Homeಕರ್ನಾಟಕದಾರಿ ತಪ್ಪಿಸುವ ಹುನ್ನಾರ ಅಡಗಿದೆ/ಆಹಾರ ಪರಂಪರೆ ಮತ್ತು ವಚನ ಚಳವಳಿ

ದಾರಿ ತಪ್ಪಿಸುವ ಹುನ್ನಾರ ಅಡಗಿದೆ/ಆಹಾರ ಪರಂಪರೆ ಮತ್ತು ವಚನ ಚಳವಳಿ

- Advertisement -
- Advertisement -

ಯಾವುದೇ ಆಹಾರ ವ್ಯಕ್ತಿಯ ದೇಹ-ಅಭಿರುಚಿ-ಆರೋಗ್ಯಕ್ಕೆ ಸಂಬಂಧಿಸಿದ ಸ್ವತಂತ್ರ ಆಯ್ಕೆ. ಧಾರ್ಮಿಕ ಫಲಾಪೇಕ್ಷೆಗಳಿಲ್ಲದೆ ಸೊಪ್ಪು-ತರಕಾರಿಗಳಂತೆ ಸಾಕು ಪ್ರಾಣಿಗಳನ್ನು ಬಳಸುವುದು ದಿನನಿತ್ಯದ ಸಾಮಾನ್ಯ ಆಹಾರ ಪದ್ಧತಿ.

ಈ ಪ್ರಜಾಪ್ರಭುತ್ವದಲ್ಲಿ ಯಾರು ಯಾವ ಆಹಾರ ತಿನ್ನಬೇಕೆಂದು ವಿಧಿಸುವುದು/ನಿಷೇಧಿಸುವುದು ಸರ್ವಾಧಿಕಾರಿ ಅವಿವೇಕದ ಪರಮಾವಧಿ. ಈ ಫರ್ಮಾನುಗಳ ಹಿಂದೆ ಜಾತೀಯತೆ/ಮತೀಯ ಅಸಹನೆ/ಅಸ್ಪೃಶ್ಯತಾಚರಣೆಗಳ ಸಮರ್ಥನೆ… ಇತ್ಯಾದಿ ರಾಜಕೀಯ ತಂತ್ರಗಳಿವೆ. ಈ ಷಡ್ಯಂತ್ರಗಳನ್ನು ಮರೆಮಾಚಲು 12ನೇ ಶತಮಾನದ ಶರಣರ ವಚನಗಳನ್ನು ಅವುಗಳ ಸಾಂದರ್ಭಿಕಾರ್ಥ-ಪೂರ್ಣಾರ್ಥ-ಒಟ್ಟು ಆಶಯಗಳ ಹಿನ್ನೆಲೆ ತಪ್ಪಿಸಿ ಬಳಸಿಕೊಳ್ಳುವುದರಲ್ಲಿ ಎಲ್ಲರನ್ನು ದಾರಿ ತಪ್ಪಿಸುವ ಹುನ್ನಾರವಡಗಿದೆ.

ಬಸವಣ್ಣನ ವಚನಗಳಲ್ಲಿ ಮಾಂಸಾಹಾರದ ತಿರುಳು ಹೆಚ್ಚಾಗಿ ಕಂಡುಬಂದಿರುವುದು- ವೈದಿಕರು ಯಜ್ಞ ಯಾಗಾದಿಗಳಲ್ಲಿ ಕೊಡುವ ಜೀವ ಬಲಿ ಮತ್ತು ಸಾಮೂಹಿಕವಾಗಿ ಜನ ಕ್ಷುದ್ರದೇವತೆಗಳ ಆರಾಧನೆಯಲ್ಲಿ ಹಬ್ಬದ ಹರಕೆಗಾಗಿ ಕೊಡುವ ಪ್ರಾಣಿಬಲಿಗಳ ಸಂದರ್ಭಗಳ ಉಲ್ಲೇಖಗಳಲ್ಲಿ, ‘ಹೋಮದ ನೇಮದಲ್ಲಿ ಹೋತನವೆಂಬ ಅನಾಮಿಕರೊಡನಾಡಿ ಗೆಲ್ಲುವುದೇನು…’, ‘ನಾನು ಕೊಲ್ಲೆ, ನೇಣು ಕೊಂದಿತ್ತೆಂಬ ಸೂನೆಗಾರರನೇನೆಂಬೆ’ (ನೇಣು=ಜನಿವಾರ) ಹಿಂಸಾತ್ಮಕ ಕ್ರಿಯೆಗಳ ವಿಪ್ರರನ್ನು ಹೊಲೆತನದ ತಳಕ್ಕೆ ಅನಾಮಿಕರೆಂದು ಸ್ಥಳಾಂತರಿಸಿದ್ದಾರೆ. ಹಾಗೆ ಸಾಮಾನ್ಯ ಜನರ ಕಿರುಕುಳ ದೈವಾರಾಧನೆಯ ಬಲಿ-ಹಿಂಸೆಗಳನ್ನು ಖಂಡಿಸಿ- ‘ಕುರಿ ಬೇಡ, ಮರಿ ಬೇಡ ಬರಿಯ ಪತ್ರೆಯ ತಂದು ಮರೆಯದೆ ಪೂಜಿಸು…’ ಎಂದಿದ್ದಾರೆ.

ಒಟ್ಟು ಧಾರ್ಮಿಕಾಚರಣೆಯ ಮೌಢ್ಯದಲ್ಲಿ ತಮ್ಮ ಇಹ-ಪರ ಸುಖ, ಸಮೃದ್ಧಿ ಭೋಗಭಾಗ್ಯಗಳ ಈಡೇರಿಕೆಗಾಗಿ ಇನ್ನೊಂದು ಜೀವವನ್ನು ಬಲಿಕೊಟ್ಟು ತಮ್ಮ ಮಾಂಸಾಹಾರದ ಬಯಕೆಯನ್ನು ತೀರಿಸಿಕೊಳ್ಳುವ ರೂಢಿಯನ್ನು ಸ್ವಹಿತಕ್ಕಾಗಿ ಅನ್ಯಜೀವವನ್ನು ಕೊಲ್ಲುವ ಹಿಂಸಾರಭಸಮತೆಯನ್ನು ಖಂಡಿಸಿದ್ದಾರೆ.

ಹೀಗಾಗಿ ಬಸವಣ್ಣನ ವಚನಾಭಿವ್ಯಕ್ತಿ ಕೇವಲ ಮಾಂಸಾಹಾರಕ್ಕೆ ಸಂಬಂಧಿಸಿಲ್ಲ. ಉದಾಹರಣೆ, ‘ಸತ್ತುದನನೆಳೆವನೆತ್ತಣ ಹೊಲೆಯ?’
ಹೊತ್ತು ತಂದು ನೀವು ಕೊಲ್ಲುವಿರಿ ‘ಎಂದಿರುವುದು ಹಾಗೆ’ ಎಡದ ಕೈಯಲಿ ಕತ್ತಿ, ಬಲದ ಕೈಯಲಿ ಮಾಂಸ ಬಾಯಲ್ಲಿ ಸುರೆಯ ಗಡಿಗೆ… ಅವರ ಲಿಂಗನೆಂಬೆ- ಸಂಗನೆಂಬೆ’ ಎಂಬಲ್ಲಿ ಸ್ವೀಕಾರಭಾವವಿದೆ.

ಸಸ್ಯಾಹಾರ-ಮಾಂಸಾಹಾರವೆಂಬ ಚರ್ಚೆಗಿಂತ ಬಸವಣ್ಣನ ತೀವ್ರ ಪ್ರತಿಭಟನೆ-ತಿರಸ್ಕಾರಗಳಿರುವುದು ದೇವರು-ಧರ್ಮ-ಶಾಸ್ತ್ರಗಳ ಪ್ರಮಾಣುವಿನಲ್ಲಿ ಬಲಿ-ಹಿಂಸೆಯನ್ನು ಧಾರ್ಮಿಕಗೊಳಿಸುವ/ಮೌಲಿಕಗೊಳಿಸುವ/ತಾತ್ವಿಕಗೊಳಿಸುವ ವೈದಿಕರ ಅಪಾಯಕಾರಿ ಪ್ರವೃತ್ತಿಯನ್ನು ಖಂಡಿಸುವಲ್ಲಿ, ಜತೆಗೆ ಹೀಗಾದಾಗ ಸಮಾಜದ ಅಧಃಪತನದ ಗತಿ ತೀವ್ರವಾಗುತ್ತದಲ್ಲ ಎಂಬ ಆತಂಕ- ಮರುಕ – ಕಾಳಜಿಗಳೂ ಬಸವಣ್ಣನ ದರ್ಶನದಲ್ಲಿದೆ.

ಡಾ.ಲತಾ ಮೈಸೂರು, ಪ್ರಾಧ್ಯಾಪಕರು

ಲಿಂಗಾಯಿತ ಧರ್ಮವು ಮಾಂಸಾಹಾರಿಗಳನ್ನೂ ಒಪ್ಪುವ ಮೂಲಕ ಆಹಾರ ಸಂಸ್ಕೃತಿಯ ವಿಚಾರದಲ್ಲಿ ಪ್ರಜಾತಾಂತ್ರಿಕವಾಗಿರುತ್ತದೆಯೇ ಎಂಬ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಕರ್ನಾಟಕದ ಆಹಾರ ಸಂಸ್ಕೃತಿ ಮತ್ತು ಯಾವುದು ಮೇಲು ಯಾವುದು ಕೀಳು ಎಂಬುದರಲ್ಲೇ ಶ್ರೇಣೀಕರಣವನ್ನು ಪ್ರತಿಪಾದಿಸುವ ಈ ದೇಶದಲ್ಲಿ ಇಂತಹ ಚರ್ಚೆಗಳು ಬರುವುದು, ಬರಬೇಕಾದದ್ದು ಸಹಜ. ಆದರೆ, ಈ ಸದ್ಯ ಅದು ಎದ್ದಿರುವ ಸಂದರ್ಭ ಹಾಗೂ ಅದರ ಟಾರ್ಗೆಟ್ ಸರಿಯಿಲ್ಲ ಎಂಬ ಅನಿಸಿಕೆಗಳೂ ಇವೆ. ಈ ಹಿನ್ನೆಲೆಯಲ್ಲಿ ವಿವಿಧ ಚಿಂತಕರನ್ನು ಪತ್ರಿಕೆಯು ಮಾತಾಡಿಸಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...

ವಿದ್ಯುತ್ ಸ್ಥಾವರಗಳ ಸುತ್ತ ಮಾನವ ಸರಪಳಿ ರಚಿಸುವಂತೆ ಇರಾನಿನ ಯುವಕರಿಗೆ ಮನವಿ

ಯುನೈಟೆಡ್ ಸ್ಟೇಟ್ಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಬೆದರಿಕೆ ದಾಳಿಗಳಿಗೆ ಮುಂಚಿತವಾಗಿ ವಿದ್ಯುತ್ ಸ್ಥಾವರಗಳ ಸುತ್ತ ಮಾನವ ಸರಪಳಿಗಳನ್ನು ರಚಿಸುವಂತೆ ಇರಾನ್ ಸರ್ಕಾರ 'ಕ್ರೀಡಾಪಟುಗಳು, ಕಲಾವಿದರು, ವಿದ್ಯಾರ್ಥಿಗಳು, ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಮತ್ತು ಅವರ...

ಪಶ್ಚಿಮ ಬಂಗಾಳ| ಎಸ್‌ಐಆರ್ ಬಳಿಕ ಮತದಾರರ ಪಟ್ಟಿಯಿಂದ ಸುಮಾರು 91 ಲಕ್ಷ ಹೆಸರುಗಳು ಡಿಲೀಟ್

ಚುನಾವಣಾ ಆಯೋಗ ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, ರಾಜ್ಯದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಸುಮಾರು 91 ಲಕ್ಷ ಮತದಾರರನ್ನು ಮತದಾರರ ಪಟ್ಟಿಯಿಂದ ಅಳಿಸಲಾಗಿದೆ. ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯ ನಂತರ...

ಇರಾನ್ ನೂತನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ‘ಪ್ರಜ್ಞಾಹೀನ’, ಕೋಮ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ: ವರದಿ

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ಅವರು ಕೋಮ್‌ನಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಪ್ರಜ್ಞಾಹೀನರಾಗಿದ್ದಾರೆ ಎಂದು ನಂಬಲಾಗಿದೆ ಎಂದು ಗುಪ್ತಚರ ಆಧಾರಿತ ರಾಜತಾಂತ್ರಿಕ ಜ್ಞಾಪಕ ಪತ್ರವನ್ನು ಉಲ್ಲೇಖಿಸಿ ದಿ ಟೈಮ್ಸ್ ವರದಿ...

ಪ. ಬಂಗಾಳ : ಎಸ್‌ಐಆರ್‌ನಲ್ಲಿ ಮತದಾರರ ಪಟ್ಟಿಯಿಂದ ಕೈ ಬಿಟ್ಟಿದ್ದ ಮತ್ತೊಬ್ಬ ಕಾಂಗ್ರೆಸ್ ಅಭ್ಯರ್ಥಿಯ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ವೇಳೆ (ಎಸ್‌ಐಆರ್‌) ತೆಗೆದು ಹಾಕಿದ್ದ ಮತ್ತೊಬ್ಬ ಕಾಂಗ್ರೆಸ್ ಅಭ್ಯರ್ಥಿಯ ಹೆಸರನ್ನು ಮತದಾರರ ಪಟ್ಟಿಗೆ ಮರು ಸೇರ್ಪಡೆಗೊಳಿಸುವಂತೆ ಮೇಲ್ಮನವಿ ನ್ಯಾಯಮಂಡಳಿ ಸೋಮವಾರ (ಏ.6) ಆದೇಶಿಸಿರುವುದಾಗಿ ವರದಿಯಾಗಿದೆ. ರತುವಾ...