Homeಕರ್ನಾಟಕಸುರತ್ಕಲ್‌ ಟೋಲ್‌ ವಿರೋಧಿ ಹೋರಾಟಗಾರರಿಗೆ ತಡರಾತ್ರಿ ನೋಟಿಸ್‌: ‘ಜೈಲು ಸೇರಿದರೂ ಪ್ರತಿಭಟನೆ ನಿಲ್ಲಲ್ಲ’- ಮುನೀರ್‌ ಎಚ್ಚರಿಕೆ

ಸುರತ್ಕಲ್‌ ಟೋಲ್‌ ವಿರೋಧಿ ಹೋರಾಟಗಾರರಿಗೆ ತಡರಾತ್ರಿ ನೋಟಿಸ್‌: ‘ಜೈಲು ಸೇರಿದರೂ ಪ್ರತಿಭಟನೆ ನಿಲ್ಲಲ್ಲ’- ಮುನೀರ್‌ ಎಚ್ಚರಿಕೆ

ನೋಟಿಸ್‌‌ನಲ್ಲಿ ನಮ್ಮನ್ನು ಏಕವಚನದಲ್ಲಿ ಕರೆಯಲಾಗಿದೆ, ಕ್ರಿಮಿನಲ್ ರೀತಿ ಪದಗಳನ್ನು ಬಳಸಲಾಗಿದೆ: ಮುನೀರ್‌ ಕಾಟಿಪಳ್ಳ

- Advertisement -
- Advertisement -

ಸುರತ್ಕಲ್ ಟೋಲ್ ಗೇಟ್ ವಿರೋಧಿ ಹೋರಾಟಗಾರರ ಮನೆಗಳಿಗೆ ಪೊಲೀಸರು ತಡರಾತ್ರಿ ಭೇಟಿ ನೀಡಿ ನೋಟಿಸ್‌ ನೀಡಿರುವ ಘಟನೆ ನಡೆದಿದೆ. ಈ ಕುರಿತು ಜನರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಹೋರಾಟ ಸಮಿತಿಯ ಸಂಚಾಲಕ ಮುನೀರ್ ಕಾಟಿಪಳ್ಳ, ಬಿ.ಕೆ.ಇಮ್ಮಿಯಾಝ್, ಪ್ರತಿಭಾ ಕುಳಾಯಿ, ರಾಘವೇಂದ್ರ ರಾವ್ ಸೇರಿದಂತೆ ಹಲವು ಮುಖಂಡರಿಗೆ ಸುರತ್ಕಲ್ ಪೊಲೀಸರು ನೋಟಿಸ್‌ ನೀಡಿದ್ದಾರೆ.

ಈಗಾಗಲೇ ಸಭೆ ನಡೆಸಿ ಹೋರಾಟ ಹಿಂಪಡೆಯುವಂತೆ ಸೂಚಿಸಲಾಗಿತ್ತು. ಆದರೆ, ಅದನ್ನು ಹೋರಾಟ ಸಮಿತಿ ತಿರಸ್ಕರಿಸಿದೆ. ನೋಟಿಸ್‌ ತಲುಪಿದ ಕೂಡಲೇ ಡಿಸಿಪಿ ಅವರ ಕಚೇರಿಗೆ ಭೇಟಿ ನೀಡಿ ಹೋರಾಟ ಮುಂದುವರಿಸುವುದಿಲ್ಲ ಎಂದು ಮುಚ್ಚಳಿಗೆ ಬರೆದು ಕೊಡುವಂತೆ ನೋಟಿಸ್‌ನಲ್ಲಿ ಹೇಳಿರುವುದಾಗಿ ‘ವಾರ್ತಾಭಾರತಿ’ ಉಲ್ಲೇಖಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ತಡರಾತ್ರಿ ನೋಟೀಸ್‌ ಕುರಿತು ಹೋರಾಟ ಸಮಿತಿಯ ಸಂಚಾಲಕ ಮುನೀರ್ ಕಾಟಿಪಳ್ಳ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. “ಮಧ್ಯರಾತ್ರಿ ಪೊಲೀಸರನ್ನು ಹೋರಾಟಗಾರರ ಮನೆಗಳಿಗೆ ಕಳುಹಿಸುತ್ತೀರಾ ಭರತ್‌ ಶೆಟ್ಟಿ, ಉಮಾನಾಥ ಕೋಟ್ಯಾನ್, ವೇದವ್ಯಾಸ ಕಾಮತರೆ? ಮಹಿಳಾ ಹೋರಾಟಗಾರರ ಮನೆಗೂ ಕಾಳರಾತ್ರಿ ‘ಗಂಡಸು’ ಪೊಲೀಸರ ದಂಡು! ಅದಕ್ಕೆಲ್ಲ ಜನ ಹೆದರುವ ಕಾಲ ಮುಗಿದಿದೆ. ತುಳುನಾಡಿನ ಮುಂದೆ ಬೆತ್ತಲಾಗುತ್ತಿದ್ದೀರಿ. ಬಿಜೆಪಿಗರೇ ಎಚ್ಚರ” ಎಂದು ಗುಡುಗಿದ್ದಾರೆ.

ಮತ್ತೊಂದು ಪೋಸ್ಟ್‌ನಲ್ಲಿ, “ನನ್ನ ಮನೆಗೆ ನಿನ್ನೆ ತಡರಾತ್ರಿ ಬಂದ ಪೊಲೀಸರ ತಂಡ ಸಮನ್ಸ್ ನೀಡಿದೆ. ಮಂಗಳೂರು ಕಮೀಷನರ್ ಕಚೇರಿಯಿಂದ ಕಳುಹಿಸಿದ ಸಮನ್ಸ್ ನೋಟಿಸ್‌‌ನಲ್ಲಿ ನಮಗೆ ಏಕವಚನ ಬಳಸಲಾಗಿದೆ. ಕ್ರಿಮಿನಲ್ ರೀತಿ ಪದಗಳನ್ನು ಬಳಸಿ ಸಂಬೋಧಿಸಲಾಗಿದೆ. ಇರಲಿ. ಬಿಜೆಪಿ ಪೊಲೀಸರ ನೀತಿಯೇ ಹಾಗಿರಬಹುದು” ಎಂದಿದ್ದಾರೆ.

“ಹೆಚ್ಚು ಕಮ್ಮಿ ಐವತ್ತಕ್ಕೂ ಹೆಚ್ಚು ಜನರಿಗೆ ನೋಟಿಸ್‌ ನೀಡಲಾಗಿದೆ. ಹೋರಾಟಕ್ಕೆ ಸಂಬಂಧ ಪಡದ ಕೆಲವು ಅಮಾಯಕರಿಗೂ ನೋಟಿಸ್‌‌ ಬಂದಿದೆ. ಕ್ರಿಮಿನಲ್‌ಗಳ ರೀತಿ ಮನೆಗಳನ್ನು ಪೊಲೀಸರು ಸುತ್ತುವರಿದಿದ್ದಾರೆ. ನಾವೀಗ (ಹೋರಾಟ ಸಮಿತಿ) ದೃಢ ನಿರ್ಧಾರ ಕೈಗೊಂಡಿದ್ದೇವೆ. ನಮ್ಮ ಕಾನೂನು ವಿಭಾಗದ ಜವಾಬ್ದಾರಿ ಹೊತ್ತಿರುವ ಜನಪರ ವಕೀಲರ ತಂಡದೊಂದಿಗೆ ಸಭೆ ನಡೆಸಿ ಕೆಲವು ತೀರ್ಮಾನಕ್ಕೆ ಬಂದಿದ್ದೇವೆ” ಎಂದು ತಿಳಿಸಿದ್ದಾರೆ.

“ಯಾವುದೇ ಕಾರಣಕ್ಕೂ ಮುಚ್ಚಳಿಕೆ ಬರೆದುಕೊಡುವುದಿಲ್ಲ. ವಾರಂಟ್ ಹೊರಡಿಸಿ ಬಂಧಿಸುವುದಾದರೆ ತುಳುನಾಡಿನ ಜನ ಸಾಮಾನ್ಯರ ಪರವಾಗಿ ಜೈಲಿಗೆ ಹೋಗಲು ಸಿದ್ದರಾಗುವುದು. ಅಕ್ಟೋಬರ್ 18ರ ಅಕ್ರಮ ಟೋಲ್ ಸ್ಥಗಿತ ಹೋರಾಟ ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ. ನಾವು ಜೈಲು ಸೇರಿದರೂ ಅಂದು ಹೋರಾಟ ನಡೆಯುತ್ತದೆ. ನೂರಾರು ಸಂಘಟನೆ, ಮುಖಂಡರ ಸಾಮೂಹಿಕ ನಾಯಕತ್ವದಲ್ಲಿ ನಡೆಯುತ್ತಿರುವ ಈ ಮಹತ್ವದ ಹೋರಾಟಕ್ಕೆ ನಾಯಕರುಗಳ ಕೊರತೆ ಇಲ್ಲ. ಸಂಚಾಲಕ ಮುನೀರ್ ಕಾಟಿಪಳ್ಳ ಜೈಲು ಸೇರಿದರೆ ನೂರಾರು ಜನ ಆ ಸ್ಥಾನವನ್ನು ತುಂಬಲು ಸಿದ್ದರಿದ್ದಾರೆ.‌ ನಮ್ಮ ಮುತ್ತಿಗೆ ಪ್ರತಿಭಟನೆ ಅಂದು ನಿಗದಿಯಂತೆ ಶಾಂತಿಯುತವಾಗಿ ನಡೆಯಲಿದೆ. ಯಾರೂ ಪ್ರಚೋದನೆಗೆ ಒಳಗಾಗಬಾರದು” ಎಂದು ಮನವಿ ಮಾಡಿದ್ದಾರೆ.

“ನಮ್ಮ ಮೇಲಿನ ಬಿಜೆಪಿ ಸರಕಾರದ ದಾಳಿಯ ಸಂದರ್ಭದಲ್ಲಿ ನಮ್ಮ ಹೋರಾಟದ ಜೊತೆ ತುಳುನಾಡಿನ ಜನತೆ ನಿಲ್ಲಬೇಕು. ಧ್ವನಿಯನ್ನು ಮತ್ತಷ್ಟು ಎತ್ತರಿಸಬೇಕು ಎಂದು ಮನವಿ ಮಾಡುತ್ತಿದ್ದೇವೆ. ಯಾವುದೇ ಕಾರಣಕ್ಕೂ ಗುಲಾಮಗಿರಿಯ ಸಂಕೇತವಾಗಿರುವ ಟೋಲ್ ಗೇಟ್ ಸುಲಿಗೆ ಮುಂದುವರಿಯಬಾರದು. ಮುಂದುವರಿಯಲು ಅವಕಾಶಕೊಡುವುದಿಲ್ಲ ಎಂದು ಒಕ್ಕೊರಲಿನಿಂದ ಗಟ್ಟಿಯಾಗಿ ಬಿಜೆಪಿ ಶಾಸಕ, ಸಂಸದ ಶಾಸಕರುಗಳಿಗೆ ಹೇಳುವಂತಾಗಬೇಕು” ಎಂದು ಒತ್ತಾಯಿಸಿದ್ದಾರೆ.

“ಯಾವುದೇ ಕಾರಣಕ್ಕೂ ಹೋರಾಟ ಸೋಲುವುದಿಲ್ಲ. ಅಕ್ಟೋಬರ್ 18 ರಂದು ಟೋಲ್ ಸಂಗ್ರಹ ಅಂತ್ಯಗೊಳ್ಳಲೇಬೇಕು. ನಮ್ಮ ಮೇಲೆ ಪೊಲೀಸ್ ದೌರ್ಜನ್ಯ ಹರಿಯಬಿಟ್ಟು ಬಿಜೆಪಿ ಶಾಸಕರುಗಳು ಬೀಗುವುದು ಬೇಡ. ಜನ ಆಕ್ರೋಶಗೊಂಡಿದ್ದಾರೆ. ಅವರು ನಿಮಗೆ ಸರಿಯಾಗಿ ಉತ್ತರಿಸುತ್ತಾರೆ” ಎಂದು ಎಚ್ಚರಿಸಿದ್ದಾರೆ.

ಪೊಲೀಸ್ ಹಾಗೂ ಸರ್ಕಾರದ ನಡೆಯನ್ನು ಖಂಡಿಸಿರುವ ಶಿಕ್ಷಣತಜ್ಞ ಎಂ.ಜಿ.ಹೆಗ್ಡೆ, “ಲೋಕಸಭೆಯಲ್ಲಿ ಇಲಾಖೆಯ ಮಂತ್ರಿಯವರು ಟೋಲ್ ಗೇಟ್ ಮುಚ್ಚಲಾಗುವುದು ಎಂದಿದ್ದರು. ಅದು ಲೋಕಸಭೆಯ ಕಡತದಲ್ಲಿ ದಾಖಲಾಗುತ್ತದೆ. ಅಂದಿನಿಂದಲೇ ಟೋಲ್ ನಿಲ್ಲಬೇಕಿತ್ತು. ರಾಜ್ಯದ ವಿಧಾನ ಪರಿಷತ್ ಹಾಗೂ ವಿಧಾನಸಭೆಯಲ್ಲಿ ರಾಜ್ಯದ ಮಂತ್ರಿಗಳೂ ಟೋಲ್ ಗೇಟ್ ನಿಯಮ ಬಾಹಿರ, ತೆಗೆಯಲಾಗುವುದು ಎಂದು ಹೇಳುತ್ತಾರೆ. ಅದೂ ಕಡತದಲ್ಲಿ ದಾಖಲಾಗುತ್ತದೆ. ಹಾಗಾದರೆ ಈ ದೇಶದಲ್ಲಿ ಲೋಕಸಭೆ, ವಿಧಾನಸಭೆಯಲ್ಲಿ ಘೋಷಿಸಿದ ವಿಷಯಗಳನ್ನು ನಂಬುವಂತಿಲ್ಲವೇ?” ಎಂದು ಪ್ರಶ್ನಿಸಿದ್ದಾರೆ.

“ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು, ಜಿಲ್ಲಾಧಿಕಾರಿಗಳೂ ಅದನ್ನು ತೆಗೆಯಲು ಆದೇಶವಾಗಿದೆ ಅನ್ನುತ್ತಾರೆ. ಇಷ್ಟೆಲ್ಲಾ ಆದ ಮೇಲೆ ಟೋಲ್ ಗೇಟ್ ವಸೂಲಿ ನಿಲ್ಲಿಸಿ ಅನ್ನುವ ಹೋರಾಟ ಸಮಿತಿ ಮುಖಂಡರ ಮನೆಗೆ ಮಧ್ಯರಾತ್ರಿ ನೋಟೀಸ್‌‌ ನೀಡುತ್ತಾರೆ” ಎಂದು ಟೀಕಿಸಿದ್ದಾರೆ.

ಇದನ್ನೂ ಓದಿರಿ: ಯುಪಿ: ಮುಸ್ಲಿಮರಲ್ಲಿ ಭಯ ಹರಡಿಸಲೆಂದೇ ದುಷ್ಕರ್ಮಿಗಳ ಗುಂಪು ಮುಸ್ಲಿಂ ವ್ಯಕ್ತಿಯನ್ನು ಕೊಂದಿತ್ತು: ‘ದಿ ವೈರ್‌’ ವರದಿ

ತಡರಾತ್ರಿ ನೋಟೀಸ್‌ಗೆ ನಳಿನ್‌ಕುಮಾರ್‌ ಕಟೀಲ್‌ ವಿರೋಧ

ತಡರಾತ್ರಿ ನೀಡಿದ ನೋಟೀಸ್‌ಗೆ ಸಂಬಂಧಿಸಿದಂತೆ ವಿರೋಧ ವ್ಯಕ್ತವಾದ ಬೆನ್ನಲ್ಲೇ ಸಂಸದ ನಳೀನ್‌ಕುಮಾರ್‌ ಕಟೀಲ್‌, “ಸುರತ್ಕಲ್ ಟೋಲ್ ಗೇಟ್ ವಿರುದ್ಧದ ಹೋರಾಟಕ್ಕೆ ಸಂಬಂಧಿಸಿ ಹೋರಾಟಗಾರರ ಮನೆಗೆ ರಾತ್ರಿ ತೆರಳಿ ಪೊಲೀಸರು ನೋಟಿಸ್ ನೀಡಿರುವುದು ನನ್ನ ಗಮನಕ್ಕೆ ಬಂದಿಲ್ಲ. ಹಾಗೆ ಒಂದು ವೇಳೆ ಅಧಿಕಾರಿಗಳು ರಾತ್ರಿ ತೆರಳಿ ಹೋರಾಟಗಾರರ ಮನೆಗೆ ತೆರಳಿ ನೋಟಿಸ್‌ ನೀಡಿದರೆ ಅದು ಸರಿಯಲ್ಲ” ಎಂದಿದ್ದಾರೆ.

ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಸಂಸದರು, “ಕೆಲವೊಂದು ತಾಂತ್ರಿಕ ಕಾರಣಗಳಿಂದ ಸುರತ್ಕಲ್ ಟೋಲ್ ಗೇಟ್ ತೆರವು ಕಾರ್ಯ ವಿಳಂಬವಾಗಿದೆ. ಈ ಟೋಲ್ ಗೇಟ್ ತೆರವುಗೊಳಿಸುವ ಬಗ್ಗೆ ಸಂಬಂಧಪಟ್ಟವರ ಜೊತೆ ಮಾತುಕತೆ ನಡೆದಿದೆ. ಆದರೆ ಟೋಲ್ ಗೇಟ್ ವಿರುದ್ಧ ನಡೆಯುತ್ತಿರುವ ಹೋರಾಟವನ್ನು ಹತ್ತಿಕ್ಕುವ ಯಾವ ಉದ್ದೇಶ ನಮಗಿಲ್ಲ. ಹೋರಾಟಗಾರರ ಹೋರಾಟಕ್ಕೆ ನಮ್ಮ ವಿರೋಧವಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...