Homeಕ್ರೀಡೆಕ್ರಿಕೆಟ್ಕೊನೆಯ ಒಂದು ಎಸೆತದಲ್ಲಿ 18ರನ್ ಬಿಟ್ಟುಕೊಟ್ಟ ಬೌಲರ್!: ಇತಿಹಾಸ ನಿರ್ಮಿಸಿದ ತಮಿಳುನಾಡು ಪ್ರೀಮಿಯರ್ ಲೀಗ್

ಕೊನೆಯ ಒಂದು ಎಸೆತದಲ್ಲಿ 18ರನ್ ಬಿಟ್ಟುಕೊಟ್ಟ ಬೌಲರ್!: ಇತಿಹಾಸ ನಿರ್ಮಿಸಿದ ತಮಿಳುನಾಡು ಪ್ರೀಮಿಯರ್ ಲೀಗ್

- Advertisement -
- Advertisement -

ತಮಿಳುನಾಡು ಪ್ರೀಮಿಯರ್ ಲೀಗ್ (ಟಿಎನ್‌ಪಿಎಲ್) ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಕೊನೆಯ ಎಸೆತದಲ್ಲಿ 18 ರನ್ ಬಿಟ್ಟುಕೊಟ್ಟಿರುವ ಬೌಲರ್ ಅಪಖ್ಯಾತಿಗೆ ಒಳಗಾಗಿದ್ದಾರೆ. ತಮಿಳುನಾಡು ಪ್ರೀಮಿಯರ್ ಲೀಗ್‌ ನ ಚೆಪಾಕ್ ಸೂಪರ್ ಗಿಲ್ಲಿಸ್ ಮತ್ತು ಸೇಲಂ ಸ್ಪಾರ್ಟನ್ಸ್  ತಂಡಗಳ ನಡುವಿನ ಪಂದ್ಯದಲ್ಲಿ ಈ ಇತಿಹಾಸ ನಿರ್ಮಿಸಿದೆ.

ಸ್ಪಾರ್ಟನ್ಸ್ ತಂಡದ ನಾಯಕ ಅಭಿಷೇಕ್ ತನ್ವರ್ ಅವರು ಇನ್ನಿಂಗ್ಸ್‌ನ 20ನೇ ಓವರ್‌ನ ಕೊನೆಯ ಎಸೆತದಲ್ಲಿ 18 ರನ್‌ಗಳನ್ನು ಬಿಟ್ಟುಕೊಟ್ಟರು. ಇದೀಗ ಅವರು ಕೊನೆಯ ಎಸೆತದಲ್ಲಿ ಅತಿ ಹೆಚ್ಚು ರನ್ ಬಿಟ್ಟುಕೊಟ್ಟ ಅಪಖ್ಯಾತಿಗೆ ಒಳಗಾಗಿದ್ದಾರೆ.

ತಮಿಳುನಾಡು ಪ್ರೀಮಿಯರ್ ಲೀಗ್ (ಟಿಎನ್‌ಪಿಎಲ್) ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ತನ್ವರ್ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಆಗಿದ್ದರು. ಆದರೆ ಸೂಪರ್ ಗಿಲ್ಲಿಸ್ ವಿರುದ್ಧದ ಪಂದ್ಯದಲ್ಲಿ ತಮ್ಮ ಲಯವನ್ನು ಕಂಡುಕೊಳ್ಳಲು ಹೆಣಗಾಡಿದರು. ಕೊನೆಯ ಎಸೆತದಲ್ಲಿ 18 ರನ್‌ಗಳ ಪರಿಣಾಮವಾಗಿ, ಎದುರಾಳಿ ತಂಡವು 217/5 ಬೃಹತ್ ಮೊತ್ತವನ್ನು ಕಲೆಹಾಕಿತು, ಕೊನೆಯ ಓವರ್‌ನಲ್ಲಿ 26 ರನ್ ಗಳಿಸಿತು.

ಅದೇ ಓವರ್‌ನ ಮೊದಲ ಐದು ಎಸೆತಗಳಲ್ಲಿ ಎಂಟು ರನ್ ಬಿಟ್ಟುಕೊಟ್ಟಿರುವ ತನ್ವರ್‌ ಅಂತಿಮವಾಗಿ ಒಟ್ಟು 26 ರನ್ ನೀಡಿದರು.

ತನ್ನ‌ ಅಂತಿಮ ಓವರ್‌ನ ಕೊನೆಯ ಎಸೆತ ಹೀಗಿತ್ತು: NB, NB + 6, NB + 2, WD, 6

1 ಬಾಲ್‌ಗೆ 18 ರನ್ ಗಳಿಕೆಗೆ ಕಾರಣವಾದ ಘಟನೆಗಳ ಅನುಕ್ರಮ ಇಲ್ಲಿದೆ:

– ಮೊದಲಿಗೆ ಬೌಲ್ಡ್ ಮಾಡಿದರು, ಆದರೆ ಅದು ನೋ-ಬಾಲ್ ಆಗಿತ್ತು ಒಂದು ರನ್ ಬಂದಿತು.

– ಆನಂತರದ ಎಸೆತವೂ ನೋ-ಬಾಲ್‌ ಆಯಿತು. ಅದನ್ನು ಸಿಕ್ಸರ್‌ಗೆ ಹೊಡೆದು ಒಟ್ಟು 8 ರನ್‌ಗಳಿಗೆ ತೆಗೆದುಕೊಂಡರು.

– ಮುಂದಿನ ಎಸೆತವೂ ನೋ-ಬಾಲ್ ಆಗಿತ್ತು, ಬ್ಯಾಟರ್‌ಗಳು 2 ರನ್ ಗಳಿಸಿದರು, ಒಟ್ಟು 11 ರನ್ ಗಳಿಸಿದರು.

– ಮತ್ತೆ ಬಾಲ್ ಎಸೆದಾಗ ವೈಡ್ ಆಯಿತು, ಒಟ್ಟು 12 ರನ್‌ಗಳು ಬಂದವು.

– ಕೊನೆಯ ಎಸೆತದಲ್ಲಿ ಸಿಕ್ಸರ್‌ಗೆ ಹೊಡೆದು ಒಟ್ಟಾರೆ ಮೊತ್ತ 18 ರನ್‌ಗಳು ಬಂದವು.

”ಕೊನೆಯ ಓವರ್‌ನ ಹೊಣೆಯನ್ನು ನಾನು ತೆಗೆದುಕೊಳ್ಳಬೇಕಾಗಿದೆ. ಅನುಭವಿ ಬೌಲರ್ ಆಗಿದ್ದರೂ ಕೊನೆಯ ಎಸೆತದಲ್ಲಿ ನಾಲ್ಕು ನೋ-ಬಾಲ್‌ಗಳನ್ನು ಎಸೆದದ್ದು ತುಂಬಾ ಬೇಸರವಾಗಿದೆ” ಎಂದು ಸೇಲಂ ಸ್ಪಾರ್ಟನ್ಸ್ ನಾಯಕ ತನ್ವರ್ ಪಂದ್ಯದ ನಂತರ ಹೇಳಿದರು.

ಸ್ಪಾರ್ಟನ್ನರು ಕೇವಲ 165/9 ಸ್ಕೋರ್ ಮಾಡಿ,  52 ರನ್‌ಗಳ ಭಾರಿ ಅಂತರದಿಂದ ಸೋತರು.

ಇದನ್ನೂ ಓದಿ: ಕ್ರಿಕೆಟ್ ಬೆನ್ನು ಹತ್ತಿದ ರೂಢಿಗಳು, ನಂಬಿಕೆ-ಆಚರಣೆ ಮತ್ತು ಮೂಢನಂಬಿಕೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...