Homeಕ್ರೀಡೆಕ್ರಿಕೆಟ್ಕೊನೆಯ ಒಂದು ಎಸೆತದಲ್ಲಿ 18ರನ್ ಬಿಟ್ಟುಕೊಟ್ಟ ಬೌಲರ್!: ಇತಿಹಾಸ ನಿರ್ಮಿಸಿದ ತಮಿಳುನಾಡು ಪ್ರೀಮಿಯರ್ ಲೀಗ್

ಕೊನೆಯ ಒಂದು ಎಸೆತದಲ್ಲಿ 18ರನ್ ಬಿಟ್ಟುಕೊಟ್ಟ ಬೌಲರ್!: ಇತಿಹಾಸ ನಿರ್ಮಿಸಿದ ತಮಿಳುನಾಡು ಪ್ರೀಮಿಯರ್ ಲೀಗ್

- Advertisement -
- Advertisement -

ತಮಿಳುನಾಡು ಪ್ರೀಮಿಯರ್ ಲೀಗ್ (ಟಿಎನ್‌ಪಿಎಲ್) ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಕೊನೆಯ ಎಸೆತದಲ್ಲಿ 18 ರನ್ ಬಿಟ್ಟುಕೊಟ್ಟಿರುವ ಬೌಲರ್ ಅಪಖ್ಯಾತಿಗೆ ಒಳಗಾಗಿದ್ದಾರೆ. ತಮಿಳುನಾಡು ಪ್ರೀಮಿಯರ್ ಲೀಗ್‌ ನ ಚೆಪಾಕ್ ಸೂಪರ್ ಗಿಲ್ಲಿಸ್ ಮತ್ತು ಸೇಲಂ ಸ್ಪಾರ್ಟನ್ಸ್  ತಂಡಗಳ ನಡುವಿನ ಪಂದ್ಯದಲ್ಲಿ ಈ ಇತಿಹಾಸ ನಿರ್ಮಿಸಿದೆ.

ಸ್ಪಾರ್ಟನ್ಸ್ ತಂಡದ ನಾಯಕ ಅಭಿಷೇಕ್ ತನ್ವರ್ ಅವರು ಇನ್ನಿಂಗ್ಸ್‌ನ 20ನೇ ಓವರ್‌ನ ಕೊನೆಯ ಎಸೆತದಲ್ಲಿ 18 ರನ್‌ಗಳನ್ನು ಬಿಟ್ಟುಕೊಟ್ಟರು. ಇದೀಗ ಅವರು ಕೊನೆಯ ಎಸೆತದಲ್ಲಿ ಅತಿ ಹೆಚ್ಚು ರನ್ ಬಿಟ್ಟುಕೊಟ್ಟ ಅಪಖ್ಯಾತಿಗೆ ಒಳಗಾಗಿದ್ದಾರೆ.

ತಮಿಳುನಾಡು ಪ್ರೀಮಿಯರ್ ಲೀಗ್ (ಟಿಎನ್‌ಪಿಎಲ್) ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ತನ್ವರ್ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಆಗಿದ್ದರು. ಆದರೆ ಸೂಪರ್ ಗಿಲ್ಲಿಸ್ ವಿರುದ್ಧದ ಪಂದ್ಯದಲ್ಲಿ ತಮ್ಮ ಲಯವನ್ನು ಕಂಡುಕೊಳ್ಳಲು ಹೆಣಗಾಡಿದರು. ಕೊನೆಯ ಎಸೆತದಲ್ಲಿ 18 ರನ್‌ಗಳ ಪರಿಣಾಮವಾಗಿ, ಎದುರಾಳಿ ತಂಡವು 217/5 ಬೃಹತ್ ಮೊತ್ತವನ್ನು ಕಲೆಹಾಕಿತು, ಕೊನೆಯ ಓವರ್‌ನಲ್ಲಿ 26 ರನ್ ಗಳಿಸಿತು.

ಅದೇ ಓವರ್‌ನ ಮೊದಲ ಐದು ಎಸೆತಗಳಲ್ಲಿ ಎಂಟು ರನ್ ಬಿಟ್ಟುಕೊಟ್ಟಿರುವ ತನ್ವರ್‌ ಅಂತಿಮವಾಗಿ ಒಟ್ಟು 26 ರನ್ ನೀಡಿದರು.

ತನ್ನ‌ ಅಂತಿಮ ಓವರ್‌ನ ಕೊನೆಯ ಎಸೆತ ಹೀಗಿತ್ತು: NB, NB + 6, NB + 2, WD, 6

1 ಬಾಲ್‌ಗೆ 18 ರನ್ ಗಳಿಕೆಗೆ ಕಾರಣವಾದ ಘಟನೆಗಳ ಅನುಕ್ರಮ ಇಲ್ಲಿದೆ:

– ಮೊದಲಿಗೆ ಬೌಲ್ಡ್ ಮಾಡಿದರು, ಆದರೆ ಅದು ನೋ-ಬಾಲ್ ಆಗಿತ್ತು ಒಂದು ರನ್ ಬಂದಿತು.

– ಆನಂತರದ ಎಸೆತವೂ ನೋ-ಬಾಲ್‌ ಆಯಿತು. ಅದನ್ನು ಸಿಕ್ಸರ್‌ಗೆ ಹೊಡೆದು ಒಟ್ಟು 8 ರನ್‌ಗಳಿಗೆ ತೆಗೆದುಕೊಂಡರು.

– ಮುಂದಿನ ಎಸೆತವೂ ನೋ-ಬಾಲ್ ಆಗಿತ್ತು, ಬ್ಯಾಟರ್‌ಗಳು 2 ರನ್ ಗಳಿಸಿದರು, ಒಟ್ಟು 11 ರನ್ ಗಳಿಸಿದರು.

– ಮತ್ತೆ ಬಾಲ್ ಎಸೆದಾಗ ವೈಡ್ ಆಯಿತು, ಒಟ್ಟು 12 ರನ್‌ಗಳು ಬಂದವು.

– ಕೊನೆಯ ಎಸೆತದಲ್ಲಿ ಸಿಕ್ಸರ್‌ಗೆ ಹೊಡೆದು ಒಟ್ಟಾರೆ ಮೊತ್ತ 18 ರನ್‌ಗಳು ಬಂದವು.

”ಕೊನೆಯ ಓವರ್‌ನ ಹೊಣೆಯನ್ನು ನಾನು ತೆಗೆದುಕೊಳ್ಳಬೇಕಾಗಿದೆ. ಅನುಭವಿ ಬೌಲರ್ ಆಗಿದ್ದರೂ ಕೊನೆಯ ಎಸೆತದಲ್ಲಿ ನಾಲ್ಕು ನೋ-ಬಾಲ್‌ಗಳನ್ನು ಎಸೆದದ್ದು ತುಂಬಾ ಬೇಸರವಾಗಿದೆ” ಎಂದು ಸೇಲಂ ಸ್ಪಾರ್ಟನ್ಸ್ ನಾಯಕ ತನ್ವರ್ ಪಂದ್ಯದ ನಂತರ ಹೇಳಿದರು.

ಸ್ಪಾರ್ಟನ್ನರು ಕೇವಲ 165/9 ಸ್ಕೋರ್ ಮಾಡಿ,  52 ರನ್‌ಗಳ ಭಾರಿ ಅಂತರದಿಂದ ಸೋತರು.

ಇದನ್ನೂ ಓದಿ: ಕ್ರಿಕೆಟ್ ಬೆನ್ನು ಹತ್ತಿದ ರೂಢಿಗಳು, ನಂಬಿಕೆ-ಆಚರಣೆ ಮತ್ತು ಮೂಢನಂಬಿಕೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...