Homeಮುಖಪುಟಜಮ್ಮು ಕಾಶ್ಮೀರದಲ್ಲಿ ಸೆರೆ ಸಿಕ್ಕ ಲಷ್ಕರ್-ಎ-ತೊಯ್ಬಾ ಉಗ್ರ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ!

ಜಮ್ಮು ಕಾಶ್ಮೀರದಲ್ಲಿ ಸೆರೆ ಸಿಕ್ಕ ಲಷ್ಕರ್-ಎ-ತೊಯ್ಬಾ ಉಗ್ರ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ!

- Advertisement -
- Advertisement -

ಇಂದು ಜಮ್ಮು ಮತ್ತು ಕಾಶ್ಮೀರದಲ್ಲಿ ಸೆರೆ ಸಿಕ್ಕ ಲಷ್ಕರ್-ಎ-ತೊಯ್ಬಾ ಉಗ್ರ ಬಿಜೆಪಿಯ ಸಕ್ರಿಯ ಸದಸ್ಯನಾಗಿದ್ದ ಜೊತೆಗೆ ಜಮ್ಮು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಸಾಮಾಜಿಕ ಮಾಧ್ಯಮ ಉಸ್ತುವಾರಿ ಕೂಡ ಆಗಿದ್ದ ಎಂಬ ಸ್ಪೋಟಕ ಮಾಹಿತಿ ಕುರಿತು ಎನ್‌ಡಿಟಿವಿ ವರದಿ ಮಾಡಿದೆ.

ಇಂದು ಬೆಳಗ್ಗೆ ಜಮ್ಮುವಿನ ರಿಯಾಸಿ ಪ್ರದೇಶದಲ್ಲಿ ಉಗ್ರರಾದ ತಾಲಿಬ್ ಹುಸೇನ್ ಶಾ ಮತ್ತು ಆತನ ಸಹಚರರನ್ನು ಗ್ರಾಮಸ್ಥರು ಸೆರೆ ಹಿಡಿದಿದ್ದಾರೆ. ಅವರಿಂದ ಎರಡು ಎಕೆ ರೈಫಲ್‌ಗಳು, ಹಲವಾರು ಗ್ರೆನೇಡ್‌ಗಳು ಮತ್ತು ಇತರ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡು, ಅವರನ್ನು ಪೊಲೀಸರಿಗೆ ಒಪ್ಪಿಸಲಾಗಿತ್ತು.

ಮೇ 9 ರಂದು ಬಿಜೆಪಿಯು ಜಮ್ಮು ಪ್ರಾಂತ್ಯದಲ್ಲಿ ಪಕ್ಷದ ಐಟಿ ಮತ್ತು ಸಾಮಾಜಿಕ ಮಾಧ್ಯಮದ ಉಸ್ತುವಾರಿಯಾಗಿ ತಾಲಿಬ್ ಹುಸೇನ್ ಶಾನನ್ನು ನೇಮಿಸಲಾಗಿತ್ತು ಎನ್ನಲಾಗಿದೆ. ಜಮ್ಮು ಕಾಶ್ಮೀರದ ಬಿಜೆಪಿ ಅಧ್ಯಕ್ಷ ರವೀಂದ್ರ ರೈನಾ ಸೇರಿದಂತೆ ಬಿಜೆಪಿಯ ಹಿರಿಯ ನಾಯಕರೊಂದಿಗೆ ಉಗ್ರ ಶಾ ಇರುವ ಹಲವರು ಫೋಟೊಗಲು ವೈರಲ್ ಆಗುತ್ತಿವೆ.

ಭಯೋತ್ಪಾದಕನೊಬ್ಬನನ್ನು ಪಕ್ಷದ ಐಟಿ ಸೆಲ್ ಮುಖ್ಯಸ್ಥನಾಗಿ ಬಿಜೆಪಿ ನೇಮಿಸಿದೆ, ಹೆಸರಿಗೆ ಮಾತ್ರ ಭಯೋತ್ಪಾದನೆ ವಿರುದ್ಧ ಹೋರಾಡುವ ಬಿಜೆಪಿಯು ಭಯೋತ್ಪಾದಕರನ್ನೇ ಸಾಕುತ್ತಿದೆ ಎಂದು ಹಲವಾರು ಜನರು ದೂರಿದ್ದಾರೆ.

ಬಿಜೆಪಿ ಪಕ್ಷದಲ್ಲಿಯೇ ಉಗ್ರಿದ್ದಾರೆ ಎಂಬ ಆರೋಪದ ಬಗ್ಗೆ ಪ್ರತಿಕ್ರಿಯಿಸಿರುವ ಪಕ್ಷವು, “ಆನ್‌ಲೈನ್ ಸದಸ್ಯತ್ವ ವ್ಯವಸ್ಥೆಯು ಯಾವುದೇ ಹಿನ್ನೆಲೆ ಪರಿಶೀಲನೆಯಿಲ್ಲದೆ ಜನರನ್ನು ಪಕ್ಷಕ್ಕೆ ಸೇರಲು ಅನುವು ಮಾಡಿಕೊಡುತ್ತದೆ” ಎಂದು ಹೇಳುವ ಮೂಲಕ ಜಾರಿಕೊಳ್ಳಲು ಯತ್ನಿಸಿದೆ.

ಬಿಜೆಪಿ ವಕ್ತಾರ ಆರ್.ಎಸ್.ಪಠಾನಿಯಾ ಮಾತನಾಡಿ, “ಇದು ಹೊಸ ಮಾದರಿಯಾಗಿದೆ. ಉಗ್ರರು ಬಿಜೆಪಿಗೆ ಪ್ರವೇಶ ಪಡೆಯುವುದು, ಅಲ್ಲಿ ಹೆಸರು ಗಳಿಸುವುದು ನಂತರ ಉನ್ನತ ನಾಯಕತ್ವವನ್ನು ಕೊಲ್ಲುವ ಸಂಚು ಮಾಡಿದ್ದರು, ಆದರೆ ಅದನ್ನು ಪೊಲೀಸರು ಭೇದಿಸಿದ್ದರು” ಎಂದು ಹೇಳಿದ್ದಾರೆ.

“ಗಡಿಯಲ್ಲಿ, ಭಯೋತ್ಪಾದನೆಯನ್ನು ಹರಡಲು ಬಯಸುವವರು ಇದ್ದಾರೆ. ಈಗ ಯಾರು ಬೇಕಾದರೂ ಆನ್‌ಲೈನ್‌ನಲ್ಲಿ ಬಿಜೆಪಿ ಸದಸ್ಯರಾಗಬಹುದು. ಇದು ಒಂದು ನ್ಯೂನತೆ ಎಂದು ನಾನು ಹೇಳುತ್ತೇನೆ ಏಕೆಂದರೆ ಅಪರಾಧ ದಾಖಲೆ ಅಥವಾ ಜನರ ಪೂರ್ವಾಪರಗಳನ್ನು ಪರಿಶೀಲಿಸುವ ವ್ಯವಸ್ಥೆ ಇಲ್ಲ” ಎಂದು ಅವರು ಹೇಳಿದರು.

ಸಾಮಾನ್ಯ ಸದಸ್ಯರಾದರೆ ಬೇರೆ ವಿಚಾರ. ಆದರೆ ಬಂಧಿಸಲ್ಪಟ್ಟಿರುವ ಉಗ್ರನಿಗೆ ಸಾಮಾಜಿಕ ಜಾಲತಾಣ ನಿರ್ವಹಣೆಯ ಹುದ್ದೆ ನೀಡಲಾಗಿದೆ. ಅಲ್ಲದೆ ಪಕ್ಷದ ಹಿರಿಯರೊಂದಿಗೆ ಆತನಿಗೆ ಉತ್ತಮ ಸಂಬಂಧವಿರುವುದು ಫೋಟೊಗಳಿಂದ ತಿಳಿದುಬಂದಿದೆ. ಇಷ್ಟಿದ್ದು ಆತ ಆನ್‌ಲೈನ್ ಮೂಲಕ ಸದಸ್ಯನಾಗಿದ್ದಾನೆ ಎಂಬುದನ್ನು ಒಪ್ಪಲು ಸಾಧ್ಯವೇ? ಎಂಬ ಪ್ರಶ್ನೆಗಳು ಕೇಳಿಬಂದಿವೆ.

“ಶ್ರೀ ತಾಲಿಬ್ ಹುಸೇನ್ ಷಾ, ಡ್ರಜ್ ಕೊಟ್ರಂಕಾ, ಬುಧಾನ್, ರಾಜೌರಿ ಜಿಲ್ಲೆ, ಇವರನ್ನು ತಕ್ಷಣವೇ ಜಾರಿಗೆ ಬರುವಂತೆ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಜಮ್ಮು ಪ್ರಾಂತ್ಯದ ಹೊಸ ಐಟಿ ಮತ್ತು ಸಾಮಾಜಿಕ ಮಾಧ್ಯಮ ಉಸ್ತುವಾರಿಯಾಗನಿ ನೇಮಿಸಲಾಗಿದೆ” ಎಂದು ಬಿಜೆಪಿ J&K ಅಲ್ಪಸಂಖ್ಯಾತ ಮೋರ್ಚಾ ಮೇ 09 ರಂದು ಆದೇಶ ಹೊರಡಿಸಿತ್ತು. ಈ ಎರಡು ತಿಂಗಳೊಳಗೆ ಆತ ಭಯೋತ್ಪಾದನಾ ಚಟುವಟಿಕೆ ನಡೆಸಿ ಸಿಕ್ಕಿಬಿದ್ದಿದ್ದಾರೆ.

ಇದನ್ನೂ ಓದಿ: ಮಾನವ ಸಂಬಂಧಗಳನ್ನು ದ್ವೇಷದಿಂದ ಕದಡಿ ದೇಶ ಕಟ್ಟಲು ಸಾಧ್ಯವಿಲ್ಲ: ರಹಮತ್ ತರೀಕೆರೆ

ಉಗ್ರರನ್ನು ಹಿಡಿದುಕೊಟ್ಟ ರಿಯಾಸಿ ಜಿಲ್ಲೆಯ ತುಕ್ಸಾನ್‌ನ ಗ್ರಾಮಸ್ಥರ ಧೈರ್ಯವನ್ನು ಶ್ಲಾಘಿಸಿರುವ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮತ್ತು ಪೊಲೀಸ್ ಮುಖ್ಯಸ್ಥರು ರಿಯಾಸಿ ಗ್ರಾಮಸ್ಥರಿಗೆ 2 ಲಕ್ಷ ರೂ ನಗದು ಬಹುಮಾನ ಘೋಷಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಬಿಜೆಪಿಯ ತುಂಡು ಬಿಸ್ಕೆಟ್ ತಿನ್ನುವ ಹಲ್ಕಟ್, ಕಜ್ಜಿ, ಕಂತ್ರಿ ನಾಯಿ ಒಂದು ಯಾವಾಗ್ಲೂ ಒಂದು ಧರ್ಮದ ವಿರುದ್ಧ ಬೊಗಳತಿತ್ತು ಇವಾಗ ಬಂದು ಬೊಗಳೋಕೆ ಯಾವುದಾದರು ಇನ್ನೊಂದು ಕಂತ್ರಿ ನಾಯಿ ತೊಡ್ಡು ಸಿಕ್ಕಿದಿಯಾ ಬಾಯಲ್ಲಿ..? ಅಪ್ಪನಿಗೆ ಹುಟ್ಟಿದವರು ಮಾತ್ರ ಸತ್ಯ ಹೇಳ್ತಾರೆ ಮತ್ತೆ ಬೇರೆಯವರು ಹೇಳುವ ಸತ್ಯವನ್ನು ಒಪ್ಪುತ್ತಾರೆ. ಇಡೀ ಕ್ರಿಕೆಟ್ ತಂಡಕ್ಕೆ ಹುಟ್ಟಿದೋರು ಬರಿ ಬೊಗಳೆ ಬಿಟ್ಕೊಂಡ ದೇಶದ ಸ್ವಾಸ್ತ್ಯ ಹಾಳು ಮಾಡತಾವೆ ### ಮಕ್ಕಳು

  2. ಕೆಲವು ಸಮುದಾಯಕ್ಕೆ ಸೇರಿದವರನ್ನ ಯಾವುದೇ ಹುದ್ದೆಗೆ ನೇಮಿಸಿದರೂ ಆ ಹುದ್ದೆಯಿಂದ ನಿರ್ಗಮಿಸಿದ ನಂತರ ದೇಶ ದ್ರೋಹಿಗಳೇ ಆಗೋದು ಅನ್ನೋದು ಅವರ ಮೂಲದಲ್ಲಿಯೇ ಅಡಗಿದೆ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...