Homeಮುಖಪುಟವಿಶ್ವಾಸಾರ್ಹರ ಸಾಲಿನಲ್ಲಿ ವೈದ್ಯರಿಗೆ ಮೊದಲ ಸ್ಥಾನ: ಸ್ಟ್ಯಾಟಿಸ್ಟಾ ಸರ್ವೇ

ವಿಶ್ವಾಸಾರ್ಹರ ಸಾಲಿನಲ್ಲಿ ವೈದ್ಯರಿಗೆ ಮೊದಲ ಸ್ಥಾನ: ಸ್ಟ್ಯಾಟಿಸ್ಟಾ ಸರ್ವೇ

- Advertisement -
- Advertisement -

ಜಾಗತಿಕವಾಗಿ ಯಾವ ಗುಂಪಿನ ಜನರು ಹೆಚ್ಚು ವಿಶ್ವಾಸಾರ್ಹರು ಹಾಗೂ ಕಡಿಮೆ ವಿಶ್ವಾಸಾರ್ಹರು ಎಂದು ಸರ್ವೇ ಮಾಡಿರುವ ಅಂತಾರಾಷ್ಟ್ರೀಯ ಡೇಟಾ ಸಂಸ್ಥೆಯಾದ ‘ಸ್ಟ್ಯಾಟಿಸ್ಟಾ’ ವರದಿಯನ್ನು ಬಹಿರಂಗಪಡಿಸಿದೆ.

www.statista.comನಲ್ಲಿ ವರದಿ ಬಿಡುಗಡೆ ಮಾಡಲಾಗಿದ್ದು, ಅತಿಹೆಚ್ಚು ವಿಶ್ವಾಸಾರ್ಹ ಮನುಷ್ಯರೆಂದರೆ ವೈದ್ಯರು, ಅತ್ಯಂತ ಕಡಿಮೆ ವಿಶ್ವಾಸಾರ್ಹರೆಂದರೆ ರಾಜಕಾರಣಿಗಳು ಎಂದು ವರದಿ ಹೇಳಿದೆ. ಡೇಟಾ ಜರ್ನಲಿಸ್ಟ್‌ ಮಾರ್ಟಿನ್ ಆರ್ಮ್‌ಸ್ಟ್ರಾಂಗ್ ವರದಿಯನ್ನು ಬರೆದಿದ್ದಾರೆ.

ವೈದ್ಯಕೀಯ ವೃತ್ತಿಪರರು ನಿಜವಾಗಿಯೂ ವಿಶ್ವದ ಅತ್ಯಂತ ವಿಶ್ವಾಸಾರ್ಹ ಗುಂಪು. ಒಟ್ಟು 64 ಪ್ರತಿಶತದಷ್ಟು ಜನರು ವೈದ್ಯರು ನಂಬಲರ್ಹರು ಎಂದು ಭಾವಿಸುತ್ತಾರೆ, ಆದರೆ ಕೇವಲ 10 ಪ್ರತಿಶತದಷ್ಟು ಜನರು ಅವರನ್ನು ನಂಬುವುದಿಲ್ಲ. 54 ಪ್ರತಿಶತದಷ್ಟು ನಿವ್ವಳ ನಂಬಿಕೆಯನ್ನು ವೈದ್ಯರ ಕುರಿತು ಕಾಣಬಹುದು. ವಿಜ್ಞಾನಿಗಳು 51 ಪ್ರತಿಶತದಷ್ಟು ನಿವ್ವಳ ವಿಶ್ವಾಸಾರ್ಹತೆ ಹೊಂದಿದ್ದರೆ, ಶಿಕ್ಷಕರು 43 ಪ್ರತಿಶತದೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ.

-52 ಪ್ರತಿಶತದಷ್ಟು ನಿವ್ವಳ ವಿಶ್ವಾಸಾರ್ಹತೆಯನ್ನು ರಾಜಕಾರಣಿಗಳು ಹೊಂದಿದ್ದು, ಅತ್ಯಂತ ಕಡಿಮೆ ವಿಶ್ವಾಸಾರ್ಹರಾಗಿ ಹೊಮ್ಮಿದ್ದಾರೆ. “ಭಾರತ ಹಾಗೂ ಮಲೇಷಿಯದಲ್ಲಿ ಅತಿಹೆಚ್ಚು ಜನರು ರಾಜಕಾರಣಿಗಳನ್ನು ನಂಬುತ್ತಾರೆ” ಎಂದು ಸಮೀಕ್ಷೆ ಉಲ್ಲೇಖಿಸಿದೆ.

ರಾಜಕಾರಣಿಗಳ ಮೇಲೆ ಶೇ. 18ರಷ್ಟು ನಂಬಿಕೆಯನ್ನು ಮಲೇಷಿಯನ್ನರು, ಶೇ. 19ರಷ್ಟು ನಂಬಿಕೆಯನ್ನು ಭಾರತೀಯರು ಹೊಂದಿದ್ದಾರೆ. ಅರ್ಜೆಂಟೀನಾ ಹಾಗೂ ಕೊಲಂಬಿಯ ರಾಷ್ಟ್ರಗಳಲ್ಲಿ ರಾಜಕಾರಣಿಗಳನ್ನು ಜನರು ಅತ್ಯಂತ ಕಡಿಮೆ ನಂಬುತ್ತವೆ. ಕ್ರಮವಾಗಿ – 3 ಮತ್ತು 4ರಷ್ಟು ನಂಬಿಕೆಯನ್ನು ಈ ರಾಷ್ಟ್ರಗಳಲ್ಲಿ ಕಾಣಬಹುದು ಎಂದು ಸಮೀಕ್ಷೆ ತಿಳಿಸಿದೆ.

ಎಲ್ಲಾ ವರ್ಗಗಳ ಪ್ರತಿಕ್ರಿಯೆಗಳನ್ನು ಪರಿಗಣನೆಗೆ ತೆಗೆದುಕೊಂಡಾಗ ಮಲೇಷ್ಯಾ ಮತ್ತು ಭಾರತವು ವಾಸ್ತವವಾಗಿ ಸಮೀಕ್ಷೆಯಲ್ಲಿ ಅತಿ ಹೆಚ್ಚು ವಿಶ್ವಾಸವನ್ನು ಹೊಂದಿರುವ ರಾಷ್ಟ್ರಗಳಾಗಿವೆ. ಕೊಲಂಬಿಯಾ ಮತ್ತು ಚಿಲಿ ರಾಷ್ಟ್ರಗಳು ಸಮೀಕ್ಷೆಗಳ ಕುರಿತು ಅತ್ಯಂತ ಕಡಿಮೆ ವಿಶ್ವಾಸ ಹೊಂದಿವೆ.

ಹೆಚ್ಚು ವಿಶ್ವಾಸಾರ್ಹರ ಸಾಲಿನಲ್ಲಿ ಮೊದಲ ಸ್ಥಾನದಲ್ಲಿ ವೈದ್ಯರು (ಶೇ.54 ನಿವ್ವಳ ಅಂಕ), ಎರಡನೇಯವರಾಗಿ ವಿಜ್ಞಾನಿಗಳು (ಶೇ.51), ಮೂರನೇ ಸ್ಥಾನದಲ್ಲಿ ಶಿಕ್ಷಕರು (ಶೇ.43), ನಾಲ್ಕನೇ ಸ್ಥಾನದಲ್ಲಿ ಸಾಮಾನ್ಯ ಜನರು (ಶೇ. 27), ಐದನೇ ಸ್ಥಾನದಲ್ಲಿ ಸೇನಾ ಬಲ (ಶೇ. 22) ಇರುವುದನ್ನು ಕಾಣಬಹುದು.

ಕಡಿಮೆ ವಿಶ್ವಾಸಾರ್ಹರ ಸಾಲಿನಲ್ಲಿ ತಕ್ಕಮಟ್ಟಿಗೆ ನಂಬಬಹುದಾದವರಲ್ಲಿ ಪತ್ರಕರ್ತರು ಮೊದಲಿದ್ದಾರೆ. ಶೇ. -10ರಷ್ಟು ಅಂಕಗಳನ್ನು ಪತ್ರಕರ್ತರಿಗೆ ನೀಡಲಾಗಿದೆ. ನಂತರದಲ್ಲಿ ಬ್ಯಾಂಕರ್ಸ್‌ (ಶೇ.-11), ಜಾಹೀರಾತುದಾರರು (ಶೇ. -22), ಸರ್ಕಾರಿ ಸಚಿವರು (ಶೇ.-39), ಸಾಮಾನ್ಯ ರಾಜಕಾರಣಿಗಳು (ಶೇ. -52) ಇದ್ದಾರೆ.


ಇದನ್ನೂ ಓದಿರಿ: ಚುನಾವಣಾ ಪೂರ್ವ ಸಮೀಕ್ಷೆಗಳನ್ನು ನಿಷೇಧಿಸಲು ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...