Homeರಾಷ್ಟ್ರೀಯನರೇಂದ್ರ ಮೋದಿ ವಿರುದ್ಧ ದಿವಂಗತ ಅಹ್ಮದ್ ಪಟೇಲ್ ಸಂಚು - ತೀಸ್ತಾ ಅದರ ಭಾಗ: ಗುಜರಾತ್‌...

ನರೇಂದ್ರ ಮೋದಿ ವಿರುದ್ಧ ದಿವಂಗತ ಅಹ್ಮದ್ ಪಟೇಲ್ ಸಂಚು – ತೀಸ್ತಾ ಅದರ ಭಾಗ: ಗುಜರಾತ್‌ ಪೊಲೀಸ್ ಆರೋಪ

ಅಗಲಿ ಹೋದ ರಾಜಕೀಯ ವಿರೋಧಿಗಳನ್ನು ಕೂಡಾ ಪ್ರಧಾನಿಯ ರಾಜಕೀಯ ಸೇಡಿನ ಯಂತ್ರ ಬಿಡುವುದಿಲ್ಲ ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ

- Advertisement -
- Advertisement -

ಖ್ಯಾತ ಪತ್ರಕರ್ತೆ, ಮಾನವಹಕ್ಕುಗಳ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಅವರ ಜಾಮೀನು ಅರ್ಜಿಯನ್ನು ಗುಜರಾತ್ ಪೊಲೀಸರು ವಿರೋಧಿಸಿದ್ದು, ಆಗಿನ ಮುಖ್ಯಮಂತ್ರಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ಹಿರಿಯ ನಾಯಕ ಅಹ್ಮದ್ ಪಟೇಲ್ ಅವರು ನಡೆಸಿದ “ಭಾರಿ ಪಿತೂರಿ”ಯ ಭಾಗವಾಗಿ ಅವರಿದ್ದರು ಎಂದು ಪೊಲೀಸರು ಆರೋಪಿಸಿದ್ದಾರೆ. 2002 ರ ಗುಜರಾತ್ ಗಲಭೆಗೆ ಸಂಬಂಧಿಸಿದಂತೆ ಜನರನ್ನು ತಪ್ಪಾಗಿ ಸಿಲುಕಿಸಲು ಸಂಚು ರೂಪಿಸಿದ ಆರೋಪದ ಮೇಲೆ ಇತ್ತೀಚೆಗೆ ಅಹಮದಾಬಾದ್ ಕ್ರೈಂ ಬ್ರಾಂಚ್ ಬಂಧಿಸಿದ ಇಬ್ಬರು ವ್ಯಕ್ತಿಗಳಲ್ಲಿ ತೀಸ್ತಾ ಸೆಟಲ್ವಾಡ್ ಒಬ್ಬರು.

2002 ರ ಗಲಭೆಯ ನಂತರ ರಾಜ್ಯದಲ್ಲಿ ಬಿಜೆಪಿ ಸರ್ಕಾರವನ್ನು ವಜಾಗೊಳಿಸಲು ಕಾಂಗ್ರೆಸ್ ಹಿರಿಯ ನಾಯಕ ಅಹ್ಮದ್ ಪಟೇಲ್ ಅವರ ನಿರ್ದೇಶನದ ಮೇರೆಗೆ ನಡೆಸಿದ “ಭಾರಿ ಪಿತೂರಿ”ಯ ಭಾಗವಾಗಿ ತೀಸ್ತಾ ಇದ್ದರು ಎಂದು ಪೊಲೀಸ್ ವಿಶೇಷ ತನಿಖಾ ತಂಡವು ಸೆಷನ್ಸ್ ನ್ಯಾಯಾಲಯಕ್ಕೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ಹೇಳಿಕೊಂಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಿಶೇಷ ತನಿಖಾ ತಂಡದ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್, “ದಿವಂಗತ ಅಹ್ಮದ್ ಪಟೇಲ್ ವಿರುದ್ಧದ ಕ್ಷುಲ್ಲಕ ಆರೋಪಗಳನ್ನು ಸಾರಾಸಗಟಾಗಿ ತಳ್ಳಿಹಾಕುತ್ತೇವೆ. 2002 ರಲ್ಲಿ ಗುಜರಾತ್‌ನ ಮುಖ್ಯಮಂತ್ರಿಯಾಗಿದ್ದಾಗ ನಡೆದ ಕೋಮು ಹತ್ಯಾಕಾಂಡದ ಎಲ್ಲಾ ಹೊಣೆಗಾರಿಕೆಯಿಂದ ಮುಕ್ತವಾಗಲು ಪ್ರಧಾನಿಯ ವ್ಯವಸ್ಥಿತ ಕಾರ್ಯತಂತ್ರದ ಭಾಗವಾಗಿ ಮಾಡಲಾದ ಆರೋಪ. ಈ ಹತ್ಯಾಕಾಂಡವನ್ನು ನಿಯಂತ್ರಿಸಲು ಅವರಿಗೆ ಇಷ್ಟವಿಲ್ಲದಿರುವುದು ಮತ್ತು ಅಸಮರ್ಥತೆಯಿಂದಾಗಿಯೆ ಆಗಿನ ಭಾರತದ ಪ್ರಧಾನ ಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಅವರು ಮುಖ್ಯಮಂತ್ರಿಗೆ ತಮ್ಮ ರಾಜಧರ್ಮವನ್ನು ನೆನಪಿಸಿದ್ದರು” ಎಂದು ಹೇಳಿದೆ.

ಇದನ್ನೂ ಓದಿ: ಅಧಿಕಾರಕ್ಕೆ ಸತ್ಯ ನುಡಿದ ತೀಸ್ತಾ ಬಂಧನ; ಸುಪ್ರೀಂ ಕೋರ್ಟ್ ತನ್ನ ಜವಾಬ್ದಾರಿಯನ್ನು ಮರೆಯಿತೇ?

ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್, “ಅಗಲಿ ಹೋದ ರಾಜಕೀಯ ವಿರೋಧಿಗಳನ್ನು ಕೂಡಾ ಪ್ರಧಾನಿಯ ರಾಜಕೀಯ ಸೇಡಿನ ಯಂತ್ರ ಬಿಡುವುದಿಲ್ಲ. ಎಸ್‌ಐಟಿ ತನ್ನ ರಾಜಕೀಯ ಯಜಮಾನನ ತಾಳಕ್ಕೆ ತಕ್ಕಂತೆ ಕುಣಿಯುತ್ತಿದ್ದು, ಅವರು ಎಲ್ಲಿ ಹೇಳಿದರೂ ಹೋಗಿ ಕುಳಿತುಕೊಳ್ಳುತ್ತದೆ. ಮುಖ್ಯಮಂತ್ರಿಗೆ ಕ್ಲೀನ್ ಚಿಟ್ ನೀಡಿದ ಹಿಂದಿನ ಎಸ್‌ಐಟಿ ಮುಖ್ಯಸ್ಥರಿಗೆ ಅವರಿಗೆ ರಾಜತಾಂತ್ರಿಕ ಹುದ್ದೆಯನ್ನು ಹೇಗೆ ನೀಡಲಾಯಿತು ಎಂಬುದು ನಮಗೆ ತಿಳಿದಿದೆ” ಎಂದು ಹೇಳಿದೆ.

ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಡಿಡಿ ಠಕ್ಕರ್ ಅವರು ವಿಶೇಷ ತನಿಖಾ ತಂಡದ ಅಫಿಡವಿಟ್‌ ಅನ್ನು ದಾಖಲೆಯಲ್ಲಿ ತೆಗೆದುಕೊಂಡು ಜಾಮೀನು ಅರ್ಜಿಯ ವಿಚಾರಣೆಯನ್ನು ಸೋಮವಾರ ಪ್ರಕಟಿಸಿದ್ದಾರೆ.

ಗುಜರಾತ್ ಗಲಭೆ ಪ್ರಕರಣಗಳಲ್ಲಿ ಅಮಾಯಕರನ್ನು ಬಂಧಿಸಲು ಸುಳ್ಳು ಸಾಕ್ಷ್ಯವನ್ನು ಸೃಷ್ಟಿಸಿದ ಆರೋಪದಲ್ಲಿ ಮಾಜಿ ಐಪಿಎಸ್ ಅಧಿಕಾರಿಗಳಾದ ಆರ್.ಬಿ. ಶ್ರೀಕುಮಾರ್ ಮತ್ತು ಸಂಜೀವ್ ಭಟ್ ಅವರೊಂದಿಗೆ ತೀಸ್ತಾ ಸೆಟಲ್ವಾಡ್ ಅವರನ್ನೂ ಬಂಧಿಸಲಾಗಿದೆ.

ಇದನ್ನೂ ಓದಿ: ತೀಸ್ತಾ, ಶ್ರೀಕುಮಾರ್ ಮತ್ತು ಜುಬೇರ್ ಬಂಧನ; ಭಾರತ ಇನ್ನೊಂದು ಸ್ವಾತಂತ್ರ್ಯ ಸಂಗ್ರಾಮದತ್ತ ಸಾಗುತ್ತಿದೆಯೇ?

“ಚುನಾಯಿತ ಸರ್ಕಾರವನ್ನು ವಜಾಗೊಳಿಸುವುದು ಅಥವಾ ಅಸ್ಥಿರಗೊಳಿಸುವ ರಾಜಕೀಯ ಉದ್ದೇಶದಿಂದ ತೀಸ್ತಾ ಅವರು ಈ ಭಾರಿ ಪಿತೂರಿಯನ್ನು ಮಾಡಿದ್ದರು…ಅವರು ಅಮಾಯಕರನ್ನು ತಪ್ಪಾಗಿ ಸಿಲುಕಿಸುವ ಪ್ರಯತ್ನಕ್ಕೆ ಪ್ರತಿಫಲವಾಗಿ ಪ್ರತಿಸ್ಪರ್ಧಿ ರಾಜಕೀಯ ಪಕ್ಷದಿಂದ ಅಕ್ರಮ ಹಣಕಾಸು ಮತ್ತು ಇತರ ಪ್ರಯೋಜನಗಳನ್ನು ಮತ್ತು ಬಹುಮಾನಗಳನ್ನು ಪಡೆದರು” ಎಂದು ಎಸ್‌ಐಟಿ ಅಫಿಡವಿಟ್ ಹೇಳಿದೆ.

ಸಾಕ್ಷಿಗಳ ಹೇಳಿಕೆಗಳನ್ನು ಉಲ್ಲೇಖಿಸಿರುವ ಎಸ್‌ಐಟಿ, “ಕಾಂಗ್ರೆಸ್ ನಾಯಕ ದಿವಂಗತ ಅಹ್ಮದ್ ಪಟೇಲ್ ಅವರ ಸೂಚನೆಯ ಮೇರೆಗೆ ಸಂಚು ನಡೆಸಲಾಗಿದೆ. 2002 ರಲ್ಲಿ ಗೋಧ್ರಾ ನಂತರದ ಗಲಭೆಯ ನಂತರ ಅಹ್ಮದ್ ಪಟೇಲ್ ಅವರ ಆದೇಶದ ಮೇರೆಗೆ ತೀಸ್ತಾ ಅವರು 30 ಲಕ್ಷ ರೂ. ಪಡೆದರು” ಎಂದು ಆರೋಪಿಸಿದೆ.

“ತೀಸ್ತಾ ಅವರು ಬಿಜೆಪಿ ಸರ್ಕಾರದ ಹಿರಿಯ ನಾಯಕರ ಹೆಸರನ್ನು ಗಲಭೆ ಪ್ರಕರಣಗಳಲ್ಲಿ ಸಿಲುಕಿಸಲು ಕೇಂದ್ರ ಸರ್ಕಾರದಲ್ಲಿ ಆ ಸಮಯದಲ್ಲಿ ಅಧಿಕಾರದಲ್ಲಿದ್ದ ಪ್ರಮುಖ ರಾಷ್ಟ್ರೀಯ ಪಕ್ಷದ ನಾಯಕರನ್ನು ಭೇಟಿಯಾಗುತ್ತಿದ್ದರು” ಎಂದು ಎಸ್‌ಐಟಿ ಆರೋಪಿಸಿದೆ.

ಇದನ್ನೂ ಓದಿ: ತೀಸ್ತಾ, ಜುಬೇರ್‌‌ ಬಂಧನ ಆತಂಕಕಾರಿ: ನೊಬೆಲ್‌ ಪ್ರಶಸ್ತಿ ಪುರಸ್ಕೃತ ಪತ್ರಕರ್ತೆ ಮಾರಿಯಾ ಪ್ರತಿಕ್ರಿಯೆ

ಗುಜರಾತ್ ಗಲಭೆ ಪ್ರಕರಣದಲ್ಲಿ ಆಗಿನ ಮುಖ್ಯಮಂತ್ರಿ ನರೇಂದ್ರ ಮೋದಿ ಮತ್ತು ಇತರರಿಗೆ ನೀಡಿದ್ದ ಕ್ಲೀನ್ ಚಿಟ್ ಅನ್ನು ಸುಪ್ರೀಂ ಕೋರ್ಟ್ ಕಳೆದ ತಿಂಗಳು ಎತ್ತಿಹಿಡಿದ ಒಂದು ದಿನದ ನಂತರ ರಾಜ್ಯ ಪೊಲೀಸರು ತೀಸ್ತಾ ಸೆಟಲ್ವಾಡ್ ಅವರನ್ನು ಬಂಧಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...