Homeಮುಖಪುಟವಿಶ್ವಾಸಾರ್ಹರ ಸಾಲಿನಲ್ಲಿ ವೈದ್ಯರಿಗೆ ಮೊದಲ ಸ್ಥಾನ: ಸ್ಟ್ಯಾಟಿಸ್ಟಾ ಸರ್ವೇ

ವಿಶ್ವಾಸಾರ್ಹರ ಸಾಲಿನಲ್ಲಿ ವೈದ್ಯರಿಗೆ ಮೊದಲ ಸ್ಥಾನ: ಸ್ಟ್ಯಾಟಿಸ್ಟಾ ಸರ್ವೇ

- Advertisement -
- Advertisement -

ಜಾಗತಿಕವಾಗಿ ಯಾವ ಗುಂಪಿನ ಜನರು ಹೆಚ್ಚು ವಿಶ್ವಾಸಾರ್ಹರು ಹಾಗೂ ಕಡಿಮೆ ವಿಶ್ವಾಸಾರ್ಹರು ಎಂದು ಸರ್ವೇ ಮಾಡಿರುವ ಅಂತಾರಾಷ್ಟ್ರೀಯ ಡೇಟಾ ಸಂಸ್ಥೆಯಾದ ‘ಸ್ಟ್ಯಾಟಿಸ್ಟಾ’ ವರದಿಯನ್ನು ಬಹಿರಂಗಪಡಿಸಿದೆ.

www.statista.comನಲ್ಲಿ ವರದಿ ಬಿಡುಗಡೆ ಮಾಡಲಾಗಿದ್ದು, ಅತಿಹೆಚ್ಚು ವಿಶ್ವಾಸಾರ್ಹ ಮನುಷ್ಯರೆಂದರೆ ವೈದ್ಯರು, ಅತ್ಯಂತ ಕಡಿಮೆ ವಿಶ್ವಾಸಾರ್ಹರೆಂದರೆ ರಾಜಕಾರಣಿಗಳು ಎಂದು ವರದಿ ಹೇಳಿದೆ. ಡೇಟಾ ಜರ್ನಲಿಸ್ಟ್‌ ಮಾರ್ಟಿನ್ ಆರ್ಮ್‌ಸ್ಟ್ರಾಂಗ್ ವರದಿಯನ್ನು ಬರೆದಿದ್ದಾರೆ.

ವೈದ್ಯಕೀಯ ವೃತ್ತಿಪರರು ನಿಜವಾಗಿಯೂ ವಿಶ್ವದ ಅತ್ಯಂತ ವಿಶ್ವಾಸಾರ್ಹ ಗುಂಪು. ಒಟ್ಟು 64 ಪ್ರತಿಶತದಷ್ಟು ಜನರು ವೈದ್ಯರು ನಂಬಲರ್ಹರು ಎಂದು ಭಾವಿಸುತ್ತಾರೆ, ಆದರೆ ಕೇವಲ 10 ಪ್ರತಿಶತದಷ್ಟು ಜನರು ಅವರನ್ನು ನಂಬುವುದಿಲ್ಲ. 54 ಪ್ರತಿಶತದಷ್ಟು ನಿವ್ವಳ ನಂಬಿಕೆಯನ್ನು ವೈದ್ಯರ ಕುರಿತು ಕಾಣಬಹುದು. ವಿಜ್ಞಾನಿಗಳು 51 ಪ್ರತಿಶತದಷ್ಟು ನಿವ್ವಳ ವಿಶ್ವಾಸಾರ್ಹತೆ ಹೊಂದಿದ್ದರೆ, ಶಿಕ್ಷಕರು 43 ಪ್ರತಿಶತದೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ.

-52 ಪ್ರತಿಶತದಷ್ಟು ನಿವ್ವಳ ವಿಶ್ವಾಸಾರ್ಹತೆಯನ್ನು ರಾಜಕಾರಣಿಗಳು ಹೊಂದಿದ್ದು, ಅತ್ಯಂತ ಕಡಿಮೆ ವಿಶ್ವಾಸಾರ್ಹರಾಗಿ ಹೊಮ್ಮಿದ್ದಾರೆ. “ಭಾರತ ಹಾಗೂ ಮಲೇಷಿಯದಲ್ಲಿ ಅತಿಹೆಚ್ಚು ಜನರು ರಾಜಕಾರಣಿಗಳನ್ನು ನಂಬುತ್ತಾರೆ” ಎಂದು ಸಮೀಕ್ಷೆ ಉಲ್ಲೇಖಿಸಿದೆ.

ರಾಜಕಾರಣಿಗಳ ಮೇಲೆ ಶೇ. 18ರಷ್ಟು ನಂಬಿಕೆಯನ್ನು ಮಲೇಷಿಯನ್ನರು, ಶೇ. 19ರಷ್ಟು ನಂಬಿಕೆಯನ್ನು ಭಾರತೀಯರು ಹೊಂದಿದ್ದಾರೆ. ಅರ್ಜೆಂಟೀನಾ ಹಾಗೂ ಕೊಲಂಬಿಯ ರಾಷ್ಟ್ರಗಳಲ್ಲಿ ರಾಜಕಾರಣಿಗಳನ್ನು ಜನರು ಅತ್ಯಂತ ಕಡಿಮೆ ನಂಬುತ್ತವೆ. ಕ್ರಮವಾಗಿ – 3 ಮತ್ತು 4ರಷ್ಟು ನಂಬಿಕೆಯನ್ನು ಈ ರಾಷ್ಟ್ರಗಳಲ್ಲಿ ಕಾಣಬಹುದು ಎಂದು ಸಮೀಕ್ಷೆ ತಿಳಿಸಿದೆ.

ಎಲ್ಲಾ ವರ್ಗಗಳ ಪ್ರತಿಕ್ರಿಯೆಗಳನ್ನು ಪರಿಗಣನೆಗೆ ತೆಗೆದುಕೊಂಡಾಗ ಮಲೇಷ್ಯಾ ಮತ್ತು ಭಾರತವು ವಾಸ್ತವವಾಗಿ ಸಮೀಕ್ಷೆಯಲ್ಲಿ ಅತಿ ಹೆಚ್ಚು ವಿಶ್ವಾಸವನ್ನು ಹೊಂದಿರುವ ರಾಷ್ಟ್ರಗಳಾಗಿವೆ. ಕೊಲಂಬಿಯಾ ಮತ್ತು ಚಿಲಿ ರಾಷ್ಟ್ರಗಳು ಸಮೀಕ್ಷೆಗಳ ಕುರಿತು ಅತ್ಯಂತ ಕಡಿಮೆ ವಿಶ್ವಾಸ ಹೊಂದಿವೆ.

ಹೆಚ್ಚು ವಿಶ್ವಾಸಾರ್ಹರ ಸಾಲಿನಲ್ಲಿ ಮೊದಲ ಸ್ಥಾನದಲ್ಲಿ ವೈದ್ಯರು (ಶೇ.54 ನಿವ್ವಳ ಅಂಕ), ಎರಡನೇಯವರಾಗಿ ವಿಜ್ಞಾನಿಗಳು (ಶೇ.51), ಮೂರನೇ ಸ್ಥಾನದಲ್ಲಿ ಶಿಕ್ಷಕರು (ಶೇ.43), ನಾಲ್ಕನೇ ಸ್ಥಾನದಲ್ಲಿ ಸಾಮಾನ್ಯ ಜನರು (ಶೇ. 27), ಐದನೇ ಸ್ಥಾನದಲ್ಲಿ ಸೇನಾ ಬಲ (ಶೇ. 22) ಇರುವುದನ್ನು ಕಾಣಬಹುದು.

ಕಡಿಮೆ ವಿಶ್ವಾಸಾರ್ಹರ ಸಾಲಿನಲ್ಲಿ ತಕ್ಕಮಟ್ಟಿಗೆ ನಂಬಬಹುದಾದವರಲ್ಲಿ ಪತ್ರಕರ್ತರು ಮೊದಲಿದ್ದಾರೆ. ಶೇ. -10ರಷ್ಟು ಅಂಕಗಳನ್ನು ಪತ್ರಕರ್ತರಿಗೆ ನೀಡಲಾಗಿದೆ. ನಂತರದಲ್ಲಿ ಬ್ಯಾಂಕರ್ಸ್‌ (ಶೇ.-11), ಜಾಹೀರಾತುದಾರರು (ಶೇ. -22), ಸರ್ಕಾರಿ ಸಚಿವರು (ಶೇ.-39), ಸಾಮಾನ್ಯ ರಾಜಕಾರಣಿಗಳು (ಶೇ. -52) ಇದ್ದಾರೆ.


ಇದನ್ನೂ ಓದಿರಿ: ಚುನಾವಣಾ ಪೂರ್ವ ಸಮೀಕ್ಷೆಗಳನ್ನು ನಿಷೇಧಿಸಲು ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...