Homeಮುಖಪುಟ2024ರ ಚುನಾವಣೆ ಪ್ರಜಾಪ್ರಭುತ್ವ ಉಳಿಸಲು ಜನರಿಗಿರುವ ಕೊನೆಯ ಅವಕಾಶ: ಮಲ್ಲಿಕಾರ್ಜುನ ಖರ್ಗೆ

2024ರ ಚುನಾವಣೆ ಪ್ರಜಾಪ್ರಭುತ್ವ ಉಳಿಸಲು ಜನರಿಗಿರುವ ಕೊನೆಯ ಅವಕಾಶ: ಮಲ್ಲಿಕಾರ್ಜುನ ಖರ್ಗೆ

- Advertisement -
- Advertisement -

2024ರ ಲೋಕಸಭೆ ಚುನಾವಣೆ ಪ್ರಜಾಪ್ರಭುತ್ವವನ್ನು ಉಳಿಸಲು ಜನರಿಗೆ ಕೊನೆಯ ಅವಕಾಶವಾಗಿದೆ, ಮುಂಬರುವ ಚುನಾವಣೆಯಲ್ಲಿ ಎನ್‌ಡಿಎ ಗೆದ್ದರೆ ಪ್ರಧಾನಿ ನರೇಂದ್ರ ಮೋದಿ ಸರ್ವಾಧಿಕಾರಕ್ಕೆ ಆದ್ಯತೆ ನೀಡುವ ಸಾಧ್ಯತೆ ಇದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಬಿಜೆಪಿ ಮತ್ತು ಅದರ ಸಿದ್ಧಾಂತವಾದಿ ಆರೆಸ್ಸೆಸ್‌ ವಿಷ ಇದ್ದಂತೆ ಜನರು ಅದರಿಂದ ದೂರವಿರಬೇಕು ಎಂದು ಹೇಳಿದ ಮಲ್ಲಿಕಾರ್ಜುನ ಖರ್ಗೆ, ಭಾರತದಲ್ಲಿ ಪ್ರಜಾಪ್ರಭುತ್ವವನ್ನು ಉಳಿಸಲು ಇದು ಜನರಿಗೆ ಇರುವ ಕೊನೆಯ ಅವಕಾಶವಾಗಿದೆ. ನರೇಂದ್ರ ಮೋದಿ ಮತ್ತೊಂದು ಚುನಾವಣೆಯಲ್ಲಿ ಗೆದ್ದರೆ, ದೇಶದಲ್ಲಿ ಸರ್ವಾಧಿಕಾರ ನೆಲೆಯೂರಲಿದೆ. ರಷ್ಯಾದಲ್ಲಿ ಪುಟಿನ್ ಆಳ್ವಿಕೆ ನಡೆಸಿದಂತೆ ಬಿಜೆಪಿ ಭಾರತವನ್ನು ಆಳ್ವಿಕೆ ನಡೆಸಲಿದೆ ಎಂದು  ಹೇಳಿದ್ದಾರೆ.

ಬಿಜೆಪಿ ಮತ್ತು ಆರೆಸ್ಸೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಖರ್ಗೆ, ಪ್ರಧಾನಿ ಮೋದಿ ನೇತೃತ್ವದ ಪ್ರಸ್ತುತ ಸರ್ಕಾರವು, ಪ್ರತಿಪಕ್ಷಗಳ ನಾಯಕರನ್ನು ಬೆದರಿಸುವ ಮೂಲಕ ಆಳ್ವಿಕೆ ನಡೆಸುತ್ತಿದೆ ಎಂದು ಹೇಳಿದ್ದಾರೆ.

ನಮ್ಮ ನಾಯಕರಿಗೆ ಇಡಿ ಮತ್ತು ಆದಾಯ ತೆರಿಗೆ ಅಧಿಕಾರಿಗಲ ಮೂಲಕ ನೋಟಿಸ್ ಜಾರಿ ಮಾಡಲಾಗುತ್ತಿದ್ದು, ಇಡಿ ಮತ್ತು ಆದಾಯ ತೆರಿಗೆ ರಾಜಕೀಯ ವಿರೋಧಿಗಳನ್ನು ಮೆಟ್ಟಿ ನಿಲ್ಲುವ ಅಸ್ತ್ರಗಳಾಗಿ ಮಾರ್ಪಟ್ಟಿವೆ. ಬಿಜೆಪಿ ಮತ್ತು ಆರೆಸ್ಸೆಸ್ ಸಿದ್ಧಾಂತಗಳ ಬಗ್ಗೆ ಜನತೆ ಜಾಗೃತರಾಗಿರಬೇಕು. ಬಿಜೆಪಿ ಮತ್ತು ಆರೆಸ್ಸೆಸ್‌ ಸಿದ್ಧಾಂತಗಳನ್ನು ವಿರೋಧಿಸಿದರೆ ಪಕ್ಷ, ಮೈತ್ರಿ ತೊರೆಯಲು ನಾಯಕರಿಗೆ ಬೆದರಿಕೆ ಹಾಕಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಬಿಜೆಪಿ ಮತ್ತು ಆರೆಸ್ಸೆಸ್‌ನ್ನು ವಿರೋಧಿಸುತ್ತಿರುವ ರಾಹುಲ್ ಗಾಂಧಿಗೆ ಪದೇ ಪದೇ ಬೆದರಿಕೆ ಹಾಕಲಾಗುತ್ತಿದೆ. ಆದರೆ ರಾಹುಲ್ ಗಾಂಧಿ ಅವರ ಒತ್ತಡಕ್ಕೆ ಒಳಗಾಗಲಿಲ್ಲ ಮತ್ತು ರಾಷ್ಟ್ರವನ್ನು ವಿಭಜಿಸಲು ಹೊರಟಿರುವ ಇಂತಹ ಶಕ್ತಿಗಳ ವಿರುದ್ಧ ಹೋರಾಟವನ್ನು ಮುಂದುವರೆಸಿದ್ದಾರೆ.  ಇಂದಿಗೂ ಮಣಿಪುರದಲ್ಲಿ ಜನರ ಹತ್ಯೆ, ಮಹಿಳೆಯರ ಮೇಲೆ ಅತ್ಯಾಚಾರ, ನೂರಾರು ಮನೆಗಳು, ಕಾರುಗಳಿಗೆ ಬೆಂಕಿ ಹಚ್ಚಲಾಗುತ್ತಿದೆ. ಮೋದಿಜೀ ಎಲ್ಲಿದ್ದಾರೆ, ಬಿಜೆಪಿ ಎಲ್ಲಿದೆ? ಎಂದು ಖರ್ಗೆ ಪ್ರಶ್ನಿಸಿದ್ದಾರೆ.

ಮಣಿಪುರ ಮತ್ತು ನಾಗಾಲ್ಯಾಂಡ್‌ಗೆ ಹೋಗಿ ಅಲ್ಲಿನ ಜನರಿಗೆ ನಿಮ್ಮ ಮುಖವನ್ನು ತೋರಿಸಿ, ಶಾಂತಿಯನ್ನು ಕಾಪಾಡುವುದು ಎಷ್ಟು ಕಷ್ಟ ಎಂದು ನಿಮಗೆ ಅರ್ಥವಾಗುತ್ತದೆ. ರಾಷ್ಟ್ರವನ್ನು ಒಗ್ಗೂಡಿಸಲು ನಾವು ತ್ಯಾಗ ಮಾಡಬೇಕಾಗುತ್ತದೆ. ನಿಮಗೆ ಆ ಧೈರ್ಯವಿಲ್ಲ. ಇಂದಿರಾ ಗಾಂಧಿಯವರು ತನ್ನ ಪ್ರಾಣದ ಅಪಾಯದ ಬಗ್ಗೆ ಅರಿವಿತ್ತು. ಇಂದಿರಾಜಿ ಒಡಿಶಾದಲ್ಲಿ ತಮ್ಮ ಕೊನೆಯ ಭಾಷಣದಲ್ಲಿ ತಮ್ಮ ಜೀವಕ್ಕೆ ಅಪಾಯದ ಬಗ್ಗೆ ಸೂಚಿಸಿದ್ದರು. ಆಕೆ ಮಾಡಿದ ತಪ್ಪೇನು, ಯಾರನ್ನಾದರೂ ಲೂಟಿ ಮಾಡಿದ್ದೀರಾ? ಇಲ್ಲ, ಅವರು ದೇಶವನ್ನು ಒಗ್ಗೂಡಿಸಲು ಶ್ರಮಿಸುತ್ತಿದ್ದರು. ಆದರೆ ಕೆಲವರು ಅವರನ್ನು ಕೊಂದರು. ರಾಜೀವ್ ಗಾಂಧಿಯವರು ತಮ್ಮ ತಾಯಿಯ ಹಾದಿಯಲ್ಲೇ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ್ದಾರೆ ಎಂದು ಖರ್ಗೆ ಹೇಳಿದ್ದಾರೆ.

ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಎನ್‌ಡಿಎಗೆ ಮರಳಿರುವುದು ಚುನಾವಣೆಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಒಬ್ಬ ವ್ಯಕ್ತಿ ಮಹಾಘಟಬಂಧನ್ ತ್ಯಜಿಸುವುದರಿಂದ ನಮ್ಮನ್ನು  ದುರ್ಬಲಗೊಳಿಸುವುದಿಲ್ಲ, ನಾವು ಬಿಜೆಪಿಯನ್ನು ಸೋಲಿಸುತ್ತೇವೆ. ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ಮತ್ತು ಪ್ರತಿಯೊಬ್ಬ ಭಾರತೀಯರ ಬ್ಯಾಂಕ್ ಖಾತೆಯಲ್ಲಿ 15 ಲಕ್ಷ ಹಣವನ್ನು ಭರವಸೆ ನೀಡುವ ಮೂಲಕ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ. ಅವರು ಪ್ರಧಾನಿ ಮೋದಿಯನ್ನು ಸಾಮಾನ್ಯ ಸುಳ್ಳುಗಾರ ಎಂದು ಬಣ್ಣಿಸಿದ್ದಾರೆ.

ಮೋದಿ ಗುಜರಾತ್‌ನ ಮುಖ್ಯಮಂತ್ರಿಯಾಗಿ ಈಗ ಪ್ರಧಾನಿಯಾಗಿದ್ದೀರಿ ಏಕೆಂದರೆ ಕಾಂಗ್ರೆಸ್ ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಎತ್ತಿ  ಹಿಡಿದಿದೆ. ಆದರೆ ನೀವು ಈಗ  ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೂಲಗಳನ್ನು ನಾಶ ಮಾಡುತ್ತಿದ್ದೀರಿ, ಸಂವಿಧಾನವನ್ನು ಸರಿಯಾಗಿ ಜಾರಿಗೊಳಿಸುವ ಮೂಲಕ ಮಹಿಳೆಯರು, ದಲಿತರು, ಬುಡಕಟ್ಟು ಜನಾಂಗದವರು ಮತ್ತು ದೀನದಲಿತರಿಗೆ ಹಕ್ಕುಗಳನ್ನು ಕಾಂಗ್ರೆಸ್ ನೀಡಿದೆ ಎಂದು ಅವರು ಹೇಳಿದ್ದಾರೆ.

ಒಡಿಶಾದ ಆಡಳಿತಾರೂಢ ಬಿಜೆಡಿ ಮತ್ತು ಪ್ರತಿಪಕ್ಷ ಬಿಜೆಪಿ ಪ್ರೇಮ ವಿವಾಹವನ್ನು ಮಾಡಿಕೊಂಡಿವೆ ಎಂದು ಹೇಳಿರುವ ಖರ್ಗೆ, ಎರಡು ಪಕ್ಷಗಳು ಒಡಿಶಾವನ್ನು ಲೂಟಿ ಮಾಡಿ ರಾಜ್ಯದ ಬಡ ಜನರನ್ನು ದಬ್ಬಾಳಿಕೆ ಮಾಡುತ್ತಿವೆ. ಬಿಜೆಪಿ ಮತ್ತು ಬಿಜೆಡಿ ಕೇವಲ ಶ್ರೀಮಂತರ ಜೊತೆಗಿದ್ದರೆ, ಕಾಂಗ್ರೆಸ್ ಯಾವಾಗಲೂ ಬಡವರ ಪರವಾಗಿ ನಿಲ್ಲುತ್ತದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಮೈಸೂರು: ಅಂಬೇಡ್ಕರ್‌ ನಾಮಫಲಕ ಅಳವಡಿಕೆ ವಿಚಾರದಲ್ಲಿ ಘರ್ಷಣೆ: 30ಕ್ಕೂ ಅಧಿಕ ಮಂದಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...