Homeಮುಖಪುಟಕಳೆದ ವರ್ಷದ ಕೌನ್ಸಲಿಂಗ್‌, ಈ ವರ್ಷದ ಪರೀಕ್ಷೆ ಏಕಕಾಲದಲ್ಲಿ ಎದುರಿಸಲು ಸಾಧ್ಯವೇ?: NEET-PG ಆಕಾಂಕ್ಷಿಗಳ ಅಳಲು

ಕಳೆದ ವರ್ಷದ ಕೌನ್ಸಲಿಂಗ್‌, ಈ ವರ್ಷದ ಪರೀಕ್ಷೆ ಏಕಕಾಲದಲ್ಲಿ ಎದುರಿಸಲು ಸಾಧ್ಯವೇ?: NEET-PG ಆಕಾಂಕ್ಷಿಗಳ ಅಳಲು

- Advertisement -
- Advertisement -

ಎನ್‌ಇಇಟಿ-ಪಿಜಿ (The National Entrance cum Eligibility Test Postgraduate)ಯನ್ನು ಮೇ 21ರಂದು ನಿಗದಿಪಡಿಸಲಾಗಿದೆ. ಆದರೆ ಪರೀಕ್ಷಾ ತಯಾರಿಗೆ ಯಾವುದೇ ಸಮಯವನ್ನು ನೀಡಿಲ್ಲ ಎಂದು ಪರೀಕ್ಷೆಯ ಆಕಾಂಕ್ಷಿಗಳು ಆತಂಕಿತರಾಗಿದ್ದಾರೆ.

ಅನೇಕ ರಾಜ್ಯಗಳಲ್ಲಿ NEET-PG 2021ರ ಕೌನ್ಸೆಲಿಂಗ್ ಇನ್ನೂ ಮುಗಿದಿಲ್ಲ. ಹಲವಾರು ವಿದ್ಯಾರ್ಥಿಗಳು ಕೌನ್ಸೆಲಿಂಗ್‌ಗೆ ಹಾಜರಾಗುತ್ತಲೇ ಇದ್ದಾರೆ. ನಮ್ಮಲ್ಲಿ ಅನೇಕರು ಒಂದು ಸ್ಥಳದಲ್ಲಿ ಕೌನ್ಸೆಲಿಂಗ್‌ಗೆ ಹಾಜರಾಗಿರುತ್ತಾರೆ. ಹೀಗಿರುವಾಗ ಇನ್ನೊಂದು ಸ್ಥಳದಲ್ಲಿ ಪರೀಕ್ಷೆಗೆ ಹಾಜರಾಗಲು ಹೇಗೆ ಸಾಧ್ಯ? ಎಂದು ಆಕಾಂಕ್ಷಿಗಳು ಪ್ರಶ್ನಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಮೇ 21ರಂದು ನಡೆಸಲಿರುವ NEET-PG 2022 ಪರೀಕ್ಷೆಯನ್ನು ಬರೆಯಲು ನಾನು ನಿರ್ಧರಿಸಿದ್ದೇನೆ. NEET-PG 2021 ಪರೀಕ್ಷೆಯ ಕೌನ್ಸೆಲಿಂಗ್ ಇನ್ನೂ ಹಲವು ರಾಜ್ಯಗಳಲ್ಲಿ ಮುಗಿದಿಲ್ಲ. ಕೆಲವು ರಾಜ್ಯಗಳಲ್ಲಿ ಅದನ್ನು ಮುಂದೂಡಲಾಗಿದೆ. ಕೌನ್ಸಲಿಂಗ್‌ ಹಾಗೂ ಕೆಲವೇ ದಿನಗಳ ಅಂತರದಲ್ಲಿ ಪರೀಕ್ಷೆಯನ್ನು ಎದುರಿಸಬೇಕೆಂದು ನೀವು ಹೇಗೆ ನಿರೀಕ್ಷಿಸುತ್ತೀರಿ?” ಎಂದು ನೀಟ್‌-ಪಿಜಿ ಆಕಾಂಕ್ಷಿ ಡಾ.ವಿದ್ಯಾ ಎಂಬವರು ಕೇಳಿರುವುದಾಗಿ ‘ದಿ ಕ್ವಿಂಟ್‌’ ವರದಿ ಮಾಡಿದೆ.

“ವೈದ್ಯರ ಜೀವನ ಎಷ್ಟು ಕಷ್ಟ, ನೀಟ್-ಪಿಜಿ ಓದುವುದು ಎಷ್ಟು ಕಷ್ಟ ಎಂದು ಅವರಿಗೆ ಅರ್ಥವಾಗುವುದಿಲ್ಲ ಎಂದು ನಾನು ಭಾವಿಸುತ್ತೇನೆ. ಇದು ನಾವು 5 ವರ್ಷಗಳ ಅವಧಿಯಲ್ಲಿ ಕಲಿತದ್ದು. ನಾವು ಏನನ್ನು ಅನುಭವಿಸುತ್ತಿದ್ದೇವೆ ಎಂಬುದು ಯಾರಿಗೂ ಅರ್ಥವಾಗುತ್ತಿಲ್ಲ” ಎಂಉ ವಿಷಾದಿಸಿದ್ದಾರೆ ವಿದ್ಯಾ.

ಇದನ್ನೂ ಓದಿರಿ: ವಿಶೇಷ ವರದಿ: ಪಿಎಸ್‌ಐ ಪರೀಕ್ಷೆ ಅಕ್ರಮ ಒಂದೇ ಅಲ್ಲ, ಶಿಕ್ಷಣದ ಅವ್ಯವಸ್ಥೆಗೆ ಕೊನೆಯೇ ಇಲ್ಲ!

ಮತ್ತೊಬ್ಬ ಆಕಾಂಕ್ಷಿ ಡಾ.ರೇಷ್ಮಾ ಪ್ರತಿಕ್ರಿಯೆ ನೀಡಿದ್ದು, “ನಾವು ಮೇ 7 ರಂದು ನಮ್ಮ (NEET-PG 2021) ಕೌನ್ಸೆಲಿಂಗ್ ಅನ್ನು ಪೂರ್ಣಗೊಳಿಸಿದ್ದೇವೆ ಮತ್ತು ಪರೀಕ್ಷೆಯನ್ನು ಮೇ 21 ಕ್ಕೆ ನಿಗದಿಪಡಿಸಲಾಗಿದೆ. 14 ದಿನಗಳ ಒಳಗೆ 19 ವಿಷಯಗಳಿಗೆ ನಾವು ಸಿದ್ಧರಾಗಬೇಕೆಂದು ನೀವು ನಿರೀಕ್ಷಿಸುತ್ತಿದ್ದೀರೆಂದು ನಮಗೆ ತಿಳಿದಿಲ್ಲ” ಎಂದಿದ್ದಾರೆ.

ಮುಂದುವರಿದು, ಪ್ರಮುಖ ವಿಷಯಗಳನ್ನು ಅತ್ಯಂತ ವೇಗವಾಗಿ ಅವಲೋಕಿಸುತ್ತೇನೆ ಎಂದರೂ ಕನಿಷ್ಠ ಮೂರು ದಿನಗಳು ಬೇಕಾಗುತ್ತವೆ. ಕೌನ್ಸೆಲಿಂಗ್‌ನಲ್ಲಿ ಸೀಟು ಸಿಗದಿರುವ ಮಧ್ಯಮ ಶ್ರೇಣಿಯವರ ಪರಿಸ್ಥಿತಿ ಏನಾಗಬಹುದು? ನೋಂದಣಿಯ ಬಾಗಿಲು ಕೂಡ ಮುಚ್ಚಲಾಗಿದೆ. ಅವರು ಪರೀಕ್ಷೆಗೆ ಅರ್ಜಿ ಸಲ್ಲಿಸುವುದು ಹೇಗೆ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿರಿ: ಪೆದ್ದನಹಳ್ಳಿ ದಲಿತರ ಹತ್ಯೆ ಪ್ರಕರಣ: ಅನುಮಾನಕ್ಕೆ ಆಸ್ಪದ ನೀಡಿದ ತನಿಖಾಧಿಕಾರಿಗಳ ಜಾತಿ, ಹಿನ್ನೆಲೆ; ಆರೋಪ

ನಾವು ಆರೋಗ್ಯ ಸಚಿವ ಡಾ. ಮನ್ಸುಖ್ ಮಾಂಡವಿಯಾ ಸೇರಿದಂತೆ ಹಲವಾರು ಸಚಿವರೊಂದಿಗೆ ಮಾತನಾಡಲು ಪ್ರಯತ್ನಿಸುತ್ತಿದ್ದೇವೆ. ಆದರೆ ನಮ್ಮ ಮನವಿಗಳಿಗೆ ಅವರು ಕಿವುಡರಾಗಿದ್ದಾರೆ. ನಮ್ಮ ಪರೀಕ್ಷೆಗಳನ್ನು ಮುಂದೂಡುವಂತೆ ನಾವು ರಾಷ್ಟ್ರೀಯ ಪರೀಕ್ಷಾ ಮಂಡಳಿ (NBE) ಮತ್ತು ವೈದ್ಯಕೀಯ ಕೌನ್ಸೆಲಿಂಗ್ ಸಮಿತಿ (MCC)ಗೆ ಮನವಿ ಮಾಡುತ್ತಿದ್ದೇವೆ. ಆದರೆ ಇನ್ನೂ ಯಾವುದೇ ನಿರ್ಧಾರವನ್ನು ತೆಗೆದುಕೊಂಡಿಲ್ಲ ಎಂದಿದ್ದಾರೆ ಆಕಾಂಕ್ಷಿಗಳು.

“ನಾವು ಈ ವಿಷಯಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ಮೆಟ್ಟಿಲನ್ನೂ ಏರಿದ್ದೇವೆ. ಮೇಲ್ಮನವಿಯನ್ನು ಆಲಿಸುವುದಾಗಿ ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ” ಎಂದು ತಿಳಿಸಿದ್ದಾರೆ.

ಸಾಂಕ್ರಾಮಿಕ ಸಮಯದಲ್ಲಿ ನಾವು ನಿಸ್ವಾರ್ಥವಾಗಿ ದೇಶಕ್ಕೆ ಸೇವೆ ಸಲ್ಲಿಸಿದ್ದೇವೆ. ನಮ್ಮ ರಕ್ತ, ಬೆವರು ಮತ್ತು ಕಣ್ಣೀರು ಕೋವಿಡ್‌ನಂತಹ ತೊಂದರೆಯೊಂದೆ ಮತ್ತೆ ಬರಬೇಕೆಂದು ನೀವು ಬಯಸುವುದಿಲ್ಲ ಎಂದು ಭಾವಿಸುತ್ತೇವೆ. ದಯವಿಟ್ಟು NEET-PG 2022 ಪರೀಕ್ಷೆಯನ್ನು ಕನಿಷ್ಠ 8 ರಿಂದ 10 ವಾರಗಳವರೆಗೆ ಮುಂದೂಡಿ” ಎಂದು ವಿನಂತಿಸಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...