Homeಮುಖಪುಟಇಂದು ವರ್ಷದ ಕೊನೆಯ ಸೂರ್ಯಗ್ರಹಣ: ಎಲ್ಲಿಲ್ಲಿ ಗೋಚರ? ನೋಡುವುದು ಹೇಗೆ ಇಲ್ಲಿದೆ ಮಾಹಿತಿ

ಇಂದು ವರ್ಷದ ಕೊನೆಯ ಸೂರ್ಯಗ್ರಹಣ: ಎಲ್ಲಿಲ್ಲಿ ಗೋಚರ? ನೋಡುವುದು ಹೇಗೆ ಇಲ್ಲಿದೆ ಮಾಹಿತಿ

- Advertisement -
- Advertisement -

2021 ರ ಎರಡನೇಯ ಮತ್ತು ಕೊನೆಯ ಸಂಪೂರ್ಣ ಸೂರ್ಯಗ್ರಹಣವು ಇಂದು (ಡಿ.4) ಸಂಭವಿಸುತ್ತಿದೆ. ಸುಮಾರು ನಾಲ್ಕು ಗಂಟೆಗಳ ಕಾಲ ಸೂರ್ಯಗ್ರಹಣ ಇರಲಿದೆ. ಆದರೆ ಈ ಸೂರ್ಯಗ್ರಹಣವು ಭಾರತದಲ್ಲಿ ಗೂಚರಿಸುವುದಿಲ್ಲ.

ಇಂದು ಅಮಾವಾಸ್ಯೆಯ ದಿನ. ಸೂರ್ಯ ಮತ್ತು ಭೂಮಿಯ ನಡುವೆ ಚಂದ್ರ ಬಂದಾಗ ಸೂರ್ಯಗ್ರಹಣ ಸಂಭವಿಸುತ್ತದೆ. ಈ ಗ್ರಹಣವನ್ನು ಅಂಟಾರ್ಟಿಕಾ ಮತ್ತು ದಕ್ಷಿಣ ಅಮೆರಿಕಾ, ಆಫ್ರಿಕಾ, ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್‌ನ ದಕ್ಷಿಣ ತುದಿಯಲ್ಲಿರುವವರು ಗ್ರಹಣದ ಭಾಗಶಃ ಹಂತಗಳನ್ನು ನೋಡಬಹುದು.

ಈ ವರ್ಷದ ಕೊನೆಯ ಸೂರ್ಯಗ್ರಹಣದ ಅವಧಿ4 ತಾಸು 8 ನಿಮಿಷ. ಬೆಳಗ್ಗೆ 10:59 ಕ್ಕೆ ಗ್ರಹಣ ಪ್ರಾರಂಭವಾಗುತ್ತದೆ. ಸಂಪೂರ್ಣ ಗ್ರಹಣವು ಮಧ್ಯಾಹ್ನ 12:30 ಕ್ಕೆ ಮತ್ತು ಗರಿಷ್ಠ ಗ್ರಹಣವು ಮಧ್ಯಾಹ್ನ 1:03 ಕ್ಕೆ ಸಂಭವಿಸುತ್ತದೆ. ಮಧ್ಯಾಹ್ನ 3.07ಕ್ಕೆ ಸೂರ್ಯಗ್ರಹಣ ಮುಕ್ತಾಯವಾಗುತ್ತದೆ.

ಇದನ್ನೂ ಓದಿ: ರಾತ್ರಿಯ ಹೊತ್ತಿನಲ್ಲಿ ಸೂರ್ಯಗ್ರಹಣ ಮಾಡಿಸುವ ಮಾಧ್ಯಮಗಳು!

ಎಲ್ಲಿ ನೋಡಬಹುದು…?

ಅಂಟಾರ್ಕ್ಟಿಕಾದಿಂದ ಸಂಪೂರ್ಣ ಸೂರ್ಯಗ್ರಹಣವನ್ನು NASAದ YouTube ಚಾನಲ್ ಮತ್ತು nasa.gov/live ನಲ್ಲಿ ಲೈವ್ ಸ್ಟ್ರೀಮ್ ಮಾಡಲಾಗುತ್ತದೆ. ಈ ಚಾನೆಲ್‌ಗಳ ಮೂಲಕ ನೋಡಬಹುದು.

ಇನ್ನು ಸಂಪೂರ್ಣ ಸೂರ್ಯಗ್ರಹಣದ ಸಮಯದಲ್ಲಿ ಕಣ್ಣಿನ ಸುರಕ್ಷತೆ ಬಗ್ಗೆ ನಿಗಾ ವಹಿಸಬೇಕು. ಸೂರ್ಯನನ್ನು ನೇರವಾಗಿ ನೋಡಬೇಡಬಾರದು. ಎಲ್ಲ ಸಮಯದಲ್ಲೂ ವಿಶೇಷ ಗ್ರಹಣ ಕನ್ನಡಕವನ್ನು ಬಳಸಬೇಕು. ಸೂರ್ಯನನ್ನು ನೋಡಲು ಪಿನ್‌ಹೋಲ್ ಬಾಕ್ಸ್ ಮತ್ತು ಪ್ರೊಜೆಕ್ಷನ್ ವಿಧಾನಗಳನ್ನು ಬಳಸಬೇಕು.

“ಭೂಮಿ ಸೂರ್ಯನ ಸುತ್ತ, ಚಂದ್ರ ಭೂಮಿಯ ಸುತ್ತ ಸುತ್ತುತ್ತಿರಬೇಕಾದರೆ, ಭೂಮಿ ಮತ್ತು ಸೂರ್ಯನ ನಡುವೆ ಚಂದ್ರ ಹಾದುಹೋಗುವಾಗ, ಈ ಮೂರೂ ಆಕಾಶಕಾಯಗಳು ಒಂದೇ ಸರಳ ರೇಖೆಯಲ್ಲಿ ಬರುತ್ತವೆ. ಇಂತಹ ಸಂದರ್ಭದಲ್ಲಿ ಚಂದ್ರ ಸೂರ್ಯನನ್ನು ಮರೆಮಾಚುತ್ತದೆ, ಆಗ ಸೂರ್ಯನ ಬೆಳಕು ಭೂಮಿಯ ಕೆಲವು ನಿರ್ದಿಷ್ಟ ಸ್ಥಳಗಳಲ್ಲಿ ಬೀಳುವುದಿಲ್ಲ. ಇದು ಸೂರ್ಯಗ್ರಹಣ. ಸೂರ್ಯಗ್ರಹಣ ಅಮಾವಾಸ್ಯೆಯ ದಿನದಂದೇ ನಡೆಯುತ್ತದೆ.

——————–

ಇದನ್ನೂ ಓದಿ: ಮೌಢ್ಯ ವಿರೋಧಿಸಿ ಸೂರ್ಯಗ್ರಹಣ ವೀಕ್ಷಿಸಿದ ಲಕ್ಷಾಂತರ ಮಂದಿ, ಆಹಾರ ಸೇವನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಆಟೋ ಚಾಲಕನಾಗಿ ಕೆಲಸ ಮಾಡುವ ತಂದೆಯೊಬ್ಬರು ಕೈಯಲ್ಲಿ ಸಿಹಿ ತಿಂಡಿಯ ಪೆಟ್ಟಿಗೆಯೊಂದಿಗೆ ಮನೆಗೆ ಹೆಜ್ಜೆ ಹಾಕುತ್ತಾರೆ. ಅದನ್ನು ನೋಡಿದ ಮಗಳು, "ಏನಪ್ಪಾ ವಿಶೇಷ, ಇವತ್ತು ಹುಟ್ಟುಹಬ್ಬನಾ, ಹಬ್ಬನಾ ಅಥವಾ ಕುಟುಂಬದ ಸಂಭ್ರಮನಾ?" ಎಂದು...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...