Homeಮುಖಪುಟವಿಶ್ವಾಸಾರ್ಹರ ಸಾಲಿನಲ್ಲಿ ವೈದ್ಯರಿಗೆ ಮೊದಲ ಸ್ಥಾನ: ಸ್ಟ್ಯಾಟಿಸ್ಟಾ ಸರ್ವೇ

ವಿಶ್ವಾಸಾರ್ಹರ ಸಾಲಿನಲ್ಲಿ ವೈದ್ಯರಿಗೆ ಮೊದಲ ಸ್ಥಾನ: ಸ್ಟ್ಯಾಟಿಸ್ಟಾ ಸರ್ವೇ

- Advertisement -
- Advertisement -

ಜಾಗತಿಕವಾಗಿ ಯಾವ ಗುಂಪಿನ ಜನರು ಹೆಚ್ಚು ವಿಶ್ವಾಸಾರ್ಹರು ಹಾಗೂ ಕಡಿಮೆ ವಿಶ್ವಾಸಾರ್ಹರು ಎಂದು ಸರ್ವೇ ಮಾಡಿರುವ ಅಂತಾರಾಷ್ಟ್ರೀಯ ಡೇಟಾ ಸಂಸ್ಥೆಯಾದ ‘ಸ್ಟ್ಯಾಟಿಸ್ಟಾ’ ವರದಿಯನ್ನು ಬಹಿರಂಗಪಡಿಸಿದೆ.

www.statista.comನಲ್ಲಿ ವರದಿ ಬಿಡುಗಡೆ ಮಾಡಲಾಗಿದ್ದು, ಅತಿಹೆಚ್ಚು ವಿಶ್ವಾಸಾರ್ಹ ಮನುಷ್ಯರೆಂದರೆ ವೈದ್ಯರು, ಅತ್ಯಂತ ಕಡಿಮೆ ವಿಶ್ವಾಸಾರ್ಹರೆಂದರೆ ರಾಜಕಾರಣಿಗಳು ಎಂದು ವರದಿ ಹೇಳಿದೆ. ಡೇಟಾ ಜರ್ನಲಿಸ್ಟ್‌ ಮಾರ್ಟಿನ್ ಆರ್ಮ್‌ಸ್ಟ್ರಾಂಗ್ ವರದಿಯನ್ನು ಬರೆದಿದ್ದಾರೆ.

ವೈದ್ಯಕೀಯ ವೃತ್ತಿಪರರು ನಿಜವಾಗಿಯೂ ವಿಶ್ವದ ಅತ್ಯಂತ ವಿಶ್ವಾಸಾರ್ಹ ಗುಂಪು. ಒಟ್ಟು 64 ಪ್ರತಿಶತದಷ್ಟು ಜನರು ವೈದ್ಯರು ನಂಬಲರ್ಹರು ಎಂದು ಭಾವಿಸುತ್ತಾರೆ, ಆದರೆ ಕೇವಲ 10 ಪ್ರತಿಶತದಷ್ಟು ಜನರು ಅವರನ್ನು ನಂಬುವುದಿಲ್ಲ. 54 ಪ್ರತಿಶತದಷ್ಟು ನಿವ್ವಳ ನಂಬಿಕೆಯನ್ನು ವೈದ್ಯರ ಕುರಿತು ಕಾಣಬಹುದು. ವಿಜ್ಞಾನಿಗಳು 51 ಪ್ರತಿಶತದಷ್ಟು ನಿವ್ವಳ ವಿಶ್ವಾಸಾರ್ಹತೆ ಹೊಂದಿದ್ದರೆ, ಶಿಕ್ಷಕರು 43 ಪ್ರತಿಶತದೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ.

-52 ಪ್ರತಿಶತದಷ್ಟು ನಿವ್ವಳ ವಿಶ್ವಾಸಾರ್ಹತೆಯನ್ನು ರಾಜಕಾರಣಿಗಳು ಹೊಂದಿದ್ದು, ಅತ್ಯಂತ ಕಡಿಮೆ ವಿಶ್ವಾಸಾರ್ಹರಾಗಿ ಹೊಮ್ಮಿದ್ದಾರೆ. “ಭಾರತ ಹಾಗೂ ಮಲೇಷಿಯದಲ್ಲಿ ಅತಿಹೆಚ್ಚು ಜನರು ರಾಜಕಾರಣಿಗಳನ್ನು ನಂಬುತ್ತಾರೆ” ಎಂದು ಸಮೀಕ್ಷೆ ಉಲ್ಲೇಖಿಸಿದೆ.

ರಾಜಕಾರಣಿಗಳ ಮೇಲೆ ಶೇ. 18ರಷ್ಟು ನಂಬಿಕೆಯನ್ನು ಮಲೇಷಿಯನ್ನರು, ಶೇ. 19ರಷ್ಟು ನಂಬಿಕೆಯನ್ನು ಭಾರತೀಯರು ಹೊಂದಿದ್ದಾರೆ. ಅರ್ಜೆಂಟೀನಾ ಹಾಗೂ ಕೊಲಂಬಿಯ ರಾಷ್ಟ್ರಗಳಲ್ಲಿ ರಾಜಕಾರಣಿಗಳನ್ನು ಜನರು ಅತ್ಯಂತ ಕಡಿಮೆ ನಂಬುತ್ತವೆ. ಕ್ರಮವಾಗಿ – 3 ಮತ್ತು 4ರಷ್ಟು ನಂಬಿಕೆಯನ್ನು ಈ ರಾಷ್ಟ್ರಗಳಲ್ಲಿ ಕಾಣಬಹುದು ಎಂದು ಸಮೀಕ್ಷೆ ತಿಳಿಸಿದೆ.

ಎಲ್ಲಾ ವರ್ಗಗಳ ಪ್ರತಿಕ್ರಿಯೆಗಳನ್ನು ಪರಿಗಣನೆಗೆ ತೆಗೆದುಕೊಂಡಾಗ ಮಲೇಷ್ಯಾ ಮತ್ತು ಭಾರತವು ವಾಸ್ತವವಾಗಿ ಸಮೀಕ್ಷೆಯಲ್ಲಿ ಅತಿ ಹೆಚ್ಚು ವಿಶ್ವಾಸವನ್ನು ಹೊಂದಿರುವ ರಾಷ್ಟ್ರಗಳಾಗಿವೆ. ಕೊಲಂಬಿಯಾ ಮತ್ತು ಚಿಲಿ ರಾಷ್ಟ್ರಗಳು ಸಮೀಕ್ಷೆಗಳ ಕುರಿತು ಅತ್ಯಂತ ಕಡಿಮೆ ವಿಶ್ವಾಸ ಹೊಂದಿವೆ.

ಹೆಚ್ಚು ವಿಶ್ವಾಸಾರ್ಹರ ಸಾಲಿನಲ್ಲಿ ಮೊದಲ ಸ್ಥಾನದಲ್ಲಿ ವೈದ್ಯರು (ಶೇ.54 ನಿವ್ವಳ ಅಂಕ), ಎರಡನೇಯವರಾಗಿ ವಿಜ್ಞಾನಿಗಳು (ಶೇ.51), ಮೂರನೇ ಸ್ಥಾನದಲ್ಲಿ ಶಿಕ್ಷಕರು (ಶೇ.43), ನಾಲ್ಕನೇ ಸ್ಥಾನದಲ್ಲಿ ಸಾಮಾನ್ಯ ಜನರು (ಶೇ. 27), ಐದನೇ ಸ್ಥಾನದಲ್ಲಿ ಸೇನಾ ಬಲ (ಶೇ. 22) ಇರುವುದನ್ನು ಕಾಣಬಹುದು.

ಕಡಿಮೆ ವಿಶ್ವಾಸಾರ್ಹರ ಸಾಲಿನಲ್ಲಿ ತಕ್ಕಮಟ್ಟಿಗೆ ನಂಬಬಹುದಾದವರಲ್ಲಿ ಪತ್ರಕರ್ತರು ಮೊದಲಿದ್ದಾರೆ. ಶೇ. -10ರಷ್ಟು ಅಂಕಗಳನ್ನು ಪತ್ರಕರ್ತರಿಗೆ ನೀಡಲಾಗಿದೆ. ನಂತರದಲ್ಲಿ ಬ್ಯಾಂಕರ್ಸ್‌ (ಶೇ.-11), ಜಾಹೀರಾತುದಾರರು (ಶೇ. -22), ಸರ್ಕಾರಿ ಸಚಿವರು (ಶೇ.-39), ಸಾಮಾನ್ಯ ರಾಜಕಾರಣಿಗಳು (ಶೇ. -52) ಇದ್ದಾರೆ.


ಇದನ್ನೂ ಓದಿರಿ: ಚುನಾವಣಾ ಪೂರ್ವ ಸಮೀಕ್ಷೆಗಳನ್ನು ನಿಷೇಧಿಸಲು ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...