Homeಕರ್ನಾಟಕಸುರತ್ಕಲ್‌ ಟೋಲ್‌ ವಿರೋಧಿ ಹೋರಾಟಗಾರರಿಗೆ ತಡರಾತ್ರಿ ನೋಟಿಸ್‌: ‘ಜೈಲು ಸೇರಿದರೂ ಪ್ರತಿಭಟನೆ ನಿಲ್ಲಲ್ಲ’- ಮುನೀರ್‌ ಎಚ್ಚರಿಕೆ

ಸುರತ್ಕಲ್‌ ಟೋಲ್‌ ವಿರೋಧಿ ಹೋರಾಟಗಾರರಿಗೆ ತಡರಾತ್ರಿ ನೋಟಿಸ್‌: ‘ಜೈಲು ಸೇರಿದರೂ ಪ್ರತಿಭಟನೆ ನಿಲ್ಲಲ್ಲ’- ಮುನೀರ್‌ ಎಚ್ಚರಿಕೆ

ನೋಟಿಸ್‌‌ನಲ್ಲಿ ನಮ್ಮನ್ನು ಏಕವಚನದಲ್ಲಿ ಕರೆಯಲಾಗಿದೆ, ಕ್ರಿಮಿನಲ್ ರೀತಿ ಪದಗಳನ್ನು ಬಳಸಲಾಗಿದೆ: ಮುನೀರ್‌ ಕಾಟಿಪಳ್ಳ

- Advertisement -
- Advertisement -

ಸುರತ್ಕಲ್ ಟೋಲ್ ಗೇಟ್ ವಿರೋಧಿ ಹೋರಾಟಗಾರರ ಮನೆಗಳಿಗೆ ಪೊಲೀಸರು ತಡರಾತ್ರಿ ಭೇಟಿ ನೀಡಿ ನೋಟಿಸ್‌ ನೀಡಿರುವ ಘಟನೆ ನಡೆದಿದೆ. ಈ ಕುರಿತು ಜನರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಹೋರಾಟ ಸಮಿತಿಯ ಸಂಚಾಲಕ ಮುನೀರ್ ಕಾಟಿಪಳ್ಳ, ಬಿ.ಕೆ.ಇಮ್ಮಿಯಾಝ್, ಪ್ರತಿಭಾ ಕುಳಾಯಿ, ರಾಘವೇಂದ್ರ ರಾವ್ ಸೇರಿದಂತೆ ಹಲವು ಮುಖಂಡರಿಗೆ ಸುರತ್ಕಲ್ ಪೊಲೀಸರು ನೋಟಿಸ್‌ ನೀಡಿದ್ದಾರೆ.

ಈಗಾಗಲೇ ಸಭೆ ನಡೆಸಿ ಹೋರಾಟ ಹಿಂಪಡೆಯುವಂತೆ ಸೂಚಿಸಲಾಗಿತ್ತು. ಆದರೆ, ಅದನ್ನು ಹೋರಾಟ ಸಮಿತಿ ತಿರಸ್ಕರಿಸಿದೆ. ನೋಟಿಸ್‌ ತಲುಪಿದ ಕೂಡಲೇ ಡಿಸಿಪಿ ಅವರ ಕಚೇರಿಗೆ ಭೇಟಿ ನೀಡಿ ಹೋರಾಟ ಮುಂದುವರಿಸುವುದಿಲ್ಲ ಎಂದು ಮುಚ್ಚಳಿಗೆ ಬರೆದು ಕೊಡುವಂತೆ ನೋಟಿಸ್‌ನಲ್ಲಿ ಹೇಳಿರುವುದಾಗಿ ‘ವಾರ್ತಾಭಾರತಿ’ ಉಲ್ಲೇಖಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ತಡರಾತ್ರಿ ನೋಟೀಸ್‌ ಕುರಿತು ಹೋರಾಟ ಸಮಿತಿಯ ಸಂಚಾಲಕ ಮುನೀರ್ ಕಾಟಿಪಳ್ಳ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. “ಮಧ್ಯರಾತ್ರಿ ಪೊಲೀಸರನ್ನು ಹೋರಾಟಗಾರರ ಮನೆಗಳಿಗೆ ಕಳುಹಿಸುತ್ತೀರಾ ಭರತ್‌ ಶೆಟ್ಟಿ, ಉಮಾನಾಥ ಕೋಟ್ಯಾನ್, ವೇದವ್ಯಾಸ ಕಾಮತರೆ? ಮಹಿಳಾ ಹೋರಾಟಗಾರರ ಮನೆಗೂ ಕಾಳರಾತ್ರಿ ‘ಗಂಡಸು’ ಪೊಲೀಸರ ದಂಡು! ಅದಕ್ಕೆಲ್ಲ ಜನ ಹೆದರುವ ಕಾಲ ಮುಗಿದಿದೆ. ತುಳುನಾಡಿನ ಮುಂದೆ ಬೆತ್ತಲಾಗುತ್ತಿದ್ದೀರಿ. ಬಿಜೆಪಿಗರೇ ಎಚ್ಚರ” ಎಂದು ಗುಡುಗಿದ್ದಾರೆ.

ಮತ್ತೊಂದು ಪೋಸ್ಟ್‌ನಲ್ಲಿ, “ನನ್ನ ಮನೆಗೆ ನಿನ್ನೆ ತಡರಾತ್ರಿ ಬಂದ ಪೊಲೀಸರ ತಂಡ ಸಮನ್ಸ್ ನೀಡಿದೆ. ಮಂಗಳೂರು ಕಮೀಷನರ್ ಕಚೇರಿಯಿಂದ ಕಳುಹಿಸಿದ ಸಮನ್ಸ್ ನೋಟಿಸ್‌‌ನಲ್ಲಿ ನಮಗೆ ಏಕವಚನ ಬಳಸಲಾಗಿದೆ. ಕ್ರಿಮಿನಲ್ ರೀತಿ ಪದಗಳನ್ನು ಬಳಸಿ ಸಂಬೋಧಿಸಲಾಗಿದೆ. ಇರಲಿ. ಬಿಜೆಪಿ ಪೊಲೀಸರ ನೀತಿಯೇ ಹಾಗಿರಬಹುದು” ಎಂದಿದ್ದಾರೆ.

“ಹೆಚ್ಚು ಕಮ್ಮಿ ಐವತ್ತಕ್ಕೂ ಹೆಚ್ಚು ಜನರಿಗೆ ನೋಟಿಸ್‌ ನೀಡಲಾಗಿದೆ. ಹೋರಾಟಕ್ಕೆ ಸಂಬಂಧ ಪಡದ ಕೆಲವು ಅಮಾಯಕರಿಗೂ ನೋಟಿಸ್‌‌ ಬಂದಿದೆ. ಕ್ರಿಮಿನಲ್‌ಗಳ ರೀತಿ ಮನೆಗಳನ್ನು ಪೊಲೀಸರು ಸುತ್ತುವರಿದಿದ್ದಾರೆ. ನಾವೀಗ (ಹೋರಾಟ ಸಮಿತಿ) ದೃಢ ನಿರ್ಧಾರ ಕೈಗೊಂಡಿದ್ದೇವೆ. ನಮ್ಮ ಕಾನೂನು ವಿಭಾಗದ ಜವಾಬ್ದಾರಿ ಹೊತ್ತಿರುವ ಜನಪರ ವಕೀಲರ ತಂಡದೊಂದಿಗೆ ಸಭೆ ನಡೆಸಿ ಕೆಲವು ತೀರ್ಮಾನಕ್ಕೆ ಬಂದಿದ್ದೇವೆ” ಎಂದು ತಿಳಿಸಿದ್ದಾರೆ.

“ಯಾವುದೇ ಕಾರಣಕ್ಕೂ ಮುಚ್ಚಳಿಕೆ ಬರೆದುಕೊಡುವುದಿಲ್ಲ. ವಾರಂಟ್ ಹೊರಡಿಸಿ ಬಂಧಿಸುವುದಾದರೆ ತುಳುನಾಡಿನ ಜನ ಸಾಮಾನ್ಯರ ಪರವಾಗಿ ಜೈಲಿಗೆ ಹೋಗಲು ಸಿದ್ದರಾಗುವುದು. ಅಕ್ಟೋಬರ್ 18ರ ಅಕ್ರಮ ಟೋಲ್ ಸ್ಥಗಿತ ಹೋರಾಟ ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ. ನಾವು ಜೈಲು ಸೇರಿದರೂ ಅಂದು ಹೋರಾಟ ನಡೆಯುತ್ತದೆ. ನೂರಾರು ಸಂಘಟನೆ, ಮುಖಂಡರ ಸಾಮೂಹಿಕ ನಾಯಕತ್ವದಲ್ಲಿ ನಡೆಯುತ್ತಿರುವ ಈ ಮಹತ್ವದ ಹೋರಾಟಕ್ಕೆ ನಾಯಕರುಗಳ ಕೊರತೆ ಇಲ್ಲ. ಸಂಚಾಲಕ ಮುನೀರ್ ಕಾಟಿಪಳ್ಳ ಜೈಲು ಸೇರಿದರೆ ನೂರಾರು ಜನ ಆ ಸ್ಥಾನವನ್ನು ತುಂಬಲು ಸಿದ್ದರಿದ್ದಾರೆ.‌ ನಮ್ಮ ಮುತ್ತಿಗೆ ಪ್ರತಿಭಟನೆ ಅಂದು ನಿಗದಿಯಂತೆ ಶಾಂತಿಯುತವಾಗಿ ನಡೆಯಲಿದೆ. ಯಾರೂ ಪ್ರಚೋದನೆಗೆ ಒಳಗಾಗಬಾರದು” ಎಂದು ಮನವಿ ಮಾಡಿದ್ದಾರೆ.

“ನಮ್ಮ ಮೇಲಿನ ಬಿಜೆಪಿ ಸರಕಾರದ ದಾಳಿಯ ಸಂದರ್ಭದಲ್ಲಿ ನಮ್ಮ ಹೋರಾಟದ ಜೊತೆ ತುಳುನಾಡಿನ ಜನತೆ ನಿಲ್ಲಬೇಕು. ಧ್ವನಿಯನ್ನು ಮತ್ತಷ್ಟು ಎತ್ತರಿಸಬೇಕು ಎಂದು ಮನವಿ ಮಾಡುತ್ತಿದ್ದೇವೆ. ಯಾವುದೇ ಕಾರಣಕ್ಕೂ ಗುಲಾಮಗಿರಿಯ ಸಂಕೇತವಾಗಿರುವ ಟೋಲ್ ಗೇಟ್ ಸುಲಿಗೆ ಮುಂದುವರಿಯಬಾರದು. ಮುಂದುವರಿಯಲು ಅವಕಾಶಕೊಡುವುದಿಲ್ಲ ಎಂದು ಒಕ್ಕೊರಲಿನಿಂದ ಗಟ್ಟಿಯಾಗಿ ಬಿಜೆಪಿ ಶಾಸಕ, ಸಂಸದ ಶಾಸಕರುಗಳಿಗೆ ಹೇಳುವಂತಾಗಬೇಕು” ಎಂದು ಒತ್ತಾಯಿಸಿದ್ದಾರೆ.

“ಯಾವುದೇ ಕಾರಣಕ್ಕೂ ಹೋರಾಟ ಸೋಲುವುದಿಲ್ಲ. ಅಕ್ಟೋಬರ್ 18 ರಂದು ಟೋಲ್ ಸಂಗ್ರಹ ಅಂತ್ಯಗೊಳ್ಳಲೇಬೇಕು. ನಮ್ಮ ಮೇಲೆ ಪೊಲೀಸ್ ದೌರ್ಜನ್ಯ ಹರಿಯಬಿಟ್ಟು ಬಿಜೆಪಿ ಶಾಸಕರುಗಳು ಬೀಗುವುದು ಬೇಡ. ಜನ ಆಕ್ರೋಶಗೊಂಡಿದ್ದಾರೆ. ಅವರು ನಿಮಗೆ ಸರಿಯಾಗಿ ಉತ್ತರಿಸುತ್ತಾರೆ” ಎಂದು ಎಚ್ಚರಿಸಿದ್ದಾರೆ.

ಪೊಲೀಸ್ ಹಾಗೂ ಸರ್ಕಾರದ ನಡೆಯನ್ನು ಖಂಡಿಸಿರುವ ಶಿಕ್ಷಣತಜ್ಞ ಎಂ.ಜಿ.ಹೆಗ್ಡೆ, “ಲೋಕಸಭೆಯಲ್ಲಿ ಇಲಾಖೆಯ ಮಂತ್ರಿಯವರು ಟೋಲ್ ಗೇಟ್ ಮುಚ್ಚಲಾಗುವುದು ಎಂದಿದ್ದರು. ಅದು ಲೋಕಸಭೆಯ ಕಡತದಲ್ಲಿ ದಾಖಲಾಗುತ್ತದೆ. ಅಂದಿನಿಂದಲೇ ಟೋಲ್ ನಿಲ್ಲಬೇಕಿತ್ತು. ರಾಜ್ಯದ ವಿಧಾನ ಪರಿಷತ್ ಹಾಗೂ ವಿಧಾನಸಭೆಯಲ್ಲಿ ರಾಜ್ಯದ ಮಂತ್ರಿಗಳೂ ಟೋಲ್ ಗೇಟ್ ನಿಯಮ ಬಾಹಿರ, ತೆಗೆಯಲಾಗುವುದು ಎಂದು ಹೇಳುತ್ತಾರೆ. ಅದೂ ಕಡತದಲ್ಲಿ ದಾಖಲಾಗುತ್ತದೆ. ಹಾಗಾದರೆ ಈ ದೇಶದಲ್ಲಿ ಲೋಕಸಭೆ, ವಿಧಾನಸಭೆಯಲ್ಲಿ ಘೋಷಿಸಿದ ವಿಷಯಗಳನ್ನು ನಂಬುವಂತಿಲ್ಲವೇ?” ಎಂದು ಪ್ರಶ್ನಿಸಿದ್ದಾರೆ.

“ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು, ಜಿಲ್ಲಾಧಿಕಾರಿಗಳೂ ಅದನ್ನು ತೆಗೆಯಲು ಆದೇಶವಾಗಿದೆ ಅನ್ನುತ್ತಾರೆ. ಇಷ್ಟೆಲ್ಲಾ ಆದ ಮೇಲೆ ಟೋಲ್ ಗೇಟ್ ವಸೂಲಿ ನಿಲ್ಲಿಸಿ ಅನ್ನುವ ಹೋರಾಟ ಸಮಿತಿ ಮುಖಂಡರ ಮನೆಗೆ ಮಧ್ಯರಾತ್ರಿ ನೋಟೀಸ್‌‌ ನೀಡುತ್ತಾರೆ” ಎಂದು ಟೀಕಿಸಿದ್ದಾರೆ.

ಇದನ್ನೂ ಓದಿರಿ: ಯುಪಿ: ಮುಸ್ಲಿಮರಲ್ಲಿ ಭಯ ಹರಡಿಸಲೆಂದೇ ದುಷ್ಕರ್ಮಿಗಳ ಗುಂಪು ಮುಸ್ಲಿಂ ವ್ಯಕ್ತಿಯನ್ನು ಕೊಂದಿತ್ತು: ‘ದಿ ವೈರ್‌’ ವರದಿ

ತಡರಾತ್ರಿ ನೋಟೀಸ್‌ಗೆ ನಳಿನ್‌ಕುಮಾರ್‌ ಕಟೀಲ್‌ ವಿರೋಧ

ತಡರಾತ್ರಿ ನೀಡಿದ ನೋಟೀಸ್‌ಗೆ ಸಂಬಂಧಿಸಿದಂತೆ ವಿರೋಧ ವ್ಯಕ್ತವಾದ ಬೆನ್ನಲ್ಲೇ ಸಂಸದ ನಳೀನ್‌ಕುಮಾರ್‌ ಕಟೀಲ್‌, “ಸುರತ್ಕಲ್ ಟೋಲ್ ಗೇಟ್ ವಿರುದ್ಧದ ಹೋರಾಟಕ್ಕೆ ಸಂಬಂಧಿಸಿ ಹೋರಾಟಗಾರರ ಮನೆಗೆ ರಾತ್ರಿ ತೆರಳಿ ಪೊಲೀಸರು ನೋಟಿಸ್ ನೀಡಿರುವುದು ನನ್ನ ಗಮನಕ್ಕೆ ಬಂದಿಲ್ಲ. ಹಾಗೆ ಒಂದು ವೇಳೆ ಅಧಿಕಾರಿಗಳು ರಾತ್ರಿ ತೆರಳಿ ಹೋರಾಟಗಾರರ ಮನೆಗೆ ತೆರಳಿ ನೋಟಿಸ್‌ ನೀಡಿದರೆ ಅದು ಸರಿಯಲ್ಲ” ಎಂದಿದ್ದಾರೆ.

ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಸಂಸದರು, “ಕೆಲವೊಂದು ತಾಂತ್ರಿಕ ಕಾರಣಗಳಿಂದ ಸುರತ್ಕಲ್ ಟೋಲ್ ಗೇಟ್ ತೆರವು ಕಾರ್ಯ ವಿಳಂಬವಾಗಿದೆ. ಈ ಟೋಲ್ ಗೇಟ್ ತೆರವುಗೊಳಿಸುವ ಬಗ್ಗೆ ಸಂಬಂಧಪಟ್ಟವರ ಜೊತೆ ಮಾತುಕತೆ ನಡೆದಿದೆ. ಆದರೆ ಟೋಲ್ ಗೇಟ್ ವಿರುದ್ಧ ನಡೆಯುತ್ತಿರುವ ಹೋರಾಟವನ್ನು ಹತ್ತಿಕ್ಕುವ ಯಾವ ಉದ್ದೇಶ ನಮಗಿಲ್ಲ. ಹೋರಾಟಗಾರರ ಹೋರಾಟಕ್ಕೆ ನಮ್ಮ ವಿರೋಧವಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...