Homeಮುಖಪುಟವಿಶ್ವಾಸಾರ್ಹರ ಸಾಲಿನಲ್ಲಿ ವೈದ್ಯರಿಗೆ ಮೊದಲ ಸ್ಥಾನ: ಸ್ಟ್ಯಾಟಿಸ್ಟಾ ಸರ್ವೇ

ವಿಶ್ವಾಸಾರ್ಹರ ಸಾಲಿನಲ್ಲಿ ವೈದ್ಯರಿಗೆ ಮೊದಲ ಸ್ಥಾನ: ಸ್ಟ್ಯಾಟಿಸ್ಟಾ ಸರ್ವೇ

- Advertisement -
- Advertisement -

ಜಾಗತಿಕವಾಗಿ ಯಾವ ಗುಂಪಿನ ಜನರು ಹೆಚ್ಚು ವಿಶ್ವಾಸಾರ್ಹರು ಹಾಗೂ ಕಡಿಮೆ ವಿಶ್ವಾಸಾರ್ಹರು ಎಂದು ಸರ್ವೇ ಮಾಡಿರುವ ಅಂತಾರಾಷ್ಟ್ರೀಯ ಡೇಟಾ ಸಂಸ್ಥೆಯಾದ ‘ಸ್ಟ್ಯಾಟಿಸ್ಟಾ’ ವರದಿಯನ್ನು ಬಹಿರಂಗಪಡಿಸಿದೆ.

www.statista.comನಲ್ಲಿ ವರದಿ ಬಿಡುಗಡೆ ಮಾಡಲಾಗಿದ್ದು, ಅತಿಹೆಚ್ಚು ವಿಶ್ವಾಸಾರ್ಹ ಮನುಷ್ಯರೆಂದರೆ ವೈದ್ಯರು, ಅತ್ಯಂತ ಕಡಿಮೆ ವಿಶ್ವಾಸಾರ್ಹರೆಂದರೆ ರಾಜಕಾರಣಿಗಳು ಎಂದು ವರದಿ ಹೇಳಿದೆ. ಡೇಟಾ ಜರ್ನಲಿಸ್ಟ್‌ ಮಾರ್ಟಿನ್ ಆರ್ಮ್‌ಸ್ಟ್ರಾಂಗ್ ವರದಿಯನ್ನು ಬರೆದಿದ್ದಾರೆ.

ವೈದ್ಯಕೀಯ ವೃತ್ತಿಪರರು ನಿಜವಾಗಿಯೂ ವಿಶ್ವದ ಅತ್ಯಂತ ವಿಶ್ವಾಸಾರ್ಹ ಗುಂಪು. ಒಟ್ಟು 64 ಪ್ರತಿಶತದಷ್ಟು ಜನರು ವೈದ್ಯರು ನಂಬಲರ್ಹರು ಎಂದು ಭಾವಿಸುತ್ತಾರೆ, ಆದರೆ ಕೇವಲ 10 ಪ್ರತಿಶತದಷ್ಟು ಜನರು ಅವರನ್ನು ನಂಬುವುದಿಲ್ಲ. 54 ಪ್ರತಿಶತದಷ್ಟು ನಿವ್ವಳ ನಂಬಿಕೆಯನ್ನು ವೈದ್ಯರ ಕುರಿತು ಕಾಣಬಹುದು. ವಿಜ್ಞಾನಿಗಳು 51 ಪ್ರತಿಶತದಷ್ಟು ನಿವ್ವಳ ವಿಶ್ವಾಸಾರ್ಹತೆ ಹೊಂದಿದ್ದರೆ, ಶಿಕ್ಷಕರು 43 ಪ್ರತಿಶತದೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ.

-52 ಪ್ರತಿಶತದಷ್ಟು ನಿವ್ವಳ ವಿಶ್ವಾಸಾರ್ಹತೆಯನ್ನು ರಾಜಕಾರಣಿಗಳು ಹೊಂದಿದ್ದು, ಅತ್ಯಂತ ಕಡಿಮೆ ವಿಶ್ವಾಸಾರ್ಹರಾಗಿ ಹೊಮ್ಮಿದ್ದಾರೆ. “ಭಾರತ ಹಾಗೂ ಮಲೇಷಿಯದಲ್ಲಿ ಅತಿಹೆಚ್ಚು ಜನರು ರಾಜಕಾರಣಿಗಳನ್ನು ನಂಬುತ್ತಾರೆ” ಎಂದು ಸಮೀಕ್ಷೆ ಉಲ್ಲೇಖಿಸಿದೆ.

ರಾಜಕಾರಣಿಗಳ ಮೇಲೆ ಶೇ. 18ರಷ್ಟು ನಂಬಿಕೆಯನ್ನು ಮಲೇಷಿಯನ್ನರು, ಶೇ. 19ರಷ್ಟು ನಂಬಿಕೆಯನ್ನು ಭಾರತೀಯರು ಹೊಂದಿದ್ದಾರೆ. ಅರ್ಜೆಂಟೀನಾ ಹಾಗೂ ಕೊಲಂಬಿಯ ರಾಷ್ಟ್ರಗಳಲ್ಲಿ ರಾಜಕಾರಣಿಗಳನ್ನು ಜನರು ಅತ್ಯಂತ ಕಡಿಮೆ ನಂಬುತ್ತವೆ. ಕ್ರಮವಾಗಿ – 3 ಮತ್ತು 4ರಷ್ಟು ನಂಬಿಕೆಯನ್ನು ಈ ರಾಷ್ಟ್ರಗಳಲ್ಲಿ ಕಾಣಬಹುದು ಎಂದು ಸಮೀಕ್ಷೆ ತಿಳಿಸಿದೆ.

ಎಲ್ಲಾ ವರ್ಗಗಳ ಪ್ರತಿಕ್ರಿಯೆಗಳನ್ನು ಪರಿಗಣನೆಗೆ ತೆಗೆದುಕೊಂಡಾಗ ಮಲೇಷ್ಯಾ ಮತ್ತು ಭಾರತವು ವಾಸ್ತವವಾಗಿ ಸಮೀಕ್ಷೆಯಲ್ಲಿ ಅತಿ ಹೆಚ್ಚು ವಿಶ್ವಾಸವನ್ನು ಹೊಂದಿರುವ ರಾಷ್ಟ್ರಗಳಾಗಿವೆ. ಕೊಲಂಬಿಯಾ ಮತ್ತು ಚಿಲಿ ರಾಷ್ಟ್ರಗಳು ಸಮೀಕ್ಷೆಗಳ ಕುರಿತು ಅತ್ಯಂತ ಕಡಿಮೆ ವಿಶ್ವಾಸ ಹೊಂದಿವೆ.

ಹೆಚ್ಚು ವಿಶ್ವಾಸಾರ್ಹರ ಸಾಲಿನಲ್ಲಿ ಮೊದಲ ಸ್ಥಾನದಲ್ಲಿ ವೈದ್ಯರು (ಶೇ.54 ನಿವ್ವಳ ಅಂಕ), ಎರಡನೇಯವರಾಗಿ ವಿಜ್ಞಾನಿಗಳು (ಶೇ.51), ಮೂರನೇ ಸ್ಥಾನದಲ್ಲಿ ಶಿಕ್ಷಕರು (ಶೇ.43), ನಾಲ್ಕನೇ ಸ್ಥಾನದಲ್ಲಿ ಸಾಮಾನ್ಯ ಜನರು (ಶೇ. 27), ಐದನೇ ಸ್ಥಾನದಲ್ಲಿ ಸೇನಾ ಬಲ (ಶೇ. 22) ಇರುವುದನ್ನು ಕಾಣಬಹುದು.

ಕಡಿಮೆ ವಿಶ್ವಾಸಾರ್ಹರ ಸಾಲಿನಲ್ಲಿ ತಕ್ಕಮಟ್ಟಿಗೆ ನಂಬಬಹುದಾದವರಲ್ಲಿ ಪತ್ರಕರ್ತರು ಮೊದಲಿದ್ದಾರೆ. ಶೇ. -10ರಷ್ಟು ಅಂಕಗಳನ್ನು ಪತ್ರಕರ್ತರಿಗೆ ನೀಡಲಾಗಿದೆ. ನಂತರದಲ್ಲಿ ಬ್ಯಾಂಕರ್ಸ್‌ (ಶೇ.-11), ಜಾಹೀರಾತುದಾರರು (ಶೇ. -22), ಸರ್ಕಾರಿ ಸಚಿವರು (ಶೇ.-39), ಸಾಮಾನ್ಯ ರಾಜಕಾರಣಿಗಳು (ಶೇ. -52) ಇದ್ದಾರೆ.


ಇದನ್ನೂ ಓದಿರಿ: ಚುನಾವಣಾ ಪೂರ್ವ ಸಮೀಕ್ಷೆಗಳನ್ನು ನಿಷೇಧಿಸಲು ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...