Homeಕರ್ನಾಟಕದಾರಿ ತಪ್ಪಿಸುವ ಹುನ್ನಾರ ಅಡಗಿದೆ/ಆಹಾರ ಪರಂಪರೆ ಮತ್ತು ವಚನ ಚಳವಳಿ

ದಾರಿ ತಪ್ಪಿಸುವ ಹುನ್ನಾರ ಅಡಗಿದೆ/ಆಹಾರ ಪರಂಪರೆ ಮತ್ತು ವಚನ ಚಳವಳಿ

- Advertisement -
- Advertisement -

ಯಾವುದೇ ಆಹಾರ ವ್ಯಕ್ತಿಯ ದೇಹ-ಅಭಿರುಚಿ-ಆರೋಗ್ಯಕ್ಕೆ ಸಂಬಂಧಿಸಿದ ಸ್ವತಂತ್ರ ಆಯ್ಕೆ. ಧಾರ್ಮಿಕ ಫಲಾಪೇಕ್ಷೆಗಳಿಲ್ಲದೆ ಸೊಪ್ಪು-ತರಕಾರಿಗಳಂತೆ ಸಾಕು ಪ್ರಾಣಿಗಳನ್ನು ಬಳಸುವುದು ದಿನನಿತ್ಯದ ಸಾಮಾನ್ಯ ಆಹಾರ ಪದ್ಧತಿ.

ಈ ಪ್ರಜಾಪ್ರಭುತ್ವದಲ್ಲಿ ಯಾರು ಯಾವ ಆಹಾರ ತಿನ್ನಬೇಕೆಂದು ವಿಧಿಸುವುದು/ನಿಷೇಧಿಸುವುದು ಸರ್ವಾಧಿಕಾರಿ ಅವಿವೇಕದ ಪರಮಾವಧಿ. ಈ ಫರ್ಮಾನುಗಳ ಹಿಂದೆ ಜಾತೀಯತೆ/ಮತೀಯ ಅಸಹನೆ/ಅಸ್ಪೃಶ್ಯತಾಚರಣೆಗಳ ಸಮರ್ಥನೆ… ಇತ್ಯಾದಿ ರಾಜಕೀಯ ತಂತ್ರಗಳಿವೆ. ಈ ಷಡ್ಯಂತ್ರಗಳನ್ನು ಮರೆಮಾಚಲು 12ನೇ ಶತಮಾನದ ಶರಣರ ವಚನಗಳನ್ನು ಅವುಗಳ ಸಾಂದರ್ಭಿಕಾರ್ಥ-ಪೂರ್ಣಾರ್ಥ-ಒಟ್ಟು ಆಶಯಗಳ ಹಿನ್ನೆಲೆ ತಪ್ಪಿಸಿ ಬಳಸಿಕೊಳ್ಳುವುದರಲ್ಲಿ ಎಲ್ಲರನ್ನು ದಾರಿ ತಪ್ಪಿಸುವ ಹುನ್ನಾರವಡಗಿದೆ.

ಬಸವಣ್ಣನ ವಚನಗಳಲ್ಲಿ ಮಾಂಸಾಹಾರದ ತಿರುಳು ಹೆಚ್ಚಾಗಿ ಕಂಡುಬಂದಿರುವುದು- ವೈದಿಕರು ಯಜ್ಞ ಯಾಗಾದಿಗಳಲ್ಲಿ ಕೊಡುವ ಜೀವ ಬಲಿ ಮತ್ತು ಸಾಮೂಹಿಕವಾಗಿ ಜನ ಕ್ಷುದ್ರದೇವತೆಗಳ ಆರಾಧನೆಯಲ್ಲಿ ಹಬ್ಬದ ಹರಕೆಗಾಗಿ ಕೊಡುವ ಪ್ರಾಣಿಬಲಿಗಳ ಸಂದರ್ಭಗಳ ಉಲ್ಲೇಖಗಳಲ್ಲಿ, ‘ಹೋಮದ ನೇಮದಲ್ಲಿ ಹೋತನವೆಂಬ ಅನಾಮಿಕರೊಡನಾಡಿ ಗೆಲ್ಲುವುದೇನು…’, ‘ನಾನು ಕೊಲ್ಲೆ, ನೇಣು ಕೊಂದಿತ್ತೆಂಬ ಸೂನೆಗಾರರನೇನೆಂಬೆ’ (ನೇಣು=ಜನಿವಾರ) ಹಿಂಸಾತ್ಮಕ ಕ್ರಿಯೆಗಳ ವಿಪ್ರರನ್ನು ಹೊಲೆತನದ ತಳಕ್ಕೆ ಅನಾಮಿಕರೆಂದು ಸ್ಥಳಾಂತರಿಸಿದ್ದಾರೆ. ಹಾಗೆ ಸಾಮಾನ್ಯ ಜನರ ಕಿರುಕುಳ ದೈವಾರಾಧನೆಯ ಬಲಿ-ಹಿಂಸೆಗಳನ್ನು ಖಂಡಿಸಿ- ‘ಕುರಿ ಬೇಡ, ಮರಿ ಬೇಡ ಬರಿಯ ಪತ್ರೆಯ ತಂದು ಮರೆಯದೆ ಪೂಜಿಸು…’ ಎಂದಿದ್ದಾರೆ.

ಒಟ್ಟು ಧಾರ್ಮಿಕಾಚರಣೆಯ ಮೌಢ್ಯದಲ್ಲಿ ತಮ್ಮ ಇಹ-ಪರ ಸುಖ, ಸಮೃದ್ಧಿ ಭೋಗಭಾಗ್ಯಗಳ ಈಡೇರಿಕೆಗಾಗಿ ಇನ್ನೊಂದು ಜೀವವನ್ನು ಬಲಿಕೊಟ್ಟು ತಮ್ಮ ಮಾಂಸಾಹಾರದ ಬಯಕೆಯನ್ನು ತೀರಿಸಿಕೊಳ್ಳುವ ರೂಢಿಯನ್ನು ಸ್ವಹಿತಕ್ಕಾಗಿ ಅನ್ಯಜೀವವನ್ನು ಕೊಲ್ಲುವ ಹಿಂಸಾರಭಸಮತೆಯನ್ನು ಖಂಡಿಸಿದ್ದಾರೆ.

ಹೀಗಾಗಿ ಬಸವಣ್ಣನ ವಚನಾಭಿವ್ಯಕ್ತಿ ಕೇವಲ ಮಾಂಸಾಹಾರಕ್ಕೆ ಸಂಬಂಧಿಸಿಲ್ಲ. ಉದಾಹರಣೆ, ‘ಸತ್ತುದನನೆಳೆವನೆತ್ತಣ ಹೊಲೆಯ?’
ಹೊತ್ತು ತಂದು ನೀವು ಕೊಲ್ಲುವಿರಿ ‘ಎಂದಿರುವುದು ಹಾಗೆ’ ಎಡದ ಕೈಯಲಿ ಕತ್ತಿ, ಬಲದ ಕೈಯಲಿ ಮಾಂಸ ಬಾಯಲ್ಲಿ ಸುರೆಯ ಗಡಿಗೆ… ಅವರ ಲಿಂಗನೆಂಬೆ- ಸಂಗನೆಂಬೆ’ ಎಂಬಲ್ಲಿ ಸ್ವೀಕಾರಭಾವವಿದೆ.

ಸಸ್ಯಾಹಾರ-ಮಾಂಸಾಹಾರವೆಂಬ ಚರ್ಚೆಗಿಂತ ಬಸವಣ್ಣನ ತೀವ್ರ ಪ್ರತಿಭಟನೆ-ತಿರಸ್ಕಾರಗಳಿರುವುದು ದೇವರು-ಧರ್ಮ-ಶಾಸ್ತ್ರಗಳ ಪ್ರಮಾಣುವಿನಲ್ಲಿ ಬಲಿ-ಹಿಂಸೆಯನ್ನು ಧಾರ್ಮಿಕಗೊಳಿಸುವ/ಮೌಲಿಕಗೊಳಿಸುವ/ತಾತ್ವಿಕಗೊಳಿಸುವ ವೈದಿಕರ ಅಪಾಯಕಾರಿ ಪ್ರವೃತ್ತಿಯನ್ನು ಖಂಡಿಸುವಲ್ಲಿ, ಜತೆಗೆ ಹೀಗಾದಾಗ ಸಮಾಜದ ಅಧಃಪತನದ ಗತಿ ತೀವ್ರವಾಗುತ್ತದಲ್ಲ ಎಂಬ ಆತಂಕ- ಮರುಕ – ಕಾಳಜಿಗಳೂ ಬಸವಣ್ಣನ ದರ್ಶನದಲ್ಲಿದೆ.

ಡಾ.ಲತಾ ಮೈಸೂರು, ಪ್ರಾಧ್ಯಾಪಕರು

ಲಿಂಗಾಯಿತ ಧರ್ಮವು ಮಾಂಸಾಹಾರಿಗಳನ್ನೂ ಒಪ್ಪುವ ಮೂಲಕ ಆಹಾರ ಸಂಸ್ಕೃತಿಯ ವಿಚಾರದಲ್ಲಿ ಪ್ರಜಾತಾಂತ್ರಿಕವಾಗಿರುತ್ತದೆಯೇ ಎಂಬ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಕರ್ನಾಟಕದ ಆಹಾರ ಸಂಸ್ಕೃತಿ ಮತ್ತು ಯಾವುದು ಮೇಲು ಯಾವುದು ಕೀಳು ಎಂಬುದರಲ್ಲೇ ಶ್ರೇಣೀಕರಣವನ್ನು ಪ್ರತಿಪಾದಿಸುವ ಈ ದೇಶದಲ್ಲಿ ಇಂತಹ ಚರ್ಚೆಗಳು ಬರುವುದು, ಬರಬೇಕಾದದ್ದು ಸಹಜ. ಆದರೆ, ಈ ಸದ್ಯ ಅದು ಎದ್ದಿರುವ ಸಂದರ್ಭ ಹಾಗೂ ಅದರ ಟಾರ್ಗೆಟ್ ಸರಿಯಿಲ್ಲ ಎಂಬ ಅನಿಸಿಕೆಗಳೂ ಇವೆ. ಈ ಹಿನ್ನೆಲೆಯಲ್ಲಿ ವಿವಿಧ ಚಿಂತಕರನ್ನು ಪತ್ರಿಕೆಯು ಮಾತಾಡಿಸಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...