Homeಮುಖಪುಟಕಳೆದ ವರ್ಷದ ಕೌನ್ಸಲಿಂಗ್‌, ಈ ವರ್ಷದ ಪರೀಕ್ಷೆ ಏಕಕಾಲದಲ್ಲಿ ಎದುರಿಸಲು ಸಾಧ್ಯವೇ?: NEET-PG ಆಕಾಂಕ್ಷಿಗಳ ಅಳಲು

ಕಳೆದ ವರ್ಷದ ಕೌನ್ಸಲಿಂಗ್‌, ಈ ವರ್ಷದ ಪರೀಕ್ಷೆ ಏಕಕಾಲದಲ್ಲಿ ಎದುರಿಸಲು ಸಾಧ್ಯವೇ?: NEET-PG ಆಕಾಂಕ್ಷಿಗಳ ಅಳಲು

- Advertisement -
- Advertisement -

ಎನ್‌ಇಇಟಿ-ಪಿಜಿ (The National Entrance cum Eligibility Test Postgraduate)ಯನ್ನು ಮೇ 21ರಂದು ನಿಗದಿಪಡಿಸಲಾಗಿದೆ. ಆದರೆ ಪರೀಕ್ಷಾ ತಯಾರಿಗೆ ಯಾವುದೇ ಸಮಯವನ್ನು ನೀಡಿಲ್ಲ ಎಂದು ಪರೀಕ್ಷೆಯ ಆಕಾಂಕ್ಷಿಗಳು ಆತಂಕಿತರಾಗಿದ್ದಾರೆ.

ಅನೇಕ ರಾಜ್ಯಗಳಲ್ಲಿ NEET-PG 2021ರ ಕೌನ್ಸೆಲಿಂಗ್ ಇನ್ನೂ ಮುಗಿದಿಲ್ಲ. ಹಲವಾರು ವಿದ್ಯಾರ್ಥಿಗಳು ಕೌನ್ಸೆಲಿಂಗ್‌ಗೆ ಹಾಜರಾಗುತ್ತಲೇ ಇದ್ದಾರೆ. ನಮ್ಮಲ್ಲಿ ಅನೇಕರು ಒಂದು ಸ್ಥಳದಲ್ಲಿ ಕೌನ್ಸೆಲಿಂಗ್‌ಗೆ ಹಾಜರಾಗಿರುತ್ತಾರೆ. ಹೀಗಿರುವಾಗ ಇನ್ನೊಂದು ಸ್ಥಳದಲ್ಲಿ ಪರೀಕ್ಷೆಗೆ ಹಾಜರಾಗಲು ಹೇಗೆ ಸಾಧ್ಯ? ಎಂದು ಆಕಾಂಕ್ಷಿಗಳು ಪ್ರಶ್ನಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಮೇ 21ರಂದು ನಡೆಸಲಿರುವ NEET-PG 2022 ಪರೀಕ್ಷೆಯನ್ನು ಬರೆಯಲು ನಾನು ನಿರ್ಧರಿಸಿದ್ದೇನೆ. NEET-PG 2021 ಪರೀಕ್ಷೆಯ ಕೌನ್ಸೆಲಿಂಗ್ ಇನ್ನೂ ಹಲವು ರಾಜ್ಯಗಳಲ್ಲಿ ಮುಗಿದಿಲ್ಲ. ಕೆಲವು ರಾಜ್ಯಗಳಲ್ಲಿ ಅದನ್ನು ಮುಂದೂಡಲಾಗಿದೆ. ಕೌನ್ಸಲಿಂಗ್‌ ಹಾಗೂ ಕೆಲವೇ ದಿನಗಳ ಅಂತರದಲ್ಲಿ ಪರೀಕ್ಷೆಯನ್ನು ಎದುರಿಸಬೇಕೆಂದು ನೀವು ಹೇಗೆ ನಿರೀಕ್ಷಿಸುತ್ತೀರಿ?” ಎಂದು ನೀಟ್‌-ಪಿಜಿ ಆಕಾಂಕ್ಷಿ ಡಾ.ವಿದ್ಯಾ ಎಂಬವರು ಕೇಳಿರುವುದಾಗಿ ‘ದಿ ಕ್ವಿಂಟ್‌’ ವರದಿ ಮಾಡಿದೆ.

“ವೈದ್ಯರ ಜೀವನ ಎಷ್ಟು ಕಷ್ಟ, ನೀಟ್-ಪಿಜಿ ಓದುವುದು ಎಷ್ಟು ಕಷ್ಟ ಎಂದು ಅವರಿಗೆ ಅರ್ಥವಾಗುವುದಿಲ್ಲ ಎಂದು ನಾನು ಭಾವಿಸುತ್ತೇನೆ. ಇದು ನಾವು 5 ವರ್ಷಗಳ ಅವಧಿಯಲ್ಲಿ ಕಲಿತದ್ದು. ನಾವು ಏನನ್ನು ಅನುಭವಿಸುತ್ತಿದ್ದೇವೆ ಎಂಬುದು ಯಾರಿಗೂ ಅರ್ಥವಾಗುತ್ತಿಲ್ಲ” ಎಂಉ ವಿಷಾದಿಸಿದ್ದಾರೆ ವಿದ್ಯಾ.

ಇದನ್ನೂ ಓದಿರಿ: ವಿಶೇಷ ವರದಿ: ಪಿಎಸ್‌ಐ ಪರೀಕ್ಷೆ ಅಕ್ರಮ ಒಂದೇ ಅಲ್ಲ, ಶಿಕ್ಷಣದ ಅವ್ಯವಸ್ಥೆಗೆ ಕೊನೆಯೇ ಇಲ್ಲ!

ಮತ್ತೊಬ್ಬ ಆಕಾಂಕ್ಷಿ ಡಾ.ರೇಷ್ಮಾ ಪ್ರತಿಕ್ರಿಯೆ ನೀಡಿದ್ದು, “ನಾವು ಮೇ 7 ರಂದು ನಮ್ಮ (NEET-PG 2021) ಕೌನ್ಸೆಲಿಂಗ್ ಅನ್ನು ಪೂರ್ಣಗೊಳಿಸಿದ್ದೇವೆ ಮತ್ತು ಪರೀಕ್ಷೆಯನ್ನು ಮೇ 21 ಕ್ಕೆ ನಿಗದಿಪಡಿಸಲಾಗಿದೆ. 14 ದಿನಗಳ ಒಳಗೆ 19 ವಿಷಯಗಳಿಗೆ ನಾವು ಸಿದ್ಧರಾಗಬೇಕೆಂದು ನೀವು ನಿರೀಕ್ಷಿಸುತ್ತಿದ್ದೀರೆಂದು ನಮಗೆ ತಿಳಿದಿಲ್ಲ” ಎಂದಿದ್ದಾರೆ.

ಮುಂದುವರಿದು, ಪ್ರಮುಖ ವಿಷಯಗಳನ್ನು ಅತ್ಯಂತ ವೇಗವಾಗಿ ಅವಲೋಕಿಸುತ್ತೇನೆ ಎಂದರೂ ಕನಿಷ್ಠ ಮೂರು ದಿನಗಳು ಬೇಕಾಗುತ್ತವೆ. ಕೌನ್ಸೆಲಿಂಗ್‌ನಲ್ಲಿ ಸೀಟು ಸಿಗದಿರುವ ಮಧ್ಯಮ ಶ್ರೇಣಿಯವರ ಪರಿಸ್ಥಿತಿ ಏನಾಗಬಹುದು? ನೋಂದಣಿಯ ಬಾಗಿಲು ಕೂಡ ಮುಚ್ಚಲಾಗಿದೆ. ಅವರು ಪರೀಕ್ಷೆಗೆ ಅರ್ಜಿ ಸಲ್ಲಿಸುವುದು ಹೇಗೆ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿರಿ: ಪೆದ್ದನಹಳ್ಳಿ ದಲಿತರ ಹತ್ಯೆ ಪ್ರಕರಣ: ಅನುಮಾನಕ್ಕೆ ಆಸ್ಪದ ನೀಡಿದ ತನಿಖಾಧಿಕಾರಿಗಳ ಜಾತಿ, ಹಿನ್ನೆಲೆ; ಆರೋಪ

ನಾವು ಆರೋಗ್ಯ ಸಚಿವ ಡಾ. ಮನ್ಸುಖ್ ಮಾಂಡವಿಯಾ ಸೇರಿದಂತೆ ಹಲವಾರು ಸಚಿವರೊಂದಿಗೆ ಮಾತನಾಡಲು ಪ್ರಯತ್ನಿಸುತ್ತಿದ್ದೇವೆ. ಆದರೆ ನಮ್ಮ ಮನವಿಗಳಿಗೆ ಅವರು ಕಿವುಡರಾಗಿದ್ದಾರೆ. ನಮ್ಮ ಪರೀಕ್ಷೆಗಳನ್ನು ಮುಂದೂಡುವಂತೆ ನಾವು ರಾಷ್ಟ್ರೀಯ ಪರೀಕ್ಷಾ ಮಂಡಳಿ (NBE) ಮತ್ತು ವೈದ್ಯಕೀಯ ಕೌನ್ಸೆಲಿಂಗ್ ಸಮಿತಿ (MCC)ಗೆ ಮನವಿ ಮಾಡುತ್ತಿದ್ದೇವೆ. ಆದರೆ ಇನ್ನೂ ಯಾವುದೇ ನಿರ್ಧಾರವನ್ನು ತೆಗೆದುಕೊಂಡಿಲ್ಲ ಎಂದಿದ್ದಾರೆ ಆಕಾಂಕ್ಷಿಗಳು.

“ನಾವು ಈ ವಿಷಯಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ಮೆಟ್ಟಿಲನ್ನೂ ಏರಿದ್ದೇವೆ. ಮೇಲ್ಮನವಿಯನ್ನು ಆಲಿಸುವುದಾಗಿ ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ” ಎಂದು ತಿಳಿಸಿದ್ದಾರೆ.

ಸಾಂಕ್ರಾಮಿಕ ಸಮಯದಲ್ಲಿ ನಾವು ನಿಸ್ವಾರ್ಥವಾಗಿ ದೇಶಕ್ಕೆ ಸೇವೆ ಸಲ್ಲಿಸಿದ್ದೇವೆ. ನಮ್ಮ ರಕ್ತ, ಬೆವರು ಮತ್ತು ಕಣ್ಣೀರು ಕೋವಿಡ್‌ನಂತಹ ತೊಂದರೆಯೊಂದೆ ಮತ್ತೆ ಬರಬೇಕೆಂದು ನೀವು ಬಯಸುವುದಿಲ್ಲ ಎಂದು ಭಾವಿಸುತ್ತೇವೆ. ದಯವಿಟ್ಟು NEET-PG 2022 ಪರೀಕ್ಷೆಯನ್ನು ಕನಿಷ್ಠ 8 ರಿಂದ 10 ವಾರಗಳವರೆಗೆ ಮುಂದೂಡಿ” ಎಂದು ವಿನಂತಿಸಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...