Homeರಾಷ್ಟ್ರೀಯನರೇಂದ್ರ ಮೋದಿ ವಿರುದ್ಧ ದಿವಂಗತ ಅಹ್ಮದ್ ಪಟೇಲ್ ಸಂಚು - ತೀಸ್ತಾ ಅದರ ಭಾಗ: ಗುಜರಾತ್‌...

ನರೇಂದ್ರ ಮೋದಿ ವಿರುದ್ಧ ದಿವಂಗತ ಅಹ್ಮದ್ ಪಟೇಲ್ ಸಂಚು – ತೀಸ್ತಾ ಅದರ ಭಾಗ: ಗುಜರಾತ್‌ ಪೊಲೀಸ್ ಆರೋಪ

ಅಗಲಿ ಹೋದ ರಾಜಕೀಯ ವಿರೋಧಿಗಳನ್ನು ಕೂಡಾ ಪ್ರಧಾನಿಯ ರಾಜಕೀಯ ಸೇಡಿನ ಯಂತ್ರ ಬಿಡುವುದಿಲ್ಲ ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ

- Advertisement -
- Advertisement -

ಖ್ಯಾತ ಪತ್ರಕರ್ತೆ, ಮಾನವಹಕ್ಕುಗಳ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಅವರ ಜಾಮೀನು ಅರ್ಜಿಯನ್ನು ಗುಜರಾತ್ ಪೊಲೀಸರು ವಿರೋಧಿಸಿದ್ದು, ಆಗಿನ ಮುಖ್ಯಮಂತ್ರಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ಹಿರಿಯ ನಾಯಕ ಅಹ್ಮದ್ ಪಟೇಲ್ ಅವರು ನಡೆಸಿದ “ಭಾರಿ ಪಿತೂರಿ”ಯ ಭಾಗವಾಗಿ ಅವರಿದ್ದರು ಎಂದು ಪೊಲೀಸರು ಆರೋಪಿಸಿದ್ದಾರೆ. 2002 ರ ಗುಜರಾತ್ ಗಲಭೆಗೆ ಸಂಬಂಧಿಸಿದಂತೆ ಜನರನ್ನು ತಪ್ಪಾಗಿ ಸಿಲುಕಿಸಲು ಸಂಚು ರೂಪಿಸಿದ ಆರೋಪದ ಮೇಲೆ ಇತ್ತೀಚೆಗೆ ಅಹಮದಾಬಾದ್ ಕ್ರೈಂ ಬ್ರಾಂಚ್ ಬಂಧಿಸಿದ ಇಬ್ಬರು ವ್ಯಕ್ತಿಗಳಲ್ಲಿ ತೀಸ್ತಾ ಸೆಟಲ್ವಾಡ್ ಒಬ್ಬರು.

2002 ರ ಗಲಭೆಯ ನಂತರ ರಾಜ್ಯದಲ್ಲಿ ಬಿಜೆಪಿ ಸರ್ಕಾರವನ್ನು ವಜಾಗೊಳಿಸಲು ಕಾಂಗ್ರೆಸ್ ಹಿರಿಯ ನಾಯಕ ಅಹ್ಮದ್ ಪಟೇಲ್ ಅವರ ನಿರ್ದೇಶನದ ಮೇರೆಗೆ ನಡೆಸಿದ “ಭಾರಿ ಪಿತೂರಿ”ಯ ಭಾಗವಾಗಿ ತೀಸ್ತಾ ಇದ್ದರು ಎಂದು ಪೊಲೀಸ್ ವಿಶೇಷ ತನಿಖಾ ತಂಡವು ಸೆಷನ್ಸ್ ನ್ಯಾಯಾಲಯಕ್ಕೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ಹೇಳಿಕೊಂಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಿಶೇಷ ತನಿಖಾ ತಂಡದ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್, “ದಿವಂಗತ ಅಹ್ಮದ್ ಪಟೇಲ್ ವಿರುದ್ಧದ ಕ್ಷುಲ್ಲಕ ಆರೋಪಗಳನ್ನು ಸಾರಾಸಗಟಾಗಿ ತಳ್ಳಿಹಾಕುತ್ತೇವೆ. 2002 ರಲ್ಲಿ ಗುಜರಾತ್‌ನ ಮುಖ್ಯಮಂತ್ರಿಯಾಗಿದ್ದಾಗ ನಡೆದ ಕೋಮು ಹತ್ಯಾಕಾಂಡದ ಎಲ್ಲಾ ಹೊಣೆಗಾರಿಕೆಯಿಂದ ಮುಕ್ತವಾಗಲು ಪ್ರಧಾನಿಯ ವ್ಯವಸ್ಥಿತ ಕಾರ್ಯತಂತ್ರದ ಭಾಗವಾಗಿ ಮಾಡಲಾದ ಆರೋಪ. ಈ ಹತ್ಯಾಕಾಂಡವನ್ನು ನಿಯಂತ್ರಿಸಲು ಅವರಿಗೆ ಇಷ್ಟವಿಲ್ಲದಿರುವುದು ಮತ್ತು ಅಸಮರ್ಥತೆಯಿಂದಾಗಿಯೆ ಆಗಿನ ಭಾರತದ ಪ್ರಧಾನ ಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಅವರು ಮುಖ್ಯಮಂತ್ರಿಗೆ ತಮ್ಮ ರಾಜಧರ್ಮವನ್ನು ನೆನಪಿಸಿದ್ದರು” ಎಂದು ಹೇಳಿದೆ.

ಇದನ್ನೂ ಓದಿ: ಅಧಿಕಾರಕ್ಕೆ ಸತ್ಯ ನುಡಿದ ತೀಸ್ತಾ ಬಂಧನ; ಸುಪ್ರೀಂ ಕೋರ್ಟ್ ತನ್ನ ಜವಾಬ್ದಾರಿಯನ್ನು ಮರೆಯಿತೇ?

ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್, “ಅಗಲಿ ಹೋದ ರಾಜಕೀಯ ವಿರೋಧಿಗಳನ್ನು ಕೂಡಾ ಪ್ರಧಾನಿಯ ರಾಜಕೀಯ ಸೇಡಿನ ಯಂತ್ರ ಬಿಡುವುದಿಲ್ಲ. ಎಸ್‌ಐಟಿ ತನ್ನ ರಾಜಕೀಯ ಯಜಮಾನನ ತಾಳಕ್ಕೆ ತಕ್ಕಂತೆ ಕುಣಿಯುತ್ತಿದ್ದು, ಅವರು ಎಲ್ಲಿ ಹೇಳಿದರೂ ಹೋಗಿ ಕುಳಿತುಕೊಳ್ಳುತ್ತದೆ. ಮುಖ್ಯಮಂತ್ರಿಗೆ ಕ್ಲೀನ್ ಚಿಟ್ ನೀಡಿದ ಹಿಂದಿನ ಎಸ್‌ಐಟಿ ಮುಖ್ಯಸ್ಥರಿಗೆ ಅವರಿಗೆ ರಾಜತಾಂತ್ರಿಕ ಹುದ್ದೆಯನ್ನು ಹೇಗೆ ನೀಡಲಾಯಿತು ಎಂಬುದು ನಮಗೆ ತಿಳಿದಿದೆ” ಎಂದು ಹೇಳಿದೆ.

ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಡಿಡಿ ಠಕ್ಕರ್ ಅವರು ವಿಶೇಷ ತನಿಖಾ ತಂಡದ ಅಫಿಡವಿಟ್‌ ಅನ್ನು ದಾಖಲೆಯಲ್ಲಿ ತೆಗೆದುಕೊಂಡು ಜಾಮೀನು ಅರ್ಜಿಯ ವಿಚಾರಣೆಯನ್ನು ಸೋಮವಾರ ಪ್ರಕಟಿಸಿದ್ದಾರೆ.

ಗುಜರಾತ್ ಗಲಭೆ ಪ್ರಕರಣಗಳಲ್ಲಿ ಅಮಾಯಕರನ್ನು ಬಂಧಿಸಲು ಸುಳ್ಳು ಸಾಕ್ಷ್ಯವನ್ನು ಸೃಷ್ಟಿಸಿದ ಆರೋಪದಲ್ಲಿ ಮಾಜಿ ಐಪಿಎಸ್ ಅಧಿಕಾರಿಗಳಾದ ಆರ್.ಬಿ. ಶ್ರೀಕುಮಾರ್ ಮತ್ತು ಸಂಜೀವ್ ಭಟ್ ಅವರೊಂದಿಗೆ ತೀಸ್ತಾ ಸೆಟಲ್ವಾಡ್ ಅವರನ್ನೂ ಬಂಧಿಸಲಾಗಿದೆ.

ಇದನ್ನೂ ಓದಿ: ತೀಸ್ತಾ, ಶ್ರೀಕುಮಾರ್ ಮತ್ತು ಜುಬೇರ್ ಬಂಧನ; ಭಾರತ ಇನ್ನೊಂದು ಸ್ವಾತಂತ್ರ್ಯ ಸಂಗ್ರಾಮದತ್ತ ಸಾಗುತ್ತಿದೆಯೇ?

“ಚುನಾಯಿತ ಸರ್ಕಾರವನ್ನು ವಜಾಗೊಳಿಸುವುದು ಅಥವಾ ಅಸ್ಥಿರಗೊಳಿಸುವ ರಾಜಕೀಯ ಉದ್ದೇಶದಿಂದ ತೀಸ್ತಾ ಅವರು ಈ ಭಾರಿ ಪಿತೂರಿಯನ್ನು ಮಾಡಿದ್ದರು…ಅವರು ಅಮಾಯಕರನ್ನು ತಪ್ಪಾಗಿ ಸಿಲುಕಿಸುವ ಪ್ರಯತ್ನಕ್ಕೆ ಪ್ರತಿಫಲವಾಗಿ ಪ್ರತಿಸ್ಪರ್ಧಿ ರಾಜಕೀಯ ಪಕ್ಷದಿಂದ ಅಕ್ರಮ ಹಣಕಾಸು ಮತ್ತು ಇತರ ಪ್ರಯೋಜನಗಳನ್ನು ಮತ್ತು ಬಹುಮಾನಗಳನ್ನು ಪಡೆದರು” ಎಂದು ಎಸ್‌ಐಟಿ ಅಫಿಡವಿಟ್ ಹೇಳಿದೆ.

ಸಾಕ್ಷಿಗಳ ಹೇಳಿಕೆಗಳನ್ನು ಉಲ್ಲೇಖಿಸಿರುವ ಎಸ್‌ಐಟಿ, “ಕಾಂಗ್ರೆಸ್ ನಾಯಕ ದಿವಂಗತ ಅಹ್ಮದ್ ಪಟೇಲ್ ಅವರ ಸೂಚನೆಯ ಮೇರೆಗೆ ಸಂಚು ನಡೆಸಲಾಗಿದೆ. 2002 ರಲ್ಲಿ ಗೋಧ್ರಾ ನಂತರದ ಗಲಭೆಯ ನಂತರ ಅಹ್ಮದ್ ಪಟೇಲ್ ಅವರ ಆದೇಶದ ಮೇರೆಗೆ ತೀಸ್ತಾ ಅವರು 30 ಲಕ್ಷ ರೂ. ಪಡೆದರು” ಎಂದು ಆರೋಪಿಸಿದೆ.

“ತೀಸ್ತಾ ಅವರು ಬಿಜೆಪಿ ಸರ್ಕಾರದ ಹಿರಿಯ ನಾಯಕರ ಹೆಸರನ್ನು ಗಲಭೆ ಪ್ರಕರಣಗಳಲ್ಲಿ ಸಿಲುಕಿಸಲು ಕೇಂದ್ರ ಸರ್ಕಾರದಲ್ಲಿ ಆ ಸಮಯದಲ್ಲಿ ಅಧಿಕಾರದಲ್ಲಿದ್ದ ಪ್ರಮುಖ ರಾಷ್ಟ್ರೀಯ ಪಕ್ಷದ ನಾಯಕರನ್ನು ಭೇಟಿಯಾಗುತ್ತಿದ್ದರು” ಎಂದು ಎಸ್‌ಐಟಿ ಆರೋಪಿಸಿದೆ.

ಇದನ್ನೂ ಓದಿ: ತೀಸ್ತಾ, ಜುಬೇರ್‌‌ ಬಂಧನ ಆತಂಕಕಾರಿ: ನೊಬೆಲ್‌ ಪ್ರಶಸ್ತಿ ಪುರಸ್ಕೃತ ಪತ್ರಕರ್ತೆ ಮಾರಿಯಾ ಪ್ರತಿಕ್ರಿಯೆ

ಗುಜರಾತ್ ಗಲಭೆ ಪ್ರಕರಣದಲ್ಲಿ ಆಗಿನ ಮುಖ್ಯಮಂತ್ರಿ ನರೇಂದ್ರ ಮೋದಿ ಮತ್ತು ಇತರರಿಗೆ ನೀಡಿದ್ದ ಕ್ಲೀನ್ ಚಿಟ್ ಅನ್ನು ಸುಪ್ರೀಂ ಕೋರ್ಟ್ ಕಳೆದ ತಿಂಗಳು ಎತ್ತಿಹಿಡಿದ ಒಂದು ದಿನದ ನಂತರ ರಾಜ್ಯ ಪೊಲೀಸರು ತೀಸ್ತಾ ಸೆಟಲ್ವಾಡ್ ಅವರನ್ನು ಬಂಧಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...