್‌ಪ್ರೆಸ್‌ ಪರ್ಲ್ ಎಂಬ ಹಡಗು ಮುಳುಗಡೆಯಾಗಿದೆ. ನೂರಾರು ಟನ್ ರಾಸಾಯನಿಕಗಳನ್ನು ಮತ್ತು ತೈಲವನ್ನು ಸಾಗಿಸುತ್ತಿದ್ದ ಹಡಗು ಸಮುದ್ರದಲ್ಲಿ ಸ್ಫೋಟಗೊಂಡ ಪರಿಣಾಮ ಕೊಲೊಂಬೊ ಸುತ್ತಲಿನ ಸಮುದ್ರ ವಾತಾವರಣದಲ್ಲಿ ತೀವ್ರ ಬದಲಾವಣೆಯಾಗಿದ್ದು ನೂರಾರು ಜಲಚರಗಳ ಮೃತದೇಹಗಳು ಸಮುದ್ರ ದಂಡೆಗೆ ತೇಲಿ ಬರುತ್ತಿವೆ. ಕಳೆದ ಒಂದು ವಾರದ ಅವಧಿಯಲ್ಲಿ ಸುಮಾರು 176 ಕಡಲಾಮೆಗಳ ಮೃತದೇಹ ಕೊಲಂಬೊ ತೀರದಲ್ಲಿ ಕಾಣಿಸಿಕೊಂಡಿದ್ದರೆ 20ಕ್ಕೂ ಹೆಚ್ಚು ಡಾಲ್ಫಿನ್‌ಗಳು, 4 ಬೃಹತ್ ತಿಮಿಂಗಲಗಳು ಮತ್ತು ಸಾವಿರಾರು ಸಂಖ್ಯೆಯ ವಿವಿಧ ಜಾತಿಯ ಮತ್ಸ್ಯ ತಳಿಗಳ  ಮೃತದೇಹಗಳು ಸಮುದ್ರ ತೀರದಲ್ಲಿ ರಾಶಿ ರಾಶಿಯಾಗಿ ಬಂದು ಬೀಳತೊಡಗಿದೆ.

ಎಕ್ಸ್‌ಪ್ರೆಸ್‌ ಪರ್ಲ್‌ ಹಡಗು 238 ಟನ್‌ಗಳಷ್ಟು ದ್ರವ ಇಂದನ ಮತ್ತು 50 ಟನ್‌ಗಳಷ್ಟು ಗ್ಯಾಸ್‌ ಅನ್ನು ತುಂಬಿ ಕೊಲಂಬೊ ತೀರದಲ್ಲಿ ಮುಳುಗಿದೆ. ದಶಕಗಳ ಕಾಲ ಪರಿಸರದ ಮೇಲೆ ಇದರ ಪರಿಣಾಮ ಉಳಿಯಲಿದೆ ಎಂದು ಪರಿಸರ ತಜ್ಞರು ಹೇಳಿದ್ದಾರೆ. ಶ್ರೀಲಂಕಾದ ಇತಿಹಾಸದಲ್ಲಿ ಇಷ್ಟು ದೊಡ್ಡ ಪ್ರಮಾಣದ ಹಡಗು ದುರಂತ ನಡೆದಿರಲಿಲ್ಲ ಎಂದು ಅಲ್ಲಿನ ಸರ್ಕಾರ ತಿಳಿಸಿದೆ.

ಶ್ರೀಲಂಕದ ಕೊಲಂಬೊ ತೀರಕ್ಕೆ ತೇಲಿ ಬರುತ್ತಿರುವ ಆಮೆಗಳ ಮೃತ ದೇಹ (PC : BBC)

ಇದನ್ನೂ ಓದಿ: ಈಜಿಪ್ಟ್‌ನ ಸುಯೆಜ್ ಕಾಲುವೆಯ ಮಧ್ಯೆ ಸಿಲುಕಿದ ಬೃಹತ್ ಹಡಗು – ಕೋಟ್ಯಂತರ ಡಾಲರ್ ನಷ್ಟ!

ಹಡಗಿನಲ್ಲಿದ್ದ ವಿಷಕಾರಿ ಅನಿಲಗಳು ಮತ್ತು ರಾಸಾಯನಿಕಗಳು ಸಮುದ್ರದಲ್ಲಿ ಬೆರೆತು ಹಿಂದು ಮಹಾಸಾಗರದ ನೂರಾರು ಕಿಲೋಮೀಟರ್‌ ವರೆಗಿನ ಜೀವ ಸಂಕಲ ವಿಷಕಾರಿಯಾಗಲಿದೆ. ಈ ಪ್ರದೆಶದಲ್ಲಿನ ಮೀನು ಸೇರಿದಂತೆ ಸಮುದ್ರ ಮೂಲದ ಆಹಾರ ತಿನ್ನುವ ಲಕ್ಷಾಂತರ ಜನರ ಆರೋಗ್ಯದ ಮೇಲೆ ಇದು ದೀರ್ಘಕಾಲದಲ್ಲಿ ಪರಿಣಾಮ ಬೀರಲಿದೆ ಎಂದು ಕೊಲಂಬೊ ಮೂಲದ ಪರಿಸರ ಸಂಘಟನೆಯೊಂದು ಎಚ್ಚರಿಕೆ ನೀಡಿದೆ.

ನೈರುತ್ಯ ಮಾನ್ಸೂನ್‌ ಸಂದರ್ಭದಲ್ಲಿ ಜಲಚರಗಳು ಇಷ್ಟು ಪ್ರಮಾಣದಲ್ಲಿ ಮೃತಪಟ್ಟ ದಾಖಲೆಯಿಲ್ಲ. ಸಾವಿರಾರು ಸಂಖ್ಯೆಯ ಜೀವ ಸಂಕುಲ ಒಮ್ಮೆಗೆ ಇಷ್ಟು ದೊಡ್ಡ ಪ್ರಮಾಣದಲ್ಲಿ ಅಪಾಯಕ್ಕೆ ತುತ್ತಾಗಿರುವುದು ಸಾಮಾನ್ಯ ಘಟನೆಯಲ್ಲ ಎಂದು ಶ್ರೀಲಂಕಾದ ಪರಿಸರ ಸಚಿವ ಮಹಿಂದ ಅಮರವೀರ ಅಭಿಪ್ರಾಯ ಪಟ್ಟಿದ್ದಾರೆ.

ವಿಷಕಾರಿ ಅನಿಲ ಮತ್ತು ರಾಸಾಯಿನಿಕದ ಸೋರಿಕೆಯಿಂದ ಮೃತಪಟ್ಟ ದೈತ್ಯ ಕಡಲಾಮೆ

186 ಮೀಟರ್ ಉದ್ದದ ಎಕ್ಸ್‌ಪ್ರೆಸ್‌ ಪರ್ಲ್ ಹಡಗು ಮೇ 15 ರಂದು ಭಾರತದ ಹಜೀರಾ ಬಂದರಿನಿಂದ ಕೊಲಂಬೊ ಕಡೆಗೆ ಪ್ರಯಾಣ ಬೆಳೆಸಿತ್ತು. ಈ ಹಿಂದೆ ಕತಾರ್ ಮತ್ತು ಭಾರತದ ಅಧಿಕಾರಿಗಳು ತಮ್ಮ ಬಂದರಿನಲ್ಲಿ ಹಡಗನ್ನು ನಿಲ್ಲಿಸಲು ಅವಕಾಶವನ್ನು ನೀಡಿರಲಿಲ್ಲ.

ಹಡಗು ದುರಂತ ಸಂಭವಿಸಿರುವ ಸುತ್ತಮುತ್ತದ ಸಮುದ್ರ ಪ್ರದೇಶದಲ್ಲಿ ಶ್ರೀಲಂಕಾ ಸರ್ಕಾರ ಮೀನುಗಾರಿಕೆಯನ್ನು ನಿಷೇಧಿಸಿದ್ದು ಸುಮಾರು 50,000 ಜನ ಮೀನುಗಾರಿಕೆಯನ್ನೇ ಅವಲಂಬಿಸಿರುವ ಜನರು ಆರ್ಥಿಕವಾಗಿ ಸಂಕಷ್ಟಕ್ಕೆ ಒಳಗಾಗಿದ್ದಾರೆ.

ನೈಟ್ರಿಕ್ ಆಸಿಡ್ ಸೋರಿಕೆಯಿಂದ ಹಡಗಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ಕಂಡು ಬಂದಿದ್ದು ಮೇ 11 ರಿಂದಲೇ ಹಡಗಿನಲ್ಲಿ ಅನಿಲ ಸೋರಿಕೆಯಾಗುತ್ತಿತ್ತು ಎಂಬ ಅಂಶ ಕೂಡ ತನಿಖೆಯಲ್ಲಿ ಪತ್ತೆಯಾಗಿದೆ.

ಅನಿಲ ಸೋರಿಕೆಯ ವಿಷಯವನ್ನು ಮೊದಲೇ ತಿಳಿದಿದ್ದರೂ ಹಡಗಿನ ಸಿಬ್ಬಂದಿ ಯಾವುದೇ ಕ್ರಮವನ್ನು ಕೈಗೊಳ್ಳದಿರುವುದೇ ಈ ಮಹಾ ದುರಂತಕ್ಕೆ ಕಾರಣ ಎಂದು ಶ್ರೀಲಂಕಾ ಸರ್ಕಾರ ಹಡಗು ಕಂಪನಿಯ ಮೇಲೆ ಆರೋಪಿಸಿದೆ. ಹಡಗಿನಲ್ಲಿ ಅನಿಲ ಸೋರಿಕೆಯಾಗುತ್ತಿರುವ ವಿಷಯ ಮೇ 11 ರ ವೇಳೆಯಲ್ಲಿಯೇ ಗಮನಕ್ಕೆ ಬಂದಿತ್ತು ಎಂದು ಹಡಗಿನ ಮಾಲೀಕರು ತಿಳಿಸಿದ್ದಾರೆ.

ಶ್ರೀಲಂಕಾ ನ್ಯಾಯಾಲಯದಲ್ಲಿ ಜುಲೈ 15 ರಿಂದ ಪ್ರಕರಣದ ವಿಚಾರಣೆ ಆರಂಭವಾಗಲಿದ್ದು ಪರಿಸರಹಾನಿ, ಜೀವಹಾನಿ, ಮೀನುಗಾರರ ಆರ್ಥಿಕ ಸಂಕಷ್ಟಕ್ಕೆ ಕಾರಣವಾದ ಹಡಗು ಮಾಲೀಕರು ಮತ್ತು ಶ್ರೀಲಂಕಾ ಸರ್ಕಾರದ ಮೇಲೆ ಜನರ ಆಕ್ರೋಶ ಭುಗಿಲೆದ್ದಿದೆ.


ದನ್ನೂ ಓದಿ: ಈಜಿಪ್ಟ್‌ನ ಸುಯೆಜ್ ಕಾಲುವೆಯ ಮಧ್ಯೆ ಸಿಲುಕಿದ ಬೃಹತ್ ಹಡಗು – ಕೋಟ್ಯಂತರ ಡಾಲರ್ ನಷ್ಟ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....