Homeಮುಖಪುಟವಿಶ್ವಾಸಾರ್ಹರ ಸಾಲಿನಲ್ಲಿ ವೈದ್ಯರಿಗೆ ಮೊದಲ ಸ್ಥಾನ: ಸ್ಟ್ಯಾಟಿಸ್ಟಾ ಸರ್ವೇ

ವಿಶ್ವಾಸಾರ್ಹರ ಸಾಲಿನಲ್ಲಿ ವೈದ್ಯರಿಗೆ ಮೊದಲ ಸ್ಥಾನ: ಸ್ಟ್ಯಾಟಿಸ್ಟಾ ಸರ್ವೇ

- Advertisement -
- Advertisement -

ಜಾಗತಿಕವಾಗಿ ಯಾವ ಗುಂಪಿನ ಜನರು ಹೆಚ್ಚು ವಿಶ್ವಾಸಾರ್ಹರು ಹಾಗೂ ಕಡಿಮೆ ವಿಶ್ವಾಸಾರ್ಹರು ಎಂದು ಸರ್ವೇ ಮಾಡಿರುವ ಅಂತಾರಾಷ್ಟ್ರೀಯ ಡೇಟಾ ಸಂಸ್ಥೆಯಾದ ‘ಸ್ಟ್ಯಾಟಿಸ್ಟಾ’ ವರದಿಯನ್ನು ಬಹಿರಂಗಪಡಿಸಿದೆ.

www.statista.comನಲ್ಲಿ ವರದಿ ಬಿಡುಗಡೆ ಮಾಡಲಾಗಿದ್ದು, ಅತಿಹೆಚ್ಚು ವಿಶ್ವಾಸಾರ್ಹ ಮನುಷ್ಯರೆಂದರೆ ವೈದ್ಯರು, ಅತ್ಯಂತ ಕಡಿಮೆ ವಿಶ್ವಾಸಾರ್ಹರೆಂದರೆ ರಾಜಕಾರಣಿಗಳು ಎಂದು ವರದಿ ಹೇಳಿದೆ. ಡೇಟಾ ಜರ್ನಲಿಸ್ಟ್‌ ಮಾರ್ಟಿನ್ ಆರ್ಮ್‌ಸ್ಟ್ರಾಂಗ್ ವರದಿಯನ್ನು ಬರೆದಿದ್ದಾರೆ.

ವೈದ್ಯಕೀಯ ವೃತ್ತಿಪರರು ನಿಜವಾಗಿಯೂ ವಿಶ್ವದ ಅತ್ಯಂತ ವಿಶ್ವಾಸಾರ್ಹ ಗುಂಪು. ಒಟ್ಟು 64 ಪ್ರತಿಶತದಷ್ಟು ಜನರು ವೈದ್ಯರು ನಂಬಲರ್ಹರು ಎಂದು ಭಾವಿಸುತ್ತಾರೆ, ಆದರೆ ಕೇವಲ 10 ಪ್ರತಿಶತದಷ್ಟು ಜನರು ಅವರನ್ನು ನಂಬುವುದಿಲ್ಲ. 54 ಪ್ರತಿಶತದಷ್ಟು ನಿವ್ವಳ ನಂಬಿಕೆಯನ್ನು ವೈದ್ಯರ ಕುರಿತು ಕಾಣಬಹುದು. ವಿಜ್ಞಾನಿಗಳು 51 ಪ್ರತಿಶತದಷ್ಟು ನಿವ್ವಳ ವಿಶ್ವಾಸಾರ್ಹತೆ ಹೊಂದಿದ್ದರೆ, ಶಿಕ್ಷಕರು 43 ಪ್ರತಿಶತದೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ.

-52 ಪ್ರತಿಶತದಷ್ಟು ನಿವ್ವಳ ವಿಶ್ವಾಸಾರ್ಹತೆಯನ್ನು ರಾಜಕಾರಣಿಗಳು ಹೊಂದಿದ್ದು, ಅತ್ಯಂತ ಕಡಿಮೆ ವಿಶ್ವಾಸಾರ್ಹರಾಗಿ ಹೊಮ್ಮಿದ್ದಾರೆ. “ಭಾರತ ಹಾಗೂ ಮಲೇಷಿಯದಲ್ಲಿ ಅತಿಹೆಚ್ಚು ಜನರು ರಾಜಕಾರಣಿಗಳನ್ನು ನಂಬುತ್ತಾರೆ” ಎಂದು ಸಮೀಕ್ಷೆ ಉಲ್ಲೇಖಿಸಿದೆ.

ರಾಜಕಾರಣಿಗಳ ಮೇಲೆ ಶೇ. 18ರಷ್ಟು ನಂಬಿಕೆಯನ್ನು ಮಲೇಷಿಯನ್ನರು, ಶೇ. 19ರಷ್ಟು ನಂಬಿಕೆಯನ್ನು ಭಾರತೀಯರು ಹೊಂದಿದ್ದಾರೆ. ಅರ್ಜೆಂಟೀನಾ ಹಾಗೂ ಕೊಲಂಬಿಯ ರಾಷ್ಟ್ರಗಳಲ್ಲಿ ರಾಜಕಾರಣಿಗಳನ್ನು ಜನರು ಅತ್ಯಂತ ಕಡಿಮೆ ನಂಬುತ್ತವೆ. ಕ್ರಮವಾಗಿ – 3 ಮತ್ತು 4ರಷ್ಟು ನಂಬಿಕೆಯನ್ನು ಈ ರಾಷ್ಟ್ರಗಳಲ್ಲಿ ಕಾಣಬಹುದು ಎಂದು ಸಮೀಕ್ಷೆ ತಿಳಿಸಿದೆ.

ಎಲ್ಲಾ ವರ್ಗಗಳ ಪ್ರತಿಕ್ರಿಯೆಗಳನ್ನು ಪರಿಗಣನೆಗೆ ತೆಗೆದುಕೊಂಡಾಗ ಮಲೇಷ್ಯಾ ಮತ್ತು ಭಾರತವು ವಾಸ್ತವವಾಗಿ ಸಮೀಕ್ಷೆಯಲ್ಲಿ ಅತಿ ಹೆಚ್ಚು ವಿಶ್ವಾಸವನ್ನು ಹೊಂದಿರುವ ರಾಷ್ಟ್ರಗಳಾಗಿವೆ. ಕೊಲಂಬಿಯಾ ಮತ್ತು ಚಿಲಿ ರಾಷ್ಟ್ರಗಳು ಸಮೀಕ್ಷೆಗಳ ಕುರಿತು ಅತ್ಯಂತ ಕಡಿಮೆ ವಿಶ್ವಾಸ ಹೊಂದಿವೆ.

ಹೆಚ್ಚು ವಿಶ್ವಾಸಾರ್ಹರ ಸಾಲಿನಲ್ಲಿ ಮೊದಲ ಸ್ಥಾನದಲ್ಲಿ ವೈದ್ಯರು (ಶೇ.54 ನಿವ್ವಳ ಅಂಕ), ಎರಡನೇಯವರಾಗಿ ವಿಜ್ಞಾನಿಗಳು (ಶೇ.51), ಮೂರನೇ ಸ್ಥಾನದಲ್ಲಿ ಶಿಕ್ಷಕರು (ಶೇ.43), ನಾಲ್ಕನೇ ಸ್ಥಾನದಲ್ಲಿ ಸಾಮಾನ್ಯ ಜನರು (ಶೇ. 27), ಐದನೇ ಸ್ಥಾನದಲ್ಲಿ ಸೇನಾ ಬಲ (ಶೇ. 22) ಇರುವುದನ್ನು ಕಾಣಬಹುದು.

ಕಡಿಮೆ ವಿಶ್ವಾಸಾರ್ಹರ ಸಾಲಿನಲ್ಲಿ ತಕ್ಕಮಟ್ಟಿಗೆ ನಂಬಬಹುದಾದವರಲ್ಲಿ ಪತ್ರಕರ್ತರು ಮೊದಲಿದ್ದಾರೆ. ಶೇ. -10ರಷ್ಟು ಅಂಕಗಳನ್ನು ಪತ್ರಕರ್ತರಿಗೆ ನೀಡಲಾಗಿದೆ. ನಂತರದಲ್ಲಿ ಬ್ಯಾಂಕರ್ಸ್‌ (ಶೇ.-11), ಜಾಹೀರಾತುದಾರರು (ಶೇ. -22), ಸರ್ಕಾರಿ ಸಚಿವರು (ಶೇ.-39), ಸಾಮಾನ್ಯ ರಾಜಕಾರಣಿಗಳು (ಶೇ. -52) ಇದ್ದಾರೆ.


ಇದನ್ನೂ ಓದಿರಿ: ಚುನಾವಣಾ ಪೂರ್ವ ಸಮೀಕ್ಷೆಗಳನ್ನು ನಿಷೇಧಿಸಲು ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...