Homeನಿಜವೋ ಸುಳ್ಳೋನೀವು ನಂಬಿಯೇಬಿಟ್ಟಿದ್ದ ಕಳೆದ ವಾರದ ಫೇಕ್‌ನ್ಯೂಸ್‌ಗಳು ಯಾವುವು ಗೊತ್ತೆ?

ನೀವು ನಂಬಿಯೇಬಿಟ್ಟಿದ್ದ ಕಳೆದ ವಾರದ ಫೇಕ್‌ನ್ಯೂಸ್‌ಗಳು ಯಾವುವು ಗೊತ್ತೆ?

- Advertisement -
- Advertisement -

1 ಕೊರೋನಾ ವೈರಸ್ ತಗುಲಿ ಸಾವಿರಾರು ಜನ ರಸ್ತೆಯಲ್ಲಿಯೇ ಮೃತಪಟ್ಟರೆ?

ಈ ಚಿತ್ರವನ್ನು ನಿಮ್ಮ ಫೇಸ್‌ಬುಕ್ ಅಥವಾ ವಾಟ್ಸಾಪ್‌ನಲ್ಲಿ ನೋಡಿರಬಹುದು. ಕೊರೋನಾ ವೈರಸ್ ತಗುಲಿ ಸಾವಿರಾರು ಜನ ರಸ್ತೆಯಲ್ಲಿಯೇ ಮೃತಪಟ್ಟಿದ್ದಾರೆ ಎಂಬ ಹೆಡ್‌ಲೈನ್ ಕೂಡ ಕೊಟ್ಟಿರಬಹುದು ಅಲ್ಲವೇ? ಬಹಳಷ್ಟು ಜನ ಇದನ್ನು ನಂಬಿಬಿಟ್ಟಿದ್ದಾರೆ.

ಇದನ್ನು ಫ್ಯಾಕ್ಟ್ ಚೆಕ್ ನಡೆಸುವ ಸಲುವಾಗಿ ಗೂಗಲ್‌ನಲ್ಲಿ ರಿವರ್ಸ್ ಇಮೇಜ್ ಸರ್ಚ್ ಮಾಡಿದಾಗ ಸತ್ಯ ತಿಳಿದುಬಂದಿದೆ. ಅದರಂತೆ ಇದು ಕೊರೋನ ವೈರಸ್‌ನಿಂದ ಸತ್ತ ವ್ಯಕ್ತಿಗಳ ಚಿತ್ರವಲ್ಲ ಎಂದು ತಿಳಿದುಬಂದಿದೆ.

ಈ ಚಿತ್ರವನ್ನು ಹಿಂದೂಸ್ತಾನ್ ಟೈಮ್ಸ್ ಪತ್ರಿಕೆಯು 2014 ರಲ್ಲಿಯೇ ಪ್ರಕಟಿಸಿದೆ. ಅವರ ಫೋಟೋ ಪ್ರಬಂಧದ ವರದಿಯ ಪ್ರಕಾರ, “ಫ್ರಾಂಕ್‌ಫರ್ಟ್ನಲ್ಲಿರುವ ಕಾಟ್ಜ್ಬಾಚ್ ‘ನಾಜಿ ಕಾನ್ಸಂಟ್ರೇಶನ್ ಕ್ಯಾಂಪ್‌ನಲ್ಲಿ” ಸತ್ತ 528 ಸಂತ್ರಸ್ತರನ್ನು ಸ್ಮರಿಸುವ ಸಲುವಾಗಿ ಕಲಾ ಯೋಜನೆಯ ಭಾಗವಾಗಿ ಜನರು ಪಾದಚಾರಿ ವಲಯದಲ್ಲಿ ಮಲಗಿರುವುದಾಗಿದೆ”. ಈ ಚಿತ್ರವನ್ನು ರಾಯಿಟರ್ಸ್ ತೆಗೆದಿದೆ. ಅಂದರೆ ಇದು ಅಣುಕು ಪ್ರದರ್ಶನವೇ ಹೊರತು ಸತ್ತಿರುವುದಲ್ಲ ಎಂಬುದು ಸ್ಪಷ್ಟವಾಗಿದೆ.

ಹಿಂದೂಸ್ತಾನ್‌ ಟೈಮ್ಸ್‌ನಲ್ಲಿ ಪ್ರಕಟವಾದ ನಿಜವಾದ ಚಿತ್ರ..

2 ಮಂಗಳೂರಿನಿಂದ ಬೆಂಗಳೂರುವರೆಗೆ ಆಂಬುಲೆನ್ಸ್ ಮುಂದೆ ಒಂದೇ ಪೊಲೀಸ್ ವಾಹನ ಸಂಚರಿಸಿತೇ?

ಹೃದಯಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ 40 ದಿನದ ಹಸಿಗೂಸನ್ನು ಫೆಬ್ರವರಿ 6 ರಂದು ಮಂಗಳೂರಿನಿಂದ ಬೆಂಗಳೂರಿನ ಆಸ್ಪತ್ರೆಗೆ ಝೀರೋ ಟ್ರಾಫಿಕ್‌ನಲ್ಲಿ ಕೇವಲ 4 ಗಂಟೆ 15 ನಿಮಿಷದಲ್ಲಿ ಆಂಬುಲೆನ್ಸ್ನಲ್ಲಿ ಸಾಗಿಸಿದ್ದರು. ಇದಕ್ಕಾಗಿ ಆ ಆಂಬುಲೆನ್ಸ್ ಡ್ರೈವರ್ ಆಗಿದ್ದ ಮೊಹಮ್ಮದ್ ಹನೀಫ್‌ರವರಿಗೆ ರಾಜ್ಯಾದ್ಯಂತ ಪ್ರಶಂಸೆಗಳ ಸುರಿಮಳೆಯಾಗಿತ್ತು.

ಇದಾದ ಎರಡು ಮೂರು ದಿನದ ನಂತರ ‘ಆಂಬುಲೆನ್ಸ್‌ವ ಹೀರೋ ಆದ. ಆಂಬುಲೆನ್ಸ್ ಮುಂದೆ ಪೊಲೀಸ್ ಜೀಪ್ ಓಡಿಸಿದ ಪೊಲೀಸರನ್ನು ಮರೆತವು. ಸ್ವಾತಂತ್ರ್ಯ ಹೋರಾಟದಲ್ಲಿಯೂ ಸಹ ಗಾಂಧೀಜಿಯನ್ನು ಹೀರೋ ಮಾಡಿ ಸುಭಾಷ್ ಚಂದ್ರ ಬೋಸ್‌ರನ್ನು ಮರೆತವು. ನಮ್ಮ ದೇಶದಲ್ಲಿ ಪ್ರಚಾರಕ್ಕೆ ಮಾತ್ರ ಆದ್ಯತೆ, ನಿಷ್ಟೆಗಲ್ಲ ಎಂದು ಹಿಂದೂ ನ್ಯಾಷನಲಿಸ್ಟ್ ವಿಕಾಸ್ ವಿಕ್ಕಿ ಎಂಬುವ ಮಾಡಿದ ಪೋಸ್ಟರ್ ಎಲ್ಲಾ ಕಡೆ ಹರಿದಾಡುತ್ತಿದೆ.

ಯಮವೇಗದಲ್ಲಿ ಜೀಪ್ ಚಲಾಯಿಸುತ್ತಾ ಆಂಬುಲೆನ್ಸ್ಗೆ ದಾರಿ ಮಾಡಿಕೊಟ್ಟ 2012ರ ಬ್ಯಾಚಿನ, ಬಿಜಾಪುರ ಮೂಲದ ಮಂಗಳೂರು ಸಿಟಿ ರಿಸರ್ವ್ ಪೊಲೀಸ್ ಮಾರುತಿ ಡಿ ಯವರಿಗೆ ನಮ್ಮೆಲ್ಲರ ಸಲಾಂ.. ಎಂಬ ಸಂದೇಶ ಕೂಡ ವೈರಲ್ ಆಗಿದೆ.

ಇನ್ನು ಬಿಜೆಪಿಯ ಮಹೇಶ್ ವಿಕ್ರಮ್ ಹೆಗಡೆ ಎಂಬುವವರು ಸಹ “ಮೊನ್ನೆ ಮಂಗಳೂರಿನಿಂದ ಬೆಂಗಳೂರಿಗೆ ಹೋದ ಆಂಬುಲೆನ್ಸ್‌ನ ಮುಂದಿದ್ದ ಪೊಲೀಸ್ ಜೀಪಿನವರು ಇವರೆ” ಎಂದು ಮಾರುತಿ ಎಂಬ ಪೊಲೀಸ್ ಅಧಿಕಾರಿಯ ಫೋಟೊವನ್ನು ಫೇಸ್‌ಬುಕ್‌ನಲ್ಲಿ ಷೇರ್ ಮಾಡಿದ್ದಾರೆ.

ಬಹಳಷ್ಟು ಜನ ಆಂಬುಲೆನ್ಸ್ನ ಮುಸ್ಲಿಂ ಡ್ರೈವರ್‌ನನ್ನು ಮಾತ್ರ ಹೊಗಳುತ್ತಿದ್ದಾರೆ, ಆದರೆ ಹಿಂದೂ ಪೊಲೀಸ್ ಡ್ರೈವರ್‌ನ ಮರೆತುಬಿಟ್ಟಿದ್ದಾರೆ ಎಂದು ಟೀಕೆ ಮಾಡಿದ್ದಾರೆ.

ಆದರೆ ಇದು ಸುಳ್ಳು ಸುದ್ದಿಯಾಗಿದೆ. ಏಕೆಂದರೆ ವಾಸ್ತವದಲ್ಲಿ ಆಂಬುಲೆನ್ಸ್‌ಗೆ ಮಂಗಳೂರಿನಿಂದ ಬೆಂಗಳೂರಿನವರೆಗೆ ಒಂದೇ ಪೈಲೆಟ್ ಜೀಪು ಬರಲು ಪೊಲೀಸ್ ನಿಯಮಾವಳಿಗಳಲ್ಲಿ ಅವಕಾಶವೇ ಇಲ್ಲ. ಹಾಗಾಗಿ ಆಂಬುಲೆನ್ಸ್ ಮಂಗಳೂರಿನಿಂದ ಹೊರಟಾಗ, ಅದಕ್ಕೆ ಮಂಗಳೂರು ಕಮೀಷನರ್ ವ್ಯಾಪ್ತಿಯಲ್ಲಿ ಒಂದು ಜೀಪು ಪೈಲಟ್ ಕೊಟ್ಟು, ಮಂಗಳೂರು ಜಿಲ್ಲಾ ವ್ಯಾಪ್ತಿಗೆ ಬಂದ ತಕ್ಷಣ ಮತ್ತೊಂದು ಜೀಪು, ಹಾಸದ ಗಡಿಯಿಂದ ಇನ್ನೊಂದು ಜೀಪು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮಗದೊಂದು ಜೀಪು ಪೈಲಟ್ ಕೊಟ್ಟಿದೆಯೇ ಹೊರತು ಒಂದೇ ಜೀಪು ಬೆಂಗಳೂರಿನತನಕ ಬಂದಿಲ್ಲ. ಅಲ್ಲದೇ ಅವರು ಷೇರ್ ಮಾಡಿರುವ ಪೊಲೀಸ್ ಜೀಪಿನ ಫೋಟೊ ಸಹ 2016ರ ಕಲ್ಕತ್ತದ ಫೋಟೊವಾಗಿದೆಯೇ ಹೊರತು ಇಲ್ಲಿಯದಲ್ಲ.

3 ಈಸ್ಟ್ ಇಂಡಿಯಾ ಕಂಪನಿ ರಾಮನ ಚಿತ್ರವಿರುವ ನಾಣ್ಯಗಳನ್ನು ಬಿಡುಗಡೆ ಮಾಡಿತ್ತೇ?

ಪೋಸ್ಟ್ ಕಾರ್ಡ್ ಕನ್ನಡ ಫೇಸ್‌ಬುಕ್ ಪುಟ “ಈಸ್ಟ್ ಇಂಡಿಯಾ ಕಂಪನಿ 1818ರಲ್ಲಿಯೇ ರಾಮನ ಚಿತ್ರವಿರುವ ಮತ್ತು ಓಂ ಎಂದು ನಾಣ್ಯಗಳನ್ನು ಬಿಡುಗಡೆ ಮಾಡಿತ್ತು ಎಂದು ಹೇಳಿಕೊಂಡಿದೆ.

ಇದರ ಕುರಿತು ಫ್ಯಾಕ್ಟ್ ಚೆಕ್ ನಡೆಸಿದಾಗ ಅದು ಸುಳ್ಳು ಎಂದು ಗೊತ್ತಾಗಿದೆ. ನಾಣ್ಯಶಾಸ್ತ್ರಜ್ಞ ಮತ್ತು ಲೇಖಕ ಮೋಹಿತ್ ಕಪೂರ್ ಇದು ಯಾರೋ ಫ್ಯಾಂಟಸಿಗಾಗಿ ಮಾಡಿರುವುದೇ ಹೊರತು ನಿಜದ ನಾಣ್ಯಗಳಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

4 ಗಾಂಜಾವು ಕೊರೋನ ವೈರಸ್ ಅನ್ನು ಕೊಲ್ಲುತ್ತದೆಯೇ?

ಈಗ ಎಲ್ಲೆಲ್ಲೂ ಕೊರೋನ ವೈರಸ್ ಮಾತು. ಇಂತಹ ಸಂದರ್ಭದಲ್ಲಿ ಹಲವು ಸುಳ್ಳು ಸುದ್ದಿಗಳು ಸಹ ಓಡಾಡುತ್ತಿವೆ. ಅದರಲ್ಲಿ ಗಾಂಜಾವು ಕರೋನ ವೈರಸ್ ಅನ್ನು ಕೊಲ್ಲುತ್ತದೆ ಎಂಬುದಾಗಿದೆ.

ಸಿನಿಮಾ ನಿರ್ದೇಶಕ ವಿವೇಕ್ ರಂಜನ್ ಅಗ್ನಿಹೋತ್ರಿ ಎಂಬುವವರು ಗಾಂಜಾವು ಕೊರೋನ ವೈರಸ್ ಅನ್ನು ಕೊಲ್ಲುತ್ತದೆ, ಹಾಗಾಗಿ ಅದರ ಮಾರಾಟವನ್ನು ಕಾನೂನುಬದ್ಧಗೊಳಿಸಿ ಎಂದು ಟ್ವೀಟ್ ಮಾಡಿದ್ದಾರೆ.

ಇದು ಸುಳ್ಳು ಸುದ್ದಿಯಾಗಿದ್ದು, ಇದಕ್ಕೆ ಯಾವುದೇ ವೈಜ್ಞಾನಿಕ ಪುರಾವೆಗಳು ಲಭ್ಯವಾಗಿಲ್ಲ. ಅದೇ ರೀತಿ ಡೆಟಾಲ್‌ನಿಂದ ಕೈತೊಳೆದುಕೊಂಡರೆ ಕೊರೋನ ಹರಡುವುದಿಲ್ಲ ಎಂಬ ಮತ್ತೊಂದು ಸುಳ್ಳನ್ನು ಸಹ ಹರಿಬಿಡಲಾಗಿದೆ.

5 ಕೊರೋನ ಪೀಡಿತ 20000 ಜನರನ್ನು ಕೊಲ್ಲಲು ಚೀನಾ ಕೋರ್ಟಿ ಮೆಟ್ಟಿಲೇರಿದೆಯೇ?

ಹೀಗೊಂದು ಸುದ್ದಿ ಹರಿದಾಡುತ್ತಿದೆ. ಮಧು ಪೂರ್ಣಿಮ ಕಿಶ್ವರ್ ಎಂಬ ಬಲಪಂಥೀಯ ಕಾರ್ಯಕರ್ತೆ “ಮಾನವೀಯತೆ ಇಲ್ಲದ ಕಮ್ಯುನಿಸ್ಟರು ಜನರನ್ನು ಸಾಯಿಸುತ್ತಾರೆ” ಎಂದು ಆರೋಪಿಸಿ ಎಬಿ-ಟಿಸಿ ಎಂಬುದರಲ್ಲಿ ಬಂದ ಲೇಖನ ಷೇರ್ ಮಾಡಿದ್ದಾರೆ.

ಆದರೆ ಅವರು ಹಾಕಿರುವ ಲೇಖನ ಸುಳ್ಳಾಗಿದೆ. ಮತ್ತು ಎಬಿ-ಟಿಸಿ ಎಂಬುದು ಫೇಕ್‌ನ್ಯೂಸ್ ಹರಡುವ ವೆಬ್‌ಸೈಟ್ ಆಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಭಯಂಕರ ಫೇಕ್ ನ್ಯೂಸ್ ಗಳು ಈ ತರಹದ ಫೇಕ್ ನ್ಯೂಸ್ ಹರಡುವವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು.

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...