Homeಮುಖಪುಟ2024ರ ಚುನಾವಣೆ ಪ್ರಜಾಪ್ರಭುತ್ವ ಉಳಿಸಲು ಜನರಿಗಿರುವ ಕೊನೆಯ ಅವಕಾಶ: ಮಲ್ಲಿಕಾರ್ಜುನ ಖರ್ಗೆ

2024ರ ಚುನಾವಣೆ ಪ್ರಜಾಪ್ರಭುತ್ವ ಉಳಿಸಲು ಜನರಿಗಿರುವ ಕೊನೆಯ ಅವಕಾಶ: ಮಲ್ಲಿಕಾರ್ಜುನ ಖರ್ಗೆ

- Advertisement -
- Advertisement -

2024ರ ಲೋಕಸಭೆ ಚುನಾವಣೆ ಪ್ರಜಾಪ್ರಭುತ್ವವನ್ನು ಉಳಿಸಲು ಜನರಿಗೆ ಕೊನೆಯ ಅವಕಾಶವಾಗಿದೆ, ಮುಂಬರುವ ಚುನಾವಣೆಯಲ್ಲಿ ಎನ್‌ಡಿಎ ಗೆದ್ದರೆ ಪ್ರಧಾನಿ ನರೇಂದ್ರ ಮೋದಿ ಸರ್ವಾಧಿಕಾರಕ್ಕೆ ಆದ್ಯತೆ ನೀಡುವ ಸಾಧ್ಯತೆ ಇದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಬಿಜೆಪಿ ಮತ್ತು ಅದರ ಸಿದ್ಧಾಂತವಾದಿ ಆರೆಸ್ಸೆಸ್‌ ವಿಷ ಇದ್ದಂತೆ ಜನರು ಅದರಿಂದ ದೂರವಿರಬೇಕು ಎಂದು ಹೇಳಿದ ಮಲ್ಲಿಕಾರ್ಜುನ ಖರ್ಗೆ, ಭಾರತದಲ್ಲಿ ಪ್ರಜಾಪ್ರಭುತ್ವವನ್ನು ಉಳಿಸಲು ಇದು ಜನರಿಗೆ ಇರುವ ಕೊನೆಯ ಅವಕಾಶವಾಗಿದೆ. ನರೇಂದ್ರ ಮೋದಿ ಮತ್ತೊಂದು ಚುನಾವಣೆಯಲ್ಲಿ ಗೆದ್ದರೆ, ದೇಶದಲ್ಲಿ ಸರ್ವಾಧಿಕಾರ ನೆಲೆಯೂರಲಿದೆ. ರಷ್ಯಾದಲ್ಲಿ ಪುಟಿನ್ ಆಳ್ವಿಕೆ ನಡೆಸಿದಂತೆ ಬಿಜೆಪಿ ಭಾರತವನ್ನು ಆಳ್ವಿಕೆ ನಡೆಸಲಿದೆ ಎಂದು  ಹೇಳಿದ್ದಾರೆ.

ಬಿಜೆಪಿ ಮತ್ತು ಆರೆಸ್ಸೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಖರ್ಗೆ, ಪ್ರಧಾನಿ ಮೋದಿ ನೇತೃತ್ವದ ಪ್ರಸ್ತುತ ಸರ್ಕಾರವು, ಪ್ರತಿಪಕ್ಷಗಳ ನಾಯಕರನ್ನು ಬೆದರಿಸುವ ಮೂಲಕ ಆಳ್ವಿಕೆ ನಡೆಸುತ್ತಿದೆ ಎಂದು ಹೇಳಿದ್ದಾರೆ.

ನಮ್ಮ ನಾಯಕರಿಗೆ ಇಡಿ ಮತ್ತು ಆದಾಯ ತೆರಿಗೆ ಅಧಿಕಾರಿಗಲ ಮೂಲಕ ನೋಟಿಸ್ ಜಾರಿ ಮಾಡಲಾಗುತ್ತಿದ್ದು, ಇಡಿ ಮತ್ತು ಆದಾಯ ತೆರಿಗೆ ರಾಜಕೀಯ ವಿರೋಧಿಗಳನ್ನು ಮೆಟ್ಟಿ ನಿಲ್ಲುವ ಅಸ್ತ್ರಗಳಾಗಿ ಮಾರ್ಪಟ್ಟಿವೆ. ಬಿಜೆಪಿ ಮತ್ತು ಆರೆಸ್ಸೆಸ್ ಸಿದ್ಧಾಂತಗಳ ಬಗ್ಗೆ ಜನತೆ ಜಾಗೃತರಾಗಿರಬೇಕು. ಬಿಜೆಪಿ ಮತ್ತು ಆರೆಸ್ಸೆಸ್‌ ಸಿದ್ಧಾಂತಗಳನ್ನು ವಿರೋಧಿಸಿದರೆ ಪಕ್ಷ, ಮೈತ್ರಿ ತೊರೆಯಲು ನಾಯಕರಿಗೆ ಬೆದರಿಕೆ ಹಾಕಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಬಿಜೆಪಿ ಮತ್ತು ಆರೆಸ್ಸೆಸ್‌ನ್ನು ವಿರೋಧಿಸುತ್ತಿರುವ ರಾಹುಲ್ ಗಾಂಧಿಗೆ ಪದೇ ಪದೇ ಬೆದರಿಕೆ ಹಾಕಲಾಗುತ್ತಿದೆ. ಆದರೆ ರಾಹುಲ್ ಗಾಂಧಿ ಅವರ ಒತ್ತಡಕ್ಕೆ ಒಳಗಾಗಲಿಲ್ಲ ಮತ್ತು ರಾಷ್ಟ್ರವನ್ನು ವಿಭಜಿಸಲು ಹೊರಟಿರುವ ಇಂತಹ ಶಕ್ತಿಗಳ ವಿರುದ್ಧ ಹೋರಾಟವನ್ನು ಮುಂದುವರೆಸಿದ್ದಾರೆ.  ಇಂದಿಗೂ ಮಣಿಪುರದಲ್ಲಿ ಜನರ ಹತ್ಯೆ, ಮಹಿಳೆಯರ ಮೇಲೆ ಅತ್ಯಾಚಾರ, ನೂರಾರು ಮನೆಗಳು, ಕಾರುಗಳಿಗೆ ಬೆಂಕಿ ಹಚ್ಚಲಾಗುತ್ತಿದೆ. ಮೋದಿಜೀ ಎಲ್ಲಿದ್ದಾರೆ, ಬಿಜೆಪಿ ಎಲ್ಲಿದೆ? ಎಂದು ಖರ್ಗೆ ಪ್ರಶ್ನಿಸಿದ್ದಾರೆ.

ಮಣಿಪುರ ಮತ್ತು ನಾಗಾಲ್ಯಾಂಡ್‌ಗೆ ಹೋಗಿ ಅಲ್ಲಿನ ಜನರಿಗೆ ನಿಮ್ಮ ಮುಖವನ್ನು ತೋರಿಸಿ, ಶಾಂತಿಯನ್ನು ಕಾಪಾಡುವುದು ಎಷ್ಟು ಕಷ್ಟ ಎಂದು ನಿಮಗೆ ಅರ್ಥವಾಗುತ್ತದೆ. ರಾಷ್ಟ್ರವನ್ನು ಒಗ್ಗೂಡಿಸಲು ನಾವು ತ್ಯಾಗ ಮಾಡಬೇಕಾಗುತ್ತದೆ. ನಿಮಗೆ ಆ ಧೈರ್ಯವಿಲ್ಲ. ಇಂದಿರಾ ಗಾಂಧಿಯವರು ತನ್ನ ಪ್ರಾಣದ ಅಪಾಯದ ಬಗ್ಗೆ ಅರಿವಿತ್ತು. ಇಂದಿರಾಜಿ ಒಡಿಶಾದಲ್ಲಿ ತಮ್ಮ ಕೊನೆಯ ಭಾಷಣದಲ್ಲಿ ತಮ್ಮ ಜೀವಕ್ಕೆ ಅಪಾಯದ ಬಗ್ಗೆ ಸೂಚಿಸಿದ್ದರು. ಆಕೆ ಮಾಡಿದ ತಪ್ಪೇನು, ಯಾರನ್ನಾದರೂ ಲೂಟಿ ಮಾಡಿದ್ದೀರಾ? ಇಲ್ಲ, ಅವರು ದೇಶವನ್ನು ಒಗ್ಗೂಡಿಸಲು ಶ್ರಮಿಸುತ್ತಿದ್ದರು. ಆದರೆ ಕೆಲವರು ಅವರನ್ನು ಕೊಂದರು. ರಾಜೀವ್ ಗಾಂಧಿಯವರು ತಮ್ಮ ತಾಯಿಯ ಹಾದಿಯಲ್ಲೇ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ್ದಾರೆ ಎಂದು ಖರ್ಗೆ ಹೇಳಿದ್ದಾರೆ.

ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಎನ್‌ಡಿಎಗೆ ಮರಳಿರುವುದು ಚುನಾವಣೆಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಒಬ್ಬ ವ್ಯಕ್ತಿ ಮಹಾಘಟಬಂಧನ್ ತ್ಯಜಿಸುವುದರಿಂದ ನಮ್ಮನ್ನು  ದುರ್ಬಲಗೊಳಿಸುವುದಿಲ್ಲ, ನಾವು ಬಿಜೆಪಿಯನ್ನು ಸೋಲಿಸುತ್ತೇವೆ. ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ಮತ್ತು ಪ್ರತಿಯೊಬ್ಬ ಭಾರತೀಯರ ಬ್ಯಾಂಕ್ ಖಾತೆಯಲ್ಲಿ 15 ಲಕ್ಷ ಹಣವನ್ನು ಭರವಸೆ ನೀಡುವ ಮೂಲಕ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ. ಅವರು ಪ್ರಧಾನಿ ಮೋದಿಯನ್ನು ಸಾಮಾನ್ಯ ಸುಳ್ಳುಗಾರ ಎಂದು ಬಣ್ಣಿಸಿದ್ದಾರೆ.

ಮೋದಿ ಗುಜರಾತ್‌ನ ಮುಖ್ಯಮಂತ್ರಿಯಾಗಿ ಈಗ ಪ್ರಧಾನಿಯಾಗಿದ್ದೀರಿ ಏಕೆಂದರೆ ಕಾಂಗ್ರೆಸ್ ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಎತ್ತಿ  ಹಿಡಿದಿದೆ. ಆದರೆ ನೀವು ಈಗ  ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೂಲಗಳನ್ನು ನಾಶ ಮಾಡುತ್ತಿದ್ದೀರಿ, ಸಂವಿಧಾನವನ್ನು ಸರಿಯಾಗಿ ಜಾರಿಗೊಳಿಸುವ ಮೂಲಕ ಮಹಿಳೆಯರು, ದಲಿತರು, ಬುಡಕಟ್ಟು ಜನಾಂಗದವರು ಮತ್ತು ದೀನದಲಿತರಿಗೆ ಹಕ್ಕುಗಳನ್ನು ಕಾಂಗ್ರೆಸ್ ನೀಡಿದೆ ಎಂದು ಅವರು ಹೇಳಿದ್ದಾರೆ.

ಒಡಿಶಾದ ಆಡಳಿತಾರೂಢ ಬಿಜೆಡಿ ಮತ್ತು ಪ್ರತಿಪಕ್ಷ ಬಿಜೆಪಿ ಪ್ರೇಮ ವಿವಾಹವನ್ನು ಮಾಡಿಕೊಂಡಿವೆ ಎಂದು ಹೇಳಿರುವ ಖರ್ಗೆ, ಎರಡು ಪಕ್ಷಗಳು ಒಡಿಶಾವನ್ನು ಲೂಟಿ ಮಾಡಿ ರಾಜ್ಯದ ಬಡ ಜನರನ್ನು ದಬ್ಬಾಳಿಕೆ ಮಾಡುತ್ತಿವೆ. ಬಿಜೆಪಿ ಮತ್ತು ಬಿಜೆಡಿ ಕೇವಲ ಶ್ರೀಮಂತರ ಜೊತೆಗಿದ್ದರೆ, ಕಾಂಗ್ರೆಸ್ ಯಾವಾಗಲೂ ಬಡವರ ಪರವಾಗಿ ನಿಲ್ಲುತ್ತದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಮೈಸೂರು: ಅಂಬೇಡ್ಕರ್‌ ನಾಮಫಲಕ ಅಳವಡಿಕೆ ವಿಚಾರದಲ್ಲಿ ಘರ್ಷಣೆ: 30ಕ್ಕೂ ಅಧಿಕ ಮಂದಿಗೆ ಗಾಯ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ.ಬಂಗಾಳ; ರಾಜ್ಯಪಾಲರ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣ; ಮೂವರು ಅಧಿಕಾರಿಗಳ ವಿರುದ್ಧ ಎಫ್‌ಐಆರ್‌

0
ಪಶ್ಚಿಮ ಬಂಗಾಳದ ರಾಜ್ಯಪಾಲ ಸಿವಿ ಆನಂದ ಬೋಸ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದ ರಾಜಭವನದ ಸಿಬ್ಬಂದಿಯನ್ನು ಅಕ್ರಮವಾಗಿ ತಡೆದ ಆರೋಪದ ಮೇಲೆ ರಾಜಭವನದ ಮೂವರು ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು...