Homeಮುಖಪುಟಜಮ್ಮು ಕಾಶ್ಮೀರದಲ್ಲಿ ಸೆರೆ ಸಿಕ್ಕ ಲಷ್ಕರ್-ಎ-ತೊಯ್ಬಾ ಉಗ್ರ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ!

ಜಮ್ಮು ಕಾಶ್ಮೀರದಲ್ಲಿ ಸೆರೆ ಸಿಕ್ಕ ಲಷ್ಕರ್-ಎ-ತೊಯ್ಬಾ ಉಗ್ರ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ!

- Advertisement -
- Advertisement -

ಇಂದು ಜಮ್ಮು ಮತ್ತು ಕಾಶ್ಮೀರದಲ್ಲಿ ಸೆರೆ ಸಿಕ್ಕ ಲಷ್ಕರ್-ಎ-ತೊಯ್ಬಾ ಉಗ್ರ ಬಿಜೆಪಿಯ ಸಕ್ರಿಯ ಸದಸ್ಯನಾಗಿದ್ದ ಜೊತೆಗೆ ಜಮ್ಮು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಸಾಮಾಜಿಕ ಮಾಧ್ಯಮ ಉಸ್ತುವಾರಿ ಕೂಡ ಆಗಿದ್ದ ಎಂಬ ಸ್ಪೋಟಕ ಮಾಹಿತಿ ಕುರಿತು ಎನ್‌ಡಿಟಿವಿ ವರದಿ ಮಾಡಿದೆ.

ಇಂದು ಬೆಳಗ್ಗೆ ಜಮ್ಮುವಿನ ರಿಯಾಸಿ ಪ್ರದೇಶದಲ್ಲಿ ಉಗ್ರರಾದ ತಾಲಿಬ್ ಹುಸೇನ್ ಶಾ ಮತ್ತು ಆತನ ಸಹಚರರನ್ನು ಗ್ರಾಮಸ್ಥರು ಸೆರೆ ಹಿಡಿದಿದ್ದಾರೆ. ಅವರಿಂದ ಎರಡು ಎಕೆ ರೈಫಲ್‌ಗಳು, ಹಲವಾರು ಗ್ರೆನೇಡ್‌ಗಳು ಮತ್ತು ಇತರ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡು, ಅವರನ್ನು ಪೊಲೀಸರಿಗೆ ಒಪ್ಪಿಸಲಾಗಿತ್ತು.

ಮೇ 9 ರಂದು ಬಿಜೆಪಿಯು ಜಮ್ಮು ಪ್ರಾಂತ್ಯದಲ್ಲಿ ಪಕ್ಷದ ಐಟಿ ಮತ್ತು ಸಾಮಾಜಿಕ ಮಾಧ್ಯಮದ ಉಸ್ತುವಾರಿಯಾಗಿ ತಾಲಿಬ್ ಹುಸೇನ್ ಶಾನನ್ನು ನೇಮಿಸಲಾಗಿತ್ತು ಎನ್ನಲಾಗಿದೆ. ಜಮ್ಮು ಕಾಶ್ಮೀರದ ಬಿಜೆಪಿ ಅಧ್ಯಕ್ಷ ರವೀಂದ್ರ ರೈನಾ ಸೇರಿದಂತೆ ಬಿಜೆಪಿಯ ಹಿರಿಯ ನಾಯಕರೊಂದಿಗೆ ಉಗ್ರ ಶಾ ಇರುವ ಹಲವರು ಫೋಟೊಗಲು ವೈರಲ್ ಆಗುತ್ತಿವೆ.

ಭಯೋತ್ಪಾದಕನೊಬ್ಬನನ್ನು ಪಕ್ಷದ ಐಟಿ ಸೆಲ್ ಮುಖ್ಯಸ್ಥನಾಗಿ ಬಿಜೆಪಿ ನೇಮಿಸಿದೆ, ಹೆಸರಿಗೆ ಮಾತ್ರ ಭಯೋತ್ಪಾದನೆ ವಿರುದ್ಧ ಹೋರಾಡುವ ಬಿಜೆಪಿಯು ಭಯೋತ್ಪಾದಕರನ್ನೇ ಸಾಕುತ್ತಿದೆ ಎಂದು ಹಲವಾರು ಜನರು ದೂರಿದ್ದಾರೆ.

ಬಿಜೆಪಿ ಪಕ್ಷದಲ್ಲಿಯೇ ಉಗ್ರಿದ್ದಾರೆ ಎಂಬ ಆರೋಪದ ಬಗ್ಗೆ ಪ್ರತಿಕ್ರಿಯಿಸಿರುವ ಪಕ್ಷವು, “ಆನ್‌ಲೈನ್ ಸದಸ್ಯತ್ವ ವ್ಯವಸ್ಥೆಯು ಯಾವುದೇ ಹಿನ್ನೆಲೆ ಪರಿಶೀಲನೆಯಿಲ್ಲದೆ ಜನರನ್ನು ಪಕ್ಷಕ್ಕೆ ಸೇರಲು ಅನುವು ಮಾಡಿಕೊಡುತ್ತದೆ” ಎಂದು ಹೇಳುವ ಮೂಲಕ ಜಾರಿಕೊಳ್ಳಲು ಯತ್ನಿಸಿದೆ.

ಬಿಜೆಪಿ ವಕ್ತಾರ ಆರ್.ಎಸ್.ಪಠಾನಿಯಾ ಮಾತನಾಡಿ, “ಇದು ಹೊಸ ಮಾದರಿಯಾಗಿದೆ. ಉಗ್ರರು ಬಿಜೆಪಿಗೆ ಪ್ರವೇಶ ಪಡೆಯುವುದು, ಅಲ್ಲಿ ಹೆಸರು ಗಳಿಸುವುದು ನಂತರ ಉನ್ನತ ನಾಯಕತ್ವವನ್ನು ಕೊಲ್ಲುವ ಸಂಚು ಮಾಡಿದ್ದರು, ಆದರೆ ಅದನ್ನು ಪೊಲೀಸರು ಭೇದಿಸಿದ್ದರು” ಎಂದು ಹೇಳಿದ್ದಾರೆ.

“ಗಡಿಯಲ್ಲಿ, ಭಯೋತ್ಪಾದನೆಯನ್ನು ಹರಡಲು ಬಯಸುವವರು ಇದ್ದಾರೆ. ಈಗ ಯಾರು ಬೇಕಾದರೂ ಆನ್‌ಲೈನ್‌ನಲ್ಲಿ ಬಿಜೆಪಿ ಸದಸ್ಯರಾಗಬಹುದು. ಇದು ಒಂದು ನ್ಯೂನತೆ ಎಂದು ನಾನು ಹೇಳುತ್ತೇನೆ ಏಕೆಂದರೆ ಅಪರಾಧ ದಾಖಲೆ ಅಥವಾ ಜನರ ಪೂರ್ವಾಪರಗಳನ್ನು ಪರಿಶೀಲಿಸುವ ವ್ಯವಸ್ಥೆ ಇಲ್ಲ” ಎಂದು ಅವರು ಹೇಳಿದರು.

ಸಾಮಾನ್ಯ ಸದಸ್ಯರಾದರೆ ಬೇರೆ ವಿಚಾರ. ಆದರೆ ಬಂಧಿಸಲ್ಪಟ್ಟಿರುವ ಉಗ್ರನಿಗೆ ಸಾಮಾಜಿಕ ಜಾಲತಾಣ ನಿರ್ವಹಣೆಯ ಹುದ್ದೆ ನೀಡಲಾಗಿದೆ. ಅಲ್ಲದೆ ಪಕ್ಷದ ಹಿರಿಯರೊಂದಿಗೆ ಆತನಿಗೆ ಉತ್ತಮ ಸಂಬಂಧವಿರುವುದು ಫೋಟೊಗಳಿಂದ ತಿಳಿದುಬಂದಿದೆ. ಇಷ್ಟಿದ್ದು ಆತ ಆನ್‌ಲೈನ್ ಮೂಲಕ ಸದಸ್ಯನಾಗಿದ್ದಾನೆ ಎಂಬುದನ್ನು ಒಪ್ಪಲು ಸಾಧ್ಯವೇ? ಎಂಬ ಪ್ರಶ್ನೆಗಳು ಕೇಳಿಬಂದಿವೆ.

“ಶ್ರೀ ತಾಲಿಬ್ ಹುಸೇನ್ ಷಾ, ಡ್ರಜ್ ಕೊಟ್ರಂಕಾ, ಬುಧಾನ್, ರಾಜೌರಿ ಜಿಲ್ಲೆ, ಇವರನ್ನು ತಕ್ಷಣವೇ ಜಾರಿಗೆ ಬರುವಂತೆ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಜಮ್ಮು ಪ್ರಾಂತ್ಯದ ಹೊಸ ಐಟಿ ಮತ್ತು ಸಾಮಾಜಿಕ ಮಾಧ್ಯಮ ಉಸ್ತುವಾರಿಯಾಗನಿ ನೇಮಿಸಲಾಗಿದೆ” ಎಂದು ಬಿಜೆಪಿ J&K ಅಲ್ಪಸಂಖ್ಯಾತ ಮೋರ್ಚಾ ಮೇ 09 ರಂದು ಆದೇಶ ಹೊರಡಿಸಿತ್ತು. ಈ ಎರಡು ತಿಂಗಳೊಳಗೆ ಆತ ಭಯೋತ್ಪಾದನಾ ಚಟುವಟಿಕೆ ನಡೆಸಿ ಸಿಕ್ಕಿಬಿದ್ದಿದ್ದಾರೆ.

ಇದನ್ನೂ ಓದಿ: ಮಾನವ ಸಂಬಂಧಗಳನ್ನು ದ್ವೇಷದಿಂದ ಕದಡಿ ದೇಶ ಕಟ್ಟಲು ಸಾಧ್ಯವಿಲ್ಲ: ರಹಮತ್ ತರೀಕೆರೆ

ಉಗ್ರರನ್ನು ಹಿಡಿದುಕೊಟ್ಟ ರಿಯಾಸಿ ಜಿಲ್ಲೆಯ ತುಕ್ಸಾನ್‌ನ ಗ್ರಾಮಸ್ಥರ ಧೈರ್ಯವನ್ನು ಶ್ಲಾಘಿಸಿರುವ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮತ್ತು ಪೊಲೀಸ್ ಮುಖ್ಯಸ್ಥರು ರಿಯಾಸಿ ಗ್ರಾಮಸ್ಥರಿಗೆ 2 ಲಕ್ಷ ರೂ ನಗದು ಬಹುಮಾನ ಘೋಷಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಬಿಜೆಪಿಯ ತುಂಡು ಬಿಸ್ಕೆಟ್ ತಿನ್ನುವ ಹಲ್ಕಟ್, ಕಜ್ಜಿ, ಕಂತ್ರಿ ನಾಯಿ ಒಂದು ಯಾವಾಗ್ಲೂ ಒಂದು ಧರ್ಮದ ವಿರುದ್ಧ ಬೊಗಳತಿತ್ತು ಇವಾಗ ಬಂದು ಬೊಗಳೋಕೆ ಯಾವುದಾದರು ಇನ್ನೊಂದು ಕಂತ್ರಿ ನಾಯಿ ತೊಡ್ಡು ಸಿಕ್ಕಿದಿಯಾ ಬಾಯಲ್ಲಿ..? ಅಪ್ಪನಿಗೆ ಹುಟ್ಟಿದವರು ಮಾತ್ರ ಸತ್ಯ ಹೇಳ್ತಾರೆ ಮತ್ತೆ ಬೇರೆಯವರು ಹೇಳುವ ಸತ್ಯವನ್ನು ಒಪ್ಪುತ್ತಾರೆ. ಇಡೀ ಕ್ರಿಕೆಟ್ ತಂಡಕ್ಕೆ ಹುಟ್ಟಿದೋರು ಬರಿ ಬೊಗಳೆ ಬಿಟ್ಕೊಂಡ ದೇಶದ ಸ್ವಾಸ್ತ್ಯ ಹಾಳು ಮಾಡತಾವೆ ### ಮಕ್ಕಳು

  2. ಕೆಲವು ಸಮುದಾಯಕ್ಕೆ ಸೇರಿದವರನ್ನ ಯಾವುದೇ ಹುದ್ದೆಗೆ ನೇಮಿಸಿದರೂ ಆ ಹುದ್ದೆಯಿಂದ ನಿರ್ಗಮಿಸಿದ ನಂತರ ದೇಶ ದ್ರೋಹಿಗಳೇ ಆಗೋದು ಅನ್ನೋದು ಅವರ ಮೂಲದಲ್ಲಿಯೇ ಅಡಗಿದೆ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....