Homeಕರ್ನಾಟಕದಾರಿ ತಪ್ಪಿಸುವ ಹುನ್ನಾರ ಅಡಗಿದೆ/ಆಹಾರ ಪರಂಪರೆ ಮತ್ತು ವಚನ ಚಳವಳಿ

ದಾರಿ ತಪ್ಪಿಸುವ ಹುನ್ನಾರ ಅಡಗಿದೆ/ಆಹಾರ ಪರಂಪರೆ ಮತ್ತು ವಚನ ಚಳವಳಿ

- Advertisement -
- Advertisement -

ಯಾವುದೇ ಆಹಾರ ವ್ಯಕ್ತಿಯ ದೇಹ-ಅಭಿರುಚಿ-ಆರೋಗ್ಯಕ್ಕೆ ಸಂಬಂಧಿಸಿದ ಸ್ವತಂತ್ರ ಆಯ್ಕೆ. ಧಾರ್ಮಿಕ ಫಲಾಪೇಕ್ಷೆಗಳಿಲ್ಲದೆ ಸೊಪ್ಪು-ತರಕಾರಿಗಳಂತೆ ಸಾಕು ಪ್ರಾಣಿಗಳನ್ನು ಬಳಸುವುದು ದಿನನಿತ್ಯದ ಸಾಮಾನ್ಯ ಆಹಾರ ಪದ್ಧತಿ.

ಈ ಪ್ರಜಾಪ್ರಭುತ್ವದಲ್ಲಿ ಯಾರು ಯಾವ ಆಹಾರ ತಿನ್ನಬೇಕೆಂದು ವಿಧಿಸುವುದು/ನಿಷೇಧಿಸುವುದು ಸರ್ವಾಧಿಕಾರಿ ಅವಿವೇಕದ ಪರಮಾವಧಿ. ಈ ಫರ್ಮಾನುಗಳ ಹಿಂದೆ ಜಾತೀಯತೆ/ಮತೀಯ ಅಸಹನೆ/ಅಸ್ಪೃಶ್ಯತಾಚರಣೆಗಳ ಸಮರ್ಥನೆ… ಇತ್ಯಾದಿ ರಾಜಕೀಯ ತಂತ್ರಗಳಿವೆ. ಈ ಷಡ್ಯಂತ್ರಗಳನ್ನು ಮರೆಮಾಚಲು 12ನೇ ಶತಮಾನದ ಶರಣರ ವಚನಗಳನ್ನು ಅವುಗಳ ಸಾಂದರ್ಭಿಕಾರ್ಥ-ಪೂರ್ಣಾರ್ಥ-ಒಟ್ಟು ಆಶಯಗಳ ಹಿನ್ನೆಲೆ ತಪ್ಪಿಸಿ ಬಳಸಿಕೊಳ್ಳುವುದರಲ್ಲಿ ಎಲ್ಲರನ್ನು ದಾರಿ ತಪ್ಪಿಸುವ ಹುನ್ನಾರವಡಗಿದೆ.

ಬಸವಣ್ಣನ ವಚನಗಳಲ್ಲಿ ಮಾಂಸಾಹಾರದ ತಿರುಳು ಹೆಚ್ಚಾಗಿ ಕಂಡುಬಂದಿರುವುದು- ವೈದಿಕರು ಯಜ್ಞ ಯಾಗಾದಿಗಳಲ್ಲಿ ಕೊಡುವ ಜೀವ ಬಲಿ ಮತ್ತು ಸಾಮೂಹಿಕವಾಗಿ ಜನ ಕ್ಷುದ್ರದೇವತೆಗಳ ಆರಾಧನೆಯಲ್ಲಿ ಹಬ್ಬದ ಹರಕೆಗಾಗಿ ಕೊಡುವ ಪ್ರಾಣಿಬಲಿಗಳ ಸಂದರ್ಭಗಳ ಉಲ್ಲೇಖಗಳಲ್ಲಿ, ‘ಹೋಮದ ನೇಮದಲ್ಲಿ ಹೋತನವೆಂಬ ಅನಾಮಿಕರೊಡನಾಡಿ ಗೆಲ್ಲುವುದೇನು…’, ‘ನಾನು ಕೊಲ್ಲೆ, ನೇಣು ಕೊಂದಿತ್ತೆಂಬ ಸೂನೆಗಾರರನೇನೆಂಬೆ’ (ನೇಣು=ಜನಿವಾರ) ಹಿಂಸಾತ್ಮಕ ಕ್ರಿಯೆಗಳ ವಿಪ್ರರನ್ನು ಹೊಲೆತನದ ತಳಕ್ಕೆ ಅನಾಮಿಕರೆಂದು ಸ್ಥಳಾಂತರಿಸಿದ್ದಾರೆ. ಹಾಗೆ ಸಾಮಾನ್ಯ ಜನರ ಕಿರುಕುಳ ದೈವಾರಾಧನೆಯ ಬಲಿ-ಹಿಂಸೆಗಳನ್ನು ಖಂಡಿಸಿ- ‘ಕುರಿ ಬೇಡ, ಮರಿ ಬೇಡ ಬರಿಯ ಪತ್ರೆಯ ತಂದು ಮರೆಯದೆ ಪೂಜಿಸು…’ ಎಂದಿದ್ದಾರೆ.

ಒಟ್ಟು ಧಾರ್ಮಿಕಾಚರಣೆಯ ಮೌಢ್ಯದಲ್ಲಿ ತಮ್ಮ ಇಹ-ಪರ ಸುಖ, ಸಮೃದ್ಧಿ ಭೋಗಭಾಗ್ಯಗಳ ಈಡೇರಿಕೆಗಾಗಿ ಇನ್ನೊಂದು ಜೀವವನ್ನು ಬಲಿಕೊಟ್ಟು ತಮ್ಮ ಮಾಂಸಾಹಾರದ ಬಯಕೆಯನ್ನು ತೀರಿಸಿಕೊಳ್ಳುವ ರೂಢಿಯನ್ನು ಸ್ವಹಿತಕ್ಕಾಗಿ ಅನ್ಯಜೀವವನ್ನು ಕೊಲ್ಲುವ ಹಿಂಸಾರಭಸಮತೆಯನ್ನು ಖಂಡಿಸಿದ್ದಾರೆ.

ಹೀಗಾಗಿ ಬಸವಣ್ಣನ ವಚನಾಭಿವ್ಯಕ್ತಿ ಕೇವಲ ಮಾಂಸಾಹಾರಕ್ಕೆ ಸಂಬಂಧಿಸಿಲ್ಲ. ಉದಾಹರಣೆ, ‘ಸತ್ತುದನನೆಳೆವನೆತ್ತಣ ಹೊಲೆಯ?’
ಹೊತ್ತು ತಂದು ನೀವು ಕೊಲ್ಲುವಿರಿ ‘ಎಂದಿರುವುದು ಹಾಗೆ’ ಎಡದ ಕೈಯಲಿ ಕತ್ತಿ, ಬಲದ ಕೈಯಲಿ ಮಾಂಸ ಬಾಯಲ್ಲಿ ಸುರೆಯ ಗಡಿಗೆ… ಅವರ ಲಿಂಗನೆಂಬೆ- ಸಂಗನೆಂಬೆ’ ಎಂಬಲ್ಲಿ ಸ್ವೀಕಾರಭಾವವಿದೆ.

ಸಸ್ಯಾಹಾರ-ಮಾಂಸಾಹಾರವೆಂಬ ಚರ್ಚೆಗಿಂತ ಬಸವಣ್ಣನ ತೀವ್ರ ಪ್ರತಿಭಟನೆ-ತಿರಸ್ಕಾರಗಳಿರುವುದು ದೇವರು-ಧರ್ಮ-ಶಾಸ್ತ್ರಗಳ ಪ್ರಮಾಣುವಿನಲ್ಲಿ ಬಲಿ-ಹಿಂಸೆಯನ್ನು ಧಾರ್ಮಿಕಗೊಳಿಸುವ/ಮೌಲಿಕಗೊಳಿಸುವ/ತಾತ್ವಿಕಗೊಳಿಸುವ ವೈದಿಕರ ಅಪಾಯಕಾರಿ ಪ್ರವೃತ್ತಿಯನ್ನು ಖಂಡಿಸುವಲ್ಲಿ, ಜತೆಗೆ ಹೀಗಾದಾಗ ಸಮಾಜದ ಅಧಃಪತನದ ಗತಿ ತೀವ್ರವಾಗುತ್ತದಲ್ಲ ಎಂಬ ಆತಂಕ- ಮರುಕ – ಕಾಳಜಿಗಳೂ ಬಸವಣ್ಣನ ದರ್ಶನದಲ್ಲಿದೆ.

ಡಾ.ಲತಾ ಮೈಸೂರು, ಪ್ರಾಧ್ಯಾಪಕರು

ಲಿಂಗಾಯಿತ ಧರ್ಮವು ಮಾಂಸಾಹಾರಿಗಳನ್ನೂ ಒಪ್ಪುವ ಮೂಲಕ ಆಹಾರ ಸಂಸ್ಕೃತಿಯ ವಿಚಾರದಲ್ಲಿ ಪ್ರಜಾತಾಂತ್ರಿಕವಾಗಿರುತ್ತದೆಯೇ ಎಂಬ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಕರ್ನಾಟಕದ ಆಹಾರ ಸಂಸ್ಕೃತಿ ಮತ್ತು ಯಾವುದು ಮೇಲು ಯಾವುದು ಕೀಳು ಎಂಬುದರಲ್ಲೇ ಶ್ರೇಣೀಕರಣವನ್ನು ಪ್ರತಿಪಾದಿಸುವ ಈ ದೇಶದಲ್ಲಿ ಇಂತಹ ಚರ್ಚೆಗಳು ಬರುವುದು, ಬರಬೇಕಾದದ್ದು ಸಹಜ. ಆದರೆ, ಈ ಸದ್ಯ ಅದು ಎದ್ದಿರುವ ಸಂದರ್ಭ ಹಾಗೂ ಅದರ ಟಾರ್ಗೆಟ್ ಸರಿಯಿಲ್ಲ ಎಂಬ ಅನಿಸಿಕೆಗಳೂ ಇವೆ. ಈ ಹಿನ್ನೆಲೆಯಲ್ಲಿ ವಿವಿಧ ಚಿಂತಕರನ್ನು ಪತ್ರಿಕೆಯು ಮಾತಾಡಿಸಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...