Homeಕರ್ನಾಟಕಸುರತ್ಕಲ್‌ ಟೋಲ್‌ ವಿರೋಧಿ ಹೋರಾಟಗಾರರಿಗೆ ತಡರಾತ್ರಿ ನೋಟಿಸ್‌: ‘ಜೈಲು ಸೇರಿದರೂ ಪ್ರತಿಭಟನೆ ನಿಲ್ಲಲ್ಲ’- ಮುನೀರ್‌ ಎಚ್ಚರಿಕೆ

ಸುರತ್ಕಲ್‌ ಟೋಲ್‌ ವಿರೋಧಿ ಹೋರಾಟಗಾರರಿಗೆ ತಡರಾತ್ರಿ ನೋಟಿಸ್‌: ‘ಜೈಲು ಸೇರಿದರೂ ಪ್ರತಿಭಟನೆ ನಿಲ್ಲಲ್ಲ’- ಮುನೀರ್‌ ಎಚ್ಚರಿಕೆ

ನೋಟಿಸ್‌‌ನಲ್ಲಿ ನಮ್ಮನ್ನು ಏಕವಚನದಲ್ಲಿ ಕರೆಯಲಾಗಿದೆ, ಕ್ರಿಮಿನಲ್ ರೀತಿ ಪದಗಳನ್ನು ಬಳಸಲಾಗಿದೆ: ಮುನೀರ್‌ ಕಾಟಿಪಳ್ಳ

- Advertisement -
- Advertisement -

ಸುರತ್ಕಲ್ ಟೋಲ್ ಗೇಟ್ ವಿರೋಧಿ ಹೋರಾಟಗಾರರ ಮನೆಗಳಿಗೆ ಪೊಲೀಸರು ತಡರಾತ್ರಿ ಭೇಟಿ ನೀಡಿ ನೋಟಿಸ್‌ ನೀಡಿರುವ ಘಟನೆ ನಡೆದಿದೆ. ಈ ಕುರಿತು ಜನರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಹೋರಾಟ ಸಮಿತಿಯ ಸಂಚಾಲಕ ಮುನೀರ್ ಕಾಟಿಪಳ್ಳ, ಬಿ.ಕೆ.ಇಮ್ಮಿಯಾಝ್, ಪ್ರತಿಭಾ ಕುಳಾಯಿ, ರಾಘವೇಂದ್ರ ರಾವ್ ಸೇರಿದಂತೆ ಹಲವು ಮುಖಂಡರಿಗೆ ಸುರತ್ಕಲ್ ಪೊಲೀಸರು ನೋಟಿಸ್‌ ನೀಡಿದ್ದಾರೆ.

ಈಗಾಗಲೇ ಸಭೆ ನಡೆಸಿ ಹೋರಾಟ ಹಿಂಪಡೆಯುವಂತೆ ಸೂಚಿಸಲಾಗಿತ್ತು. ಆದರೆ, ಅದನ್ನು ಹೋರಾಟ ಸಮಿತಿ ತಿರಸ್ಕರಿಸಿದೆ. ನೋಟಿಸ್‌ ತಲುಪಿದ ಕೂಡಲೇ ಡಿಸಿಪಿ ಅವರ ಕಚೇರಿಗೆ ಭೇಟಿ ನೀಡಿ ಹೋರಾಟ ಮುಂದುವರಿಸುವುದಿಲ್ಲ ಎಂದು ಮುಚ್ಚಳಿಗೆ ಬರೆದು ಕೊಡುವಂತೆ ನೋಟಿಸ್‌ನಲ್ಲಿ ಹೇಳಿರುವುದಾಗಿ ‘ವಾರ್ತಾಭಾರತಿ’ ಉಲ್ಲೇಖಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ತಡರಾತ್ರಿ ನೋಟೀಸ್‌ ಕುರಿತು ಹೋರಾಟ ಸಮಿತಿಯ ಸಂಚಾಲಕ ಮುನೀರ್ ಕಾಟಿಪಳ್ಳ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. “ಮಧ್ಯರಾತ್ರಿ ಪೊಲೀಸರನ್ನು ಹೋರಾಟಗಾರರ ಮನೆಗಳಿಗೆ ಕಳುಹಿಸುತ್ತೀರಾ ಭರತ್‌ ಶೆಟ್ಟಿ, ಉಮಾನಾಥ ಕೋಟ್ಯಾನ್, ವೇದವ್ಯಾಸ ಕಾಮತರೆ? ಮಹಿಳಾ ಹೋರಾಟಗಾರರ ಮನೆಗೂ ಕಾಳರಾತ್ರಿ ‘ಗಂಡಸು’ ಪೊಲೀಸರ ದಂಡು! ಅದಕ್ಕೆಲ್ಲ ಜನ ಹೆದರುವ ಕಾಲ ಮುಗಿದಿದೆ. ತುಳುನಾಡಿನ ಮುಂದೆ ಬೆತ್ತಲಾಗುತ್ತಿದ್ದೀರಿ. ಬಿಜೆಪಿಗರೇ ಎಚ್ಚರ” ಎಂದು ಗುಡುಗಿದ್ದಾರೆ.

ಮತ್ತೊಂದು ಪೋಸ್ಟ್‌ನಲ್ಲಿ, “ನನ್ನ ಮನೆಗೆ ನಿನ್ನೆ ತಡರಾತ್ರಿ ಬಂದ ಪೊಲೀಸರ ತಂಡ ಸಮನ್ಸ್ ನೀಡಿದೆ. ಮಂಗಳೂರು ಕಮೀಷನರ್ ಕಚೇರಿಯಿಂದ ಕಳುಹಿಸಿದ ಸಮನ್ಸ್ ನೋಟಿಸ್‌‌ನಲ್ಲಿ ನಮಗೆ ಏಕವಚನ ಬಳಸಲಾಗಿದೆ. ಕ್ರಿಮಿನಲ್ ರೀತಿ ಪದಗಳನ್ನು ಬಳಸಿ ಸಂಬೋಧಿಸಲಾಗಿದೆ. ಇರಲಿ. ಬಿಜೆಪಿ ಪೊಲೀಸರ ನೀತಿಯೇ ಹಾಗಿರಬಹುದು” ಎಂದಿದ್ದಾರೆ.

“ಹೆಚ್ಚು ಕಮ್ಮಿ ಐವತ್ತಕ್ಕೂ ಹೆಚ್ಚು ಜನರಿಗೆ ನೋಟಿಸ್‌ ನೀಡಲಾಗಿದೆ. ಹೋರಾಟಕ್ಕೆ ಸಂಬಂಧ ಪಡದ ಕೆಲವು ಅಮಾಯಕರಿಗೂ ನೋಟಿಸ್‌‌ ಬಂದಿದೆ. ಕ್ರಿಮಿನಲ್‌ಗಳ ರೀತಿ ಮನೆಗಳನ್ನು ಪೊಲೀಸರು ಸುತ್ತುವರಿದಿದ್ದಾರೆ. ನಾವೀಗ (ಹೋರಾಟ ಸಮಿತಿ) ದೃಢ ನಿರ್ಧಾರ ಕೈಗೊಂಡಿದ್ದೇವೆ. ನಮ್ಮ ಕಾನೂನು ವಿಭಾಗದ ಜವಾಬ್ದಾರಿ ಹೊತ್ತಿರುವ ಜನಪರ ವಕೀಲರ ತಂಡದೊಂದಿಗೆ ಸಭೆ ನಡೆಸಿ ಕೆಲವು ತೀರ್ಮಾನಕ್ಕೆ ಬಂದಿದ್ದೇವೆ” ಎಂದು ತಿಳಿಸಿದ್ದಾರೆ.

“ಯಾವುದೇ ಕಾರಣಕ್ಕೂ ಮುಚ್ಚಳಿಕೆ ಬರೆದುಕೊಡುವುದಿಲ್ಲ. ವಾರಂಟ್ ಹೊರಡಿಸಿ ಬಂಧಿಸುವುದಾದರೆ ತುಳುನಾಡಿನ ಜನ ಸಾಮಾನ್ಯರ ಪರವಾಗಿ ಜೈಲಿಗೆ ಹೋಗಲು ಸಿದ್ದರಾಗುವುದು. ಅಕ್ಟೋಬರ್ 18ರ ಅಕ್ರಮ ಟೋಲ್ ಸ್ಥಗಿತ ಹೋರಾಟ ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ. ನಾವು ಜೈಲು ಸೇರಿದರೂ ಅಂದು ಹೋರಾಟ ನಡೆಯುತ್ತದೆ. ನೂರಾರು ಸಂಘಟನೆ, ಮುಖಂಡರ ಸಾಮೂಹಿಕ ನಾಯಕತ್ವದಲ್ಲಿ ನಡೆಯುತ್ತಿರುವ ಈ ಮಹತ್ವದ ಹೋರಾಟಕ್ಕೆ ನಾಯಕರುಗಳ ಕೊರತೆ ಇಲ್ಲ. ಸಂಚಾಲಕ ಮುನೀರ್ ಕಾಟಿಪಳ್ಳ ಜೈಲು ಸೇರಿದರೆ ನೂರಾರು ಜನ ಆ ಸ್ಥಾನವನ್ನು ತುಂಬಲು ಸಿದ್ದರಿದ್ದಾರೆ.‌ ನಮ್ಮ ಮುತ್ತಿಗೆ ಪ್ರತಿಭಟನೆ ಅಂದು ನಿಗದಿಯಂತೆ ಶಾಂತಿಯುತವಾಗಿ ನಡೆಯಲಿದೆ. ಯಾರೂ ಪ್ರಚೋದನೆಗೆ ಒಳಗಾಗಬಾರದು” ಎಂದು ಮನವಿ ಮಾಡಿದ್ದಾರೆ.

“ನಮ್ಮ ಮೇಲಿನ ಬಿಜೆಪಿ ಸರಕಾರದ ದಾಳಿಯ ಸಂದರ್ಭದಲ್ಲಿ ನಮ್ಮ ಹೋರಾಟದ ಜೊತೆ ತುಳುನಾಡಿನ ಜನತೆ ನಿಲ್ಲಬೇಕು. ಧ್ವನಿಯನ್ನು ಮತ್ತಷ್ಟು ಎತ್ತರಿಸಬೇಕು ಎಂದು ಮನವಿ ಮಾಡುತ್ತಿದ್ದೇವೆ. ಯಾವುದೇ ಕಾರಣಕ್ಕೂ ಗುಲಾಮಗಿರಿಯ ಸಂಕೇತವಾಗಿರುವ ಟೋಲ್ ಗೇಟ್ ಸುಲಿಗೆ ಮುಂದುವರಿಯಬಾರದು. ಮುಂದುವರಿಯಲು ಅವಕಾಶಕೊಡುವುದಿಲ್ಲ ಎಂದು ಒಕ್ಕೊರಲಿನಿಂದ ಗಟ್ಟಿಯಾಗಿ ಬಿಜೆಪಿ ಶಾಸಕ, ಸಂಸದ ಶಾಸಕರುಗಳಿಗೆ ಹೇಳುವಂತಾಗಬೇಕು” ಎಂದು ಒತ್ತಾಯಿಸಿದ್ದಾರೆ.

“ಯಾವುದೇ ಕಾರಣಕ್ಕೂ ಹೋರಾಟ ಸೋಲುವುದಿಲ್ಲ. ಅಕ್ಟೋಬರ್ 18 ರಂದು ಟೋಲ್ ಸಂಗ್ರಹ ಅಂತ್ಯಗೊಳ್ಳಲೇಬೇಕು. ನಮ್ಮ ಮೇಲೆ ಪೊಲೀಸ್ ದೌರ್ಜನ್ಯ ಹರಿಯಬಿಟ್ಟು ಬಿಜೆಪಿ ಶಾಸಕರುಗಳು ಬೀಗುವುದು ಬೇಡ. ಜನ ಆಕ್ರೋಶಗೊಂಡಿದ್ದಾರೆ. ಅವರು ನಿಮಗೆ ಸರಿಯಾಗಿ ಉತ್ತರಿಸುತ್ತಾರೆ” ಎಂದು ಎಚ್ಚರಿಸಿದ್ದಾರೆ.

ಪೊಲೀಸ್ ಹಾಗೂ ಸರ್ಕಾರದ ನಡೆಯನ್ನು ಖಂಡಿಸಿರುವ ಶಿಕ್ಷಣತಜ್ಞ ಎಂ.ಜಿ.ಹೆಗ್ಡೆ, “ಲೋಕಸಭೆಯಲ್ಲಿ ಇಲಾಖೆಯ ಮಂತ್ರಿಯವರು ಟೋಲ್ ಗೇಟ್ ಮುಚ್ಚಲಾಗುವುದು ಎಂದಿದ್ದರು. ಅದು ಲೋಕಸಭೆಯ ಕಡತದಲ್ಲಿ ದಾಖಲಾಗುತ್ತದೆ. ಅಂದಿನಿಂದಲೇ ಟೋಲ್ ನಿಲ್ಲಬೇಕಿತ್ತು. ರಾಜ್ಯದ ವಿಧಾನ ಪರಿಷತ್ ಹಾಗೂ ವಿಧಾನಸಭೆಯಲ್ಲಿ ರಾಜ್ಯದ ಮಂತ್ರಿಗಳೂ ಟೋಲ್ ಗೇಟ್ ನಿಯಮ ಬಾಹಿರ, ತೆಗೆಯಲಾಗುವುದು ಎಂದು ಹೇಳುತ್ತಾರೆ. ಅದೂ ಕಡತದಲ್ಲಿ ದಾಖಲಾಗುತ್ತದೆ. ಹಾಗಾದರೆ ಈ ದೇಶದಲ್ಲಿ ಲೋಕಸಭೆ, ವಿಧಾನಸಭೆಯಲ್ಲಿ ಘೋಷಿಸಿದ ವಿಷಯಗಳನ್ನು ನಂಬುವಂತಿಲ್ಲವೇ?” ಎಂದು ಪ್ರಶ್ನಿಸಿದ್ದಾರೆ.

“ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು, ಜಿಲ್ಲಾಧಿಕಾರಿಗಳೂ ಅದನ್ನು ತೆಗೆಯಲು ಆದೇಶವಾಗಿದೆ ಅನ್ನುತ್ತಾರೆ. ಇಷ್ಟೆಲ್ಲಾ ಆದ ಮೇಲೆ ಟೋಲ್ ಗೇಟ್ ವಸೂಲಿ ನಿಲ್ಲಿಸಿ ಅನ್ನುವ ಹೋರಾಟ ಸಮಿತಿ ಮುಖಂಡರ ಮನೆಗೆ ಮಧ್ಯರಾತ್ರಿ ನೋಟೀಸ್‌‌ ನೀಡುತ್ತಾರೆ” ಎಂದು ಟೀಕಿಸಿದ್ದಾರೆ.

ಇದನ್ನೂ ಓದಿರಿ: ಯುಪಿ: ಮುಸ್ಲಿಮರಲ್ಲಿ ಭಯ ಹರಡಿಸಲೆಂದೇ ದುಷ್ಕರ್ಮಿಗಳ ಗುಂಪು ಮುಸ್ಲಿಂ ವ್ಯಕ್ತಿಯನ್ನು ಕೊಂದಿತ್ತು: ‘ದಿ ವೈರ್‌’ ವರದಿ

ತಡರಾತ್ರಿ ನೋಟೀಸ್‌ಗೆ ನಳಿನ್‌ಕುಮಾರ್‌ ಕಟೀಲ್‌ ವಿರೋಧ

ತಡರಾತ್ರಿ ನೀಡಿದ ನೋಟೀಸ್‌ಗೆ ಸಂಬಂಧಿಸಿದಂತೆ ವಿರೋಧ ವ್ಯಕ್ತವಾದ ಬೆನ್ನಲ್ಲೇ ಸಂಸದ ನಳೀನ್‌ಕುಮಾರ್‌ ಕಟೀಲ್‌, “ಸುರತ್ಕಲ್ ಟೋಲ್ ಗೇಟ್ ವಿರುದ್ಧದ ಹೋರಾಟಕ್ಕೆ ಸಂಬಂಧಿಸಿ ಹೋರಾಟಗಾರರ ಮನೆಗೆ ರಾತ್ರಿ ತೆರಳಿ ಪೊಲೀಸರು ನೋಟಿಸ್ ನೀಡಿರುವುದು ನನ್ನ ಗಮನಕ್ಕೆ ಬಂದಿಲ್ಲ. ಹಾಗೆ ಒಂದು ವೇಳೆ ಅಧಿಕಾರಿಗಳು ರಾತ್ರಿ ತೆರಳಿ ಹೋರಾಟಗಾರರ ಮನೆಗೆ ತೆರಳಿ ನೋಟಿಸ್‌ ನೀಡಿದರೆ ಅದು ಸರಿಯಲ್ಲ” ಎಂದಿದ್ದಾರೆ.

ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಸಂಸದರು, “ಕೆಲವೊಂದು ತಾಂತ್ರಿಕ ಕಾರಣಗಳಿಂದ ಸುರತ್ಕಲ್ ಟೋಲ್ ಗೇಟ್ ತೆರವು ಕಾರ್ಯ ವಿಳಂಬವಾಗಿದೆ. ಈ ಟೋಲ್ ಗೇಟ್ ತೆರವುಗೊಳಿಸುವ ಬಗ್ಗೆ ಸಂಬಂಧಪಟ್ಟವರ ಜೊತೆ ಮಾತುಕತೆ ನಡೆದಿದೆ. ಆದರೆ ಟೋಲ್ ಗೇಟ್ ವಿರುದ್ಧ ನಡೆಯುತ್ತಿರುವ ಹೋರಾಟವನ್ನು ಹತ್ತಿಕ್ಕುವ ಯಾವ ಉದ್ದೇಶ ನಮಗಿಲ್ಲ. ಹೋರಾಟಗಾರರ ಹೋರಾಟಕ್ಕೆ ನಮ್ಮ ವಿರೋಧವಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...