Homeಮುಖಪುಟಇಂದು ವರ್ಷದ ಕೊನೆಯ ಸೂರ್ಯಗ್ರಹಣ: ಎಲ್ಲಿಲ್ಲಿ ಗೋಚರ? ನೋಡುವುದು ಹೇಗೆ ಇಲ್ಲಿದೆ ಮಾಹಿತಿ

ಇಂದು ವರ್ಷದ ಕೊನೆಯ ಸೂರ್ಯಗ್ರಹಣ: ಎಲ್ಲಿಲ್ಲಿ ಗೋಚರ? ನೋಡುವುದು ಹೇಗೆ ಇಲ್ಲಿದೆ ಮಾಹಿತಿ

- Advertisement -
- Advertisement -

2021 ರ ಎರಡನೇಯ ಮತ್ತು ಕೊನೆಯ ಸಂಪೂರ್ಣ ಸೂರ್ಯಗ್ರಹಣವು ಇಂದು (ಡಿ.4) ಸಂಭವಿಸುತ್ತಿದೆ. ಸುಮಾರು ನಾಲ್ಕು ಗಂಟೆಗಳ ಕಾಲ ಸೂರ್ಯಗ್ರಹಣ ಇರಲಿದೆ. ಆದರೆ ಈ ಸೂರ್ಯಗ್ರಹಣವು ಭಾರತದಲ್ಲಿ ಗೂಚರಿಸುವುದಿಲ್ಲ.

ಇಂದು ಅಮಾವಾಸ್ಯೆಯ ದಿನ. ಸೂರ್ಯ ಮತ್ತು ಭೂಮಿಯ ನಡುವೆ ಚಂದ್ರ ಬಂದಾಗ ಸೂರ್ಯಗ್ರಹಣ ಸಂಭವಿಸುತ್ತದೆ. ಈ ಗ್ರಹಣವನ್ನು ಅಂಟಾರ್ಟಿಕಾ ಮತ್ತು ದಕ್ಷಿಣ ಅಮೆರಿಕಾ, ಆಫ್ರಿಕಾ, ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್‌ನ ದಕ್ಷಿಣ ತುದಿಯಲ್ಲಿರುವವರು ಗ್ರಹಣದ ಭಾಗಶಃ ಹಂತಗಳನ್ನು ನೋಡಬಹುದು.

ಈ ವರ್ಷದ ಕೊನೆಯ ಸೂರ್ಯಗ್ರಹಣದ ಅವಧಿ4 ತಾಸು 8 ನಿಮಿಷ. ಬೆಳಗ್ಗೆ 10:59 ಕ್ಕೆ ಗ್ರಹಣ ಪ್ರಾರಂಭವಾಗುತ್ತದೆ. ಸಂಪೂರ್ಣ ಗ್ರಹಣವು ಮಧ್ಯಾಹ್ನ 12:30 ಕ್ಕೆ ಮತ್ತು ಗರಿಷ್ಠ ಗ್ರಹಣವು ಮಧ್ಯಾಹ್ನ 1:03 ಕ್ಕೆ ಸಂಭವಿಸುತ್ತದೆ. ಮಧ್ಯಾಹ್ನ 3.07ಕ್ಕೆ ಸೂರ್ಯಗ್ರಹಣ ಮುಕ್ತಾಯವಾಗುತ್ತದೆ.

ಇದನ್ನೂ ಓದಿ: ರಾತ್ರಿಯ ಹೊತ್ತಿನಲ್ಲಿ ಸೂರ್ಯಗ್ರಹಣ ಮಾಡಿಸುವ ಮಾಧ್ಯಮಗಳು!

ಎಲ್ಲಿ ನೋಡಬಹುದು…?

ಅಂಟಾರ್ಕ್ಟಿಕಾದಿಂದ ಸಂಪೂರ್ಣ ಸೂರ್ಯಗ್ರಹಣವನ್ನು NASAದ YouTube ಚಾನಲ್ ಮತ್ತು nasa.gov/live ನಲ್ಲಿ ಲೈವ್ ಸ್ಟ್ರೀಮ್ ಮಾಡಲಾಗುತ್ತದೆ. ಈ ಚಾನೆಲ್‌ಗಳ ಮೂಲಕ ನೋಡಬಹುದು.

ಇನ್ನು ಸಂಪೂರ್ಣ ಸೂರ್ಯಗ್ರಹಣದ ಸಮಯದಲ್ಲಿ ಕಣ್ಣಿನ ಸುರಕ್ಷತೆ ಬಗ್ಗೆ ನಿಗಾ ವಹಿಸಬೇಕು. ಸೂರ್ಯನನ್ನು ನೇರವಾಗಿ ನೋಡಬೇಡಬಾರದು. ಎಲ್ಲ ಸಮಯದಲ್ಲೂ ವಿಶೇಷ ಗ್ರಹಣ ಕನ್ನಡಕವನ್ನು ಬಳಸಬೇಕು. ಸೂರ್ಯನನ್ನು ನೋಡಲು ಪಿನ್‌ಹೋಲ್ ಬಾಕ್ಸ್ ಮತ್ತು ಪ್ರೊಜೆಕ್ಷನ್ ವಿಧಾನಗಳನ್ನು ಬಳಸಬೇಕು.

“ಭೂಮಿ ಸೂರ್ಯನ ಸುತ್ತ, ಚಂದ್ರ ಭೂಮಿಯ ಸುತ್ತ ಸುತ್ತುತ್ತಿರಬೇಕಾದರೆ, ಭೂಮಿ ಮತ್ತು ಸೂರ್ಯನ ನಡುವೆ ಚಂದ್ರ ಹಾದುಹೋಗುವಾಗ, ಈ ಮೂರೂ ಆಕಾಶಕಾಯಗಳು ಒಂದೇ ಸರಳ ರೇಖೆಯಲ್ಲಿ ಬರುತ್ತವೆ. ಇಂತಹ ಸಂದರ್ಭದಲ್ಲಿ ಚಂದ್ರ ಸೂರ್ಯನನ್ನು ಮರೆಮಾಚುತ್ತದೆ, ಆಗ ಸೂರ್ಯನ ಬೆಳಕು ಭೂಮಿಯ ಕೆಲವು ನಿರ್ದಿಷ್ಟ ಸ್ಥಳಗಳಲ್ಲಿ ಬೀಳುವುದಿಲ್ಲ. ಇದು ಸೂರ್ಯಗ್ರಹಣ. ಸೂರ್ಯಗ್ರಹಣ ಅಮಾವಾಸ್ಯೆಯ ದಿನದಂದೇ ನಡೆಯುತ್ತದೆ.

——————–

ಇದನ್ನೂ ಓದಿ: ಮೌಢ್ಯ ವಿರೋಧಿಸಿ ಸೂರ್ಯಗ್ರಹಣ ವೀಕ್ಷಿಸಿದ ಲಕ್ಷಾಂತರ ಮಂದಿ, ಆಹಾರ ಸೇವನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....