Homeಮುಖಪುಟವಿಶ್ವಾಸಾರ್ಹರ ಸಾಲಿನಲ್ಲಿ ವೈದ್ಯರಿಗೆ ಮೊದಲ ಸ್ಥಾನ: ಸ್ಟ್ಯಾಟಿಸ್ಟಾ ಸರ್ವೇ

ವಿಶ್ವಾಸಾರ್ಹರ ಸಾಲಿನಲ್ಲಿ ವೈದ್ಯರಿಗೆ ಮೊದಲ ಸ್ಥಾನ: ಸ್ಟ್ಯಾಟಿಸ್ಟಾ ಸರ್ವೇ

- Advertisement -
- Advertisement -

ಜಾಗತಿಕವಾಗಿ ಯಾವ ಗುಂಪಿನ ಜನರು ಹೆಚ್ಚು ವಿಶ್ವಾಸಾರ್ಹರು ಹಾಗೂ ಕಡಿಮೆ ವಿಶ್ವಾಸಾರ್ಹರು ಎಂದು ಸರ್ವೇ ಮಾಡಿರುವ ಅಂತಾರಾಷ್ಟ್ರೀಯ ಡೇಟಾ ಸಂಸ್ಥೆಯಾದ ‘ಸ್ಟ್ಯಾಟಿಸ್ಟಾ’ ವರದಿಯನ್ನು ಬಹಿರಂಗಪಡಿಸಿದೆ.

www.statista.comನಲ್ಲಿ ವರದಿ ಬಿಡುಗಡೆ ಮಾಡಲಾಗಿದ್ದು, ಅತಿಹೆಚ್ಚು ವಿಶ್ವಾಸಾರ್ಹ ಮನುಷ್ಯರೆಂದರೆ ವೈದ್ಯರು, ಅತ್ಯಂತ ಕಡಿಮೆ ವಿಶ್ವಾಸಾರ್ಹರೆಂದರೆ ರಾಜಕಾರಣಿಗಳು ಎಂದು ವರದಿ ಹೇಳಿದೆ. ಡೇಟಾ ಜರ್ನಲಿಸ್ಟ್‌ ಮಾರ್ಟಿನ್ ಆರ್ಮ್‌ಸ್ಟ್ರಾಂಗ್ ವರದಿಯನ್ನು ಬರೆದಿದ್ದಾರೆ.

ವೈದ್ಯಕೀಯ ವೃತ್ತಿಪರರು ನಿಜವಾಗಿಯೂ ವಿಶ್ವದ ಅತ್ಯಂತ ವಿಶ್ವಾಸಾರ್ಹ ಗುಂಪು. ಒಟ್ಟು 64 ಪ್ರತಿಶತದಷ್ಟು ಜನರು ವೈದ್ಯರು ನಂಬಲರ್ಹರು ಎಂದು ಭಾವಿಸುತ್ತಾರೆ, ಆದರೆ ಕೇವಲ 10 ಪ್ರತಿಶತದಷ್ಟು ಜನರು ಅವರನ್ನು ನಂಬುವುದಿಲ್ಲ. 54 ಪ್ರತಿಶತದಷ್ಟು ನಿವ್ವಳ ನಂಬಿಕೆಯನ್ನು ವೈದ್ಯರ ಕುರಿತು ಕಾಣಬಹುದು. ವಿಜ್ಞಾನಿಗಳು 51 ಪ್ರತಿಶತದಷ್ಟು ನಿವ್ವಳ ವಿಶ್ವಾಸಾರ್ಹತೆ ಹೊಂದಿದ್ದರೆ, ಶಿಕ್ಷಕರು 43 ಪ್ರತಿಶತದೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ.

-52 ಪ್ರತಿಶತದಷ್ಟು ನಿವ್ವಳ ವಿಶ್ವಾಸಾರ್ಹತೆಯನ್ನು ರಾಜಕಾರಣಿಗಳು ಹೊಂದಿದ್ದು, ಅತ್ಯಂತ ಕಡಿಮೆ ವಿಶ್ವಾಸಾರ್ಹರಾಗಿ ಹೊಮ್ಮಿದ್ದಾರೆ. “ಭಾರತ ಹಾಗೂ ಮಲೇಷಿಯದಲ್ಲಿ ಅತಿಹೆಚ್ಚು ಜನರು ರಾಜಕಾರಣಿಗಳನ್ನು ನಂಬುತ್ತಾರೆ” ಎಂದು ಸಮೀಕ್ಷೆ ಉಲ್ಲೇಖಿಸಿದೆ.

ರಾಜಕಾರಣಿಗಳ ಮೇಲೆ ಶೇ. 18ರಷ್ಟು ನಂಬಿಕೆಯನ್ನು ಮಲೇಷಿಯನ್ನರು, ಶೇ. 19ರಷ್ಟು ನಂಬಿಕೆಯನ್ನು ಭಾರತೀಯರು ಹೊಂದಿದ್ದಾರೆ. ಅರ್ಜೆಂಟೀನಾ ಹಾಗೂ ಕೊಲಂಬಿಯ ರಾಷ್ಟ್ರಗಳಲ್ಲಿ ರಾಜಕಾರಣಿಗಳನ್ನು ಜನರು ಅತ್ಯಂತ ಕಡಿಮೆ ನಂಬುತ್ತವೆ. ಕ್ರಮವಾಗಿ – 3 ಮತ್ತು 4ರಷ್ಟು ನಂಬಿಕೆಯನ್ನು ಈ ರಾಷ್ಟ್ರಗಳಲ್ಲಿ ಕಾಣಬಹುದು ಎಂದು ಸಮೀಕ್ಷೆ ತಿಳಿಸಿದೆ.

ಎಲ್ಲಾ ವರ್ಗಗಳ ಪ್ರತಿಕ್ರಿಯೆಗಳನ್ನು ಪರಿಗಣನೆಗೆ ತೆಗೆದುಕೊಂಡಾಗ ಮಲೇಷ್ಯಾ ಮತ್ತು ಭಾರತವು ವಾಸ್ತವವಾಗಿ ಸಮೀಕ್ಷೆಯಲ್ಲಿ ಅತಿ ಹೆಚ್ಚು ವಿಶ್ವಾಸವನ್ನು ಹೊಂದಿರುವ ರಾಷ್ಟ್ರಗಳಾಗಿವೆ. ಕೊಲಂಬಿಯಾ ಮತ್ತು ಚಿಲಿ ರಾಷ್ಟ್ರಗಳು ಸಮೀಕ್ಷೆಗಳ ಕುರಿತು ಅತ್ಯಂತ ಕಡಿಮೆ ವಿಶ್ವಾಸ ಹೊಂದಿವೆ.

ಹೆಚ್ಚು ವಿಶ್ವಾಸಾರ್ಹರ ಸಾಲಿನಲ್ಲಿ ಮೊದಲ ಸ್ಥಾನದಲ್ಲಿ ವೈದ್ಯರು (ಶೇ.54 ನಿವ್ವಳ ಅಂಕ), ಎರಡನೇಯವರಾಗಿ ವಿಜ್ಞಾನಿಗಳು (ಶೇ.51), ಮೂರನೇ ಸ್ಥಾನದಲ್ಲಿ ಶಿಕ್ಷಕರು (ಶೇ.43), ನಾಲ್ಕನೇ ಸ್ಥಾನದಲ್ಲಿ ಸಾಮಾನ್ಯ ಜನರು (ಶೇ. 27), ಐದನೇ ಸ್ಥಾನದಲ್ಲಿ ಸೇನಾ ಬಲ (ಶೇ. 22) ಇರುವುದನ್ನು ಕಾಣಬಹುದು.

ಕಡಿಮೆ ವಿಶ್ವಾಸಾರ್ಹರ ಸಾಲಿನಲ್ಲಿ ತಕ್ಕಮಟ್ಟಿಗೆ ನಂಬಬಹುದಾದವರಲ್ಲಿ ಪತ್ರಕರ್ತರು ಮೊದಲಿದ್ದಾರೆ. ಶೇ. -10ರಷ್ಟು ಅಂಕಗಳನ್ನು ಪತ್ರಕರ್ತರಿಗೆ ನೀಡಲಾಗಿದೆ. ನಂತರದಲ್ಲಿ ಬ್ಯಾಂಕರ್ಸ್‌ (ಶೇ.-11), ಜಾಹೀರಾತುದಾರರು (ಶೇ. -22), ಸರ್ಕಾರಿ ಸಚಿವರು (ಶೇ.-39), ಸಾಮಾನ್ಯ ರಾಜಕಾರಣಿಗಳು (ಶೇ. -52) ಇದ್ದಾರೆ.


ಇದನ್ನೂ ಓದಿರಿ: ಚುನಾವಣಾ ಪೂರ್ವ ಸಮೀಕ್ಷೆಗಳನ್ನು ನಿಷೇಧಿಸಲು ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...