Homeಮುಖಪುಟವಿಶ್ವಾಸಾರ್ಹರ ಸಾಲಿನಲ್ಲಿ ವೈದ್ಯರಿಗೆ ಮೊದಲ ಸ್ಥಾನ: ಸ್ಟ್ಯಾಟಿಸ್ಟಾ ಸರ್ವೇ

ವಿಶ್ವಾಸಾರ್ಹರ ಸಾಲಿನಲ್ಲಿ ವೈದ್ಯರಿಗೆ ಮೊದಲ ಸ್ಥಾನ: ಸ್ಟ್ಯಾಟಿಸ್ಟಾ ಸರ್ವೇ

- Advertisement -
- Advertisement -

ಜಾಗತಿಕವಾಗಿ ಯಾವ ಗುಂಪಿನ ಜನರು ಹೆಚ್ಚು ವಿಶ್ವಾಸಾರ್ಹರು ಹಾಗೂ ಕಡಿಮೆ ವಿಶ್ವಾಸಾರ್ಹರು ಎಂದು ಸರ್ವೇ ಮಾಡಿರುವ ಅಂತಾರಾಷ್ಟ್ರೀಯ ಡೇಟಾ ಸಂಸ್ಥೆಯಾದ ‘ಸ್ಟ್ಯಾಟಿಸ್ಟಾ’ ವರದಿಯನ್ನು ಬಹಿರಂಗಪಡಿಸಿದೆ.

www.statista.comನಲ್ಲಿ ವರದಿ ಬಿಡುಗಡೆ ಮಾಡಲಾಗಿದ್ದು, ಅತಿಹೆಚ್ಚು ವಿಶ್ವಾಸಾರ್ಹ ಮನುಷ್ಯರೆಂದರೆ ವೈದ್ಯರು, ಅತ್ಯಂತ ಕಡಿಮೆ ವಿಶ್ವಾಸಾರ್ಹರೆಂದರೆ ರಾಜಕಾರಣಿಗಳು ಎಂದು ವರದಿ ಹೇಳಿದೆ. ಡೇಟಾ ಜರ್ನಲಿಸ್ಟ್‌ ಮಾರ್ಟಿನ್ ಆರ್ಮ್‌ಸ್ಟ್ರಾಂಗ್ ವರದಿಯನ್ನು ಬರೆದಿದ್ದಾರೆ.

ವೈದ್ಯಕೀಯ ವೃತ್ತಿಪರರು ನಿಜವಾಗಿಯೂ ವಿಶ್ವದ ಅತ್ಯಂತ ವಿಶ್ವಾಸಾರ್ಹ ಗುಂಪು. ಒಟ್ಟು 64 ಪ್ರತಿಶತದಷ್ಟು ಜನರು ವೈದ್ಯರು ನಂಬಲರ್ಹರು ಎಂದು ಭಾವಿಸುತ್ತಾರೆ, ಆದರೆ ಕೇವಲ 10 ಪ್ರತಿಶತದಷ್ಟು ಜನರು ಅವರನ್ನು ನಂಬುವುದಿಲ್ಲ. 54 ಪ್ರತಿಶತದಷ್ಟು ನಿವ್ವಳ ನಂಬಿಕೆಯನ್ನು ವೈದ್ಯರ ಕುರಿತು ಕಾಣಬಹುದು. ವಿಜ್ಞಾನಿಗಳು 51 ಪ್ರತಿಶತದಷ್ಟು ನಿವ್ವಳ ವಿಶ್ವಾಸಾರ್ಹತೆ ಹೊಂದಿದ್ದರೆ, ಶಿಕ್ಷಕರು 43 ಪ್ರತಿಶತದೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ.

-52 ಪ್ರತಿಶತದಷ್ಟು ನಿವ್ವಳ ವಿಶ್ವಾಸಾರ್ಹತೆಯನ್ನು ರಾಜಕಾರಣಿಗಳು ಹೊಂದಿದ್ದು, ಅತ್ಯಂತ ಕಡಿಮೆ ವಿಶ್ವಾಸಾರ್ಹರಾಗಿ ಹೊಮ್ಮಿದ್ದಾರೆ. “ಭಾರತ ಹಾಗೂ ಮಲೇಷಿಯದಲ್ಲಿ ಅತಿಹೆಚ್ಚು ಜನರು ರಾಜಕಾರಣಿಗಳನ್ನು ನಂಬುತ್ತಾರೆ” ಎಂದು ಸಮೀಕ್ಷೆ ಉಲ್ಲೇಖಿಸಿದೆ.

ರಾಜಕಾರಣಿಗಳ ಮೇಲೆ ಶೇ. 18ರಷ್ಟು ನಂಬಿಕೆಯನ್ನು ಮಲೇಷಿಯನ್ನರು, ಶೇ. 19ರಷ್ಟು ನಂಬಿಕೆಯನ್ನು ಭಾರತೀಯರು ಹೊಂದಿದ್ದಾರೆ. ಅರ್ಜೆಂಟೀನಾ ಹಾಗೂ ಕೊಲಂಬಿಯ ರಾಷ್ಟ್ರಗಳಲ್ಲಿ ರಾಜಕಾರಣಿಗಳನ್ನು ಜನರು ಅತ್ಯಂತ ಕಡಿಮೆ ನಂಬುತ್ತವೆ. ಕ್ರಮವಾಗಿ – 3 ಮತ್ತು 4ರಷ್ಟು ನಂಬಿಕೆಯನ್ನು ಈ ರಾಷ್ಟ್ರಗಳಲ್ಲಿ ಕಾಣಬಹುದು ಎಂದು ಸಮೀಕ್ಷೆ ತಿಳಿಸಿದೆ.

ಎಲ್ಲಾ ವರ್ಗಗಳ ಪ್ರತಿಕ್ರಿಯೆಗಳನ್ನು ಪರಿಗಣನೆಗೆ ತೆಗೆದುಕೊಂಡಾಗ ಮಲೇಷ್ಯಾ ಮತ್ತು ಭಾರತವು ವಾಸ್ತವವಾಗಿ ಸಮೀಕ್ಷೆಯಲ್ಲಿ ಅತಿ ಹೆಚ್ಚು ವಿಶ್ವಾಸವನ್ನು ಹೊಂದಿರುವ ರಾಷ್ಟ್ರಗಳಾಗಿವೆ. ಕೊಲಂಬಿಯಾ ಮತ್ತು ಚಿಲಿ ರಾಷ್ಟ್ರಗಳು ಸಮೀಕ್ಷೆಗಳ ಕುರಿತು ಅತ್ಯಂತ ಕಡಿಮೆ ವಿಶ್ವಾಸ ಹೊಂದಿವೆ.

ಹೆಚ್ಚು ವಿಶ್ವಾಸಾರ್ಹರ ಸಾಲಿನಲ್ಲಿ ಮೊದಲ ಸ್ಥಾನದಲ್ಲಿ ವೈದ್ಯರು (ಶೇ.54 ನಿವ್ವಳ ಅಂಕ), ಎರಡನೇಯವರಾಗಿ ವಿಜ್ಞಾನಿಗಳು (ಶೇ.51), ಮೂರನೇ ಸ್ಥಾನದಲ್ಲಿ ಶಿಕ್ಷಕರು (ಶೇ.43), ನಾಲ್ಕನೇ ಸ್ಥಾನದಲ್ಲಿ ಸಾಮಾನ್ಯ ಜನರು (ಶೇ. 27), ಐದನೇ ಸ್ಥಾನದಲ್ಲಿ ಸೇನಾ ಬಲ (ಶೇ. 22) ಇರುವುದನ್ನು ಕಾಣಬಹುದು.

ಕಡಿಮೆ ವಿಶ್ವಾಸಾರ್ಹರ ಸಾಲಿನಲ್ಲಿ ತಕ್ಕಮಟ್ಟಿಗೆ ನಂಬಬಹುದಾದವರಲ್ಲಿ ಪತ್ರಕರ್ತರು ಮೊದಲಿದ್ದಾರೆ. ಶೇ. -10ರಷ್ಟು ಅಂಕಗಳನ್ನು ಪತ್ರಕರ್ತರಿಗೆ ನೀಡಲಾಗಿದೆ. ನಂತರದಲ್ಲಿ ಬ್ಯಾಂಕರ್ಸ್‌ (ಶೇ.-11), ಜಾಹೀರಾತುದಾರರು (ಶೇ. -22), ಸರ್ಕಾರಿ ಸಚಿವರು (ಶೇ.-39), ಸಾಮಾನ್ಯ ರಾಜಕಾರಣಿಗಳು (ಶೇ. -52) ಇದ್ದಾರೆ.


ಇದನ್ನೂ ಓದಿರಿ: ಚುನಾವಣಾ ಪೂರ್ವ ಸಮೀಕ್ಷೆಗಳನ್ನು ನಿಷೇಧಿಸಲು ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...