Homeಕ್ರೀಡೆಕ್ರಿಕೆಟ್ಕೊನೆಯ ಒಂದು ಎಸೆತದಲ್ಲಿ 18ರನ್ ಬಿಟ್ಟುಕೊಟ್ಟ ಬೌಲರ್!: ಇತಿಹಾಸ ನಿರ್ಮಿಸಿದ ತಮಿಳುನಾಡು ಪ್ರೀಮಿಯರ್ ಲೀಗ್

ಕೊನೆಯ ಒಂದು ಎಸೆತದಲ್ಲಿ 18ರನ್ ಬಿಟ್ಟುಕೊಟ್ಟ ಬೌಲರ್!: ಇತಿಹಾಸ ನಿರ್ಮಿಸಿದ ತಮಿಳುನಾಡು ಪ್ರೀಮಿಯರ್ ಲೀಗ್

- Advertisement -
- Advertisement -

ತಮಿಳುನಾಡು ಪ್ರೀಮಿಯರ್ ಲೀಗ್ (ಟಿಎನ್‌ಪಿಎಲ್) ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಕೊನೆಯ ಎಸೆತದಲ್ಲಿ 18 ರನ್ ಬಿಟ್ಟುಕೊಟ್ಟಿರುವ ಬೌಲರ್ ಅಪಖ್ಯಾತಿಗೆ ಒಳಗಾಗಿದ್ದಾರೆ. ತಮಿಳುನಾಡು ಪ್ರೀಮಿಯರ್ ಲೀಗ್‌ ನ ಚೆಪಾಕ್ ಸೂಪರ್ ಗಿಲ್ಲಿಸ್ ಮತ್ತು ಸೇಲಂ ಸ್ಪಾರ್ಟನ್ಸ್  ತಂಡಗಳ ನಡುವಿನ ಪಂದ್ಯದಲ್ಲಿ ಈ ಇತಿಹಾಸ ನಿರ್ಮಿಸಿದೆ.

ಸ್ಪಾರ್ಟನ್ಸ್ ತಂಡದ ನಾಯಕ ಅಭಿಷೇಕ್ ತನ್ವರ್ ಅವರು ಇನ್ನಿಂಗ್ಸ್‌ನ 20ನೇ ಓವರ್‌ನ ಕೊನೆಯ ಎಸೆತದಲ್ಲಿ 18 ರನ್‌ಗಳನ್ನು ಬಿಟ್ಟುಕೊಟ್ಟರು. ಇದೀಗ ಅವರು ಕೊನೆಯ ಎಸೆತದಲ್ಲಿ ಅತಿ ಹೆಚ್ಚು ರನ್ ಬಿಟ್ಟುಕೊಟ್ಟ ಅಪಖ್ಯಾತಿಗೆ ಒಳಗಾಗಿದ್ದಾರೆ.

ತಮಿಳುನಾಡು ಪ್ರೀಮಿಯರ್ ಲೀಗ್ (ಟಿಎನ್‌ಪಿಎಲ್) ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ತನ್ವರ್ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಆಗಿದ್ದರು. ಆದರೆ ಸೂಪರ್ ಗಿಲ್ಲಿಸ್ ವಿರುದ್ಧದ ಪಂದ್ಯದಲ್ಲಿ ತಮ್ಮ ಲಯವನ್ನು ಕಂಡುಕೊಳ್ಳಲು ಹೆಣಗಾಡಿದರು. ಕೊನೆಯ ಎಸೆತದಲ್ಲಿ 18 ರನ್‌ಗಳ ಪರಿಣಾಮವಾಗಿ, ಎದುರಾಳಿ ತಂಡವು 217/5 ಬೃಹತ್ ಮೊತ್ತವನ್ನು ಕಲೆಹಾಕಿತು, ಕೊನೆಯ ಓವರ್‌ನಲ್ಲಿ 26 ರನ್ ಗಳಿಸಿತು.

ಅದೇ ಓವರ್‌ನ ಮೊದಲ ಐದು ಎಸೆತಗಳಲ್ಲಿ ಎಂಟು ರನ್ ಬಿಟ್ಟುಕೊಟ್ಟಿರುವ ತನ್ವರ್‌ ಅಂತಿಮವಾಗಿ ಒಟ್ಟು 26 ರನ್ ನೀಡಿದರು.

ತನ್ನ‌ ಅಂತಿಮ ಓವರ್‌ನ ಕೊನೆಯ ಎಸೆತ ಹೀಗಿತ್ತು: NB, NB + 6, NB + 2, WD, 6

1 ಬಾಲ್‌ಗೆ 18 ರನ್ ಗಳಿಕೆಗೆ ಕಾರಣವಾದ ಘಟನೆಗಳ ಅನುಕ್ರಮ ಇಲ್ಲಿದೆ:

– ಮೊದಲಿಗೆ ಬೌಲ್ಡ್ ಮಾಡಿದರು, ಆದರೆ ಅದು ನೋ-ಬಾಲ್ ಆಗಿತ್ತು ಒಂದು ರನ್ ಬಂದಿತು.

– ಆನಂತರದ ಎಸೆತವೂ ನೋ-ಬಾಲ್‌ ಆಯಿತು. ಅದನ್ನು ಸಿಕ್ಸರ್‌ಗೆ ಹೊಡೆದು ಒಟ್ಟು 8 ರನ್‌ಗಳಿಗೆ ತೆಗೆದುಕೊಂಡರು.

– ಮುಂದಿನ ಎಸೆತವೂ ನೋ-ಬಾಲ್ ಆಗಿತ್ತು, ಬ್ಯಾಟರ್‌ಗಳು 2 ರನ್ ಗಳಿಸಿದರು, ಒಟ್ಟು 11 ರನ್ ಗಳಿಸಿದರು.

– ಮತ್ತೆ ಬಾಲ್ ಎಸೆದಾಗ ವೈಡ್ ಆಯಿತು, ಒಟ್ಟು 12 ರನ್‌ಗಳು ಬಂದವು.

– ಕೊನೆಯ ಎಸೆತದಲ್ಲಿ ಸಿಕ್ಸರ್‌ಗೆ ಹೊಡೆದು ಒಟ್ಟಾರೆ ಮೊತ್ತ 18 ರನ್‌ಗಳು ಬಂದವು.

”ಕೊನೆಯ ಓವರ್‌ನ ಹೊಣೆಯನ್ನು ನಾನು ತೆಗೆದುಕೊಳ್ಳಬೇಕಾಗಿದೆ. ಅನುಭವಿ ಬೌಲರ್ ಆಗಿದ್ದರೂ ಕೊನೆಯ ಎಸೆತದಲ್ಲಿ ನಾಲ್ಕು ನೋ-ಬಾಲ್‌ಗಳನ್ನು ಎಸೆದದ್ದು ತುಂಬಾ ಬೇಸರವಾಗಿದೆ” ಎಂದು ಸೇಲಂ ಸ್ಪಾರ್ಟನ್ಸ್ ನಾಯಕ ತನ್ವರ್ ಪಂದ್ಯದ ನಂತರ ಹೇಳಿದರು.

ಸ್ಪಾರ್ಟನ್ನರು ಕೇವಲ 165/9 ಸ್ಕೋರ್ ಮಾಡಿ,  52 ರನ್‌ಗಳ ಭಾರಿ ಅಂತರದಿಂದ ಸೋತರು.

ಇದನ್ನೂ ಓದಿ: ಕ್ರಿಕೆಟ್ ಬೆನ್ನು ಹತ್ತಿದ ರೂಢಿಗಳು, ನಂಬಿಕೆ-ಆಚರಣೆ ಮತ್ತು ಮೂಢನಂಬಿಕೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...