Homeಕರ್ನಾಟಕದಾರಿ ತಪ್ಪಿಸುವ ಹುನ್ನಾರ ಅಡಗಿದೆ/ಆಹಾರ ಪರಂಪರೆ ಮತ್ತು ವಚನ ಚಳವಳಿ

ದಾರಿ ತಪ್ಪಿಸುವ ಹುನ್ನಾರ ಅಡಗಿದೆ/ಆಹಾರ ಪರಂಪರೆ ಮತ್ತು ವಚನ ಚಳವಳಿ

- Advertisement -
- Advertisement -

ಯಾವುದೇ ಆಹಾರ ವ್ಯಕ್ತಿಯ ದೇಹ-ಅಭಿರುಚಿ-ಆರೋಗ್ಯಕ್ಕೆ ಸಂಬಂಧಿಸಿದ ಸ್ವತಂತ್ರ ಆಯ್ಕೆ. ಧಾರ್ಮಿಕ ಫಲಾಪೇಕ್ಷೆಗಳಿಲ್ಲದೆ ಸೊಪ್ಪು-ತರಕಾರಿಗಳಂತೆ ಸಾಕು ಪ್ರಾಣಿಗಳನ್ನು ಬಳಸುವುದು ದಿನನಿತ್ಯದ ಸಾಮಾನ್ಯ ಆಹಾರ ಪದ್ಧತಿ.

ಈ ಪ್ರಜಾಪ್ರಭುತ್ವದಲ್ಲಿ ಯಾರು ಯಾವ ಆಹಾರ ತಿನ್ನಬೇಕೆಂದು ವಿಧಿಸುವುದು/ನಿಷೇಧಿಸುವುದು ಸರ್ವಾಧಿಕಾರಿ ಅವಿವೇಕದ ಪರಮಾವಧಿ. ಈ ಫರ್ಮಾನುಗಳ ಹಿಂದೆ ಜಾತೀಯತೆ/ಮತೀಯ ಅಸಹನೆ/ಅಸ್ಪೃಶ್ಯತಾಚರಣೆಗಳ ಸಮರ್ಥನೆ… ಇತ್ಯಾದಿ ರಾಜಕೀಯ ತಂತ್ರಗಳಿವೆ. ಈ ಷಡ್ಯಂತ್ರಗಳನ್ನು ಮರೆಮಾಚಲು 12ನೇ ಶತಮಾನದ ಶರಣರ ವಚನಗಳನ್ನು ಅವುಗಳ ಸಾಂದರ್ಭಿಕಾರ್ಥ-ಪೂರ್ಣಾರ್ಥ-ಒಟ್ಟು ಆಶಯಗಳ ಹಿನ್ನೆಲೆ ತಪ್ಪಿಸಿ ಬಳಸಿಕೊಳ್ಳುವುದರಲ್ಲಿ ಎಲ್ಲರನ್ನು ದಾರಿ ತಪ್ಪಿಸುವ ಹುನ್ನಾರವಡಗಿದೆ.

ಬಸವಣ್ಣನ ವಚನಗಳಲ್ಲಿ ಮಾಂಸಾಹಾರದ ತಿರುಳು ಹೆಚ್ಚಾಗಿ ಕಂಡುಬಂದಿರುವುದು- ವೈದಿಕರು ಯಜ್ಞ ಯಾಗಾದಿಗಳಲ್ಲಿ ಕೊಡುವ ಜೀವ ಬಲಿ ಮತ್ತು ಸಾಮೂಹಿಕವಾಗಿ ಜನ ಕ್ಷುದ್ರದೇವತೆಗಳ ಆರಾಧನೆಯಲ್ಲಿ ಹಬ್ಬದ ಹರಕೆಗಾಗಿ ಕೊಡುವ ಪ್ರಾಣಿಬಲಿಗಳ ಸಂದರ್ಭಗಳ ಉಲ್ಲೇಖಗಳಲ್ಲಿ, ‘ಹೋಮದ ನೇಮದಲ್ಲಿ ಹೋತನವೆಂಬ ಅನಾಮಿಕರೊಡನಾಡಿ ಗೆಲ್ಲುವುದೇನು…’, ‘ನಾನು ಕೊಲ್ಲೆ, ನೇಣು ಕೊಂದಿತ್ತೆಂಬ ಸೂನೆಗಾರರನೇನೆಂಬೆ’ (ನೇಣು=ಜನಿವಾರ) ಹಿಂಸಾತ್ಮಕ ಕ್ರಿಯೆಗಳ ವಿಪ್ರರನ್ನು ಹೊಲೆತನದ ತಳಕ್ಕೆ ಅನಾಮಿಕರೆಂದು ಸ್ಥಳಾಂತರಿಸಿದ್ದಾರೆ. ಹಾಗೆ ಸಾಮಾನ್ಯ ಜನರ ಕಿರುಕುಳ ದೈವಾರಾಧನೆಯ ಬಲಿ-ಹಿಂಸೆಗಳನ್ನು ಖಂಡಿಸಿ- ‘ಕುರಿ ಬೇಡ, ಮರಿ ಬೇಡ ಬರಿಯ ಪತ್ರೆಯ ತಂದು ಮರೆಯದೆ ಪೂಜಿಸು…’ ಎಂದಿದ್ದಾರೆ.

ಒಟ್ಟು ಧಾರ್ಮಿಕಾಚರಣೆಯ ಮೌಢ್ಯದಲ್ಲಿ ತಮ್ಮ ಇಹ-ಪರ ಸುಖ, ಸಮೃದ್ಧಿ ಭೋಗಭಾಗ್ಯಗಳ ಈಡೇರಿಕೆಗಾಗಿ ಇನ್ನೊಂದು ಜೀವವನ್ನು ಬಲಿಕೊಟ್ಟು ತಮ್ಮ ಮಾಂಸಾಹಾರದ ಬಯಕೆಯನ್ನು ತೀರಿಸಿಕೊಳ್ಳುವ ರೂಢಿಯನ್ನು ಸ್ವಹಿತಕ್ಕಾಗಿ ಅನ್ಯಜೀವವನ್ನು ಕೊಲ್ಲುವ ಹಿಂಸಾರಭಸಮತೆಯನ್ನು ಖಂಡಿಸಿದ್ದಾರೆ.

ಹೀಗಾಗಿ ಬಸವಣ್ಣನ ವಚನಾಭಿವ್ಯಕ್ತಿ ಕೇವಲ ಮಾಂಸಾಹಾರಕ್ಕೆ ಸಂಬಂಧಿಸಿಲ್ಲ. ಉದಾಹರಣೆ, ‘ಸತ್ತುದನನೆಳೆವನೆತ್ತಣ ಹೊಲೆಯ?’
ಹೊತ್ತು ತಂದು ನೀವು ಕೊಲ್ಲುವಿರಿ ‘ಎಂದಿರುವುದು ಹಾಗೆ’ ಎಡದ ಕೈಯಲಿ ಕತ್ತಿ, ಬಲದ ಕೈಯಲಿ ಮಾಂಸ ಬಾಯಲ್ಲಿ ಸುರೆಯ ಗಡಿಗೆ… ಅವರ ಲಿಂಗನೆಂಬೆ- ಸಂಗನೆಂಬೆ’ ಎಂಬಲ್ಲಿ ಸ್ವೀಕಾರಭಾವವಿದೆ.

ಸಸ್ಯಾಹಾರ-ಮಾಂಸಾಹಾರವೆಂಬ ಚರ್ಚೆಗಿಂತ ಬಸವಣ್ಣನ ತೀವ್ರ ಪ್ರತಿಭಟನೆ-ತಿರಸ್ಕಾರಗಳಿರುವುದು ದೇವರು-ಧರ್ಮ-ಶಾಸ್ತ್ರಗಳ ಪ್ರಮಾಣುವಿನಲ್ಲಿ ಬಲಿ-ಹಿಂಸೆಯನ್ನು ಧಾರ್ಮಿಕಗೊಳಿಸುವ/ಮೌಲಿಕಗೊಳಿಸುವ/ತಾತ್ವಿಕಗೊಳಿಸುವ ವೈದಿಕರ ಅಪಾಯಕಾರಿ ಪ್ರವೃತ್ತಿಯನ್ನು ಖಂಡಿಸುವಲ್ಲಿ, ಜತೆಗೆ ಹೀಗಾದಾಗ ಸಮಾಜದ ಅಧಃಪತನದ ಗತಿ ತೀವ್ರವಾಗುತ್ತದಲ್ಲ ಎಂಬ ಆತಂಕ- ಮರುಕ – ಕಾಳಜಿಗಳೂ ಬಸವಣ್ಣನ ದರ್ಶನದಲ್ಲಿದೆ.

ಡಾ.ಲತಾ ಮೈಸೂರು, ಪ್ರಾಧ್ಯಾಪಕರು

ಲಿಂಗಾಯಿತ ಧರ್ಮವು ಮಾಂಸಾಹಾರಿಗಳನ್ನೂ ಒಪ್ಪುವ ಮೂಲಕ ಆಹಾರ ಸಂಸ್ಕೃತಿಯ ವಿಚಾರದಲ್ಲಿ ಪ್ರಜಾತಾಂತ್ರಿಕವಾಗಿರುತ್ತದೆಯೇ ಎಂಬ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಕರ್ನಾಟಕದ ಆಹಾರ ಸಂಸ್ಕೃತಿ ಮತ್ತು ಯಾವುದು ಮೇಲು ಯಾವುದು ಕೀಳು ಎಂಬುದರಲ್ಲೇ ಶ್ರೇಣೀಕರಣವನ್ನು ಪ್ರತಿಪಾದಿಸುವ ಈ ದೇಶದಲ್ಲಿ ಇಂತಹ ಚರ್ಚೆಗಳು ಬರುವುದು, ಬರಬೇಕಾದದ್ದು ಸಹಜ. ಆದರೆ, ಈ ಸದ್ಯ ಅದು ಎದ್ದಿರುವ ಸಂದರ್ಭ ಹಾಗೂ ಅದರ ಟಾರ್ಗೆಟ್ ಸರಿಯಿಲ್ಲ ಎಂಬ ಅನಿಸಿಕೆಗಳೂ ಇವೆ. ಈ ಹಿನ್ನೆಲೆಯಲ್ಲಿ ವಿವಿಧ ಚಿಂತಕರನ್ನು ಪತ್ರಿಕೆಯು ಮಾತಾಡಿಸಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...