Homeಮುಖಪುಟಜಮ್ಮು ಕಾಶ್ಮೀರದಲ್ಲಿ ಸೆರೆ ಸಿಕ್ಕ ಲಷ್ಕರ್-ಎ-ತೊಯ್ಬಾ ಉಗ್ರ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ!

ಜಮ್ಮು ಕಾಶ್ಮೀರದಲ್ಲಿ ಸೆರೆ ಸಿಕ್ಕ ಲಷ್ಕರ್-ಎ-ತೊಯ್ಬಾ ಉಗ್ರ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ!

- Advertisement -
- Advertisement -

ಇಂದು ಜಮ್ಮು ಮತ್ತು ಕಾಶ್ಮೀರದಲ್ಲಿ ಸೆರೆ ಸಿಕ್ಕ ಲಷ್ಕರ್-ಎ-ತೊಯ್ಬಾ ಉಗ್ರ ಬಿಜೆಪಿಯ ಸಕ್ರಿಯ ಸದಸ್ಯನಾಗಿದ್ದ ಜೊತೆಗೆ ಜಮ್ಮು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಸಾಮಾಜಿಕ ಮಾಧ್ಯಮ ಉಸ್ತುವಾರಿ ಕೂಡ ಆಗಿದ್ದ ಎಂಬ ಸ್ಪೋಟಕ ಮಾಹಿತಿ ಕುರಿತು ಎನ್‌ಡಿಟಿವಿ ವರದಿ ಮಾಡಿದೆ.

ಇಂದು ಬೆಳಗ್ಗೆ ಜಮ್ಮುವಿನ ರಿಯಾಸಿ ಪ್ರದೇಶದಲ್ಲಿ ಉಗ್ರರಾದ ತಾಲಿಬ್ ಹುಸೇನ್ ಶಾ ಮತ್ತು ಆತನ ಸಹಚರರನ್ನು ಗ್ರಾಮಸ್ಥರು ಸೆರೆ ಹಿಡಿದಿದ್ದಾರೆ. ಅವರಿಂದ ಎರಡು ಎಕೆ ರೈಫಲ್‌ಗಳು, ಹಲವಾರು ಗ್ರೆನೇಡ್‌ಗಳು ಮತ್ತು ಇತರ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡು, ಅವರನ್ನು ಪೊಲೀಸರಿಗೆ ಒಪ್ಪಿಸಲಾಗಿತ್ತು.

ಮೇ 9 ರಂದು ಬಿಜೆಪಿಯು ಜಮ್ಮು ಪ್ರಾಂತ್ಯದಲ್ಲಿ ಪಕ್ಷದ ಐಟಿ ಮತ್ತು ಸಾಮಾಜಿಕ ಮಾಧ್ಯಮದ ಉಸ್ತುವಾರಿಯಾಗಿ ತಾಲಿಬ್ ಹುಸೇನ್ ಶಾನನ್ನು ನೇಮಿಸಲಾಗಿತ್ತು ಎನ್ನಲಾಗಿದೆ. ಜಮ್ಮು ಕಾಶ್ಮೀರದ ಬಿಜೆಪಿ ಅಧ್ಯಕ್ಷ ರವೀಂದ್ರ ರೈನಾ ಸೇರಿದಂತೆ ಬಿಜೆಪಿಯ ಹಿರಿಯ ನಾಯಕರೊಂದಿಗೆ ಉಗ್ರ ಶಾ ಇರುವ ಹಲವರು ಫೋಟೊಗಲು ವೈರಲ್ ಆಗುತ್ತಿವೆ.

ಭಯೋತ್ಪಾದಕನೊಬ್ಬನನ್ನು ಪಕ್ಷದ ಐಟಿ ಸೆಲ್ ಮುಖ್ಯಸ್ಥನಾಗಿ ಬಿಜೆಪಿ ನೇಮಿಸಿದೆ, ಹೆಸರಿಗೆ ಮಾತ್ರ ಭಯೋತ್ಪಾದನೆ ವಿರುದ್ಧ ಹೋರಾಡುವ ಬಿಜೆಪಿಯು ಭಯೋತ್ಪಾದಕರನ್ನೇ ಸಾಕುತ್ತಿದೆ ಎಂದು ಹಲವಾರು ಜನರು ದೂರಿದ್ದಾರೆ.

ಬಿಜೆಪಿ ಪಕ್ಷದಲ್ಲಿಯೇ ಉಗ್ರಿದ್ದಾರೆ ಎಂಬ ಆರೋಪದ ಬಗ್ಗೆ ಪ್ರತಿಕ್ರಿಯಿಸಿರುವ ಪಕ್ಷವು, “ಆನ್‌ಲೈನ್ ಸದಸ್ಯತ್ವ ವ್ಯವಸ್ಥೆಯು ಯಾವುದೇ ಹಿನ್ನೆಲೆ ಪರಿಶೀಲನೆಯಿಲ್ಲದೆ ಜನರನ್ನು ಪಕ್ಷಕ್ಕೆ ಸೇರಲು ಅನುವು ಮಾಡಿಕೊಡುತ್ತದೆ” ಎಂದು ಹೇಳುವ ಮೂಲಕ ಜಾರಿಕೊಳ್ಳಲು ಯತ್ನಿಸಿದೆ.

ಬಿಜೆಪಿ ವಕ್ತಾರ ಆರ್.ಎಸ್.ಪಠಾನಿಯಾ ಮಾತನಾಡಿ, “ಇದು ಹೊಸ ಮಾದರಿಯಾಗಿದೆ. ಉಗ್ರರು ಬಿಜೆಪಿಗೆ ಪ್ರವೇಶ ಪಡೆಯುವುದು, ಅಲ್ಲಿ ಹೆಸರು ಗಳಿಸುವುದು ನಂತರ ಉನ್ನತ ನಾಯಕತ್ವವನ್ನು ಕೊಲ್ಲುವ ಸಂಚು ಮಾಡಿದ್ದರು, ಆದರೆ ಅದನ್ನು ಪೊಲೀಸರು ಭೇದಿಸಿದ್ದರು” ಎಂದು ಹೇಳಿದ್ದಾರೆ.

“ಗಡಿಯಲ್ಲಿ, ಭಯೋತ್ಪಾದನೆಯನ್ನು ಹರಡಲು ಬಯಸುವವರು ಇದ್ದಾರೆ. ಈಗ ಯಾರು ಬೇಕಾದರೂ ಆನ್‌ಲೈನ್‌ನಲ್ಲಿ ಬಿಜೆಪಿ ಸದಸ್ಯರಾಗಬಹುದು. ಇದು ಒಂದು ನ್ಯೂನತೆ ಎಂದು ನಾನು ಹೇಳುತ್ತೇನೆ ಏಕೆಂದರೆ ಅಪರಾಧ ದಾಖಲೆ ಅಥವಾ ಜನರ ಪೂರ್ವಾಪರಗಳನ್ನು ಪರಿಶೀಲಿಸುವ ವ್ಯವಸ್ಥೆ ಇಲ್ಲ” ಎಂದು ಅವರು ಹೇಳಿದರು.

ಸಾಮಾನ್ಯ ಸದಸ್ಯರಾದರೆ ಬೇರೆ ವಿಚಾರ. ಆದರೆ ಬಂಧಿಸಲ್ಪಟ್ಟಿರುವ ಉಗ್ರನಿಗೆ ಸಾಮಾಜಿಕ ಜಾಲತಾಣ ನಿರ್ವಹಣೆಯ ಹುದ್ದೆ ನೀಡಲಾಗಿದೆ. ಅಲ್ಲದೆ ಪಕ್ಷದ ಹಿರಿಯರೊಂದಿಗೆ ಆತನಿಗೆ ಉತ್ತಮ ಸಂಬಂಧವಿರುವುದು ಫೋಟೊಗಳಿಂದ ತಿಳಿದುಬಂದಿದೆ. ಇಷ್ಟಿದ್ದು ಆತ ಆನ್‌ಲೈನ್ ಮೂಲಕ ಸದಸ್ಯನಾಗಿದ್ದಾನೆ ಎಂಬುದನ್ನು ಒಪ್ಪಲು ಸಾಧ್ಯವೇ? ಎಂಬ ಪ್ರಶ್ನೆಗಳು ಕೇಳಿಬಂದಿವೆ.

“ಶ್ರೀ ತಾಲಿಬ್ ಹುಸೇನ್ ಷಾ, ಡ್ರಜ್ ಕೊಟ್ರಂಕಾ, ಬುಧಾನ್, ರಾಜೌರಿ ಜಿಲ್ಲೆ, ಇವರನ್ನು ತಕ್ಷಣವೇ ಜಾರಿಗೆ ಬರುವಂತೆ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಜಮ್ಮು ಪ್ರಾಂತ್ಯದ ಹೊಸ ಐಟಿ ಮತ್ತು ಸಾಮಾಜಿಕ ಮಾಧ್ಯಮ ಉಸ್ತುವಾರಿಯಾಗನಿ ನೇಮಿಸಲಾಗಿದೆ” ಎಂದು ಬಿಜೆಪಿ J&K ಅಲ್ಪಸಂಖ್ಯಾತ ಮೋರ್ಚಾ ಮೇ 09 ರಂದು ಆದೇಶ ಹೊರಡಿಸಿತ್ತು. ಈ ಎರಡು ತಿಂಗಳೊಳಗೆ ಆತ ಭಯೋತ್ಪಾದನಾ ಚಟುವಟಿಕೆ ನಡೆಸಿ ಸಿಕ್ಕಿಬಿದ್ದಿದ್ದಾರೆ.

ಇದನ್ನೂ ಓದಿ: ಮಾನವ ಸಂಬಂಧಗಳನ್ನು ದ್ವೇಷದಿಂದ ಕದಡಿ ದೇಶ ಕಟ್ಟಲು ಸಾಧ್ಯವಿಲ್ಲ: ರಹಮತ್ ತರೀಕೆರೆ

ಉಗ್ರರನ್ನು ಹಿಡಿದುಕೊಟ್ಟ ರಿಯಾಸಿ ಜಿಲ್ಲೆಯ ತುಕ್ಸಾನ್‌ನ ಗ್ರಾಮಸ್ಥರ ಧೈರ್ಯವನ್ನು ಶ್ಲಾಘಿಸಿರುವ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮತ್ತು ಪೊಲೀಸ್ ಮುಖ್ಯಸ್ಥರು ರಿಯಾಸಿ ಗ್ರಾಮಸ್ಥರಿಗೆ 2 ಲಕ್ಷ ರೂ ನಗದು ಬಹುಮಾನ ಘೋಷಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಬಿಜೆಪಿಯ ತುಂಡು ಬಿಸ್ಕೆಟ್ ತಿನ್ನುವ ಹಲ್ಕಟ್, ಕಜ್ಜಿ, ಕಂತ್ರಿ ನಾಯಿ ಒಂದು ಯಾವಾಗ್ಲೂ ಒಂದು ಧರ್ಮದ ವಿರುದ್ಧ ಬೊಗಳತಿತ್ತು ಇವಾಗ ಬಂದು ಬೊಗಳೋಕೆ ಯಾವುದಾದರು ಇನ್ನೊಂದು ಕಂತ್ರಿ ನಾಯಿ ತೊಡ್ಡು ಸಿಕ್ಕಿದಿಯಾ ಬಾಯಲ್ಲಿ..? ಅಪ್ಪನಿಗೆ ಹುಟ್ಟಿದವರು ಮಾತ್ರ ಸತ್ಯ ಹೇಳ್ತಾರೆ ಮತ್ತೆ ಬೇರೆಯವರು ಹೇಳುವ ಸತ್ಯವನ್ನು ಒಪ್ಪುತ್ತಾರೆ. ಇಡೀ ಕ್ರಿಕೆಟ್ ತಂಡಕ್ಕೆ ಹುಟ್ಟಿದೋರು ಬರಿ ಬೊಗಳೆ ಬಿಟ್ಕೊಂಡ ದೇಶದ ಸ್ವಾಸ್ತ್ಯ ಹಾಳು ಮಾಡತಾವೆ ### ಮಕ್ಕಳು

  2. ಕೆಲವು ಸಮುದಾಯಕ್ಕೆ ಸೇರಿದವರನ್ನ ಯಾವುದೇ ಹುದ್ದೆಗೆ ನೇಮಿಸಿದರೂ ಆ ಹುದ್ದೆಯಿಂದ ನಿರ್ಗಮಿಸಿದ ನಂತರ ದೇಶ ದ್ರೋಹಿಗಳೇ ಆಗೋದು ಅನ್ನೋದು ಅವರ ಮೂಲದಲ್ಲಿಯೇ ಅಡಗಿದೆ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...