Homeಮುಖಪುಟಜಮ್ಮು ಕಾಶ್ಮೀರದಲ್ಲಿ ಸೆರೆ ಸಿಕ್ಕ ಲಷ್ಕರ್-ಎ-ತೊಯ್ಬಾ ಉಗ್ರ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ!

ಜಮ್ಮು ಕಾಶ್ಮೀರದಲ್ಲಿ ಸೆರೆ ಸಿಕ್ಕ ಲಷ್ಕರ್-ಎ-ತೊಯ್ಬಾ ಉಗ್ರ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ!

- Advertisement -
- Advertisement -

ಇಂದು ಜಮ್ಮು ಮತ್ತು ಕಾಶ್ಮೀರದಲ್ಲಿ ಸೆರೆ ಸಿಕ್ಕ ಲಷ್ಕರ್-ಎ-ತೊಯ್ಬಾ ಉಗ್ರ ಬಿಜೆಪಿಯ ಸಕ್ರಿಯ ಸದಸ್ಯನಾಗಿದ್ದ ಜೊತೆಗೆ ಜಮ್ಮು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಸಾಮಾಜಿಕ ಮಾಧ್ಯಮ ಉಸ್ತುವಾರಿ ಕೂಡ ಆಗಿದ್ದ ಎಂಬ ಸ್ಪೋಟಕ ಮಾಹಿತಿ ಕುರಿತು ಎನ್‌ಡಿಟಿವಿ ವರದಿ ಮಾಡಿದೆ.

ಇಂದು ಬೆಳಗ್ಗೆ ಜಮ್ಮುವಿನ ರಿಯಾಸಿ ಪ್ರದೇಶದಲ್ಲಿ ಉಗ್ರರಾದ ತಾಲಿಬ್ ಹುಸೇನ್ ಶಾ ಮತ್ತು ಆತನ ಸಹಚರರನ್ನು ಗ್ರಾಮಸ್ಥರು ಸೆರೆ ಹಿಡಿದಿದ್ದಾರೆ. ಅವರಿಂದ ಎರಡು ಎಕೆ ರೈಫಲ್‌ಗಳು, ಹಲವಾರು ಗ್ರೆನೇಡ್‌ಗಳು ಮತ್ತು ಇತರ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡು, ಅವರನ್ನು ಪೊಲೀಸರಿಗೆ ಒಪ್ಪಿಸಲಾಗಿತ್ತು.

ಮೇ 9 ರಂದು ಬಿಜೆಪಿಯು ಜಮ್ಮು ಪ್ರಾಂತ್ಯದಲ್ಲಿ ಪಕ್ಷದ ಐಟಿ ಮತ್ತು ಸಾಮಾಜಿಕ ಮಾಧ್ಯಮದ ಉಸ್ತುವಾರಿಯಾಗಿ ತಾಲಿಬ್ ಹುಸೇನ್ ಶಾನನ್ನು ನೇಮಿಸಲಾಗಿತ್ತು ಎನ್ನಲಾಗಿದೆ. ಜಮ್ಮು ಕಾಶ್ಮೀರದ ಬಿಜೆಪಿ ಅಧ್ಯಕ್ಷ ರವೀಂದ್ರ ರೈನಾ ಸೇರಿದಂತೆ ಬಿಜೆಪಿಯ ಹಿರಿಯ ನಾಯಕರೊಂದಿಗೆ ಉಗ್ರ ಶಾ ಇರುವ ಹಲವರು ಫೋಟೊಗಲು ವೈರಲ್ ಆಗುತ್ತಿವೆ.

ಭಯೋತ್ಪಾದಕನೊಬ್ಬನನ್ನು ಪಕ್ಷದ ಐಟಿ ಸೆಲ್ ಮುಖ್ಯಸ್ಥನಾಗಿ ಬಿಜೆಪಿ ನೇಮಿಸಿದೆ, ಹೆಸರಿಗೆ ಮಾತ್ರ ಭಯೋತ್ಪಾದನೆ ವಿರುದ್ಧ ಹೋರಾಡುವ ಬಿಜೆಪಿಯು ಭಯೋತ್ಪಾದಕರನ್ನೇ ಸಾಕುತ್ತಿದೆ ಎಂದು ಹಲವಾರು ಜನರು ದೂರಿದ್ದಾರೆ.

ಬಿಜೆಪಿ ಪಕ್ಷದಲ್ಲಿಯೇ ಉಗ್ರಿದ್ದಾರೆ ಎಂಬ ಆರೋಪದ ಬಗ್ಗೆ ಪ್ರತಿಕ್ರಿಯಿಸಿರುವ ಪಕ್ಷವು, “ಆನ್‌ಲೈನ್ ಸದಸ್ಯತ್ವ ವ್ಯವಸ್ಥೆಯು ಯಾವುದೇ ಹಿನ್ನೆಲೆ ಪರಿಶೀಲನೆಯಿಲ್ಲದೆ ಜನರನ್ನು ಪಕ್ಷಕ್ಕೆ ಸೇರಲು ಅನುವು ಮಾಡಿಕೊಡುತ್ತದೆ” ಎಂದು ಹೇಳುವ ಮೂಲಕ ಜಾರಿಕೊಳ್ಳಲು ಯತ್ನಿಸಿದೆ.

ಬಿಜೆಪಿ ವಕ್ತಾರ ಆರ್.ಎಸ್.ಪಠಾನಿಯಾ ಮಾತನಾಡಿ, “ಇದು ಹೊಸ ಮಾದರಿಯಾಗಿದೆ. ಉಗ್ರರು ಬಿಜೆಪಿಗೆ ಪ್ರವೇಶ ಪಡೆಯುವುದು, ಅಲ್ಲಿ ಹೆಸರು ಗಳಿಸುವುದು ನಂತರ ಉನ್ನತ ನಾಯಕತ್ವವನ್ನು ಕೊಲ್ಲುವ ಸಂಚು ಮಾಡಿದ್ದರು, ಆದರೆ ಅದನ್ನು ಪೊಲೀಸರು ಭೇದಿಸಿದ್ದರು” ಎಂದು ಹೇಳಿದ್ದಾರೆ.

“ಗಡಿಯಲ್ಲಿ, ಭಯೋತ್ಪಾದನೆಯನ್ನು ಹರಡಲು ಬಯಸುವವರು ಇದ್ದಾರೆ. ಈಗ ಯಾರು ಬೇಕಾದರೂ ಆನ್‌ಲೈನ್‌ನಲ್ಲಿ ಬಿಜೆಪಿ ಸದಸ್ಯರಾಗಬಹುದು. ಇದು ಒಂದು ನ್ಯೂನತೆ ಎಂದು ನಾನು ಹೇಳುತ್ತೇನೆ ಏಕೆಂದರೆ ಅಪರಾಧ ದಾಖಲೆ ಅಥವಾ ಜನರ ಪೂರ್ವಾಪರಗಳನ್ನು ಪರಿಶೀಲಿಸುವ ವ್ಯವಸ್ಥೆ ಇಲ್ಲ” ಎಂದು ಅವರು ಹೇಳಿದರು.

ಸಾಮಾನ್ಯ ಸದಸ್ಯರಾದರೆ ಬೇರೆ ವಿಚಾರ. ಆದರೆ ಬಂಧಿಸಲ್ಪಟ್ಟಿರುವ ಉಗ್ರನಿಗೆ ಸಾಮಾಜಿಕ ಜಾಲತಾಣ ನಿರ್ವಹಣೆಯ ಹುದ್ದೆ ನೀಡಲಾಗಿದೆ. ಅಲ್ಲದೆ ಪಕ್ಷದ ಹಿರಿಯರೊಂದಿಗೆ ಆತನಿಗೆ ಉತ್ತಮ ಸಂಬಂಧವಿರುವುದು ಫೋಟೊಗಳಿಂದ ತಿಳಿದುಬಂದಿದೆ. ಇಷ್ಟಿದ್ದು ಆತ ಆನ್‌ಲೈನ್ ಮೂಲಕ ಸದಸ್ಯನಾಗಿದ್ದಾನೆ ಎಂಬುದನ್ನು ಒಪ್ಪಲು ಸಾಧ್ಯವೇ? ಎಂಬ ಪ್ರಶ್ನೆಗಳು ಕೇಳಿಬಂದಿವೆ.

“ಶ್ರೀ ತಾಲಿಬ್ ಹುಸೇನ್ ಷಾ, ಡ್ರಜ್ ಕೊಟ್ರಂಕಾ, ಬುಧಾನ್, ರಾಜೌರಿ ಜಿಲ್ಲೆ, ಇವರನ್ನು ತಕ್ಷಣವೇ ಜಾರಿಗೆ ಬರುವಂತೆ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಜಮ್ಮು ಪ್ರಾಂತ್ಯದ ಹೊಸ ಐಟಿ ಮತ್ತು ಸಾಮಾಜಿಕ ಮಾಧ್ಯಮ ಉಸ್ತುವಾರಿಯಾಗನಿ ನೇಮಿಸಲಾಗಿದೆ” ಎಂದು ಬಿಜೆಪಿ J&K ಅಲ್ಪಸಂಖ್ಯಾತ ಮೋರ್ಚಾ ಮೇ 09 ರಂದು ಆದೇಶ ಹೊರಡಿಸಿತ್ತು. ಈ ಎರಡು ತಿಂಗಳೊಳಗೆ ಆತ ಭಯೋತ್ಪಾದನಾ ಚಟುವಟಿಕೆ ನಡೆಸಿ ಸಿಕ್ಕಿಬಿದ್ದಿದ್ದಾರೆ.

ಇದನ್ನೂ ಓದಿ: ಮಾನವ ಸಂಬಂಧಗಳನ್ನು ದ್ವೇಷದಿಂದ ಕದಡಿ ದೇಶ ಕಟ್ಟಲು ಸಾಧ್ಯವಿಲ್ಲ: ರಹಮತ್ ತರೀಕೆರೆ

ಉಗ್ರರನ್ನು ಹಿಡಿದುಕೊಟ್ಟ ರಿಯಾಸಿ ಜಿಲ್ಲೆಯ ತುಕ್ಸಾನ್‌ನ ಗ್ರಾಮಸ್ಥರ ಧೈರ್ಯವನ್ನು ಶ್ಲಾಘಿಸಿರುವ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮತ್ತು ಪೊಲೀಸ್ ಮುಖ್ಯಸ್ಥರು ರಿಯಾಸಿ ಗ್ರಾಮಸ್ಥರಿಗೆ 2 ಲಕ್ಷ ರೂ ನಗದು ಬಹುಮಾನ ಘೋಷಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಬಿಜೆಪಿಯ ತುಂಡು ಬಿಸ್ಕೆಟ್ ತಿನ್ನುವ ಹಲ್ಕಟ್, ಕಜ್ಜಿ, ಕಂತ್ರಿ ನಾಯಿ ಒಂದು ಯಾವಾಗ್ಲೂ ಒಂದು ಧರ್ಮದ ವಿರುದ್ಧ ಬೊಗಳತಿತ್ತು ಇವಾಗ ಬಂದು ಬೊಗಳೋಕೆ ಯಾವುದಾದರು ಇನ್ನೊಂದು ಕಂತ್ರಿ ನಾಯಿ ತೊಡ್ಡು ಸಿಕ್ಕಿದಿಯಾ ಬಾಯಲ್ಲಿ..? ಅಪ್ಪನಿಗೆ ಹುಟ್ಟಿದವರು ಮಾತ್ರ ಸತ್ಯ ಹೇಳ್ತಾರೆ ಮತ್ತೆ ಬೇರೆಯವರು ಹೇಳುವ ಸತ್ಯವನ್ನು ಒಪ್ಪುತ್ತಾರೆ. ಇಡೀ ಕ್ರಿಕೆಟ್ ತಂಡಕ್ಕೆ ಹುಟ್ಟಿದೋರು ಬರಿ ಬೊಗಳೆ ಬಿಟ್ಕೊಂಡ ದೇಶದ ಸ್ವಾಸ್ತ್ಯ ಹಾಳು ಮಾಡತಾವೆ ### ಮಕ್ಕಳು

  2. ಕೆಲವು ಸಮುದಾಯಕ್ಕೆ ಸೇರಿದವರನ್ನ ಯಾವುದೇ ಹುದ್ದೆಗೆ ನೇಮಿಸಿದರೂ ಆ ಹುದ್ದೆಯಿಂದ ನಿರ್ಗಮಿಸಿದ ನಂತರ ದೇಶ ದ್ರೋಹಿಗಳೇ ಆಗೋದು ಅನ್ನೋದು ಅವರ ಮೂಲದಲ್ಲಿಯೇ ಅಡಗಿದೆ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...