Homeಮುಖಪುಟಕಳೆದ ವರ್ಷದ ಕೌನ್ಸಲಿಂಗ್‌, ಈ ವರ್ಷದ ಪರೀಕ್ಷೆ ಏಕಕಾಲದಲ್ಲಿ ಎದುರಿಸಲು ಸಾಧ್ಯವೇ?: NEET-PG ಆಕಾಂಕ್ಷಿಗಳ ಅಳಲು

ಕಳೆದ ವರ್ಷದ ಕೌನ್ಸಲಿಂಗ್‌, ಈ ವರ್ಷದ ಪರೀಕ್ಷೆ ಏಕಕಾಲದಲ್ಲಿ ಎದುರಿಸಲು ಸಾಧ್ಯವೇ?: NEET-PG ಆಕಾಂಕ್ಷಿಗಳ ಅಳಲು

- Advertisement -
- Advertisement -

ಎನ್‌ಇಇಟಿ-ಪಿಜಿ (The National Entrance cum Eligibility Test Postgraduate)ಯನ್ನು ಮೇ 21ರಂದು ನಿಗದಿಪಡಿಸಲಾಗಿದೆ. ಆದರೆ ಪರೀಕ್ಷಾ ತಯಾರಿಗೆ ಯಾವುದೇ ಸಮಯವನ್ನು ನೀಡಿಲ್ಲ ಎಂದು ಪರೀಕ್ಷೆಯ ಆಕಾಂಕ್ಷಿಗಳು ಆತಂಕಿತರಾಗಿದ್ದಾರೆ.

ಅನೇಕ ರಾಜ್ಯಗಳಲ್ಲಿ NEET-PG 2021ರ ಕೌನ್ಸೆಲಿಂಗ್ ಇನ್ನೂ ಮುಗಿದಿಲ್ಲ. ಹಲವಾರು ವಿದ್ಯಾರ್ಥಿಗಳು ಕೌನ್ಸೆಲಿಂಗ್‌ಗೆ ಹಾಜರಾಗುತ್ತಲೇ ಇದ್ದಾರೆ. ನಮ್ಮಲ್ಲಿ ಅನೇಕರು ಒಂದು ಸ್ಥಳದಲ್ಲಿ ಕೌನ್ಸೆಲಿಂಗ್‌ಗೆ ಹಾಜರಾಗಿರುತ್ತಾರೆ. ಹೀಗಿರುವಾಗ ಇನ್ನೊಂದು ಸ್ಥಳದಲ್ಲಿ ಪರೀಕ್ಷೆಗೆ ಹಾಜರಾಗಲು ಹೇಗೆ ಸಾಧ್ಯ? ಎಂದು ಆಕಾಂಕ್ಷಿಗಳು ಪ್ರಶ್ನಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಮೇ 21ರಂದು ನಡೆಸಲಿರುವ NEET-PG 2022 ಪರೀಕ್ಷೆಯನ್ನು ಬರೆಯಲು ನಾನು ನಿರ್ಧರಿಸಿದ್ದೇನೆ. NEET-PG 2021 ಪರೀಕ್ಷೆಯ ಕೌನ್ಸೆಲಿಂಗ್ ಇನ್ನೂ ಹಲವು ರಾಜ್ಯಗಳಲ್ಲಿ ಮುಗಿದಿಲ್ಲ. ಕೆಲವು ರಾಜ್ಯಗಳಲ್ಲಿ ಅದನ್ನು ಮುಂದೂಡಲಾಗಿದೆ. ಕೌನ್ಸಲಿಂಗ್‌ ಹಾಗೂ ಕೆಲವೇ ದಿನಗಳ ಅಂತರದಲ್ಲಿ ಪರೀಕ್ಷೆಯನ್ನು ಎದುರಿಸಬೇಕೆಂದು ನೀವು ಹೇಗೆ ನಿರೀಕ್ಷಿಸುತ್ತೀರಿ?” ಎಂದು ನೀಟ್‌-ಪಿಜಿ ಆಕಾಂಕ್ಷಿ ಡಾ.ವಿದ್ಯಾ ಎಂಬವರು ಕೇಳಿರುವುದಾಗಿ ‘ದಿ ಕ್ವಿಂಟ್‌’ ವರದಿ ಮಾಡಿದೆ.

“ವೈದ್ಯರ ಜೀವನ ಎಷ್ಟು ಕಷ್ಟ, ನೀಟ್-ಪಿಜಿ ಓದುವುದು ಎಷ್ಟು ಕಷ್ಟ ಎಂದು ಅವರಿಗೆ ಅರ್ಥವಾಗುವುದಿಲ್ಲ ಎಂದು ನಾನು ಭಾವಿಸುತ್ತೇನೆ. ಇದು ನಾವು 5 ವರ್ಷಗಳ ಅವಧಿಯಲ್ಲಿ ಕಲಿತದ್ದು. ನಾವು ಏನನ್ನು ಅನುಭವಿಸುತ್ತಿದ್ದೇವೆ ಎಂಬುದು ಯಾರಿಗೂ ಅರ್ಥವಾಗುತ್ತಿಲ್ಲ” ಎಂಉ ವಿಷಾದಿಸಿದ್ದಾರೆ ವಿದ್ಯಾ.

ಇದನ್ನೂ ಓದಿರಿ: ವಿಶೇಷ ವರದಿ: ಪಿಎಸ್‌ಐ ಪರೀಕ್ಷೆ ಅಕ್ರಮ ಒಂದೇ ಅಲ್ಲ, ಶಿಕ್ಷಣದ ಅವ್ಯವಸ್ಥೆಗೆ ಕೊನೆಯೇ ಇಲ್ಲ!

ಮತ್ತೊಬ್ಬ ಆಕಾಂಕ್ಷಿ ಡಾ.ರೇಷ್ಮಾ ಪ್ರತಿಕ್ರಿಯೆ ನೀಡಿದ್ದು, “ನಾವು ಮೇ 7 ರಂದು ನಮ್ಮ (NEET-PG 2021) ಕೌನ್ಸೆಲಿಂಗ್ ಅನ್ನು ಪೂರ್ಣಗೊಳಿಸಿದ್ದೇವೆ ಮತ್ತು ಪರೀಕ್ಷೆಯನ್ನು ಮೇ 21 ಕ್ಕೆ ನಿಗದಿಪಡಿಸಲಾಗಿದೆ. 14 ದಿನಗಳ ಒಳಗೆ 19 ವಿಷಯಗಳಿಗೆ ನಾವು ಸಿದ್ಧರಾಗಬೇಕೆಂದು ನೀವು ನಿರೀಕ್ಷಿಸುತ್ತಿದ್ದೀರೆಂದು ನಮಗೆ ತಿಳಿದಿಲ್ಲ” ಎಂದಿದ್ದಾರೆ.

ಮುಂದುವರಿದು, ಪ್ರಮುಖ ವಿಷಯಗಳನ್ನು ಅತ್ಯಂತ ವೇಗವಾಗಿ ಅವಲೋಕಿಸುತ್ತೇನೆ ಎಂದರೂ ಕನಿಷ್ಠ ಮೂರು ದಿನಗಳು ಬೇಕಾಗುತ್ತವೆ. ಕೌನ್ಸೆಲಿಂಗ್‌ನಲ್ಲಿ ಸೀಟು ಸಿಗದಿರುವ ಮಧ್ಯಮ ಶ್ರೇಣಿಯವರ ಪರಿಸ್ಥಿತಿ ಏನಾಗಬಹುದು? ನೋಂದಣಿಯ ಬಾಗಿಲು ಕೂಡ ಮುಚ್ಚಲಾಗಿದೆ. ಅವರು ಪರೀಕ್ಷೆಗೆ ಅರ್ಜಿ ಸಲ್ಲಿಸುವುದು ಹೇಗೆ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿರಿ: ಪೆದ್ದನಹಳ್ಳಿ ದಲಿತರ ಹತ್ಯೆ ಪ್ರಕರಣ: ಅನುಮಾನಕ್ಕೆ ಆಸ್ಪದ ನೀಡಿದ ತನಿಖಾಧಿಕಾರಿಗಳ ಜಾತಿ, ಹಿನ್ನೆಲೆ; ಆರೋಪ

ನಾವು ಆರೋಗ್ಯ ಸಚಿವ ಡಾ. ಮನ್ಸುಖ್ ಮಾಂಡವಿಯಾ ಸೇರಿದಂತೆ ಹಲವಾರು ಸಚಿವರೊಂದಿಗೆ ಮಾತನಾಡಲು ಪ್ರಯತ್ನಿಸುತ್ತಿದ್ದೇವೆ. ಆದರೆ ನಮ್ಮ ಮನವಿಗಳಿಗೆ ಅವರು ಕಿವುಡರಾಗಿದ್ದಾರೆ. ನಮ್ಮ ಪರೀಕ್ಷೆಗಳನ್ನು ಮುಂದೂಡುವಂತೆ ನಾವು ರಾಷ್ಟ್ರೀಯ ಪರೀಕ್ಷಾ ಮಂಡಳಿ (NBE) ಮತ್ತು ವೈದ್ಯಕೀಯ ಕೌನ್ಸೆಲಿಂಗ್ ಸಮಿತಿ (MCC)ಗೆ ಮನವಿ ಮಾಡುತ್ತಿದ್ದೇವೆ. ಆದರೆ ಇನ್ನೂ ಯಾವುದೇ ನಿರ್ಧಾರವನ್ನು ತೆಗೆದುಕೊಂಡಿಲ್ಲ ಎಂದಿದ್ದಾರೆ ಆಕಾಂಕ್ಷಿಗಳು.

“ನಾವು ಈ ವಿಷಯಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ಮೆಟ್ಟಿಲನ್ನೂ ಏರಿದ್ದೇವೆ. ಮೇಲ್ಮನವಿಯನ್ನು ಆಲಿಸುವುದಾಗಿ ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ” ಎಂದು ತಿಳಿಸಿದ್ದಾರೆ.

ಸಾಂಕ್ರಾಮಿಕ ಸಮಯದಲ್ಲಿ ನಾವು ನಿಸ್ವಾರ್ಥವಾಗಿ ದೇಶಕ್ಕೆ ಸೇವೆ ಸಲ್ಲಿಸಿದ್ದೇವೆ. ನಮ್ಮ ರಕ್ತ, ಬೆವರು ಮತ್ತು ಕಣ್ಣೀರು ಕೋವಿಡ್‌ನಂತಹ ತೊಂದರೆಯೊಂದೆ ಮತ್ತೆ ಬರಬೇಕೆಂದು ನೀವು ಬಯಸುವುದಿಲ್ಲ ಎಂದು ಭಾವಿಸುತ್ತೇವೆ. ದಯವಿಟ್ಟು NEET-PG 2022 ಪರೀಕ್ಷೆಯನ್ನು ಕನಿಷ್ಠ 8 ರಿಂದ 10 ವಾರಗಳವರೆಗೆ ಮುಂದೂಡಿ” ಎಂದು ವಿನಂತಿಸಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...