Homeಮುಖಪುಟ2024ರ ಚುನಾವಣೆ ಪ್ರಜಾಪ್ರಭುತ್ವ ಉಳಿಸಲು ಜನರಿಗಿರುವ ಕೊನೆಯ ಅವಕಾಶ: ಮಲ್ಲಿಕಾರ್ಜುನ ಖರ್ಗೆ

2024ರ ಚುನಾವಣೆ ಪ್ರಜಾಪ್ರಭುತ್ವ ಉಳಿಸಲು ಜನರಿಗಿರುವ ಕೊನೆಯ ಅವಕಾಶ: ಮಲ್ಲಿಕಾರ್ಜುನ ಖರ್ಗೆ

- Advertisement -
- Advertisement -

2024ರ ಲೋಕಸಭೆ ಚುನಾವಣೆ ಪ್ರಜಾಪ್ರಭುತ್ವವನ್ನು ಉಳಿಸಲು ಜನರಿಗೆ ಕೊನೆಯ ಅವಕಾಶವಾಗಿದೆ, ಮುಂಬರುವ ಚುನಾವಣೆಯಲ್ಲಿ ಎನ್‌ಡಿಎ ಗೆದ್ದರೆ ಪ್ರಧಾನಿ ನರೇಂದ್ರ ಮೋದಿ ಸರ್ವಾಧಿಕಾರಕ್ಕೆ ಆದ್ಯತೆ ನೀಡುವ ಸಾಧ್ಯತೆ ಇದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಬಿಜೆಪಿ ಮತ್ತು ಅದರ ಸಿದ್ಧಾಂತವಾದಿ ಆರೆಸ್ಸೆಸ್‌ ವಿಷ ಇದ್ದಂತೆ ಜನರು ಅದರಿಂದ ದೂರವಿರಬೇಕು ಎಂದು ಹೇಳಿದ ಮಲ್ಲಿಕಾರ್ಜುನ ಖರ್ಗೆ, ಭಾರತದಲ್ಲಿ ಪ್ರಜಾಪ್ರಭುತ್ವವನ್ನು ಉಳಿಸಲು ಇದು ಜನರಿಗೆ ಇರುವ ಕೊನೆಯ ಅವಕಾಶವಾಗಿದೆ. ನರೇಂದ್ರ ಮೋದಿ ಮತ್ತೊಂದು ಚುನಾವಣೆಯಲ್ಲಿ ಗೆದ್ದರೆ, ದೇಶದಲ್ಲಿ ಸರ್ವಾಧಿಕಾರ ನೆಲೆಯೂರಲಿದೆ. ರಷ್ಯಾದಲ್ಲಿ ಪುಟಿನ್ ಆಳ್ವಿಕೆ ನಡೆಸಿದಂತೆ ಬಿಜೆಪಿ ಭಾರತವನ್ನು ಆಳ್ವಿಕೆ ನಡೆಸಲಿದೆ ಎಂದು  ಹೇಳಿದ್ದಾರೆ.

ಬಿಜೆಪಿ ಮತ್ತು ಆರೆಸ್ಸೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಖರ್ಗೆ, ಪ್ರಧಾನಿ ಮೋದಿ ನೇತೃತ್ವದ ಪ್ರಸ್ತುತ ಸರ್ಕಾರವು, ಪ್ರತಿಪಕ್ಷಗಳ ನಾಯಕರನ್ನು ಬೆದರಿಸುವ ಮೂಲಕ ಆಳ್ವಿಕೆ ನಡೆಸುತ್ತಿದೆ ಎಂದು ಹೇಳಿದ್ದಾರೆ.

ನಮ್ಮ ನಾಯಕರಿಗೆ ಇಡಿ ಮತ್ತು ಆದಾಯ ತೆರಿಗೆ ಅಧಿಕಾರಿಗಲ ಮೂಲಕ ನೋಟಿಸ್ ಜಾರಿ ಮಾಡಲಾಗುತ್ತಿದ್ದು, ಇಡಿ ಮತ್ತು ಆದಾಯ ತೆರಿಗೆ ರಾಜಕೀಯ ವಿರೋಧಿಗಳನ್ನು ಮೆಟ್ಟಿ ನಿಲ್ಲುವ ಅಸ್ತ್ರಗಳಾಗಿ ಮಾರ್ಪಟ್ಟಿವೆ. ಬಿಜೆಪಿ ಮತ್ತು ಆರೆಸ್ಸೆಸ್ ಸಿದ್ಧಾಂತಗಳ ಬಗ್ಗೆ ಜನತೆ ಜಾಗೃತರಾಗಿರಬೇಕು. ಬಿಜೆಪಿ ಮತ್ತು ಆರೆಸ್ಸೆಸ್‌ ಸಿದ್ಧಾಂತಗಳನ್ನು ವಿರೋಧಿಸಿದರೆ ಪಕ್ಷ, ಮೈತ್ರಿ ತೊರೆಯಲು ನಾಯಕರಿಗೆ ಬೆದರಿಕೆ ಹಾಕಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಬಿಜೆಪಿ ಮತ್ತು ಆರೆಸ್ಸೆಸ್‌ನ್ನು ವಿರೋಧಿಸುತ್ತಿರುವ ರಾಹುಲ್ ಗಾಂಧಿಗೆ ಪದೇ ಪದೇ ಬೆದರಿಕೆ ಹಾಕಲಾಗುತ್ತಿದೆ. ಆದರೆ ರಾಹುಲ್ ಗಾಂಧಿ ಅವರ ಒತ್ತಡಕ್ಕೆ ಒಳಗಾಗಲಿಲ್ಲ ಮತ್ತು ರಾಷ್ಟ್ರವನ್ನು ವಿಭಜಿಸಲು ಹೊರಟಿರುವ ಇಂತಹ ಶಕ್ತಿಗಳ ವಿರುದ್ಧ ಹೋರಾಟವನ್ನು ಮುಂದುವರೆಸಿದ್ದಾರೆ.  ಇಂದಿಗೂ ಮಣಿಪುರದಲ್ಲಿ ಜನರ ಹತ್ಯೆ, ಮಹಿಳೆಯರ ಮೇಲೆ ಅತ್ಯಾಚಾರ, ನೂರಾರು ಮನೆಗಳು, ಕಾರುಗಳಿಗೆ ಬೆಂಕಿ ಹಚ್ಚಲಾಗುತ್ತಿದೆ. ಮೋದಿಜೀ ಎಲ್ಲಿದ್ದಾರೆ, ಬಿಜೆಪಿ ಎಲ್ಲಿದೆ? ಎಂದು ಖರ್ಗೆ ಪ್ರಶ್ನಿಸಿದ್ದಾರೆ.

ಮಣಿಪುರ ಮತ್ತು ನಾಗಾಲ್ಯಾಂಡ್‌ಗೆ ಹೋಗಿ ಅಲ್ಲಿನ ಜನರಿಗೆ ನಿಮ್ಮ ಮುಖವನ್ನು ತೋರಿಸಿ, ಶಾಂತಿಯನ್ನು ಕಾಪಾಡುವುದು ಎಷ್ಟು ಕಷ್ಟ ಎಂದು ನಿಮಗೆ ಅರ್ಥವಾಗುತ್ತದೆ. ರಾಷ್ಟ್ರವನ್ನು ಒಗ್ಗೂಡಿಸಲು ನಾವು ತ್ಯಾಗ ಮಾಡಬೇಕಾಗುತ್ತದೆ. ನಿಮಗೆ ಆ ಧೈರ್ಯವಿಲ್ಲ. ಇಂದಿರಾ ಗಾಂಧಿಯವರು ತನ್ನ ಪ್ರಾಣದ ಅಪಾಯದ ಬಗ್ಗೆ ಅರಿವಿತ್ತು. ಇಂದಿರಾಜಿ ಒಡಿಶಾದಲ್ಲಿ ತಮ್ಮ ಕೊನೆಯ ಭಾಷಣದಲ್ಲಿ ತಮ್ಮ ಜೀವಕ್ಕೆ ಅಪಾಯದ ಬಗ್ಗೆ ಸೂಚಿಸಿದ್ದರು. ಆಕೆ ಮಾಡಿದ ತಪ್ಪೇನು, ಯಾರನ್ನಾದರೂ ಲೂಟಿ ಮಾಡಿದ್ದೀರಾ? ಇಲ್ಲ, ಅವರು ದೇಶವನ್ನು ಒಗ್ಗೂಡಿಸಲು ಶ್ರಮಿಸುತ್ತಿದ್ದರು. ಆದರೆ ಕೆಲವರು ಅವರನ್ನು ಕೊಂದರು. ರಾಜೀವ್ ಗಾಂಧಿಯವರು ತಮ್ಮ ತಾಯಿಯ ಹಾದಿಯಲ್ಲೇ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ್ದಾರೆ ಎಂದು ಖರ್ಗೆ ಹೇಳಿದ್ದಾರೆ.

ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಎನ್‌ಡಿಎಗೆ ಮರಳಿರುವುದು ಚುನಾವಣೆಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಒಬ್ಬ ವ್ಯಕ್ತಿ ಮಹಾಘಟಬಂಧನ್ ತ್ಯಜಿಸುವುದರಿಂದ ನಮ್ಮನ್ನು  ದುರ್ಬಲಗೊಳಿಸುವುದಿಲ್ಲ, ನಾವು ಬಿಜೆಪಿಯನ್ನು ಸೋಲಿಸುತ್ತೇವೆ. ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ಮತ್ತು ಪ್ರತಿಯೊಬ್ಬ ಭಾರತೀಯರ ಬ್ಯಾಂಕ್ ಖಾತೆಯಲ್ಲಿ 15 ಲಕ್ಷ ಹಣವನ್ನು ಭರವಸೆ ನೀಡುವ ಮೂಲಕ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ. ಅವರು ಪ್ರಧಾನಿ ಮೋದಿಯನ್ನು ಸಾಮಾನ್ಯ ಸುಳ್ಳುಗಾರ ಎಂದು ಬಣ್ಣಿಸಿದ್ದಾರೆ.

ಮೋದಿ ಗುಜರಾತ್‌ನ ಮುಖ್ಯಮಂತ್ರಿಯಾಗಿ ಈಗ ಪ್ರಧಾನಿಯಾಗಿದ್ದೀರಿ ಏಕೆಂದರೆ ಕಾಂಗ್ರೆಸ್ ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಎತ್ತಿ  ಹಿಡಿದಿದೆ. ಆದರೆ ನೀವು ಈಗ  ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೂಲಗಳನ್ನು ನಾಶ ಮಾಡುತ್ತಿದ್ದೀರಿ, ಸಂವಿಧಾನವನ್ನು ಸರಿಯಾಗಿ ಜಾರಿಗೊಳಿಸುವ ಮೂಲಕ ಮಹಿಳೆಯರು, ದಲಿತರು, ಬುಡಕಟ್ಟು ಜನಾಂಗದವರು ಮತ್ತು ದೀನದಲಿತರಿಗೆ ಹಕ್ಕುಗಳನ್ನು ಕಾಂಗ್ರೆಸ್ ನೀಡಿದೆ ಎಂದು ಅವರು ಹೇಳಿದ್ದಾರೆ.

ಒಡಿಶಾದ ಆಡಳಿತಾರೂಢ ಬಿಜೆಡಿ ಮತ್ತು ಪ್ರತಿಪಕ್ಷ ಬಿಜೆಪಿ ಪ್ರೇಮ ವಿವಾಹವನ್ನು ಮಾಡಿಕೊಂಡಿವೆ ಎಂದು ಹೇಳಿರುವ ಖರ್ಗೆ, ಎರಡು ಪಕ್ಷಗಳು ಒಡಿಶಾವನ್ನು ಲೂಟಿ ಮಾಡಿ ರಾಜ್ಯದ ಬಡ ಜನರನ್ನು ದಬ್ಬಾಳಿಕೆ ಮಾಡುತ್ತಿವೆ. ಬಿಜೆಪಿ ಮತ್ತು ಬಿಜೆಡಿ ಕೇವಲ ಶ್ರೀಮಂತರ ಜೊತೆಗಿದ್ದರೆ, ಕಾಂಗ್ರೆಸ್ ಯಾವಾಗಲೂ ಬಡವರ ಪರವಾಗಿ ನಿಲ್ಲುತ್ತದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಮೈಸೂರು: ಅಂಬೇಡ್ಕರ್‌ ನಾಮಫಲಕ ಅಳವಡಿಕೆ ವಿಚಾರದಲ್ಲಿ ಘರ್ಷಣೆ: 30ಕ್ಕೂ ಅಧಿಕ ಮಂದಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...