Homeಮುಖಪುಟಕಳೆದ ವರ್ಷದ ಕೌನ್ಸಲಿಂಗ್‌, ಈ ವರ್ಷದ ಪರೀಕ್ಷೆ ಏಕಕಾಲದಲ್ಲಿ ಎದುರಿಸಲು ಸಾಧ್ಯವೇ?: NEET-PG ಆಕಾಂಕ್ಷಿಗಳ ಅಳಲು

ಕಳೆದ ವರ್ಷದ ಕೌನ್ಸಲಿಂಗ್‌, ಈ ವರ್ಷದ ಪರೀಕ್ಷೆ ಏಕಕಾಲದಲ್ಲಿ ಎದುರಿಸಲು ಸಾಧ್ಯವೇ?: NEET-PG ಆಕಾಂಕ್ಷಿಗಳ ಅಳಲು

- Advertisement -
- Advertisement -

ಎನ್‌ಇಇಟಿ-ಪಿಜಿ (The National Entrance cum Eligibility Test Postgraduate)ಯನ್ನು ಮೇ 21ರಂದು ನಿಗದಿಪಡಿಸಲಾಗಿದೆ. ಆದರೆ ಪರೀಕ್ಷಾ ತಯಾರಿಗೆ ಯಾವುದೇ ಸಮಯವನ್ನು ನೀಡಿಲ್ಲ ಎಂದು ಪರೀಕ್ಷೆಯ ಆಕಾಂಕ್ಷಿಗಳು ಆತಂಕಿತರಾಗಿದ್ದಾರೆ.

ಅನೇಕ ರಾಜ್ಯಗಳಲ್ಲಿ NEET-PG 2021ರ ಕೌನ್ಸೆಲಿಂಗ್ ಇನ್ನೂ ಮುಗಿದಿಲ್ಲ. ಹಲವಾರು ವಿದ್ಯಾರ್ಥಿಗಳು ಕೌನ್ಸೆಲಿಂಗ್‌ಗೆ ಹಾಜರಾಗುತ್ತಲೇ ಇದ್ದಾರೆ. ನಮ್ಮಲ್ಲಿ ಅನೇಕರು ಒಂದು ಸ್ಥಳದಲ್ಲಿ ಕೌನ್ಸೆಲಿಂಗ್‌ಗೆ ಹಾಜರಾಗಿರುತ್ತಾರೆ. ಹೀಗಿರುವಾಗ ಇನ್ನೊಂದು ಸ್ಥಳದಲ್ಲಿ ಪರೀಕ್ಷೆಗೆ ಹಾಜರಾಗಲು ಹೇಗೆ ಸಾಧ್ಯ? ಎಂದು ಆಕಾಂಕ್ಷಿಗಳು ಪ್ರಶ್ನಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಮೇ 21ರಂದು ನಡೆಸಲಿರುವ NEET-PG 2022 ಪರೀಕ್ಷೆಯನ್ನು ಬರೆಯಲು ನಾನು ನಿರ್ಧರಿಸಿದ್ದೇನೆ. NEET-PG 2021 ಪರೀಕ್ಷೆಯ ಕೌನ್ಸೆಲಿಂಗ್ ಇನ್ನೂ ಹಲವು ರಾಜ್ಯಗಳಲ್ಲಿ ಮುಗಿದಿಲ್ಲ. ಕೆಲವು ರಾಜ್ಯಗಳಲ್ಲಿ ಅದನ್ನು ಮುಂದೂಡಲಾಗಿದೆ. ಕೌನ್ಸಲಿಂಗ್‌ ಹಾಗೂ ಕೆಲವೇ ದಿನಗಳ ಅಂತರದಲ್ಲಿ ಪರೀಕ್ಷೆಯನ್ನು ಎದುರಿಸಬೇಕೆಂದು ನೀವು ಹೇಗೆ ನಿರೀಕ್ಷಿಸುತ್ತೀರಿ?” ಎಂದು ನೀಟ್‌-ಪಿಜಿ ಆಕಾಂಕ್ಷಿ ಡಾ.ವಿದ್ಯಾ ಎಂಬವರು ಕೇಳಿರುವುದಾಗಿ ‘ದಿ ಕ್ವಿಂಟ್‌’ ವರದಿ ಮಾಡಿದೆ.

“ವೈದ್ಯರ ಜೀವನ ಎಷ್ಟು ಕಷ್ಟ, ನೀಟ್-ಪಿಜಿ ಓದುವುದು ಎಷ್ಟು ಕಷ್ಟ ಎಂದು ಅವರಿಗೆ ಅರ್ಥವಾಗುವುದಿಲ್ಲ ಎಂದು ನಾನು ಭಾವಿಸುತ್ತೇನೆ. ಇದು ನಾವು 5 ವರ್ಷಗಳ ಅವಧಿಯಲ್ಲಿ ಕಲಿತದ್ದು. ನಾವು ಏನನ್ನು ಅನುಭವಿಸುತ್ತಿದ್ದೇವೆ ಎಂಬುದು ಯಾರಿಗೂ ಅರ್ಥವಾಗುತ್ತಿಲ್ಲ” ಎಂಉ ವಿಷಾದಿಸಿದ್ದಾರೆ ವಿದ್ಯಾ.

ಇದನ್ನೂ ಓದಿರಿ: ವಿಶೇಷ ವರದಿ: ಪಿಎಸ್‌ಐ ಪರೀಕ್ಷೆ ಅಕ್ರಮ ಒಂದೇ ಅಲ್ಲ, ಶಿಕ್ಷಣದ ಅವ್ಯವಸ್ಥೆಗೆ ಕೊನೆಯೇ ಇಲ್ಲ!

ಮತ್ತೊಬ್ಬ ಆಕಾಂಕ್ಷಿ ಡಾ.ರೇಷ್ಮಾ ಪ್ರತಿಕ್ರಿಯೆ ನೀಡಿದ್ದು, “ನಾವು ಮೇ 7 ರಂದು ನಮ್ಮ (NEET-PG 2021) ಕೌನ್ಸೆಲಿಂಗ್ ಅನ್ನು ಪೂರ್ಣಗೊಳಿಸಿದ್ದೇವೆ ಮತ್ತು ಪರೀಕ್ಷೆಯನ್ನು ಮೇ 21 ಕ್ಕೆ ನಿಗದಿಪಡಿಸಲಾಗಿದೆ. 14 ದಿನಗಳ ಒಳಗೆ 19 ವಿಷಯಗಳಿಗೆ ನಾವು ಸಿದ್ಧರಾಗಬೇಕೆಂದು ನೀವು ನಿರೀಕ್ಷಿಸುತ್ತಿದ್ದೀರೆಂದು ನಮಗೆ ತಿಳಿದಿಲ್ಲ” ಎಂದಿದ್ದಾರೆ.

ಮುಂದುವರಿದು, ಪ್ರಮುಖ ವಿಷಯಗಳನ್ನು ಅತ್ಯಂತ ವೇಗವಾಗಿ ಅವಲೋಕಿಸುತ್ತೇನೆ ಎಂದರೂ ಕನಿಷ್ಠ ಮೂರು ದಿನಗಳು ಬೇಕಾಗುತ್ತವೆ. ಕೌನ್ಸೆಲಿಂಗ್‌ನಲ್ಲಿ ಸೀಟು ಸಿಗದಿರುವ ಮಧ್ಯಮ ಶ್ರೇಣಿಯವರ ಪರಿಸ್ಥಿತಿ ಏನಾಗಬಹುದು? ನೋಂದಣಿಯ ಬಾಗಿಲು ಕೂಡ ಮುಚ್ಚಲಾಗಿದೆ. ಅವರು ಪರೀಕ್ಷೆಗೆ ಅರ್ಜಿ ಸಲ್ಲಿಸುವುದು ಹೇಗೆ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿರಿ: ಪೆದ್ದನಹಳ್ಳಿ ದಲಿತರ ಹತ್ಯೆ ಪ್ರಕರಣ: ಅನುಮಾನಕ್ಕೆ ಆಸ್ಪದ ನೀಡಿದ ತನಿಖಾಧಿಕಾರಿಗಳ ಜಾತಿ, ಹಿನ್ನೆಲೆ; ಆರೋಪ

ನಾವು ಆರೋಗ್ಯ ಸಚಿವ ಡಾ. ಮನ್ಸುಖ್ ಮಾಂಡವಿಯಾ ಸೇರಿದಂತೆ ಹಲವಾರು ಸಚಿವರೊಂದಿಗೆ ಮಾತನಾಡಲು ಪ್ರಯತ್ನಿಸುತ್ತಿದ್ದೇವೆ. ಆದರೆ ನಮ್ಮ ಮನವಿಗಳಿಗೆ ಅವರು ಕಿವುಡರಾಗಿದ್ದಾರೆ. ನಮ್ಮ ಪರೀಕ್ಷೆಗಳನ್ನು ಮುಂದೂಡುವಂತೆ ನಾವು ರಾಷ್ಟ್ರೀಯ ಪರೀಕ್ಷಾ ಮಂಡಳಿ (NBE) ಮತ್ತು ವೈದ್ಯಕೀಯ ಕೌನ್ಸೆಲಿಂಗ್ ಸಮಿತಿ (MCC)ಗೆ ಮನವಿ ಮಾಡುತ್ತಿದ್ದೇವೆ. ಆದರೆ ಇನ್ನೂ ಯಾವುದೇ ನಿರ್ಧಾರವನ್ನು ತೆಗೆದುಕೊಂಡಿಲ್ಲ ಎಂದಿದ್ದಾರೆ ಆಕಾಂಕ್ಷಿಗಳು.

“ನಾವು ಈ ವಿಷಯಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ಮೆಟ್ಟಿಲನ್ನೂ ಏರಿದ್ದೇವೆ. ಮೇಲ್ಮನವಿಯನ್ನು ಆಲಿಸುವುದಾಗಿ ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ” ಎಂದು ತಿಳಿಸಿದ್ದಾರೆ.

ಸಾಂಕ್ರಾಮಿಕ ಸಮಯದಲ್ಲಿ ನಾವು ನಿಸ್ವಾರ್ಥವಾಗಿ ದೇಶಕ್ಕೆ ಸೇವೆ ಸಲ್ಲಿಸಿದ್ದೇವೆ. ನಮ್ಮ ರಕ್ತ, ಬೆವರು ಮತ್ತು ಕಣ್ಣೀರು ಕೋವಿಡ್‌ನಂತಹ ತೊಂದರೆಯೊಂದೆ ಮತ್ತೆ ಬರಬೇಕೆಂದು ನೀವು ಬಯಸುವುದಿಲ್ಲ ಎಂದು ಭಾವಿಸುತ್ತೇವೆ. ದಯವಿಟ್ಟು NEET-PG 2022 ಪರೀಕ್ಷೆಯನ್ನು ಕನಿಷ್ಠ 8 ರಿಂದ 10 ವಾರಗಳವರೆಗೆ ಮುಂದೂಡಿ” ಎಂದು ವಿನಂತಿಸಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...