Homeಕರ್ನಾಟಕದಾರಿ ತಪ್ಪಿಸುವ ಹುನ್ನಾರ ಅಡಗಿದೆ/ಆಹಾರ ಪರಂಪರೆ ಮತ್ತು ವಚನ ಚಳವಳಿ

ದಾರಿ ತಪ್ಪಿಸುವ ಹುನ್ನಾರ ಅಡಗಿದೆ/ಆಹಾರ ಪರಂಪರೆ ಮತ್ತು ವಚನ ಚಳವಳಿ

- Advertisement -
- Advertisement -

ಯಾವುದೇ ಆಹಾರ ವ್ಯಕ್ತಿಯ ದೇಹ-ಅಭಿರುಚಿ-ಆರೋಗ್ಯಕ್ಕೆ ಸಂಬಂಧಿಸಿದ ಸ್ವತಂತ್ರ ಆಯ್ಕೆ. ಧಾರ್ಮಿಕ ಫಲಾಪೇಕ್ಷೆಗಳಿಲ್ಲದೆ ಸೊಪ್ಪು-ತರಕಾರಿಗಳಂತೆ ಸಾಕು ಪ್ರಾಣಿಗಳನ್ನು ಬಳಸುವುದು ದಿನನಿತ್ಯದ ಸಾಮಾನ್ಯ ಆಹಾರ ಪದ್ಧತಿ.

ಈ ಪ್ರಜಾಪ್ರಭುತ್ವದಲ್ಲಿ ಯಾರು ಯಾವ ಆಹಾರ ತಿನ್ನಬೇಕೆಂದು ವಿಧಿಸುವುದು/ನಿಷೇಧಿಸುವುದು ಸರ್ವಾಧಿಕಾರಿ ಅವಿವೇಕದ ಪರಮಾವಧಿ. ಈ ಫರ್ಮಾನುಗಳ ಹಿಂದೆ ಜಾತೀಯತೆ/ಮತೀಯ ಅಸಹನೆ/ಅಸ್ಪೃಶ್ಯತಾಚರಣೆಗಳ ಸಮರ್ಥನೆ… ಇತ್ಯಾದಿ ರಾಜಕೀಯ ತಂತ್ರಗಳಿವೆ. ಈ ಷಡ್ಯಂತ್ರಗಳನ್ನು ಮರೆಮಾಚಲು 12ನೇ ಶತಮಾನದ ಶರಣರ ವಚನಗಳನ್ನು ಅವುಗಳ ಸಾಂದರ್ಭಿಕಾರ್ಥ-ಪೂರ್ಣಾರ್ಥ-ಒಟ್ಟು ಆಶಯಗಳ ಹಿನ್ನೆಲೆ ತಪ್ಪಿಸಿ ಬಳಸಿಕೊಳ್ಳುವುದರಲ್ಲಿ ಎಲ್ಲರನ್ನು ದಾರಿ ತಪ್ಪಿಸುವ ಹುನ್ನಾರವಡಗಿದೆ.

ಬಸವಣ್ಣನ ವಚನಗಳಲ್ಲಿ ಮಾಂಸಾಹಾರದ ತಿರುಳು ಹೆಚ್ಚಾಗಿ ಕಂಡುಬಂದಿರುವುದು- ವೈದಿಕರು ಯಜ್ಞ ಯಾಗಾದಿಗಳಲ್ಲಿ ಕೊಡುವ ಜೀವ ಬಲಿ ಮತ್ತು ಸಾಮೂಹಿಕವಾಗಿ ಜನ ಕ್ಷುದ್ರದೇವತೆಗಳ ಆರಾಧನೆಯಲ್ಲಿ ಹಬ್ಬದ ಹರಕೆಗಾಗಿ ಕೊಡುವ ಪ್ರಾಣಿಬಲಿಗಳ ಸಂದರ್ಭಗಳ ಉಲ್ಲೇಖಗಳಲ್ಲಿ, ‘ಹೋಮದ ನೇಮದಲ್ಲಿ ಹೋತನವೆಂಬ ಅನಾಮಿಕರೊಡನಾಡಿ ಗೆಲ್ಲುವುದೇನು…’, ‘ನಾನು ಕೊಲ್ಲೆ, ನೇಣು ಕೊಂದಿತ್ತೆಂಬ ಸೂನೆಗಾರರನೇನೆಂಬೆ’ (ನೇಣು=ಜನಿವಾರ) ಹಿಂಸಾತ್ಮಕ ಕ್ರಿಯೆಗಳ ವಿಪ್ರರನ್ನು ಹೊಲೆತನದ ತಳಕ್ಕೆ ಅನಾಮಿಕರೆಂದು ಸ್ಥಳಾಂತರಿಸಿದ್ದಾರೆ. ಹಾಗೆ ಸಾಮಾನ್ಯ ಜನರ ಕಿರುಕುಳ ದೈವಾರಾಧನೆಯ ಬಲಿ-ಹಿಂಸೆಗಳನ್ನು ಖಂಡಿಸಿ- ‘ಕುರಿ ಬೇಡ, ಮರಿ ಬೇಡ ಬರಿಯ ಪತ್ರೆಯ ತಂದು ಮರೆಯದೆ ಪೂಜಿಸು…’ ಎಂದಿದ್ದಾರೆ.

ಒಟ್ಟು ಧಾರ್ಮಿಕಾಚರಣೆಯ ಮೌಢ್ಯದಲ್ಲಿ ತಮ್ಮ ಇಹ-ಪರ ಸುಖ, ಸಮೃದ್ಧಿ ಭೋಗಭಾಗ್ಯಗಳ ಈಡೇರಿಕೆಗಾಗಿ ಇನ್ನೊಂದು ಜೀವವನ್ನು ಬಲಿಕೊಟ್ಟು ತಮ್ಮ ಮಾಂಸಾಹಾರದ ಬಯಕೆಯನ್ನು ತೀರಿಸಿಕೊಳ್ಳುವ ರೂಢಿಯನ್ನು ಸ್ವಹಿತಕ್ಕಾಗಿ ಅನ್ಯಜೀವವನ್ನು ಕೊಲ್ಲುವ ಹಿಂಸಾರಭಸಮತೆಯನ್ನು ಖಂಡಿಸಿದ್ದಾರೆ.

ಹೀಗಾಗಿ ಬಸವಣ್ಣನ ವಚನಾಭಿವ್ಯಕ್ತಿ ಕೇವಲ ಮಾಂಸಾಹಾರಕ್ಕೆ ಸಂಬಂಧಿಸಿಲ್ಲ. ಉದಾಹರಣೆ, ‘ಸತ್ತುದನನೆಳೆವನೆತ್ತಣ ಹೊಲೆಯ?’
ಹೊತ್ತು ತಂದು ನೀವು ಕೊಲ್ಲುವಿರಿ ‘ಎಂದಿರುವುದು ಹಾಗೆ’ ಎಡದ ಕೈಯಲಿ ಕತ್ತಿ, ಬಲದ ಕೈಯಲಿ ಮಾಂಸ ಬಾಯಲ್ಲಿ ಸುರೆಯ ಗಡಿಗೆ… ಅವರ ಲಿಂಗನೆಂಬೆ- ಸಂಗನೆಂಬೆ’ ಎಂಬಲ್ಲಿ ಸ್ವೀಕಾರಭಾವವಿದೆ.

ಸಸ್ಯಾಹಾರ-ಮಾಂಸಾಹಾರವೆಂಬ ಚರ್ಚೆಗಿಂತ ಬಸವಣ್ಣನ ತೀವ್ರ ಪ್ರತಿಭಟನೆ-ತಿರಸ್ಕಾರಗಳಿರುವುದು ದೇವರು-ಧರ್ಮ-ಶಾಸ್ತ್ರಗಳ ಪ್ರಮಾಣುವಿನಲ್ಲಿ ಬಲಿ-ಹಿಂಸೆಯನ್ನು ಧಾರ್ಮಿಕಗೊಳಿಸುವ/ಮೌಲಿಕಗೊಳಿಸುವ/ತಾತ್ವಿಕಗೊಳಿಸುವ ವೈದಿಕರ ಅಪಾಯಕಾರಿ ಪ್ರವೃತ್ತಿಯನ್ನು ಖಂಡಿಸುವಲ್ಲಿ, ಜತೆಗೆ ಹೀಗಾದಾಗ ಸಮಾಜದ ಅಧಃಪತನದ ಗತಿ ತೀವ್ರವಾಗುತ್ತದಲ್ಲ ಎಂಬ ಆತಂಕ- ಮರುಕ – ಕಾಳಜಿಗಳೂ ಬಸವಣ್ಣನ ದರ್ಶನದಲ್ಲಿದೆ.

ಡಾ.ಲತಾ ಮೈಸೂರು, ಪ್ರಾಧ್ಯಾಪಕರು

ಲಿಂಗಾಯಿತ ಧರ್ಮವು ಮಾಂಸಾಹಾರಿಗಳನ್ನೂ ಒಪ್ಪುವ ಮೂಲಕ ಆಹಾರ ಸಂಸ್ಕೃತಿಯ ವಿಚಾರದಲ್ಲಿ ಪ್ರಜಾತಾಂತ್ರಿಕವಾಗಿರುತ್ತದೆಯೇ ಎಂಬ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಕರ್ನಾಟಕದ ಆಹಾರ ಸಂಸ್ಕೃತಿ ಮತ್ತು ಯಾವುದು ಮೇಲು ಯಾವುದು ಕೀಳು ಎಂಬುದರಲ್ಲೇ ಶ್ರೇಣೀಕರಣವನ್ನು ಪ್ರತಿಪಾದಿಸುವ ಈ ದೇಶದಲ್ಲಿ ಇಂತಹ ಚರ್ಚೆಗಳು ಬರುವುದು, ಬರಬೇಕಾದದ್ದು ಸಹಜ. ಆದರೆ, ಈ ಸದ್ಯ ಅದು ಎದ್ದಿರುವ ಸಂದರ್ಭ ಹಾಗೂ ಅದರ ಟಾರ್ಗೆಟ್ ಸರಿಯಿಲ್ಲ ಎಂಬ ಅನಿಸಿಕೆಗಳೂ ಇವೆ. ಈ ಹಿನ್ನೆಲೆಯಲ್ಲಿ ವಿವಿಧ ಚಿಂತಕರನ್ನು ಪತ್ರಿಕೆಯು ಮಾತಾಡಿಸಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...