Homeಕರ್ನಾಟಕಸುರತ್ಕಲ್‌ ಟೋಲ್‌ ವಿರೋಧಿ ಹೋರಾಟಗಾರರಿಗೆ ತಡರಾತ್ರಿ ನೋಟಿಸ್‌: ‘ಜೈಲು ಸೇರಿದರೂ ಪ್ರತಿಭಟನೆ ನಿಲ್ಲಲ್ಲ’- ಮುನೀರ್‌ ಎಚ್ಚರಿಕೆ

ಸುರತ್ಕಲ್‌ ಟೋಲ್‌ ವಿರೋಧಿ ಹೋರಾಟಗಾರರಿಗೆ ತಡರಾತ್ರಿ ನೋಟಿಸ್‌: ‘ಜೈಲು ಸೇರಿದರೂ ಪ್ರತಿಭಟನೆ ನಿಲ್ಲಲ್ಲ’- ಮುನೀರ್‌ ಎಚ್ಚರಿಕೆ

ನೋಟಿಸ್‌‌ನಲ್ಲಿ ನಮ್ಮನ್ನು ಏಕವಚನದಲ್ಲಿ ಕರೆಯಲಾಗಿದೆ, ಕ್ರಿಮಿನಲ್ ರೀತಿ ಪದಗಳನ್ನು ಬಳಸಲಾಗಿದೆ: ಮುನೀರ್‌ ಕಾಟಿಪಳ್ಳ

- Advertisement -
- Advertisement -

ಸುರತ್ಕಲ್ ಟೋಲ್ ಗೇಟ್ ವಿರೋಧಿ ಹೋರಾಟಗಾರರ ಮನೆಗಳಿಗೆ ಪೊಲೀಸರು ತಡರಾತ್ರಿ ಭೇಟಿ ನೀಡಿ ನೋಟಿಸ್‌ ನೀಡಿರುವ ಘಟನೆ ನಡೆದಿದೆ. ಈ ಕುರಿತು ಜನರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಹೋರಾಟ ಸಮಿತಿಯ ಸಂಚಾಲಕ ಮುನೀರ್ ಕಾಟಿಪಳ್ಳ, ಬಿ.ಕೆ.ಇಮ್ಮಿಯಾಝ್, ಪ್ರತಿಭಾ ಕುಳಾಯಿ, ರಾಘವೇಂದ್ರ ರಾವ್ ಸೇರಿದಂತೆ ಹಲವು ಮುಖಂಡರಿಗೆ ಸುರತ್ಕಲ್ ಪೊಲೀಸರು ನೋಟಿಸ್‌ ನೀಡಿದ್ದಾರೆ.

ಈಗಾಗಲೇ ಸಭೆ ನಡೆಸಿ ಹೋರಾಟ ಹಿಂಪಡೆಯುವಂತೆ ಸೂಚಿಸಲಾಗಿತ್ತು. ಆದರೆ, ಅದನ್ನು ಹೋರಾಟ ಸಮಿತಿ ತಿರಸ್ಕರಿಸಿದೆ. ನೋಟಿಸ್‌ ತಲುಪಿದ ಕೂಡಲೇ ಡಿಸಿಪಿ ಅವರ ಕಚೇರಿಗೆ ಭೇಟಿ ನೀಡಿ ಹೋರಾಟ ಮುಂದುವರಿಸುವುದಿಲ್ಲ ಎಂದು ಮುಚ್ಚಳಿಗೆ ಬರೆದು ಕೊಡುವಂತೆ ನೋಟಿಸ್‌ನಲ್ಲಿ ಹೇಳಿರುವುದಾಗಿ ‘ವಾರ್ತಾಭಾರತಿ’ ಉಲ್ಲೇಖಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ತಡರಾತ್ರಿ ನೋಟೀಸ್‌ ಕುರಿತು ಹೋರಾಟ ಸಮಿತಿಯ ಸಂಚಾಲಕ ಮುನೀರ್ ಕಾಟಿಪಳ್ಳ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. “ಮಧ್ಯರಾತ್ರಿ ಪೊಲೀಸರನ್ನು ಹೋರಾಟಗಾರರ ಮನೆಗಳಿಗೆ ಕಳುಹಿಸುತ್ತೀರಾ ಭರತ್‌ ಶೆಟ್ಟಿ, ಉಮಾನಾಥ ಕೋಟ್ಯಾನ್, ವೇದವ್ಯಾಸ ಕಾಮತರೆ? ಮಹಿಳಾ ಹೋರಾಟಗಾರರ ಮನೆಗೂ ಕಾಳರಾತ್ರಿ ‘ಗಂಡಸು’ ಪೊಲೀಸರ ದಂಡು! ಅದಕ್ಕೆಲ್ಲ ಜನ ಹೆದರುವ ಕಾಲ ಮುಗಿದಿದೆ. ತುಳುನಾಡಿನ ಮುಂದೆ ಬೆತ್ತಲಾಗುತ್ತಿದ್ದೀರಿ. ಬಿಜೆಪಿಗರೇ ಎಚ್ಚರ” ಎಂದು ಗುಡುಗಿದ್ದಾರೆ.

ಮತ್ತೊಂದು ಪೋಸ್ಟ್‌ನಲ್ಲಿ, “ನನ್ನ ಮನೆಗೆ ನಿನ್ನೆ ತಡರಾತ್ರಿ ಬಂದ ಪೊಲೀಸರ ತಂಡ ಸಮನ್ಸ್ ನೀಡಿದೆ. ಮಂಗಳೂರು ಕಮೀಷನರ್ ಕಚೇರಿಯಿಂದ ಕಳುಹಿಸಿದ ಸಮನ್ಸ್ ನೋಟಿಸ್‌‌ನಲ್ಲಿ ನಮಗೆ ಏಕವಚನ ಬಳಸಲಾಗಿದೆ. ಕ್ರಿಮಿನಲ್ ರೀತಿ ಪದಗಳನ್ನು ಬಳಸಿ ಸಂಬೋಧಿಸಲಾಗಿದೆ. ಇರಲಿ. ಬಿಜೆಪಿ ಪೊಲೀಸರ ನೀತಿಯೇ ಹಾಗಿರಬಹುದು” ಎಂದಿದ್ದಾರೆ.

“ಹೆಚ್ಚು ಕಮ್ಮಿ ಐವತ್ತಕ್ಕೂ ಹೆಚ್ಚು ಜನರಿಗೆ ನೋಟಿಸ್‌ ನೀಡಲಾಗಿದೆ. ಹೋರಾಟಕ್ಕೆ ಸಂಬಂಧ ಪಡದ ಕೆಲವು ಅಮಾಯಕರಿಗೂ ನೋಟಿಸ್‌‌ ಬಂದಿದೆ. ಕ್ರಿಮಿನಲ್‌ಗಳ ರೀತಿ ಮನೆಗಳನ್ನು ಪೊಲೀಸರು ಸುತ್ತುವರಿದಿದ್ದಾರೆ. ನಾವೀಗ (ಹೋರಾಟ ಸಮಿತಿ) ದೃಢ ನಿರ್ಧಾರ ಕೈಗೊಂಡಿದ್ದೇವೆ. ನಮ್ಮ ಕಾನೂನು ವಿಭಾಗದ ಜವಾಬ್ದಾರಿ ಹೊತ್ತಿರುವ ಜನಪರ ವಕೀಲರ ತಂಡದೊಂದಿಗೆ ಸಭೆ ನಡೆಸಿ ಕೆಲವು ತೀರ್ಮಾನಕ್ಕೆ ಬಂದಿದ್ದೇವೆ” ಎಂದು ತಿಳಿಸಿದ್ದಾರೆ.

“ಯಾವುದೇ ಕಾರಣಕ್ಕೂ ಮುಚ್ಚಳಿಕೆ ಬರೆದುಕೊಡುವುದಿಲ್ಲ. ವಾರಂಟ್ ಹೊರಡಿಸಿ ಬಂಧಿಸುವುದಾದರೆ ತುಳುನಾಡಿನ ಜನ ಸಾಮಾನ್ಯರ ಪರವಾಗಿ ಜೈಲಿಗೆ ಹೋಗಲು ಸಿದ್ದರಾಗುವುದು. ಅಕ್ಟೋಬರ್ 18ರ ಅಕ್ರಮ ಟೋಲ್ ಸ್ಥಗಿತ ಹೋರಾಟ ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ. ನಾವು ಜೈಲು ಸೇರಿದರೂ ಅಂದು ಹೋರಾಟ ನಡೆಯುತ್ತದೆ. ನೂರಾರು ಸಂಘಟನೆ, ಮುಖಂಡರ ಸಾಮೂಹಿಕ ನಾಯಕತ್ವದಲ್ಲಿ ನಡೆಯುತ್ತಿರುವ ಈ ಮಹತ್ವದ ಹೋರಾಟಕ್ಕೆ ನಾಯಕರುಗಳ ಕೊರತೆ ಇಲ್ಲ. ಸಂಚಾಲಕ ಮುನೀರ್ ಕಾಟಿಪಳ್ಳ ಜೈಲು ಸೇರಿದರೆ ನೂರಾರು ಜನ ಆ ಸ್ಥಾನವನ್ನು ತುಂಬಲು ಸಿದ್ದರಿದ್ದಾರೆ.‌ ನಮ್ಮ ಮುತ್ತಿಗೆ ಪ್ರತಿಭಟನೆ ಅಂದು ನಿಗದಿಯಂತೆ ಶಾಂತಿಯುತವಾಗಿ ನಡೆಯಲಿದೆ. ಯಾರೂ ಪ್ರಚೋದನೆಗೆ ಒಳಗಾಗಬಾರದು” ಎಂದು ಮನವಿ ಮಾಡಿದ್ದಾರೆ.

“ನಮ್ಮ ಮೇಲಿನ ಬಿಜೆಪಿ ಸರಕಾರದ ದಾಳಿಯ ಸಂದರ್ಭದಲ್ಲಿ ನಮ್ಮ ಹೋರಾಟದ ಜೊತೆ ತುಳುನಾಡಿನ ಜನತೆ ನಿಲ್ಲಬೇಕು. ಧ್ವನಿಯನ್ನು ಮತ್ತಷ್ಟು ಎತ್ತರಿಸಬೇಕು ಎಂದು ಮನವಿ ಮಾಡುತ್ತಿದ್ದೇವೆ. ಯಾವುದೇ ಕಾರಣಕ್ಕೂ ಗುಲಾಮಗಿರಿಯ ಸಂಕೇತವಾಗಿರುವ ಟೋಲ್ ಗೇಟ್ ಸುಲಿಗೆ ಮುಂದುವರಿಯಬಾರದು. ಮುಂದುವರಿಯಲು ಅವಕಾಶಕೊಡುವುದಿಲ್ಲ ಎಂದು ಒಕ್ಕೊರಲಿನಿಂದ ಗಟ್ಟಿಯಾಗಿ ಬಿಜೆಪಿ ಶಾಸಕ, ಸಂಸದ ಶಾಸಕರುಗಳಿಗೆ ಹೇಳುವಂತಾಗಬೇಕು” ಎಂದು ಒತ್ತಾಯಿಸಿದ್ದಾರೆ.

“ಯಾವುದೇ ಕಾರಣಕ್ಕೂ ಹೋರಾಟ ಸೋಲುವುದಿಲ್ಲ. ಅಕ್ಟೋಬರ್ 18 ರಂದು ಟೋಲ್ ಸಂಗ್ರಹ ಅಂತ್ಯಗೊಳ್ಳಲೇಬೇಕು. ನಮ್ಮ ಮೇಲೆ ಪೊಲೀಸ್ ದೌರ್ಜನ್ಯ ಹರಿಯಬಿಟ್ಟು ಬಿಜೆಪಿ ಶಾಸಕರುಗಳು ಬೀಗುವುದು ಬೇಡ. ಜನ ಆಕ್ರೋಶಗೊಂಡಿದ್ದಾರೆ. ಅವರು ನಿಮಗೆ ಸರಿಯಾಗಿ ಉತ್ತರಿಸುತ್ತಾರೆ” ಎಂದು ಎಚ್ಚರಿಸಿದ್ದಾರೆ.

ಪೊಲೀಸ್ ಹಾಗೂ ಸರ್ಕಾರದ ನಡೆಯನ್ನು ಖಂಡಿಸಿರುವ ಶಿಕ್ಷಣತಜ್ಞ ಎಂ.ಜಿ.ಹೆಗ್ಡೆ, “ಲೋಕಸಭೆಯಲ್ಲಿ ಇಲಾಖೆಯ ಮಂತ್ರಿಯವರು ಟೋಲ್ ಗೇಟ್ ಮುಚ್ಚಲಾಗುವುದು ಎಂದಿದ್ದರು. ಅದು ಲೋಕಸಭೆಯ ಕಡತದಲ್ಲಿ ದಾಖಲಾಗುತ್ತದೆ. ಅಂದಿನಿಂದಲೇ ಟೋಲ್ ನಿಲ್ಲಬೇಕಿತ್ತು. ರಾಜ್ಯದ ವಿಧಾನ ಪರಿಷತ್ ಹಾಗೂ ವಿಧಾನಸಭೆಯಲ್ಲಿ ರಾಜ್ಯದ ಮಂತ್ರಿಗಳೂ ಟೋಲ್ ಗೇಟ್ ನಿಯಮ ಬಾಹಿರ, ತೆಗೆಯಲಾಗುವುದು ಎಂದು ಹೇಳುತ್ತಾರೆ. ಅದೂ ಕಡತದಲ್ಲಿ ದಾಖಲಾಗುತ್ತದೆ. ಹಾಗಾದರೆ ಈ ದೇಶದಲ್ಲಿ ಲೋಕಸಭೆ, ವಿಧಾನಸಭೆಯಲ್ಲಿ ಘೋಷಿಸಿದ ವಿಷಯಗಳನ್ನು ನಂಬುವಂತಿಲ್ಲವೇ?” ಎಂದು ಪ್ರಶ್ನಿಸಿದ್ದಾರೆ.

“ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು, ಜಿಲ್ಲಾಧಿಕಾರಿಗಳೂ ಅದನ್ನು ತೆಗೆಯಲು ಆದೇಶವಾಗಿದೆ ಅನ್ನುತ್ತಾರೆ. ಇಷ್ಟೆಲ್ಲಾ ಆದ ಮೇಲೆ ಟೋಲ್ ಗೇಟ್ ವಸೂಲಿ ನಿಲ್ಲಿಸಿ ಅನ್ನುವ ಹೋರಾಟ ಸಮಿತಿ ಮುಖಂಡರ ಮನೆಗೆ ಮಧ್ಯರಾತ್ರಿ ನೋಟೀಸ್‌‌ ನೀಡುತ್ತಾರೆ” ಎಂದು ಟೀಕಿಸಿದ್ದಾರೆ.

ಇದನ್ನೂ ಓದಿರಿ: ಯುಪಿ: ಮುಸ್ಲಿಮರಲ್ಲಿ ಭಯ ಹರಡಿಸಲೆಂದೇ ದುಷ್ಕರ್ಮಿಗಳ ಗುಂಪು ಮುಸ್ಲಿಂ ವ್ಯಕ್ತಿಯನ್ನು ಕೊಂದಿತ್ತು: ‘ದಿ ವೈರ್‌’ ವರದಿ

ತಡರಾತ್ರಿ ನೋಟೀಸ್‌ಗೆ ನಳಿನ್‌ಕುಮಾರ್‌ ಕಟೀಲ್‌ ವಿರೋಧ

ತಡರಾತ್ರಿ ನೀಡಿದ ನೋಟೀಸ್‌ಗೆ ಸಂಬಂಧಿಸಿದಂತೆ ವಿರೋಧ ವ್ಯಕ್ತವಾದ ಬೆನ್ನಲ್ಲೇ ಸಂಸದ ನಳೀನ್‌ಕುಮಾರ್‌ ಕಟೀಲ್‌, “ಸುರತ್ಕಲ್ ಟೋಲ್ ಗೇಟ್ ವಿರುದ್ಧದ ಹೋರಾಟಕ್ಕೆ ಸಂಬಂಧಿಸಿ ಹೋರಾಟಗಾರರ ಮನೆಗೆ ರಾತ್ರಿ ತೆರಳಿ ಪೊಲೀಸರು ನೋಟಿಸ್ ನೀಡಿರುವುದು ನನ್ನ ಗಮನಕ್ಕೆ ಬಂದಿಲ್ಲ. ಹಾಗೆ ಒಂದು ವೇಳೆ ಅಧಿಕಾರಿಗಳು ರಾತ್ರಿ ತೆರಳಿ ಹೋರಾಟಗಾರರ ಮನೆಗೆ ತೆರಳಿ ನೋಟಿಸ್‌ ನೀಡಿದರೆ ಅದು ಸರಿಯಲ್ಲ” ಎಂದಿದ್ದಾರೆ.

ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಸಂಸದರು, “ಕೆಲವೊಂದು ತಾಂತ್ರಿಕ ಕಾರಣಗಳಿಂದ ಸುರತ್ಕಲ್ ಟೋಲ್ ಗೇಟ್ ತೆರವು ಕಾರ್ಯ ವಿಳಂಬವಾಗಿದೆ. ಈ ಟೋಲ್ ಗೇಟ್ ತೆರವುಗೊಳಿಸುವ ಬಗ್ಗೆ ಸಂಬಂಧಪಟ್ಟವರ ಜೊತೆ ಮಾತುಕತೆ ನಡೆದಿದೆ. ಆದರೆ ಟೋಲ್ ಗೇಟ್ ವಿರುದ್ಧ ನಡೆಯುತ್ತಿರುವ ಹೋರಾಟವನ್ನು ಹತ್ತಿಕ್ಕುವ ಯಾವ ಉದ್ದೇಶ ನಮಗಿಲ್ಲ. ಹೋರಾಟಗಾರರ ಹೋರಾಟಕ್ಕೆ ನಮ್ಮ ವಿರೋಧವಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...