Homeಮುಖಪುಟಕೋಮುವಾದ, ಫ್ಯಾಸಿಸಂ ವಿರುದ್ಧ ಸಾಂಸ್ಕೃತಿಕ ವಲಯದ ಮಧ್ಯಸ್ಥಿಕೆ ಅತ್ಯಗತ್ಯ; ಪಿಣರಾಯಿ ವಿಜಯನ್

ಕೋಮುವಾದ, ಫ್ಯಾಸಿಸಂ ವಿರುದ್ಧ ಸಾಂಸ್ಕೃತಿಕ ವಲಯದ ಮಧ್ಯಸ್ಥಿಕೆ ಅತ್ಯಗತ್ಯ; ಪಿಣರಾಯಿ ವಿಜಯನ್

- Advertisement -
- Advertisement -

ಕೇರಳವು ಧಾರ್ಮಿಕ ಸಾಮರಸ್ಯ, ಸಹಬಾಳ್ವೆ ಮತ್ತು ಸಹೋದರತ್ವದ ಕೊನೆಯ ಕೇಂದ್ರವಾಗಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದು, ದೇಶದಲ್ಲಿ ಕೋಮುವಾದ ಮತ್ತು ಫ್ಯಾಸಿಸಂ ವಿರುದ್ಧ ಹೋರಾಡಲು ಸಾಂಸ್ಕೃತಿಕ ವಲಯದ ನಾಯಕರನ್ನು ಒತ್ತಾಯಿಸಿದ್ದಾರೆ.

ಸರಕಾರದ ಸಾರ್ವಜನಿಕ ಸಂಪರ್ಕ ಕಾರ್ಯಕ್ರಮ ʼನವ ಕೇರಳ ಸದಸ್ʼ ನ ಭಾಗವಾಗಿ ರಾಜ್ಯದ ಸಾಂಸ್ಕೃತಿಕ ಕ್ಷೇತ್ರದ ಜನರೊಂದಿಗೆ ಮುಖಾಮುಖಿ ಸಂವಾದದಲ್ಲಿ ಮಾತನಾಡಿದ ಸಿಎಂ ಪಿಣರಾಯ್‌ ವಿಜಯನ್, ದೇಶದ ಸಾಂಸ್ಕೃತಿಕ ಇತಿಹಾಸ ವೈವಿಧ್ಯತೆಯಿಂದ ಕೂಡಿದೆ. ಏಕರೂಪತೆಯ ಸಂಸ್ಕೃತಿಯನ್ನು ಹೇರಿದಾಗ  ಪ್ರಜಾಪ್ರಭುತ್ವವು ಫ್ಯಾಸಿಸಂಗೆ ಪರಿವರ್ತನೆಯಾಗುತ್ತದೆ ಎಂದು ಹೇಳಿದ್ದಾರೆ.

ಒಂದು ಭಾಷೆ, ಒಂದು ಸಂಸ್ಕೃತಿ, ಒಂದು ಧರ್ಮದಂತಹ ಏಕರೂಪತೆಯ ಸಂಸ್ಕೃತಿಯನ್ನು ಹೇರಿದಾಗ ಪ್ರಜಾಪ್ರಭುತ್ವವು ಫ್ಯಾಸಿಸಂಗೆ ಪರಿವರ್ತನೆಯಾಗುತ್ತದೆ. ಆದ್ದರಿಂದ ಸಾಂಸ್ಕೃತಿಕ ವಲಯದಲ್ಲಿ ಒಕ್ಕೂಟದ ಮನೋಭಾವವನ್ನು ರಕ್ಷಿಸಬೇಕು ಎಂದು ಹೇಳಿದರು.

ಕೇರಳವು ಧಾರ್ಮಿಕ ಸಾಮರಸ್ಯ, ಸಹಬಾಳ್ವೆ ಮತ್ತು ಸಹೋದರತ್ವದ ಕೊನೆಯ ಕೇಂದ್ರವಾಗಿದೆ. ಅದನ್ನು ಕಳೆದುಕೊಳ್ಳಬಾರದು. ಕೇರಳದ ಸಹಜ ಸಂಸ್ಕೃತಿಯನ್ನು ಉಳಿಸಿಕೊಂಡು ಭಾರತ ಎಂಬ ಭಾವನೆಯನ್ನು ಬಲಪಡಿಸಲು ನಾವು ಶಕ್ತರಾಗಿರಬೇಕು. ಕೇರಳದ ಭವಿಷ್ಯದ ಕುರಿತಾದ ಚರ್ಚೆಯ ಸಂದರ್ಭದಲ್ಲಿ ಸಾಂಸ್ಕೃತಿಕ ಕ್ಷೇತ್ರದವರ ಅಭಿಪ್ರಾಯಗಳನ್ನು ಅತ್ಯಂತ ಮಹತ್ವದಿಂದ ಪರಿಗಣಿಸಬೇಕು. ಸಮಕಾಲೀನ ಭಾರತದಲ್ಲಿ ನೆಲೆಯೂರುತ್ತಿರುವ ವಿನಾಶಕಾರಿ ಕೋಮುವಾದವನ್ನು ಎದುರಿಸಲು ಸಾಂಸ್ಕೃತಿಕ ವಲಯದ ಪರಿಣಾಮಕಾರಿ ಮಧ್ಯಸ್ಥಿಕೆ ಅತ್ಯಗತ್ಯ ಎಂದು ಪಿಣರಾಯ್‌ ವಿಜಯನ್ ಹೇಳಿದ್ದಾರೆ.

ರಾಜಕೀಯ ಮತ್ತು ಸಾಂಸ್ಕೃತಿಕ ಭ್ರಾತೃತ್ವವೇ ಕೇರಳವನ್ನು ಇಂದಿನ ಸ್ಥಿತಿಗೆ ತಂದಿದೆ. ಕಲೆ ಮತ್ತು ಕಲಾವಿದ ಉಳಿಯಲು ಬಯಸಿದರೆ, ಬರಹಗಳು ಮತ್ತು ಬರಹಗಾರರು ಉಳಿಯಬೇಕಾದರೆ, ನಾವು ಜನರ ನಡುವಿನ ಏಕತೆಯ ಅಡಿಪಾಯವನ್ನು ನಾಶಪಡಿಸುವ ಶಕ್ತಿಗಳ ವಿರುದ್ಧ ಹೋರಾಡಬೇಕಾಗಿದೆ. ಫ್ಯಾಸಿಸಂ ನಮ್ಮ ಮನೆ ಬಾಗಿಲಿಗೆ ಬಂದ ಮೇಲೆ ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಮಾತನಾಡುವುದರಲ್ಲಿ ಅರ್ಥವಿಲ್ಲ. ಕೇರಳವು ಎಡಪಂಥೀಯ ಮನಸ್ಥಿತಿಯನ್ನು ಹೊಂದಿದೆ. ಇತರ ರಾಜ್ಯಗಳಿಗಿಂತ ಉತ್ತಮವಾದ ಅಭಿವೃದ್ಧಿ ಮತ್ತು ಉನ್ನತ ಜೀವನಮಟ್ಟಕ್ಕೆ ಕಾರಣವಾಗಿದೆ ಎಂದು ವಿಜಯನ್ ಹೇಳಿದ್ದು, ರಾಜ್ಯದಲ್ಲಿ ಕಲೆ ಮತ್ತು ಸಂಸ್ಕೃತಿಯನ್ನು ರಕ್ಷಿಸಲು ಮತ್ತು ಉತ್ತೇಜಿಸಲು ಸರ್ಕಾರ ಕೈಗೊಂಡಿರುವ ವಿವಿಧ ಕ್ರಮಗಳ ಬಗ್ಗೆ ತಮ್ಮ ಹೇಳಿಕೆಯಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನು ಓದಿ: ‘ಸಂವಿಧಾನ, ರಾಷ್ಟ್ರೀಯ ಏಕತಾ ಸಮಾವೇಶ’ಕ್ಕೆ ಕರ್ನಾಟಕ ಸರಕಾರ ಆಹ್ವಾನಿಸಿದ್ದ ಯುಕೆಯ ಪ್ರಾಧ್ಯಾಪಕಿಗೆ ಭಾರತಕ್ಕೆ ಪ್ರವೇಶ ನಿರಾಕರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...