Homeಕರ್ನಾಟಕಸುರತ್ಕಲ್‌ ಟೋಲ್‌ ವಿರೋಧಿ ಹೋರಾಟಗಾರರಿಗೆ ತಡರಾತ್ರಿ ನೋಟಿಸ್‌: ‘ಜೈಲು ಸೇರಿದರೂ ಪ್ರತಿಭಟನೆ ನಿಲ್ಲಲ್ಲ’- ಮುನೀರ್‌ ಎಚ್ಚರಿಕೆ

ಸುರತ್ಕಲ್‌ ಟೋಲ್‌ ವಿರೋಧಿ ಹೋರಾಟಗಾರರಿಗೆ ತಡರಾತ್ರಿ ನೋಟಿಸ್‌: ‘ಜೈಲು ಸೇರಿದರೂ ಪ್ರತಿಭಟನೆ ನಿಲ್ಲಲ್ಲ’- ಮುನೀರ್‌ ಎಚ್ಚರಿಕೆ

ನೋಟಿಸ್‌‌ನಲ್ಲಿ ನಮ್ಮನ್ನು ಏಕವಚನದಲ್ಲಿ ಕರೆಯಲಾಗಿದೆ, ಕ್ರಿಮಿನಲ್ ರೀತಿ ಪದಗಳನ್ನು ಬಳಸಲಾಗಿದೆ: ಮುನೀರ್‌ ಕಾಟಿಪಳ್ಳ

- Advertisement -
- Advertisement -

ಸುರತ್ಕಲ್ ಟೋಲ್ ಗೇಟ್ ವಿರೋಧಿ ಹೋರಾಟಗಾರರ ಮನೆಗಳಿಗೆ ಪೊಲೀಸರು ತಡರಾತ್ರಿ ಭೇಟಿ ನೀಡಿ ನೋಟಿಸ್‌ ನೀಡಿರುವ ಘಟನೆ ನಡೆದಿದೆ. ಈ ಕುರಿತು ಜನರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಹೋರಾಟ ಸಮಿತಿಯ ಸಂಚಾಲಕ ಮುನೀರ್ ಕಾಟಿಪಳ್ಳ, ಬಿ.ಕೆ.ಇಮ್ಮಿಯಾಝ್, ಪ್ರತಿಭಾ ಕುಳಾಯಿ, ರಾಘವೇಂದ್ರ ರಾವ್ ಸೇರಿದಂತೆ ಹಲವು ಮುಖಂಡರಿಗೆ ಸುರತ್ಕಲ್ ಪೊಲೀಸರು ನೋಟಿಸ್‌ ನೀಡಿದ್ದಾರೆ.

ಈಗಾಗಲೇ ಸಭೆ ನಡೆಸಿ ಹೋರಾಟ ಹಿಂಪಡೆಯುವಂತೆ ಸೂಚಿಸಲಾಗಿತ್ತು. ಆದರೆ, ಅದನ್ನು ಹೋರಾಟ ಸಮಿತಿ ತಿರಸ್ಕರಿಸಿದೆ. ನೋಟಿಸ್‌ ತಲುಪಿದ ಕೂಡಲೇ ಡಿಸಿಪಿ ಅವರ ಕಚೇರಿಗೆ ಭೇಟಿ ನೀಡಿ ಹೋರಾಟ ಮುಂದುವರಿಸುವುದಿಲ್ಲ ಎಂದು ಮುಚ್ಚಳಿಗೆ ಬರೆದು ಕೊಡುವಂತೆ ನೋಟಿಸ್‌ನಲ್ಲಿ ಹೇಳಿರುವುದಾಗಿ ‘ವಾರ್ತಾಭಾರತಿ’ ಉಲ್ಲೇಖಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ತಡರಾತ್ರಿ ನೋಟೀಸ್‌ ಕುರಿತು ಹೋರಾಟ ಸಮಿತಿಯ ಸಂಚಾಲಕ ಮುನೀರ್ ಕಾಟಿಪಳ್ಳ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. “ಮಧ್ಯರಾತ್ರಿ ಪೊಲೀಸರನ್ನು ಹೋರಾಟಗಾರರ ಮನೆಗಳಿಗೆ ಕಳುಹಿಸುತ್ತೀರಾ ಭರತ್‌ ಶೆಟ್ಟಿ, ಉಮಾನಾಥ ಕೋಟ್ಯಾನ್, ವೇದವ್ಯಾಸ ಕಾಮತರೆ? ಮಹಿಳಾ ಹೋರಾಟಗಾರರ ಮನೆಗೂ ಕಾಳರಾತ್ರಿ ‘ಗಂಡಸು’ ಪೊಲೀಸರ ದಂಡು! ಅದಕ್ಕೆಲ್ಲ ಜನ ಹೆದರುವ ಕಾಲ ಮುಗಿದಿದೆ. ತುಳುನಾಡಿನ ಮುಂದೆ ಬೆತ್ತಲಾಗುತ್ತಿದ್ದೀರಿ. ಬಿಜೆಪಿಗರೇ ಎಚ್ಚರ” ಎಂದು ಗುಡುಗಿದ್ದಾರೆ.

ಮತ್ತೊಂದು ಪೋಸ್ಟ್‌ನಲ್ಲಿ, “ನನ್ನ ಮನೆಗೆ ನಿನ್ನೆ ತಡರಾತ್ರಿ ಬಂದ ಪೊಲೀಸರ ತಂಡ ಸಮನ್ಸ್ ನೀಡಿದೆ. ಮಂಗಳೂರು ಕಮೀಷನರ್ ಕಚೇರಿಯಿಂದ ಕಳುಹಿಸಿದ ಸಮನ್ಸ್ ನೋಟಿಸ್‌‌ನಲ್ಲಿ ನಮಗೆ ಏಕವಚನ ಬಳಸಲಾಗಿದೆ. ಕ್ರಿಮಿನಲ್ ರೀತಿ ಪದಗಳನ್ನು ಬಳಸಿ ಸಂಬೋಧಿಸಲಾಗಿದೆ. ಇರಲಿ. ಬಿಜೆಪಿ ಪೊಲೀಸರ ನೀತಿಯೇ ಹಾಗಿರಬಹುದು” ಎಂದಿದ್ದಾರೆ.

“ಹೆಚ್ಚು ಕಮ್ಮಿ ಐವತ್ತಕ್ಕೂ ಹೆಚ್ಚು ಜನರಿಗೆ ನೋಟಿಸ್‌ ನೀಡಲಾಗಿದೆ. ಹೋರಾಟಕ್ಕೆ ಸಂಬಂಧ ಪಡದ ಕೆಲವು ಅಮಾಯಕರಿಗೂ ನೋಟಿಸ್‌‌ ಬಂದಿದೆ. ಕ್ರಿಮಿನಲ್‌ಗಳ ರೀತಿ ಮನೆಗಳನ್ನು ಪೊಲೀಸರು ಸುತ್ತುವರಿದಿದ್ದಾರೆ. ನಾವೀಗ (ಹೋರಾಟ ಸಮಿತಿ) ದೃಢ ನಿರ್ಧಾರ ಕೈಗೊಂಡಿದ್ದೇವೆ. ನಮ್ಮ ಕಾನೂನು ವಿಭಾಗದ ಜವಾಬ್ದಾರಿ ಹೊತ್ತಿರುವ ಜನಪರ ವಕೀಲರ ತಂಡದೊಂದಿಗೆ ಸಭೆ ನಡೆಸಿ ಕೆಲವು ತೀರ್ಮಾನಕ್ಕೆ ಬಂದಿದ್ದೇವೆ” ಎಂದು ತಿಳಿಸಿದ್ದಾರೆ.

“ಯಾವುದೇ ಕಾರಣಕ್ಕೂ ಮುಚ್ಚಳಿಕೆ ಬರೆದುಕೊಡುವುದಿಲ್ಲ. ವಾರಂಟ್ ಹೊರಡಿಸಿ ಬಂಧಿಸುವುದಾದರೆ ತುಳುನಾಡಿನ ಜನ ಸಾಮಾನ್ಯರ ಪರವಾಗಿ ಜೈಲಿಗೆ ಹೋಗಲು ಸಿದ್ದರಾಗುವುದು. ಅಕ್ಟೋಬರ್ 18ರ ಅಕ್ರಮ ಟೋಲ್ ಸ್ಥಗಿತ ಹೋರಾಟ ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ. ನಾವು ಜೈಲು ಸೇರಿದರೂ ಅಂದು ಹೋರಾಟ ನಡೆಯುತ್ತದೆ. ನೂರಾರು ಸಂಘಟನೆ, ಮುಖಂಡರ ಸಾಮೂಹಿಕ ನಾಯಕತ್ವದಲ್ಲಿ ನಡೆಯುತ್ತಿರುವ ಈ ಮಹತ್ವದ ಹೋರಾಟಕ್ಕೆ ನಾಯಕರುಗಳ ಕೊರತೆ ಇಲ್ಲ. ಸಂಚಾಲಕ ಮುನೀರ್ ಕಾಟಿಪಳ್ಳ ಜೈಲು ಸೇರಿದರೆ ನೂರಾರು ಜನ ಆ ಸ್ಥಾನವನ್ನು ತುಂಬಲು ಸಿದ್ದರಿದ್ದಾರೆ.‌ ನಮ್ಮ ಮುತ್ತಿಗೆ ಪ್ರತಿಭಟನೆ ಅಂದು ನಿಗದಿಯಂತೆ ಶಾಂತಿಯುತವಾಗಿ ನಡೆಯಲಿದೆ. ಯಾರೂ ಪ್ರಚೋದನೆಗೆ ಒಳಗಾಗಬಾರದು” ಎಂದು ಮನವಿ ಮಾಡಿದ್ದಾರೆ.

“ನಮ್ಮ ಮೇಲಿನ ಬಿಜೆಪಿ ಸರಕಾರದ ದಾಳಿಯ ಸಂದರ್ಭದಲ್ಲಿ ನಮ್ಮ ಹೋರಾಟದ ಜೊತೆ ತುಳುನಾಡಿನ ಜನತೆ ನಿಲ್ಲಬೇಕು. ಧ್ವನಿಯನ್ನು ಮತ್ತಷ್ಟು ಎತ್ತರಿಸಬೇಕು ಎಂದು ಮನವಿ ಮಾಡುತ್ತಿದ್ದೇವೆ. ಯಾವುದೇ ಕಾರಣಕ್ಕೂ ಗುಲಾಮಗಿರಿಯ ಸಂಕೇತವಾಗಿರುವ ಟೋಲ್ ಗೇಟ್ ಸುಲಿಗೆ ಮುಂದುವರಿಯಬಾರದು. ಮುಂದುವರಿಯಲು ಅವಕಾಶಕೊಡುವುದಿಲ್ಲ ಎಂದು ಒಕ್ಕೊರಲಿನಿಂದ ಗಟ್ಟಿಯಾಗಿ ಬಿಜೆಪಿ ಶಾಸಕ, ಸಂಸದ ಶಾಸಕರುಗಳಿಗೆ ಹೇಳುವಂತಾಗಬೇಕು” ಎಂದು ಒತ್ತಾಯಿಸಿದ್ದಾರೆ.

“ಯಾವುದೇ ಕಾರಣಕ್ಕೂ ಹೋರಾಟ ಸೋಲುವುದಿಲ್ಲ. ಅಕ್ಟೋಬರ್ 18 ರಂದು ಟೋಲ್ ಸಂಗ್ರಹ ಅಂತ್ಯಗೊಳ್ಳಲೇಬೇಕು. ನಮ್ಮ ಮೇಲೆ ಪೊಲೀಸ್ ದೌರ್ಜನ್ಯ ಹರಿಯಬಿಟ್ಟು ಬಿಜೆಪಿ ಶಾಸಕರುಗಳು ಬೀಗುವುದು ಬೇಡ. ಜನ ಆಕ್ರೋಶಗೊಂಡಿದ್ದಾರೆ. ಅವರು ನಿಮಗೆ ಸರಿಯಾಗಿ ಉತ್ತರಿಸುತ್ತಾರೆ” ಎಂದು ಎಚ್ಚರಿಸಿದ್ದಾರೆ.

ಪೊಲೀಸ್ ಹಾಗೂ ಸರ್ಕಾರದ ನಡೆಯನ್ನು ಖಂಡಿಸಿರುವ ಶಿಕ್ಷಣತಜ್ಞ ಎಂ.ಜಿ.ಹೆಗ್ಡೆ, “ಲೋಕಸಭೆಯಲ್ಲಿ ಇಲಾಖೆಯ ಮಂತ್ರಿಯವರು ಟೋಲ್ ಗೇಟ್ ಮುಚ್ಚಲಾಗುವುದು ಎಂದಿದ್ದರು. ಅದು ಲೋಕಸಭೆಯ ಕಡತದಲ್ಲಿ ದಾಖಲಾಗುತ್ತದೆ. ಅಂದಿನಿಂದಲೇ ಟೋಲ್ ನಿಲ್ಲಬೇಕಿತ್ತು. ರಾಜ್ಯದ ವಿಧಾನ ಪರಿಷತ್ ಹಾಗೂ ವಿಧಾನಸಭೆಯಲ್ಲಿ ರಾಜ್ಯದ ಮಂತ್ರಿಗಳೂ ಟೋಲ್ ಗೇಟ್ ನಿಯಮ ಬಾಹಿರ, ತೆಗೆಯಲಾಗುವುದು ಎಂದು ಹೇಳುತ್ತಾರೆ. ಅದೂ ಕಡತದಲ್ಲಿ ದಾಖಲಾಗುತ್ತದೆ. ಹಾಗಾದರೆ ಈ ದೇಶದಲ್ಲಿ ಲೋಕಸಭೆ, ವಿಧಾನಸಭೆಯಲ್ಲಿ ಘೋಷಿಸಿದ ವಿಷಯಗಳನ್ನು ನಂಬುವಂತಿಲ್ಲವೇ?” ಎಂದು ಪ್ರಶ್ನಿಸಿದ್ದಾರೆ.

“ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು, ಜಿಲ್ಲಾಧಿಕಾರಿಗಳೂ ಅದನ್ನು ತೆಗೆಯಲು ಆದೇಶವಾಗಿದೆ ಅನ್ನುತ್ತಾರೆ. ಇಷ್ಟೆಲ್ಲಾ ಆದ ಮೇಲೆ ಟೋಲ್ ಗೇಟ್ ವಸೂಲಿ ನಿಲ್ಲಿಸಿ ಅನ್ನುವ ಹೋರಾಟ ಸಮಿತಿ ಮುಖಂಡರ ಮನೆಗೆ ಮಧ್ಯರಾತ್ರಿ ನೋಟೀಸ್‌‌ ನೀಡುತ್ತಾರೆ” ಎಂದು ಟೀಕಿಸಿದ್ದಾರೆ.

ಇದನ್ನೂ ಓದಿರಿ: ಯುಪಿ: ಮುಸ್ಲಿಮರಲ್ಲಿ ಭಯ ಹರಡಿಸಲೆಂದೇ ದುಷ್ಕರ್ಮಿಗಳ ಗುಂಪು ಮುಸ್ಲಿಂ ವ್ಯಕ್ತಿಯನ್ನು ಕೊಂದಿತ್ತು: ‘ದಿ ವೈರ್‌’ ವರದಿ

ತಡರಾತ್ರಿ ನೋಟೀಸ್‌ಗೆ ನಳಿನ್‌ಕುಮಾರ್‌ ಕಟೀಲ್‌ ವಿರೋಧ

ತಡರಾತ್ರಿ ನೀಡಿದ ನೋಟೀಸ್‌ಗೆ ಸಂಬಂಧಿಸಿದಂತೆ ವಿರೋಧ ವ್ಯಕ್ತವಾದ ಬೆನ್ನಲ್ಲೇ ಸಂಸದ ನಳೀನ್‌ಕುಮಾರ್‌ ಕಟೀಲ್‌, “ಸುರತ್ಕಲ್ ಟೋಲ್ ಗೇಟ್ ವಿರುದ್ಧದ ಹೋರಾಟಕ್ಕೆ ಸಂಬಂಧಿಸಿ ಹೋರಾಟಗಾರರ ಮನೆಗೆ ರಾತ್ರಿ ತೆರಳಿ ಪೊಲೀಸರು ನೋಟಿಸ್ ನೀಡಿರುವುದು ನನ್ನ ಗಮನಕ್ಕೆ ಬಂದಿಲ್ಲ. ಹಾಗೆ ಒಂದು ವೇಳೆ ಅಧಿಕಾರಿಗಳು ರಾತ್ರಿ ತೆರಳಿ ಹೋರಾಟಗಾರರ ಮನೆಗೆ ತೆರಳಿ ನೋಟಿಸ್‌ ನೀಡಿದರೆ ಅದು ಸರಿಯಲ್ಲ” ಎಂದಿದ್ದಾರೆ.

ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಸಂಸದರು, “ಕೆಲವೊಂದು ತಾಂತ್ರಿಕ ಕಾರಣಗಳಿಂದ ಸುರತ್ಕಲ್ ಟೋಲ್ ಗೇಟ್ ತೆರವು ಕಾರ್ಯ ವಿಳಂಬವಾಗಿದೆ. ಈ ಟೋಲ್ ಗೇಟ್ ತೆರವುಗೊಳಿಸುವ ಬಗ್ಗೆ ಸಂಬಂಧಪಟ್ಟವರ ಜೊತೆ ಮಾತುಕತೆ ನಡೆದಿದೆ. ಆದರೆ ಟೋಲ್ ಗೇಟ್ ವಿರುದ್ಧ ನಡೆಯುತ್ತಿರುವ ಹೋರಾಟವನ್ನು ಹತ್ತಿಕ್ಕುವ ಯಾವ ಉದ್ದೇಶ ನಮಗಿಲ್ಲ. ಹೋರಾಟಗಾರರ ಹೋರಾಟಕ್ಕೆ ನಮ್ಮ ವಿರೋಧವಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...