Homeನಿಜವೋ ಸುಳ್ಳೋನೀವು ನಂಬಿಯೇಬಿಟ್ಟಿದ್ದ ಕಳೆದ ವಾರದ ಫೇಕ್‌ನ್ಯೂಸ್‌ಗಳು ಯಾವುವು ಗೊತ್ತೆ?

ನೀವು ನಂಬಿಯೇಬಿಟ್ಟಿದ್ದ ಕಳೆದ ವಾರದ ಫೇಕ್‌ನ್ಯೂಸ್‌ಗಳು ಯಾವುವು ಗೊತ್ತೆ?

- Advertisement -
- Advertisement -

1 ಕೊರೋನಾ ವೈರಸ್ ತಗುಲಿ ಸಾವಿರಾರು ಜನ ರಸ್ತೆಯಲ್ಲಿಯೇ ಮೃತಪಟ್ಟರೆ?

ಈ ಚಿತ್ರವನ್ನು ನಿಮ್ಮ ಫೇಸ್‌ಬುಕ್ ಅಥವಾ ವಾಟ್ಸಾಪ್‌ನಲ್ಲಿ ನೋಡಿರಬಹುದು. ಕೊರೋನಾ ವೈರಸ್ ತಗುಲಿ ಸಾವಿರಾರು ಜನ ರಸ್ತೆಯಲ್ಲಿಯೇ ಮೃತಪಟ್ಟಿದ್ದಾರೆ ಎಂಬ ಹೆಡ್‌ಲೈನ್ ಕೂಡ ಕೊಟ್ಟಿರಬಹುದು ಅಲ್ಲವೇ? ಬಹಳಷ್ಟು ಜನ ಇದನ್ನು ನಂಬಿಬಿಟ್ಟಿದ್ದಾರೆ.

ಇದನ್ನು ಫ್ಯಾಕ್ಟ್ ಚೆಕ್ ನಡೆಸುವ ಸಲುವಾಗಿ ಗೂಗಲ್‌ನಲ್ಲಿ ರಿವರ್ಸ್ ಇಮೇಜ್ ಸರ್ಚ್ ಮಾಡಿದಾಗ ಸತ್ಯ ತಿಳಿದುಬಂದಿದೆ. ಅದರಂತೆ ಇದು ಕೊರೋನ ವೈರಸ್‌ನಿಂದ ಸತ್ತ ವ್ಯಕ್ತಿಗಳ ಚಿತ್ರವಲ್ಲ ಎಂದು ತಿಳಿದುಬಂದಿದೆ.

ಈ ಚಿತ್ರವನ್ನು ಹಿಂದೂಸ್ತಾನ್ ಟೈಮ್ಸ್ ಪತ್ರಿಕೆಯು 2014 ರಲ್ಲಿಯೇ ಪ್ರಕಟಿಸಿದೆ. ಅವರ ಫೋಟೋ ಪ್ರಬಂಧದ ವರದಿಯ ಪ್ರಕಾರ, “ಫ್ರಾಂಕ್‌ಫರ್ಟ್ನಲ್ಲಿರುವ ಕಾಟ್ಜ್ಬಾಚ್ ‘ನಾಜಿ ಕಾನ್ಸಂಟ್ರೇಶನ್ ಕ್ಯಾಂಪ್‌ನಲ್ಲಿ” ಸತ್ತ 528 ಸಂತ್ರಸ್ತರನ್ನು ಸ್ಮರಿಸುವ ಸಲುವಾಗಿ ಕಲಾ ಯೋಜನೆಯ ಭಾಗವಾಗಿ ಜನರು ಪಾದಚಾರಿ ವಲಯದಲ್ಲಿ ಮಲಗಿರುವುದಾಗಿದೆ”. ಈ ಚಿತ್ರವನ್ನು ರಾಯಿಟರ್ಸ್ ತೆಗೆದಿದೆ. ಅಂದರೆ ಇದು ಅಣುಕು ಪ್ರದರ್ಶನವೇ ಹೊರತು ಸತ್ತಿರುವುದಲ್ಲ ಎಂಬುದು ಸ್ಪಷ್ಟವಾಗಿದೆ.

ಹಿಂದೂಸ್ತಾನ್‌ ಟೈಮ್ಸ್‌ನಲ್ಲಿ ಪ್ರಕಟವಾದ ನಿಜವಾದ ಚಿತ್ರ..

2 ಮಂಗಳೂರಿನಿಂದ ಬೆಂಗಳೂರುವರೆಗೆ ಆಂಬುಲೆನ್ಸ್ ಮುಂದೆ ಒಂದೇ ಪೊಲೀಸ್ ವಾಹನ ಸಂಚರಿಸಿತೇ?

ಹೃದಯಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ 40 ದಿನದ ಹಸಿಗೂಸನ್ನು ಫೆಬ್ರವರಿ 6 ರಂದು ಮಂಗಳೂರಿನಿಂದ ಬೆಂಗಳೂರಿನ ಆಸ್ಪತ್ರೆಗೆ ಝೀರೋ ಟ್ರಾಫಿಕ್‌ನಲ್ಲಿ ಕೇವಲ 4 ಗಂಟೆ 15 ನಿಮಿಷದಲ್ಲಿ ಆಂಬುಲೆನ್ಸ್ನಲ್ಲಿ ಸಾಗಿಸಿದ್ದರು. ಇದಕ್ಕಾಗಿ ಆ ಆಂಬುಲೆನ್ಸ್ ಡ್ರೈವರ್ ಆಗಿದ್ದ ಮೊಹಮ್ಮದ್ ಹನೀಫ್‌ರವರಿಗೆ ರಾಜ್ಯಾದ್ಯಂತ ಪ್ರಶಂಸೆಗಳ ಸುರಿಮಳೆಯಾಗಿತ್ತು.

ಇದಾದ ಎರಡು ಮೂರು ದಿನದ ನಂತರ ‘ಆಂಬುಲೆನ್ಸ್‌ವ ಹೀರೋ ಆದ. ಆಂಬುಲೆನ್ಸ್ ಮುಂದೆ ಪೊಲೀಸ್ ಜೀಪ್ ಓಡಿಸಿದ ಪೊಲೀಸರನ್ನು ಮರೆತವು. ಸ್ವಾತಂತ್ರ್ಯ ಹೋರಾಟದಲ್ಲಿಯೂ ಸಹ ಗಾಂಧೀಜಿಯನ್ನು ಹೀರೋ ಮಾಡಿ ಸುಭಾಷ್ ಚಂದ್ರ ಬೋಸ್‌ರನ್ನು ಮರೆತವು. ನಮ್ಮ ದೇಶದಲ್ಲಿ ಪ್ರಚಾರಕ್ಕೆ ಮಾತ್ರ ಆದ್ಯತೆ, ನಿಷ್ಟೆಗಲ್ಲ ಎಂದು ಹಿಂದೂ ನ್ಯಾಷನಲಿಸ್ಟ್ ವಿಕಾಸ್ ವಿಕ್ಕಿ ಎಂಬುವ ಮಾಡಿದ ಪೋಸ್ಟರ್ ಎಲ್ಲಾ ಕಡೆ ಹರಿದಾಡುತ್ತಿದೆ.

ಯಮವೇಗದಲ್ಲಿ ಜೀಪ್ ಚಲಾಯಿಸುತ್ತಾ ಆಂಬುಲೆನ್ಸ್ಗೆ ದಾರಿ ಮಾಡಿಕೊಟ್ಟ 2012ರ ಬ್ಯಾಚಿನ, ಬಿಜಾಪುರ ಮೂಲದ ಮಂಗಳೂರು ಸಿಟಿ ರಿಸರ್ವ್ ಪೊಲೀಸ್ ಮಾರುತಿ ಡಿ ಯವರಿಗೆ ನಮ್ಮೆಲ್ಲರ ಸಲಾಂ.. ಎಂಬ ಸಂದೇಶ ಕೂಡ ವೈರಲ್ ಆಗಿದೆ.

ಇನ್ನು ಬಿಜೆಪಿಯ ಮಹೇಶ್ ವಿಕ್ರಮ್ ಹೆಗಡೆ ಎಂಬುವವರು ಸಹ “ಮೊನ್ನೆ ಮಂಗಳೂರಿನಿಂದ ಬೆಂಗಳೂರಿಗೆ ಹೋದ ಆಂಬುಲೆನ್ಸ್‌ನ ಮುಂದಿದ್ದ ಪೊಲೀಸ್ ಜೀಪಿನವರು ಇವರೆ” ಎಂದು ಮಾರುತಿ ಎಂಬ ಪೊಲೀಸ್ ಅಧಿಕಾರಿಯ ಫೋಟೊವನ್ನು ಫೇಸ್‌ಬುಕ್‌ನಲ್ಲಿ ಷೇರ್ ಮಾಡಿದ್ದಾರೆ.

ಬಹಳಷ್ಟು ಜನ ಆಂಬುಲೆನ್ಸ್ನ ಮುಸ್ಲಿಂ ಡ್ರೈವರ್‌ನನ್ನು ಮಾತ್ರ ಹೊಗಳುತ್ತಿದ್ದಾರೆ, ಆದರೆ ಹಿಂದೂ ಪೊಲೀಸ್ ಡ್ರೈವರ್‌ನ ಮರೆತುಬಿಟ್ಟಿದ್ದಾರೆ ಎಂದು ಟೀಕೆ ಮಾಡಿದ್ದಾರೆ.

ಆದರೆ ಇದು ಸುಳ್ಳು ಸುದ್ದಿಯಾಗಿದೆ. ಏಕೆಂದರೆ ವಾಸ್ತವದಲ್ಲಿ ಆಂಬುಲೆನ್ಸ್‌ಗೆ ಮಂಗಳೂರಿನಿಂದ ಬೆಂಗಳೂರಿನವರೆಗೆ ಒಂದೇ ಪೈಲೆಟ್ ಜೀಪು ಬರಲು ಪೊಲೀಸ್ ನಿಯಮಾವಳಿಗಳಲ್ಲಿ ಅವಕಾಶವೇ ಇಲ್ಲ. ಹಾಗಾಗಿ ಆಂಬುಲೆನ್ಸ್ ಮಂಗಳೂರಿನಿಂದ ಹೊರಟಾಗ, ಅದಕ್ಕೆ ಮಂಗಳೂರು ಕಮೀಷನರ್ ವ್ಯಾಪ್ತಿಯಲ್ಲಿ ಒಂದು ಜೀಪು ಪೈಲಟ್ ಕೊಟ್ಟು, ಮಂಗಳೂರು ಜಿಲ್ಲಾ ವ್ಯಾಪ್ತಿಗೆ ಬಂದ ತಕ್ಷಣ ಮತ್ತೊಂದು ಜೀಪು, ಹಾಸದ ಗಡಿಯಿಂದ ಇನ್ನೊಂದು ಜೀಪು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮಗದೊಂದು ಜೀಪು ಪೈಲಟ್ ಕೊಟ್ಟಿದೆಯೇ ಹೊರತು ಒಂದೇ ಜೀಪು ಬೆಂಗಳೂರಿನತನಕ ಬಂದಿಲ್ಲ. ಅಲ್ಲದೇ ಅವರು ಷೇರ್ ಮಾಡಿರುವ ಪೊಲೀಸ್ ಜೀಪಿನ ಫೋಟೊ ಸಹ 2016ರ ಕಲ್ಕತ್ತದ ಫೋಟೊವಾಗಿದೆಯೇ ಹೊರತು ಇಲ್ಲಿಯದಲ್ಲ.

3 ಈಸ್ಟ್ ಇಂಡಿಯಾ ಕಂಪನಿ ರಾಮನ ಚಿತ್ರವಿರುವ ನಾಣ್ಯಗಳನ್ನು ಬಿಡುಗಡೆ ಮಾಡಿತ್ತೇ?

ಪೋಸ್ಟ್ ಕಾರ್ಡ್ ಕನ್ನಡ ಫೇಸ್‌ಬುಕ್ ಪುಟ “ಈಸ್ಟ್ ಇಂಡಿಯಾ ಕಂಪನಿ 1818ರಲ್ಲಿಯೇ ರಾಮನ ಚಿತ್ರವಿರುವ ಮತ್ತು ಓಂ ಎಂದು ನಾಣ್ಯಗಳನ್ನು ಬಿಡುಗಡೆ ಮಾಡಿತ್ತು ಎಂದು ಹೇಳಿಕೊಂಡಿದೆ.

ಇದರ ಕುರಿತು ಫ್ಯಾಕ್ಟ್ ಚೆಕ್ ನಡೆಸಿದಾಗ ಅದು ಸುಳ್ಳು ಎಂದು ಗೊತ್ತಾಗಿದೆ. ನಾಣ್ಯಶಾಸ್ತ್ರಜ್ಞ ಮತ್ತು ಲೇಖಕ ಮೋಹಿತ್ ಕಪೂರ್ ಇದು ಯಾರೋ ಫ್ಯಾಂಟಸಿಗಾಗಿ ಮಾಡಿರುವುದೇ ಹೊರತು ನಿಜದ ನಾಣ್ಯಗಳಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

4 ಗಾಂಜಾವು ಕೊರೋನ ವೈರಸ್ ಅನ್ನು ಕೊಲ್ಲುತ್ತದೆಯೇ?

ಈಗ ಎಲ್ಲೆಲ್ಲೂ ಕೊರೋನ ವೈರಸ್ ಮಾತು. ಇಂತಹ ಸಂದರ್ಭದಲ್ಲಿ ಹಲವು ಸುಳ್ಳು ಸುದ್ದಿಗಳು ಸಹ ಓಡಾಡುತ್ತಿವೆ. ಅದರಲ್ಲಿ ಗಾಂಜಾವು ಕರೋನ ವೈರಸ್ ಅನ್ನು ಕೊಲ್ಲುತ್ತದೆ ಎಂಬುದಾಗಿದೆ.

ಸಿನಿಮಾ ನಿರ್ದೇಶಕ ವಿವೇಕ್ ರಂಜನ್ ಅಗ್ನಿಹೋತ್ರಿ ಎಂಬುವವರು ಗಾಂಜಾವು ಕೊರೋನ ವೈರಸ್ ಅನ್ನು ಕೊಲ್ಲುತ್ತದೆ, ಹಾಗಾಗಿ ಅದರ ಮಾರಾಟವನ್ನು ಕಾನೂನುಬದ್ಧಗೊಳಿಸಿ ಎಂದು ಟ್ವೀಟ್ ಮಾಡಿದ್ದಾರೆ.

ಇದು ಸುಳ್ಳು ಸುದ್ದಿಯಾಗಿದ್ದು, ಇದಕ್ಕೆ ಯಾವುದೇ ವೈಜ್ಞಾನಿಕ ಪುರಾವೆಗಳು ಲಭ್ಯವಾಗಿಲ್ಲ. ಅದೇ ರೀತಿ ಡೆಟಾಲ್‌ನಿಂದ ಕೈತೊಳೆದುಕೊಂಡರೆ ಕೊರೋನ ಹರಡುವುದಿಲ್ಲ ಎಂಬ ಮತ್ತೊಂದು ಸುಳ್ಳನ್ನು ಸಹ ಹರಿಬಿಡಲಾಗಿದೆ.

5 ಕೊರೋನ ಪೀಡಿತ 20000 ಜನರನ್ನು ಕೊಲ್ಲಲು ಚೀನಾ ಕೋರ್ಟಿ ಮೆಟ್ಟಿಲೇರಿದೆಯೇ?

ಹೀಗೊಂದು ಸುದ್ದಿ ಹರಿದಾಡುತ್ತಿದೆ. ಮಧು ಪೂರ್ಣಿಮ ಕಿಶ್ವರ್ ಎಂಬ ಬಲಪಂಥೀಯ ಕಾರ್ಯಕರ್ತೆ “ಮಾನವೀಯತೆ ಇಲ್ಲದ ಕಮ್ಯುನಿಸ್ಟರು ಜನರನ್ನು ಸಾಯಿಸುತ್ತಾರೆ” ಎಂದು ಆರೋಪಿಸಿ ಎಬಿ-ಟಿಸಿ ಎಂಬುದರಲ್ಲಿ ಬಂದ ಲೇಖನ ಷೇರ್ ಮಾಡಿದ್ದಾರೆ.

ಆದರೆ ಅವರು ಹಾಕಿರುವ ಲೇಖನ ಸುಳ್ಳಾಗಿದೆ. ಮತ್ತು ಎಬಿ-ಟಿಸಿ ಎಂಬುದು ಫೇಕ್‌ನ್ಯೂಸ್ ಹರಡುವ ವೆಬ್‌ಸೈಟ್ ಆಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಭಯಂಕರ ಫೇಕ್ ನ್ಯೂಸ್ ಗಳು ಈ ತರಹದ ಫೇಕ್ ನ್ಯೂಸ್ ಹರಡುವವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು.

LEAVE A REPLY

Please enter your comment!
Please enter your name here

- Advertisment -

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...