Homeಕರೋನಾ ತಲ್ಲಣಕಳೆದ 24 ಗಂಟೆಗಳಲ್ಲಿ 22,771 ಪ್ರಕರಣ: ದೇಶದಲ್ಲಿ ಒಟ್ಟು 6.48 ಲಕ್ಷ ಸೋಂಕಿತರು!

ಕಳೆದ 24 ಗಂಟೆಗಳಲ್ಲಿ 22,771 ಪ್ರಕರಣ: ದೇಶದಲ್ಲಿ ಒಟ್ಟು 6.48 ಲಕ್ಷ ಸೋಂಕಿತರು!

- Advertisement -
- Advertisement -

ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 22,771 ಪ್ರಕರಣಗಳು ದಾಖಲಾಗಿವೆ. ಭಾರತವು ಕೊರೊನಾ ವೈರಸ್ ಪ್ರಕರಣಗಳಲ್ಲಿ ಮತ್ತೊಂದು ಏರಿಕೆ ದಾಖಲಿಸಿ, ಒಟ್ಟು ಸೋಂಕಿತರ ಪ್ರಮಾಣ 6,48,315 ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಶನಿವಾರದ ಅಂಕಿ ಅಂಶಗಳು ತಿಳಿಸಿದೆ.

ಸಕ್ರಿಯ ಪ್ರಕರಣಗಳ ಸಂಖ್ಯೆ 2,35,433 ಆಗಿದ್ದು, ಒಂದೇ ದಿನದಲ್ಲಿ 442 ರೋಗಿಗಳು  ಸಾವನಪ್ಪಿದ್ದಾರೆ. ಒಟ್ಟಾರೆ ಕೊರೊನಾ ವೈರಸ್‌ಗೆ ಬಲಿಯಾದವರ ಸಂಖ್ಯೆ 18,655 ಕ್ಕೆ ತಲುಪಿದೆ.

ಶುಕ್ರವಾರ ಬೆಳಿಗ್ಗೆ 20,903 ಪ್ರಕರಣಗಳ ದಾಖಲೆಯ ನಂತರವೂ, ಭಾರತ ಸತತ ಎರಡನೇ ದಿನ 20,000 ಕ್ಕೂ ಹೆಚ್ಚು ಕೋವಿಡ್ -19 ಪ್ರಕರಣಗಳನ್ನು ವರದಿ ಮಾಡಿದೆ.

ಆರೋಗ್ಯ ಸಚಿವಾಲಯದ ಕೋವಿಡ್ -19 ಡ್ಯಾಶ್‌ಬೋರ್ಡ್ ಪ್ರಕಾರ, ಶುಕ್ರವಾರ ಮತ್ತು ಶನಿವಾರ ಬೆಳಿಗ್ಗೆ 14,335 ರೋಗಿಗಳು ವೈರಲ್ ಕಾಯಿಲೆಯಿಂದ ಗುಣಮುಖರಾಗಿದ್ದರಿಂದ ಚೇತರಿಕೆಯ ಪ್ರಮಾಣವು 60.80% ಕ್ಕೆ ಸುಧಾರಿಸಿದೆ.

ಈವರೆಗೆ ದೇಶಾದ್ಯಂತ 3,94,226 ಜನರನ್ನು ಆಸ್ಪತ್ರೆಗಳಿಂದ ಬಿಡುಗಡೆ ಮಾಡಲಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 2,35,433 ಆಗಿದೆ.

ಭಾರತದ ಅತಿ ಹೆಚ್ಚು ಹಾನಿಗೊಳಗಾದ ರಾಜ್ಯವಾದ ಮಹಾರಾಷ್ಟ್ರದಲ್ಲಿ 1,92,990 ಕೋವಿಡ್ -19 ಪ್ರಕರಣಗಳು ಮತ್ತು ಇದುವರೆಗೆ 8,376 ಸಾವುನೋವುಗಳಿವೆ.

ಉದ್ದೇಶಿತ ಪರೀಕ್ಷೆಯಿಂದಾಗಿ ರಾಜ್ಯವು ಪ್ರಕರಣಗಳ ಹೆಚ್ಚಳಕ್ಕೆ ಸಾಕ್ಷಿಯಾಗಿದೆ ಎಂದು ಸರ್ಕಾರಿ ಹಿರಿಯ ಅಧಿಕಾರಿಗಳು ಮತ್ತು ತಜ್ಞರು ತಿಳಿಸಿದ್ದಾರೆ. ಹಾಗೆಯೇ ಸ್ವತಂತ್ರ  ಪ್ರಕರಣಗಳಲ್ಲಿ ಹೆಚ್ಚಳ ಕಂಡುಬಂದರೂ, ಪ್ರಮಾಣವು ತೀವ್ರವಾಗಿ ಏರುತ್ತಿಲ್ಲ ಎಂದೂ ತಿಳಿಸಿದ್ದಾರೆ.

ದಕ್ಷಿಣದ ರಾಜ್ಯಗಳಲ್ಲಿ  ತಮಿಳುನಾಡು ಈಗ 1,00,000 ಕ್ಕೂ ಹೆಚ್ಚು ಕೋವಿಡ್ -19 ಪ್ರಕರಣಗಳನ್ನು ಹೊಂದಿರುವ ಎರಡನೇ ರಾಜ್ಯವಾಗಿದೆ. ಅಲ್ಲಿ 1,02,721 ಸೋಂಕಿತ ಪ್ರಕರಣಗಳಿದ್ದು, ಸಾವಿನ ಸಂಖ್ಯೆ 1,385 ಕ್ಕೆ ತಲುಪಿದೆ.

ಈವರೆಗೆ 95,40,132 ಮಾದರಿಗಳನ್ನು ಪರೀಕ್ಷಿಸಲಾಗಿದೆ ಮತ್ತು ಅದರಲ್ಲಿ 2,42,383 ಮಾದರಿಗಳನ್ನು ಶುಕ್ರವಾರ ಪರೀಕ್ಷಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಹೇಳಿದೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ, 94,695 ಕೋವಿಡ್ -19 ಪ್ರಕರಣಗಳು ದಾಖಲಾಗಿದೆ.

ಕಳೆದ ವರ್ಷ ಡಿಸೆಂಬರ್‌ನಲ್ಲಿ ಚೀನಾದ ವುಹಾನ್ ನಗರದಿಂದ ಮೊದಲ ಬಾರಿಗೆ ವರದಿಯಾದ ನಂತರ ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆ 11 ಮಿಲಿಯನ್ ಮೀರಿದೆ ಮತ್ತು ಅರ್ಧ ಮಿಲಿಯನ್‌ಗಿಂತಲೂ ಹೆಚ್ಚು ಜನರನ್ನು ಕೊಂದಿದೆ.


ಇದನ್ನೂ ಓದಿ: ಆಂಬುಲೆನ್ಸ್‌ಗಾಗಿ 2 ಗಂಟೆ ಕಾಯುವಿಕೆ: ಮನೆ ಮುಂದೆ ಪ್ರಾಣಬಿಟ್ಟ ಬೆಂಗಳೂರಿನ ಕೊರೊನಾ ಸೋಂಕಿತ!

ಆಗಸ್ಟ್ 15 ರೊಳಗೆ ಕೊರೊನಾ ಲಸಿಕೆ ಬಿಡುಗಡೆ ಮಾಡಲಿರುವ ಐಸಿಎಂಆರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...