Homeಮುಖಪುಟಜಮ್ಮು ಕಾಶ್ಮೀರದಲ್ಲಿ ಸೆರೆ ಸಿಕ್ಕ ಲಷ್ಕರ್-ಎ-ತೊಯ್ಬಾ ಉಗ್ರ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ!

ಜಮ್ಮು ಕಾಶ್ಮೀರದಲ್ಲಿ ಸೆರೆ ಸಿಕ್ಕ ಲಷ್ಕರ್-ಎ-ತೊಯ್ಬಾ ಉಗ್ರ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ!

- Advertisement -
- Advertisement -

ಇಂದು ಜಮ್ಮು ಮತ್ತು ಕಾಶ್ಮೀರದಲ್ಲಿ ಸೆರೆ ಸಿಕ್ಕ ಲಷ್ಕರ್-ಎ-ತೊಯ್ಬಾ ಉಗ್ರ ಬಿಜೆಪಿಯ ಸಕ್ರಿಯ ಸದಸ್ಯನಾಗಿದ್ದ ಜೊತೆಗೆ ಜಮ್ಮು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಸಾಮಾಜಿಕ ಮಾಧ್ಯಮ ಉಸ್ತುವಾರಿ ಕೂಡ ಆಗಿದ್ದ ಎಂಬ ಸ್ಪೋಟಕ ಮಾಹಿತಿ ಕುರಿತು ಎನ್‌ಡಿಟಿವಿ ವರದಿ ಮಾಡಿದೆ.

ಇಂದು ಬೆಳಗ್ಗೆ ಜಮ್ಮುವಿನ ರಿಯಾಸಿ ಪ್ರದೇಶದಲ್ಲಿ ಉಗ್ರರಾದ ತಾಲಿಬ್ ಹುಸೇನ್ ಶಾ ಮತ್ತು ಆತನ ಸಹಚರರನ್ನು ಗ್ರಾಮಸ್ಥರು ಸೆರೆ ಹಿಡಿದಿದ್ದಾರೆ. ಅವರಿಂದ ಎರಡು ಎಕೆ ರೈಫಲ್‌ಗಳು, ಹಲವಾರು ಗ್ರೆನೇಡ್‌ಗಳು ಮತ್ತು ಇತರ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡು, ಅವರನ್ನು ಪೊಲೀಸರಿಗೆ ಒಪ್ಪಿಸಲಾಗಿತ್ತು.

ಮೇ 9 ರಂದು ಬಿಜೆಪಿಯು ಜಮ್ಮು ಪ್ರಾಂತ್ಯದಲ್ಲಿ ಪಕ್ಷದ ಐಟಿ ಮತ್ತು ಸಾಮಾಜಿಕ ಮಾಧ್ಯಮದ ಉಸ್ತುವಾರಿಯಾಗಿ ತಾಲಿಬ್ ಹುಸೇನ್ ಶಾನನ್ನು ನೇಮಿಸಲಾಗಿತ್ತು ಎನ್ನಲಾಗಿದೆ. ಜಮ್ಮು ಕಾಶ್ಮೀರದ ಬಿಜೆಪಿ ಅಧ್ಯಕ್ಷ ರವೀಂದ್ರ ರೈನಾ ಸೇರಿದಂತೆ ಬಿಜೆಪಿಯ ಹಿರಿಯ ನಾಯಕರೊಂದಿಗೆ ಉಗ್ರ ಶಾ ಇರುವ ಹಲವರು ಫೋಟೊಗಲು ವೈರಲ್ ಆಗುತ್ತಿವೆ.

ಭಯೋತ್ಪಾದಕನೊಬ್ಬನನ್ನು ಪಕ್ಷದ ಐಟಿ ಸೆಲ್ ಮುಖ್ಯಸ್ಥನಾಗಿ ಬಿಜೆಪಿ ನೇಮಿಸಿದೆ, ಹೆಸರಿಗೆ ಮಾತ್ರ ಭಯೋತ್ಪಾದನೆ ವಿರುದ್ಧ ಹೋರಾಡುವ ಬಿಜೆಪಿಯು ಭಯೋತ್ಪಾದಕರನ್ನೇ ಸಾಕುತ್ತಿದೆ ಎಂದು ಹಲವಾರು ಜನರು ದೂರಿದ್ದಾರೆ.

ಬಿಜೆಪಿ ಪಕ್ಷದಲ್ಲಿಯೇ ಉಗ್ರಿದ್ದಾರೆ ಎಂಬ ಆರೋಪದ ಬಗ್ಗೆ ಪ್ರತಿಕ್ರಿಯಿಸಿರುವ ಪಕ್ಷವು, “ಆನ್‌ಲೈನ್ ಸದಸ್ಯತ್ವ ವ್ಯವಸ್ಥೆಯು ಯಾವುದೇ ಹಿನ್ನೆಲೆ ಪರಿಶೀಲನೆಯಿಲ್ಲದೆ ಜನರನ್ನು ಪಕ್ಷಕ್ಕೆ ಸೇರಲು ಅನುವು ಮಾಡಿಕೊಡುತ್ತದೆ” ಎಂದು ಹೇಳುವ ಮೂಲಕ ಜಾರಿಕೊಳ್ಳಲು ಯತ್ನಿಸಿದೆ.

ಬಿಜೆಪಿ ವಕ್ತಾರ ಆರ್.ಎಸ್.ಪಠಾನಿಯಾ ಮಾತನಾಡಿ, “ಇದು ಹೊಸ ಮಾದರಿಯಾಗಿದೆ. ಉಗ್ರರು ಬಿಜೆಪಿಗೆ ಪ್ರವೇಶ ಪಡೆಯುವುದು, ಅಲ್ಲಿ ಹೆಸರು ಗಳಿಸುವುದು ನಂತರ ಉನ್ನತ ನಾಯಕತ್ವವನ್ನು ಕೊಲ್ಲುವ ಸಂಚು ಮಾಡಿದ್ದರು, ಆದರೆ ಅದನ್ನು ಪೊಲೀಸರು ಭೇದಿಸಿದ್ದರು” ಎಂದು ಹೇಳಿದ್ದಾರೆ.

“ಗಡಿಯಲ್ಲಿ, ಭಯೋತ್ಪಾದನೆಯನ್ನು ಹರಡಲು ಬಯಸುವವರು ಇದ್ದಾರೆ. ಈಗ ಯಾರು ಬೇಕಾದರೂ ಆನ್‌ಲೈನ್‌ನಲ್ಲಿ ಬಿಜೆಪಿ ಸದಸ್ಯರಾಗಬಹುದು. ಇದು ಒಂದು ನ್ಯೂನತೆ ಎಂದು ನಾನು ಹೇಳುತ್ತೇನೆ ಏಕೆಂದರೆ ಅಪರಾಧ ದಾಖಲೆ ಅಥವಾ ಜನರ ಪೂರ್ವಾಪರಗಳನ್ನು ಪರಿಶೀಲಿಸುವ ವ್ಯವಸ್ಥೆ ಇಲ್ಲ” ಎಂದು ಅವರು ಹೇಳಿದರು.

ಸಾಮಾನ್ಯ ಸದಸ್ಯರಾದರೆ ಬೇರೆ ವಿಚಾರ. ಆದರೆ ಬಂಧಿಸಲ್ಪಟ್ಟಿರುವ ಉಗ್ರನಿಗೆ ಸಾಮಾಜಿಕ ಜಾಲತಾಣ ನಿರ್ವಹಣೆಯ ಹುದ್ದೆ ನೀಡಲಾಗಿದೆ. ಅಲ್ಲದೆ ಪಕ್ಷದ ಹಿರಿಯರೊಂದಿಗೆ ಆತನಿಗೆ ಉತ್ತಮ ಸಂಬಂಧವಿರುವುದು ಫೋಟೊಗಳಿಂದ ತಿಳಿದುಬಂದಿದೆ. ಇಷ್ಟಿದ್ದು ಆತ ಆನ್‌ಲೈನ್ ಮೂಲಕ ಸದಸ್ಯನಾಗಿದ್ದಾನೆ ಎಂಬುದನ್ನು ಒಪ್ಪಲು ಸಾಧ್ಯವೇ? ಎಂಬ ಪ್ರಶ್ನೆಗಳು ಕೇಳಿಬಂದಿವೆ.

“ಶ್ರೀ ತಾಲಿಬ್ ಹುಸೇನ್ ಷಾ, ಡ್ರಜ್ ಕೊಟ್ರಂಕಾ, ಬುಧಾನ್, ರಾಜೌರಿ ಜಿಲ್ಲೆ, ಇವರನ್ನು ತಕ್ಷಣವೇ ಜಾರಿಗೆ ಬರುವಂತೆ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಜಮ್ಮು ಪ್ರಾಂತ್ಯದ ಹೊಸ ಐಟಿ ಮತ್ತು ಸಾಮಾಜಿಕ ಮಾಧ್ಯಮ ಉಸ್ತುವಾರಿಯಾಗನಿ ನೇಮಿಸಲಾಗಿದೆ” ಎಂದು ಬಿಜೆಪಿ J&K ಅಲ್ಪಸಂಖ್ಯಾತ ಮೋರ್ಚಾ ಮೇ 09 ರಂದು ಆದೇಶ ಹೊರಡಿಸಿತ್ತು. ಈ ಎರಡು ತಿಂಗಳೊಳಗೆ ಆತ ಭಯೋತ್ಪಾದನಾ ಚಟುವಟಿಕೆ ನಡೆಸಿ ಸಿಕ್ಕಿಬಿದ್ದಿದ್ದಾರೆ.

ಇದನ್ನೂ ಓದಿ: ಮಾನವ ಸಂಬಂಧಗಳನ್ನು ದ್ವೇಷದಿಂದ ಕದಡಿ ದೇಶ ಕಟ್ಟಲು ಸಾಧ್ಯವಿಲ್ಲ: ರಹಮತ್ ತರೀಕೆರೆ

ಉಗ್ರರನ್ನು ಹಿಡಿದುಕೊಟ್ಟ ರಿಯಾಸಿ ಜಿಲ್ಲೆಯ ತುಕ್ಸಾನ್‌ನ ಗ್ರಾಮಸ್ಥರ ಧೈರ್ಯವನ್ನು ಶ್ಲಾಘಿಸಿರುವ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮತ್ತು ಪೊಲೀಸ್ ಮುಖ್ಯಸ್ಥರು ರಿಯಾಸಿ ಗ್ರಾಮಸ್ಥರಿಗೆ 2 ಲಕ್ಷ ರೂ ನಗದು ಬಹುಮಾನ ಘೋಷಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಬಿಜೆಪಿಯ ತುಂಡು ಬಿಸ್ಕೆಟ್ ತಿನ್ನುವ ಹಲ್ಕಟ್, ಕಜ್ಜಿ, ಕಂತ್ರಿ ನಾಯಿ ಒಂದು ಯಾವಾಗ್ಲೂ ಒಂದು ಧರ್ಮದ ವಿರುದ್ಧ ಬೊಗಳತಿತ್ತು ಇವಾಗ ಬಂದು ಬೊಗಳೋಕೆ ಯಾವುದಾದರು ಇನ್ನೊಂದು ಕಂತ್ರಿ ನಾಯಿ ತೊಡ್ಡು ಸಿಕ್ಕಿದಿಯಾ ಬಾಯಲ್ಲಿ..? ಅಪ್ಪನಿಗೆ ಹುಟ್ಟಿದವರು ಮಾತ್ರ ಸತ್ಯ ಹೇಳ್ತಾರೆ ಮತ್ತೆ ಬೇರೆಯವರು ಹೇಳುವ ಸತ್ಯವನ್ನು ಒಪ್ಪುತ್ತಾರೆ. ಇಡೀ ಕ್ರಿಕೆಟ್ ತಂಡಕ್ಕೆ ಹುಟ್ಟಿದೋರು ಬರಿ ಬೊಗಳೆ ಬಿಟ್ಕೊಂಡ ದೇಶದ ಸ್ವಾಸ್ತ್ಯ ಹಾಳು ಮಾಡತಾವೆ ### ಮಕ್ಕಳು

  2. ಕೆಲವು ಸಮುದಾಯಕ್ಕೆ ಸೇರಿದವರನ್ನ ಯಾವುದೇ ಹುದ್ದೆಗೆ ನೇಮಿಸಿದರೂ ಆ ಹುದ್ದೆಯಿಂದ ನಿರ್ಗಮಿಸಿದ ನಂತರ ದೇಶ ದ್ರೋಹಿಗಳೇ ಆಗೋದು ಅನ್ನೋದು ಅವರ ಮೂಲದಲ್ಲಿಯೇ ಅಡಗಿದೆ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...